Homeಅಂತರಾಷ್ಟ್ರೀಯಇಸ್ರೇಲ್-ಹಮಾಸ್ ಕದನ ವಿರಾಮ: ಗಾಝಾಗೆ ಮರಳುತ್ತಿರುವ ಸಾವಿರಾರು ಪ್ಯಾಲೆಸ್ತೀನಿಯರು

ಇಸ್ರೇಲ್-ಹಮಾಸ್ ಕದನ ವಿರಾಮ: ಗಾಝಾಗೆ ಮರಳುತ್ತಿರುವ ಸಾವಿರಾರು ಪ್ಯಾಲೆಸ್ತೀನಿಯರು

- Advertisement -
- Advertisement -

ಹಮಾಸ್ ಜೊತೆಗಿನ ಶಾಂತಿ ಒಪ್ಪಂದದ ಮೊದಲ ಹಂತ ಜಾರಿಗೊಳಿಸುತ್ತಿರುವ ಇಸ್ರೇಲಿ ಸೇನೆ, ಗಾಝಾ ಮೇಲಿನ ತನ್ನ ದಾಳಿಯನ್ನು ನಿಲ್ಲಿಸಿದ್ದು, ಗಾಝಾ ಪಟ್ಟಿ ಪ್ರದೇಶದಿಂದ ಭಾಗಶಃ ಹಿಂದೆ ಸರಿದಿದೆ. ಈ ಹಿನ್ನೆಲೆ, ಬಲವಂತವಾಗಿ ಸ್ಥಳಾಂತರಿಸಲ್ಪಟ್ಟ ಸಾವಿರಾರು ಪ್ಯಾಲೆಸ್ತೀನಿಯರು ಉತ್ತರ ಗಾಝಾದ ಧ್ವಂಸಗೊಂಡ ಪಟ್ಟಣಗಳು ​​ಮತ್ತು ನಗರಗಳಿಗೆ ಮರಳುತ್ತಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

ಹಮಾಸ್ ಒತ್ತೆಯಾಳುಗಳಾಗಿ ಇಟ್ಟುಕೊಂಡಿರುವ ಇಸ್ರೇಲ್‌ ಪ್ರಜೆಗಳ ಬಿಡುಗಡೆ ಕಾರ್ಯ ಸೋಮವಾರ (ಅ.13) ನಡೆಯಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಹಮಾಸ್, ಪ್ಯಾಲೆಸ್ಟಿನೀಯನ್ ಇಸ್ಲಾಮಿಕ್ ಜಿಹಾದ್ ಮತ್ತು ಪಾಪ್ಯುಲರ್ ಫ್ರಂಟ್ ಫಾರ್ ದಿ ಲಿಬರೇಷನ್ ಆಫ್ ಪ್ಯಾಲೆಸ್ಟೈನ್ (ಪಿಎಫ್‌ಎಲ್‌ಎಫ್‌) ಸಂಘಟನೆಗಳು ಗಾಝಾ ಪಟ್ಟಿಯ ಮೇಲೆ ‘ಯಾವುದೇ ವಿದೇಶಿ ಆಡಳಿತ’ವನ್ನು ತಿರಸ್ಕರಿಸುವುದಾಗಿ ಹೇಳಿವೆ.

ಇದೇ ವೇಳೆ, ಗಾಜಾ ಅಧಿಕಾರಿಗಳು ಇಸ್ರೇಲ್‌ ಗಾಝಾದ ಮೇಲೆ ಆಕ್ರಮಣ ಮಾಡಿದ ಸಂದರ್ಭದಲ್ಲಿ ನಡೆದ ಯುದ್ಧಾಪರಾಧಗಳು ಮತ್ತು ಜನಾಂಗೀಯ ಹತ್ಯಾಕಾಂಡದ ಬಗ್ಗೆ ಸ್ವತಂತ್ರವಾದ, ಅಂತಾರಾಷ್ಟ್ರೀಯ ತನಿಖೆಗೆ ಒತ್ತಾಯಿಸಿದ್ದಾರೆ.

ಗಾಝಾದ ಎಲ್ಲಾ ಗಡಿಗಳನ್ನು ತೆರೆಯುವಂತೆ ಪ್ಯಾಲೆಸ್ತೀನ್ ನಿರಾಶ್ರಿತರ ಪರ ಕೆಲಸ ಮಾಡುವ ವಿಶ್ವಸಂಸ್ಥೆಯ ಸಂಸ್ಥೆ ಯುನೈಟೆಡ್ ನೇಷನ್ಸ್ ರಿಲೀಫ್ ಅಂಡ್ ವರ್ಕ್ ಏಜೆನ್ಸಿ ಫಾರ್ ಪ್ಯಾಲೆಸ್ಟೈನ್ ರೆಫ್ಯೂಜಿ ಇನ್ ದ ನಿಯರ್ ಈಸ್ಟ್ (ಯುನ್‌ಆರ್‌ಡಬ್ಲ್ಯುಎ) ಒತ್ತಾಯಿಸಿದೆ. ಗಡಿ ತೆರೆದ ಗಂಟೆಗಳಲ್ಲಿ ಗಾಝಾ ತಲುಪಲು 6,000 ನೆರವು ಟ್ರಕ್‌ಗಳು ಸಿದ್ಧವಾಗಿವೆ ಎಂದು ಅದು ಹೇಳಿದೆ.

ಇಸ್ರೇಲ್ ದಾಳಿಯಲ್ಲಿ ಸಾವನ್ನಪ್ಪಿದ ಸುಮಾರು 135 ಪ್ಯಾಲೆಸ್ತೀನಿಯರ ಶವಗಳನ್ನು ಶುಕ್ರವಾರ ಗಾಝಾದ ವಿವಿಧ ಆಸ್ಪತ್ರೆಗಳಿಗೆ ತರಲಾಗಿದೆ ಎಂದು ವಫಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇಸ್ರೇಲ್‌ ಬಾಂಬ್ ದಾಳಿಯನ್ನು ನಿಲ್ಲಿಸಿರುವ ಸಂದರ್ಭವನ್ನು ಬಳಸಿಕೊಂಡು ರಕ್ಷಣಾ ತಂಡಗಳು ನಾಶವಾದ ಕಟ್ಟಡಗಳನ್ನು ತಲುಪುತ್ತಿವೆ.

ಶುಕ್ರವಾರ ಇಸ್ರೇಲಿ ವಾಯುದಾಳಿಯಲ್ಲಿ 19 ಜನರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಈ ಹಿಂದೆ ಉಂಟಾದ ಗಾಯದಿಂದ ಸಾವನ್ನಪ್ಪಿದ್ದಾರೆ ಎಂದು ಗಾಝಾದ ವೈದ್ಯಕೀಯ ಮೂಲಗಳನ್ನು ಉಲ್ಲೇಖಿಸಿ ವಫಾ ವರದಿ ಮಾಡಿದೆ.

ಸಮುದ್ರದ ಮೂಲಕ ನೆರವು ತಲುಪಿಸುವ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಇನ್ನೂ ಐದು ಜನರನ್ನು ಇಸ್ರೇಲ್‌ ಬಂಧನದಿಂದ ಬಿಡುಗಡೆ ಮಾಡಿದೆ ಎಂದು ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಹೇಳಿದೆ.

ದಕ್ಷಿಣ ಲೆಬನಾನ್‌ನ ಅಲ್-ನಝರಿಯಾ ಗ್ರಾಮದ ಮೇಲೆ ಇಸ್ರೇಲಿ ಯುದ್ಧ ವಿಮಾನಗಳು ಬಾಂಬ್ ದಾಳಿ ನಡೆಸಿದ ಹಿನ್ನೆಲೆ ಕನಿಷ್ಠ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಲೆಬನಾನಿನ ಸಶಸ್ತ್ರ ಗುಂಪಿಗೆ ಸೇರಿದ ಮೂಲಸೌಕರ್ಯವನ್ನು ಪುನಃಸ್ಥಾಪಿಸಲು ಬಳಸುವ ಉಪಕರಣಗಳನ್ನು ಸಂಗ್ರಹಿಸುತ್ತಿದ್ದ ಹಿಜ್ಬೊಲ್ಲಾ ತಾಣಗಳ ಮೇಲೆ ದಾಳಿ ಮಾಡಿರುವುದಾಗಿ ಇಸ್ರೇಲ್ ಹೇಳಿಕೊಂಡಿದೆ.

ಆಕ್ರಮಿತ ಪಶ್ಚಿಮ ದಂಡೆಯ ದುರಾ ನಗರದ ಮೇಲೆ ದಾಳಿ ನಡೆಸಿದ ಇಸ್ರೇಲಿ ಸೇನೆಯು ಒಬ್ಬ ಪ್ಯಾಲೆಸ್ತೀನ್ ವ್ಯಕ್ತಿಯ ಮೇಲೆ ಗುಂಡು ಹಾರಿಸಿದೆ ಮತ್ತು ನಂತರ ಗಾಯಾಳು ವ್ಯಕ್ತಿಯನ್ನು ತಲುಪದಂತೆ ಆಂಬ್ಯುಲೆನ್ಸ್‌ಗಳನ್ನು ತಡೆದಿದೆ ಎಂದು ವರದಿಗಳು ಹೇಳಿವೆ.

ಎರಡು ವರ್ಷಗಳ ಗಾಝಾ ‘ನರಮೇಧ’: 20,179 ಕಂದಮ್ಮಗಳನ್ನು ಹತ್ಯೆಗೈದ ಇಸ್ರೇಲ್, ಆಹಾರ ವಂಚಿತರಾದ 12 ಲಕ್ಷಕ್ಕೂ ಅಧಿಕ ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...