Homeಅಂತರಾಷ್ಟ್ರೀಯಇಸ್ರೇಲ್-ಹಮಾಸ್ ಕದನ ವಿರಾಮ: ಗಾಝಾಗೆ ಮರಳುತ್ತಿರುವ ಸಾವಿರಾರು ಪ್ಯಾಲೆಸ್ತೀನಿಯರು

ಇಸ್ರೇಲ್-ಹಮಾಸ್ ಕದನ ವಿರಾಮ: ಗಾಝಾಗೆ ಮರಳುತ್ತಿರುವ ಸಾವಿರಾರು ಪ್ಯಾಲೆಸ್ತೀನಿಯರು

- Advertisement -
- Advertisement -

ಹಮಾಸ್ ಜೊತೆಗಿನ ಶಾಂತಿ ಒಪ್ಪಂದದ ಮೊದಲ ಹಂತ ಜಾರಿಗೊಳಿಸುತ್ತಿರುವ ಇಸ್ರೇಲಿ ಸೇನೆ, ಗಾಝಾ ಮೇಲಿನ ತನ್ನ ದಾಳಿಯನ್ನು ನಿಲ್ಲಿಸಿದ್ದು, ಗಾಝಾ ಪಟ್ಟಿ ಪ್ರದೇಶದಿಂದ ಭಾಗಶಃ ಹಿಂದೆ ಸರಿದಿದೆ. ಈ ಹಿನ್ನೆಲೆ, ಬಲವಂತವಾಗಿ ಸ್ಥಳಾಂತರಿಸಲ್ಪಟ್ಟ ಸಾವಿರಾರು ಪ್ಯಾಲೆಸ್ತೀನಿಯರು ಉತ್ತರ ಗಾಝಾದ ಧ್ವಂಸಗೊಂಡ ಪಟ್ಟಣಗಳು ​​ಮತ್ತು ನಗರಗಳಿಗೆ ಮರಳುತ್ತಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

ಹಮಾಸ್ ಒತ್ತೆಯಾಳುಗಳಾಗಿ ಇಟ್ಟುಕೊಂಡಿರುವ ಇಸ್ರೇಲ್‌ ಪ್ರಜೆಗಳ ಬಿಡುಗಡೆ ಕಾರ್ಯ ಸೋಮವಾರ (ಅ.13) ನಡೆಯಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಹಮಾಸ್, ಪ್ಯಾಲೆಸ್ಟಿನೀಯನ್ ಇಸ್ಲಾಮಿಕ್ ಜಿಹಾದ್ ಮತ್ತು ಪಾಪ್ಯುಲರ್ ಫ್ರಂಟ್ ಫಾರ್ ದಿ ಲಿಬರೇಷನ್ ಆಫ್ ಪ್ಯಾಲೆಸ್ಟೈನ್ (ಪಿಎಫ್‌ಎಲ್‌ಎಫ್‌) ಸಂಘಟನೆಗಳು ಗಾಝಾ ಪಟ್ಟಿಯ ಮೇಲೆ ‘ಯಾವುದೇ ವಿದೇಶಿ ಆಡಳಿತ’ವನ್ನು ತಿರಸ್ಕರಿಸುವುದಾಗಿ ಹೇಳಿವೆ.

ಇದೇ ವೇಳೆ, ಗಾಜಾ ಅಧಿಕಾರಿಗಳು ಇಸ್ರೇಲ್‌ ಗಾಝಾದ ಮೇಲೆ ಆಕ್ರಮಣ ಮಾಡಿದ ಸಂದರ್ಭದಲ್ಲಿ ನಡೆದ ಯುದ್ಧಾಪರಾಧಗಳು ಮತ್ತು ಜನಾಂಗೀಯ ಹತ್ಯಾಕಾಂಡದ ಬಗ್ಗೆ ಸ್ವತಂತ್ರವಾದ, ಅಂತಾರಾಷ್ಟ್ರೀಯ ತನಿಖೆಗೆ ಒತ್ತಾಯಿಸಿದ್ದಾರೆ.

ಗಾಝಾದ ಎಲ್ಲಾ ಗಡಿಗಳನ್ನು ತೆರೆಯುವಂತೆ ಪ್ಯಾಲೆಸ್ತೀನ್ ನಿರಾಶ್ರಿತರ ಪರ ಕೆಲಸ ಮಾಡುವ ವಿಶ್ವಸಂಸ್ಥೆಯ ಸಂಸ್ಥೆ ಯುನೈಟೆಡ್ ನೇಷನ್ಸ್ ರಿಲೀಫ್ ಅಂಡ್ ವರ್ಕ್ ಏಜೆನ್ಸಿ ಫಾರ್ ಪ್ಯಾಲೆಸ್ಟೈನ್ ರೆಫ್ಯೂಜಿ ಇನ್ ದ ನಿಯರ್ ಈಸ್ಟ್ (ಯುನ್‌ಆರ್‌ಡಬ್ಲ್ಯುಎ) ಒತ್ತಾಯಿಸಿದೆ. ಗಡಿ ತೆರೆದ ಗಂಟೆಗಳಲ್ಲಿ ಗಾಝಾ ತಲುಪಲು 6,000 ನೆರವು ಟ್ರಕ್‌ಗಳು ಸಿದ್ಧವಾಗಿವೆ ಎಂದು ಅದು ಹೇಳಿದೆ.

ಇಸ್ರೇಲ್ ದಾಳಿಯಲ್ಲಿ ಸಾವನ್ನಪ್ಪಿದ ಸುಮಾರು 135 ಪ್ಯಾಲೆಸ್ತೀನಿಯರ ಶವಗಳನ್ನು ಶುಕ್ರವಾರ ಗಾಝಾದ ವಿವಿಧ ಆಸ್ಪತ್ರೆಗಳಿಗೆ ತರಲಾಗಿದೆ ಎಂದು ವಫಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇಸ್ರೇಲ್‌ ಬಾಂಬ್ ದಾಳಿಯನ್ನು ನಿಲ್ಲಿಸಿರುವ ಸಂದರ್ಭವನ್ನು ಬಳಸಿಕೊಂಡು ರಕ್ಷಣಾ ತಂಡಗಳು ನಾಶವಾದ ಕಟ್ಟಡಗಳನ್ನು ತಲುಪುತ್ತಿವೆ.

ಶುಕ್ರವಾರ ಇಸ್ರೇಲಿ ವಾಯುದಾಳಿಯಲ್ಲಿ 19 ಜನರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಈ ಹಿಂದೆ ಉಂಟಾದ ಗಾಯದಿಂದ ಸಾವನ್ನಪ್ಪಿದ್ದಾರೆ ಎಂದು ಗಾಝಾದ ವೈದ್ಯಕೀಯ ಮೂಲಗಳನ್ನು ಉಲ್ಲೇಖಿಸಿ ವಫಾ ವರದಿ ಮಾಡಿದೆ.

ಸಮುದ್ರದ ಮೂಲಕ ನೆರವು ತಲುಪಿಸುವ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಇನ್ನೂ ಐದು ಜನರನ್ನು ಇಸ್ರೇಲ್‌ ಬಂಧನದಿಂದ ಬಿಡುಗಡೆ ಮಾಡಿದೆ ಎಂದು ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಹೇಳಿದೆ.

ದಕ್ಷಿಣ ಲೆಬನಾನ್‌ನ ಅಲ್-ನಝರಿಯಾ ಗ್ರಾಮದ ಮೇಲೆ ಇಸ್ರೇಲಿ ಯುದ್ಧ ವಿಮಾನಗಳು ಬಾಂಬ್ ದಾಳಿ ನಡೆಸಿದ ಹಿನ್ನೆಲೆ ಕನಿಷ್ಠ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಲೆಬನಾನಿನ ಸಶಸ್ತ್ರ ಗುಂಪಿಗೆ ಸೇರಿದ ಮೂಲಸೌಕರ್ಯವನ್ನು ಪುನಃಸ್ಥಾಪಿಸಲು ಬಳಸುವ ಉಪಕರಣಗಳನ್ನು ಸಂಗ್ರಹಿಸುತ್ತಿದ್ದ ಹಿಜ್ಬೊಲ್ಲಾ ತಾಣಗಳ ಮೇಲೆ ದಾಳಿ ಮಾಡಿರುವುದಾಗಿ ಇಸ್ರೇಲ್ ಹೇಳಿಕೊಂಡಿದೆ.

ಆಕ್ರಮಿತ ಪಶ್ಚಿಮ ದಂಡೆಯ ದುರಾ ನಗರದ ಮೇಲೆ ದಾಳಿ ನಡೆಸಿದ ಇಸ್ರೇಲಿ ಸೇನೆಯು ಒಬ್ಬ ಪ್ಯಾಲೆಸ್ತೀನ್ ವ್ಯಕ್ತಿಯ ಮೇಲೆ ಗುಂಡು ಹಾರಿಸಿದೆ ಮತ್ತು ನಂತರ ಗಾಯಾಳು ವ್ಯಕ್ತಿಯನ್ನು ತಲುಪದಂತೆ ಆಂಬ್ಯುಲೆನ್ಸ್‌ಗಳನ್ನು ತಡೆದಿದೆ ಎಂದು ವರದಿಗಳು ಹೇಳಿವೆ.

ಎರಡು ವರ್ಷಗಳ ಗಾಝಾ ‘ನರಮೇಧ’: 20,179 ಕಂದಮ್ಮಗಳನ್ನು ಹತ್ಯೆಗೈದ ಇಸ್ರೇಲ್, ಆಹಾರ ವಂಚಿತರಾದ 12 ಲಕ್ಷಕ್ಕೂ ಅಧಿಕ ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...