Homeಅಂತರಾಷ್ಟ್ರೀಯಇಸ್ರೇಲ್-ಹಮಾಸ್ ಕದನ ವಿರಾಮ: ಗಾಝಾಗೆ ಮರಳುತ್ತಿರುವ ಸಾವಿರಾರು ಪ್ಯಾಲೆಸ್ತೀನಿಯರು

ಇಸ್ರೇಲ್-ಹಮಾಸ್ ಕದನ ವಿರಾಮ: ಗಾಝಾಗೆ ಮರಳುತ್ತಿರುವ ಸಾವಿರಾರು ಪ್ಯಾಲೆಸ್ತೀನಿಯರು

- Advertisement -
- Advertisement -

ಹಮಾಸ್ ಜೊತೆಗಿನ ಶಾಂತಿ ಒಪ್ಪಂದದ ಮೊದಲ ಹಂತ ಜಾರಿಗೊಳಿಸುತ್ತಿರುವ ಇಸ್ರೇಲಿ ಸೇನೆ, ಗಾಝಾ ಮೇಲಿನ ತನ್ನ ದಾಳಿಯನ್ನು ನಿಲ್ಲಿಸಿದ್ದು, ಗಾಝಾ ಪಟ್ಟಿ ಪ್ರದೇಶದಿಂದ ಭಾಗಶಃ ಹಿಂದೆ ಸರಿದಿದೆ. ಈ ಹಿನ್ನೆಲೆ, ಬಲವಂತವಾಗಿ ಸ್ಥಳಾಂತರಿಸಲ್ಪಟ್ಟ ಸಾವಿರಾರು ಪ್ಯಾಲೆಸ್ತೀನಿಯರು ಉತ್ತರ ಗಾಝಾದ ಧ್ವಂಸಗೊಂಡ ಪಟ್ಟಣಗಳು ​​ಮತ್ತು ನಗರಗಳಿಗೆ ಮರಳುತ್ತಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

ಹಮಾಸ್ ಒತ್ತೆಯಾಳುಗಳಾಗಿ ಇಟ್ಟುಕೊಂಡಿರುವ ಇಸ್ರೇಲ್‌ ಪ್ರಜೆಗಳ ಬಿಡುಗಡೆ ಕಾರ್ಯ ಸೋಮವಾರ (ಅ.13) ನಡೆಯಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಹಮಾಸ್, ಪ್ಯಾಲೆಸ್ಟಿನೀಯನ್ ಇಸ್ಲಾಮಿಕ್ ಜಿಹಾದ್ ಮತ್ತು ಪಾಪ್ಯುಲರ್ ಫ್ರಂಟ್ ಫಾರ್ ದಿ ಲಿಬರೇಷನ್ ಆಫ್ ಪ್ಯಾಲೆಸ್ಟೈನ್ (ಪಿಎಫ್‌ಎಲ್‌ಎಫ್‌) ಸಂಘಟನೆಗಳು ಗಾಝಾ ಪಟ್ಟಿಯ ಮೇಲೆ ‘ಯಾವುದೇ ವಿದೇಶಿ ಆಡಳಿತ’ವನ್ನು ತಿರಸ್ಕರಿಸುವುದಾಗಿ ಹೇಳಿವೆ.

ಇದೇ ವೇಳೆ, ಗಾಜಾ ಅಧಿಕಾರಿಗಳು ಇಸ್ರೇಲ್‌ ಗಾಝಾದ ಮೇಲೆ ಆಕ್ರಮಣ ಮಾಡಿದ ಸಂದರ್ಭದಲ್ಲಿ ನಡೆದ ಯುದ್ಧಾಪರಾಧಗಳು ಮತ್ತು ಜನಾಂಗೀಯ ಹತ್ಯಾಕಾಂಡದ ಬಗ್ಗೆ ಸ್ವತಂತ್ರವಾದ, ಅಂತಾರಾಷ್ಟ್ರೀಯ ತನಿಖೆಗೆ ಒತ್ತಾಯಿಸಿದ್ದಾರೆ.

ಗಾಝಾದ ಎಲ್ಲಾ ಗಡಿಗಳನ್ನು ತೆರೆಯುವಂತೆ ಪ್ಯಾಲೆಸ್ತೀನ್ ನಿರಾಶ್ರಿತರ ಪರ ಕೆಲಸ ಮಾಡುವ ವಿಶ್ವಸಂಸ್ಥೆಯ ಸಂಸ್ಥೆ ಯುನೈಟೆಡ್ ನೇಷನ್ಸ್ ರಿಲೀಫ್ ಅಂಡ್ ವರ್ಕ್ ಏಜೆನ್ಸಿ ಫಾರ್ ಪ್ಯಾಲೆಸ್ಟೈನ್ ರೆಫ್ಯೂಜಿ ಇನ್ ದ ನಿಯರ್ ಈಸ್ಟ್ (ಯುನ್‌ಆರ್‌ಡಬ್ಲ್ಯುಎ) ಒತ್ತಾಯಿಸಿದೆ. ಗಡಿ ತೆರೆದ ಗಂಟೆಗಳಲ್ಲಿ ಗಾಝಾ ತಲುಪಲು 6,000 ನೆರವು ಟ್ರಕ್‌ಗಳು ಸಿದ್ಧವಾಗಿವೆ ಎಂದು ಅದು ಹೇಳಿದೆ.

ಇಸ್ರೇಲ್ ದಾಳಿಯಲ್ಲಿ ಸಾವನ್ನಪ್ಪಿದ ಸುಮಾರು 135 ಪ್ಯಾಲೆಸ್ತೀನಿಯರ ಶವಗಳನ್ನು ಶುಕ್ರವಾರ ಗಾಝಾದ ವಿವಿಧ ಆಸ್ಪತ್ರೆಗಳಿಗೆ ತರಲಾಗಿದೆ ಎಂದು ವಫಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇಸ್ರೇಲ್‌ ಬಾಂಬ್ ದಾಳಿಯನ್ನು ನಿಲ್ಲಿಸಿರುವ ಸಂದರ್ಭವನ್ನು ಬಳಸಿಕೊಂಡು ರಕ್ಷಣಾ ತಂಡಗಳು ನಾಶವಾದ ಕಟ್ಟಡಗಳನ್ನು ತಲುಪುತ್ತಿವೆ.

ಶುಕ್ರವಾರ ಇಸ್ರೇಲಿ ವಾಯುದಾಳಿಯಲ್ಲಿ 19 ಜನರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಈ ಹಿಂದೆ ಉಂಟಾದ ಗಾಯದಿಂದ ಸಾವನ್ನಪ್ಪಿದ್ದಾರೆ ಎಂದು ಗಾಝಾದ ವೈದ್ಯಕೀಯ ಮೂಲಗಳನ್ನು ಉಲ್ಲೇಖಿಸಿ ವಫಾ ವರದಿ ಮಾಡಿದೆ.

ಸಮುದ್ರದ ಮೂಲಕ ನೆರವು ತಲುಪಿಸುವ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಇನ್ನೂ ಐದು ಜನರನ್ನು ಇಸ್ರೇಲ್‌ ಬಂಧನದಿಂದ ಬಿಡುಗಡೆ ಮಾಡಿದೆ ಎಂದು ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಹೇಳಿದೆ.

ದಕ್ಷಿಣ ಲೆಬನಾನ್‌ನ ಅಲ್-ನಝರಿಯಾ ಗ್ರಾಮದ ಮೇಲೆ ಇಸ್ರೇಲಿ ಯುದ್ಧ ವಿಮಾನಗಳು ಬಾಂಬ್ ದಾಳಿ ನಡೆಸಿದ ಹಿನ್ನೆಲೆ ಕನಿಷ್ಠ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಲೆಬನಾನಿನ ಸಶಸ್ತ್ರ ಗುಂಪಿಗೆ ಸೇರಿದ ಮೂಲಸೌಕರ್ಯವನ್ನು ಪುನಃಸ್ಥಾಪಿಸಲು ಬಳಸುವ ಉಪಕರಣಗಳನ್ನು ಸಂಗ್ರಹಿಸುತ್ತಿದ್ದ ಹಿಜ್ಬೊಲ್ಲಾ ತಾಣಗಳ ಮೇಲೆ ದಾಳಿ ಮಾಡಿರುವುದಾಗಿ ಇಸ್ರೇಲ್ ಹೇಳಿಕೊಂಡಿದೆ.

ಆಕ್ರಮಿತ ಪಶ್ಚಿಮ ದಂಡೆಯ ದುರಾ ನಗರದ ಮೇಲೆ ದಾಳಿ ನಡೆಸಿದ ಇಸ್ರೇಲಿ ಸೇನೆಯು ಒಬ್ಬ ಪ್ಯಾಲೆಸ್ತೀನ್ ವ್ಯಕ್ತಿಯ ಮೇಲೆ ಗುಂಡು ಹಾರಿಸಿದೆ ಮತ್ತು ನಂತರ ಗಾಯಾಳು ವ್ಯಕ್ತಿಯನ್ನು ತಲುಪದಂತೆ ಆಂಬ್ಯುಲೆನ್ಸ್‌ಗಳನ್ನು ತಡೆದಿದೆ ಎಂದು ವರದಿಗಳು ಹೇಳಿವೆ.

ಎರಡು ವರ್ಷಗಳ ಗಾಝಾ ‘ನರಮೇಧ’: 20,179 ಕಂದಮ್ಮಗಳನ್ನು ಹತ್ಯೆಗೈದ ಇಸ್ರೇಲ್, ಆಹಾರ ವಂಚಿತರಾದ 12 ಲಕ್ಷಕ್ಕೂ ಅಧಿಕ ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...