Homeಅಂತರಾಷ್ಟ್ರೀಯಇಸ್ರೇಲ್-ಹಮಾಸ್ ಕದನ ವಿರಾಮ: ಗಾಝಾಗೆ ಮರಳುತ್ತಿರುವ ಸಾವಿರಾರು ಪ್ಯಾಲೆಸ್ತೀನಿಯರು

ಇಸ್ರೇಲ್-ಹಮಾಸ್ ಕದನ ವಿರಾಮ: ಗಾಝಾಗೆ ಮರಳುತ್ತಿರುವ ಸಾವಿರಾರು ಪ್ಯಾಲೆಸ್ತೀನಿಯರು

- Advertisement -
- Advertisement -

ಹಮಾಸ್ ಜೊತೆಗಿನ ಶಾಂತಿ ಒಪ್ಪಂದದ ಮೊದಲ ಹಂತ ಜಾರಿಗೊಳಿಸುತ್ತಿರುವ ಇಸ್ರೇಲಿ ಸೇನೆ, ಗಾಝಾ ಮೇಲಿನ ತನ್ನ ದಾಳಿಯನ್ನು ನಿಲ್ಲಿಸಿದ್ದು, ಗಾಝಾ ಪಟ್ಟಿ ಪ್ರದೇಶದಿಂದ ಭಾಗಶಃ ಹಿಂದೆ ಸರಿದಿದೆ. ಈ ಹಿನ್ನೆಲೆ, ಬಲವಂತವಾಗಿ ಸ್ಥಳಾಂತರಿಸಲ್ಪಟ್ಟ ಸಾವಿರಾರು ಪ್ಯಾಲೆಸ್ತೀನಿಯರು ಉತ್ತರ ಗಾಝಾದ ಧ್ವಂಸಗೊಂಡ ಪಟ್ಟಣಗಳು ​​ಮತ್ತು ನಗರಗಳಿಗೆ ಮರಳುತ್ತಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

ಹಮಾಸ್ ಒತ್ತೆಯಾಳುಗಳಾಗಿ ಇಟ್ಟುಕೊಂಡಿರುವ ಇಸ್ರೇಲ್‌ ಪ್ರಜೆಗಳ ಬಿಡುಗಡೆ ಕಾರ್ಯ ಸೋಮವಾರ (ಅ.13) ನಡೆಯಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಹಮಾಸ್, ಪ್ಯಾಲೆಸ್ಟಿನೀಯನ್ ಇಸ್ಲಾಮಿಕ್ ಜಿಹಾದ್ ಮತ್ತು ಪಾಪ್ಯುಲರ್ ಫ್ರಂಟ್ ಫಾರ್ ದಿ ಲಿಬರೇಷನ್ ಆಫ್ ಪ್ಯಾಲೆಸ್ಟೈನ್ (ಪಿಎಫ್‌ಎಲ್‌ಎಫ್‌) ಸಂಘಟನೆಗಳು ಗಾಝಾ ಪಟ್ಟಿಯ ಮೇಲೆ ‘ಯಾವುದೇ ವಿದೇಶಿ ಆಡಳಿತ’ವನ್ನು ತಿರಸ್ಕರಿಸುವುದಾಗಿ ಹೇಳಿವೆ.

ಇದೇ ವೇಳೆ, ಗಾಜಾ ಅಧಿಕಾರಿಗಳು ಇಸ್ರೇಲ್‌ ಗಾಝಾದ ಮೇಲೆ ಆಕ್ರಮಣ ಮಾಡಿದ ಸಂದರ್ಭದಲ್ಲಿ ನಡೆದ ಯುದ್ಧಾಪರಾಧಗಳು ಮತ್ತು ಜನಾಂಗೀಯ ಹತ್ಯಾಕಾಂಡದ ಬಗ್ಗೆ ಸ್ವತಂತ್ರವಾದ, ಅಂತಾರಾಷ್ಟ್ರೀಯ ತನಿಖೆಗೆ ಒತ್ತಾಯಿಸಿದ್ದಾರೆ.

ಗಾಝಾದ ಎಲ್ಲಾ ಗಡಿಗಳನ್ನು ತೆರೆಯುವಂತೆ ಪ್ಯಾಲೆಸ್ತೀನ್ ನಿರಾಶ್ರಿತರ ಪರ ಕೆಲಸ ಮಾಡುವ ವಿಶ್ವಸಂಸ್ಥೆಯ ಸಂಸ್ಥೆ ಯುನೈಟೆಡ್ ನೇಷನ್ಸ್ ರಿಲೀಫ್ ಅಂಡ್ ವರ್ಕ್ ಏಜೆನ್ಸಿ ಫಾರ್ ಪ್ಯಾಲೆಸ್ಟೈನ್ ರೆಫ್ಯೂಜಿ ಇನ್ ದ ನಿಯರ್ ಈಸ್ಟ್ (ಯುನ್‌ಆರ್‌ಡಬ್ಲ್ಯುಎ) ಒತ್ತಾಯಿಸಿದೆ. ಗಡಿ ತೆರೆದ ಗಂಟೆಗಳಲ್ಲಿ ಗಾಝಾ ತಲುಪಲು 6,000 ನೆರವು ಟ್ರಕ್‌ಗಳು ಸಿದ್ಧವಾಗಿವೆ ಎಂದು ಅದು ಹೇಳಿದೆ.

ಇಸ್ರೇಲ್ ದಾಳಿಯಲ್ಲಿ ಸಾವನ್ನಪ್ಪಿದ ಸುಮಾರು 135 ಪ್ಯಾಲೆಸ್ತೀನಿಯರ ಶವಗಳನ್ನು ಶುಕ್ರವಾರ ಗಾಝಾದ ವಿವಿಧ ಆಸ್ಪತ್ರೆಗಳಿಗೆ ತರಲಾಗಿದೆ ಎಂದು ವಫಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇಸ್ರೇಲ್‌ ಬಾಂಬ್ ದಾಳಿಯನ್ನು ನಿಲ್ಲಿಸಿರುವ ಸಂದರ್ಭವನ್ನು ಬಳಸಿಕೊಂಡು ರಕ್ಷಣಾ ತಂಡಗಳು ನಾಶವಾದ ಕಟ್ಟಡಗಳನ್ನು ತಲುಪುತ್ತಿವೆ.

ಶುಕ್ರವಾರ ಇಸ್ರೇಲಿ ವಾಯುದಾಳಿಯಲ್ಲಿ 19 ಜನರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಈ ಹಿಂದೆ ಉಂಟಾದ ಗಾಯದಿಂದ ಸಾವನ್ನಪ್ಪಿದ್ದಾರೆ ಎಂದು ಗಾಝಾದ ವೈದ್ಯಕೀಯ ಮೂಲಗಳನ್ನು ಉಲ್ಲೇಖಿಸಿ ವಫಾ ವರದಿ ಮಾಡಿದೆ.

ಸಮುದ್ರದ ಮೂಲಕ ನೆರವು ತಲುಪಿಸುವ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಇನ್ನೂ ಐದು ಜನರನ್ನು ಇಸ್ರೇಲ್‌ ಬಂಧನದಿಂದ ಬಿಡುಗಡೆ ಮಾಡಿದೆ ಎಂದು ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಹೇಳಿದೆ.

ದಕ್ಷಿಣ ಲೆಬನಾನ್‌ನ ಅಲ್-ನಝರಿಯಾ ಗ್ರಾಮದ ಮೇಲೆ ಇಸ್ರೇಲಿ ಯುದ್ಧ ವಿಮಾನಗಳು ಬಾಂಬ್ ದಾಳಿ ನಡೆಸಿದ ಹಿನ್ನೆಲೆ ಕನಿಷ್ಠ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಲೆಬನಾನಿನ ಸಶಸ್ತ್ರ ಗುಂಪಿಗೆ ಸೇರಿದ ಮೂಲಸೌಕರ್ಯವನ್ನು ಪುನಃಸ್ಥಾಪಿಸಲು ಬಳಸುವ ಉಪಕರಣಗಳನ್ನು ಸಂಗ್ರಹಿಸುತ್ತಿದ್ದ ಹಿಜ್ಬೊಲ್ಲಾ ತಾಣಗಳ ಮೇಲೆ ದಾಳಿ ಮಾಡಿರುವುದಾಗಿ ಇಸ್ರೇಲ್ ಹೇಳಿಕೊಂಡಿದೆ.

ಆಕ್ರಮಿತ ಪಶ್ಚಿಮ ದಂಡೆಯ ದುರಾ ನಗರದ ಮೇಲೆ ದಾಳಿ ನಡೆಸಿದ ಇಸ್ರೇಲಿ ಸೇನೆಯು ಒಬ್ಬ ಪ್ಯಾಲೆಸ್ತೀನ್ ವ್ಯಕ್ತಿಯ ಮೇಲೆ ಗುಂಡು ಹಾರಿಸಿದೆ ಮತ್ತು ನಂತರ ಗಾಯಾಳು ವ್ಯಕ್ತಿಯನ್ನು ತಲುಪದಂತೆ ಆಂಬ್ಯುಲೆನ್ಸ್‌ಗಳನ್ನು ತಡೆದಿದೆ ಎಂದು ವರದಿಗಳು ಹೇಳಿವೆ.

ಎರಡು ವರ್ಷಗಳ ಗಾಝಾ ‘ನರಮೇಧ’: 20,179 ಕಂದಮ್ಮಗಳನ್ನು ಹತ್ಯೆಗೈದ ಇಸ್ರೇಲ್, ಆಹಾರ ವಂಚಿತರಾದ 12 ಲಕ್ಷಕ್ಕೂ ಅಧಿಕ ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...