Homeಅಂತರಾಷ್ಟ್ರೀಯಇಸ್ರೇಲ್-ಹಮಾಸ್ ಕದನ ವಿರಾಮ: ಗಾಝಾಗೆ ಮರಳುತ್ತಿರುವ ಸಾವಿರಾರು ಪ್ಯಾಲೆಸ್ತೀನಿಯರು

ಇಸ್ರೇಲ್-ಹಮಾಸ್ ಕದನ ವಿರಾಮ: ಗಾಝಾಗೆ ಮರಳುತ್ತಿರುವ ಸಾವಿರಾರು ಪ್ಯಾಲೆಸ್ತೀನಿಯರು

- Advertisement -
- Advertisement -

ಹಮಾಸ್ ಜೊತೆಗಿನ ಶಾಂತಿ ಒಪ್ಪಂದದ ಮೊದಲ ಹಂತ ಜಾರಿಗೊಳಿಸುತ್ತಿರುವ ಇಸ್ರೇಲಿ ಸೇನೆ, ಗಾಝಾ ಮೇಲಿನ ತನ್ನ ದಾಳಿಯನ್ನು ನಿಲ್ಲಿಸಿದ್ದು, ಗಾಝಾ ಪಟ್ಟಿ ಪ್ರದೇಶದಿಂದ ಭಾಗಶಃ ಹಿಂದೆ ಸರಿದಿದೆ. ಈ ಹಿನ್ನೆಲೆ, ಬಲವಂತವಾಗಿ ಸ್ಥಳಾಂತರಿಸಲ್ಪಟ್ಟ ಸಾವಿರಾರು ಪ್ಯಾಲೆಸ್ತೀನಿಯರು ಉತ್ತರ ಗಾಝಾದ ಧ್ವಂಸಗೊಂಡ ಪಟ್ಟಣಗಳು ​​ಮತ್ತು ನಗರಗಳಿಗೆ ಮರಳುತ್ತಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

ಹಮಾಸ್ ಒತ್ತೆಯಾಳುಗಳಾಗಿ ಇಟ್ಟುಕೊಂಡಿರುವ ಇಸ್ರೇಲ್‌ ಪ್ರಜೆಗಳ ಬಿಡುಗಡೆ ಕಾರ್ಯ ಸೋಮವಾರ (ಅ.13) ನಡೆಯಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಹಮಾಸ್, ಪ್ಯಾಲೆಸ್ಟಿನೀಯನ್ ಇಸ್ಲಾಮಿಕ್ ಜಿಹಾದ್ ಮತ್ತು ಪಾಪ್ಯುಲರ್ ಫ್ರಂಟ್ ಫಾರ್ ದಿ ಲಿಬರೇಷನ್ ಆಫ್ ಪ್ಯಾಲೆಸ್ಟೈನ್ (ಪಿಎಫ್‌ಎಲ್‌ಎಫ್‌) ಸಂಘಟನೆಗಳು ಗಾಝಾ ಪಟ್ಟಿಯ ಮೇಲೆ ‘ಯಾವುದೇ ವಿದೇಶಿ ಆಡಳಿತ’ವನ್ನು ತಿರಸ್ಕರಿಸುವುದಾಗಿ ಹೇಳಿವೆ.

ಇದೇ ವೇಳೆ, ಗಾಜಾ ಅಧಿಕಾರಿಗಳು ಇಸ್ರೇಲ್‌ ಗಾಝಾದ ಮೇಲೆ ಆಕ್ರಮಣ ಮಾಡಿದ ಸಂದರ್ಭದಲ್ಲಿ ನಡೆದ ಯುದ್ಧಾಪರಾಧಗಳು ಮತ್ತು ಜನಾಂಗೀಯ ಹತ್ಯಾಕಾಂಡದ ಬಗ್ಗೆ ಸ್ವತಂತ್ರವಾದ, ಅಂತಾರಾಷ್ಟ್ರೀಯ ತನಿಖೆಗೆ ಒತ್ತಾಯಿಸಿದ್ದಾರೆ.

ಗಾಝಾದ ಎಲ್ಲಾ ಗಡಿಗಳನ್ನು ತೆರೆಯುವಂತೆ ಪ್ಯಾಲೆಸ್ತೀನ್ ನಿರಾಶ್ರಿತರ ಪರ ಕೆಲಸ ಮಾಡುವ ವಿಶ್ವಸಂಸ್ಥೆಯ ಸಂಸ್ಥೆ ಯುನೈಟೆಡ್ ನೇಷನ್ಸ್ ರಿಲೀಫ್ ಅಂಡ್ ವರ್ಕ್ ಏಜೆನ್ಸಿ ಫಾರ್ ಪ್ಯಾಲೆಸ್ಟೈನ್ ರೆಫ್ಯೂಜಿ ಇನ್ ದ ನಿಯರ್ ಈಸ್ಟ್ (ಯುನ್‌ಆರ್‌ಡಬ್ಲ್ಯುಎ) ಒತ್ತಾಯಿಸಿದೆ. ಗಡಿ ತೆರೆದ ಗಂಟೆಗಳಲ್ಲಿ ಗಾಝಾ ತಲುಪಲು 6,000 ನೆರವು ಟ್ರಕ್‌ಗಳು ಸಿದ್ಧವಾಗಿವೆ ಎಂದು ಅದು ಹೇಳಿದೆ.

ಇಸ್ರೇಲ್ ದಾಳಿಯಲ್ಲಿ ಸಾವನ್ನಪ್ಪಿದ ಸುಮಾರು 135 ಪ್ಯಾಲೆಸ್ತೀನಿಯರ ಶವಗಳನ್ನು ಶುಕ್ರವಾರ ಗಾಝಾದ ವಿವಿಧ ಆಸ್ಪತ್ರೆಗಳಿಗೆ ತರಲಾಗಿದೆ ಎಂದು ವಫಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇಸ್ರೇಲ್‌ ಬಾಂಬ್ ದಾಳಿಯನ್ನು ನಿಲ್ಲಿಸಿರುವ ಸಂದರ್ಭವನ್ನು ಬಳಸಿಕೊಂಡು ರಕ್ಷಣಾ ತಂಡಗಳು ನಾಶವಾದ ಕಟ್ಟಡಗಳನ್ನು ತಲುಪುತ್ತಿವೆ.

ಶುಕ್ರವಾರ ಇಸ್ರೇಲಿ ವಾಯುದಾಳಿಯಲ್ಲಿ 19 ಜನರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಈ ಹಿಂದೆ ಉಂಟಾದ ಗಾಯದಿಂದ ಸಾವನ್ನಪ್ಪಿದ್ದಾರೆ ಎಂದು ಗಾಝಾದ ವೈದ್ಯಕೀಯ ಮೂಲಗಳನ್ನು ಉಲ್ಲೇಖಿಸಿ ವಫಾ ವರದಿ ಮಾಡಿದೆ.

ಸಮುದ್ರದ ಮೂಲಕ ನೆರವು ತಲುಪಿಸುವ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಇನ್ನೂ ಐದು ಜನರನ್ನು ಇಸ್ರೇಲ್‌ ಬಂಧನದಿಂದ ಬಿಡುಗಡೆ ಮಾಡಿದೆ ಎಂದು ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಹೇಳಿದೆ.

ದಕ್ಷಿಣ ಲೆಬನಾನ್‌ನ ಅಲ್-ನಝರಿಯಾ ಗ್ರಾಮದ ಮೇಲೆ ಇಸ್ರೇಲಿ ಯುದ್ಧ ವಿಮಾನಗಳು ಬಾಂಬ್ ದಾಳಿ ನಡೆಸಿದ ಹಿನ್ನೆಲೆ ಕನಿಷ್ಠ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಲೆಬನಾನಿನ ಸಶಸ್ತ್ರ ಗುಂಪಿಗೆ ಸೇರಿದ ಮೂಲಸೌಕರ್ಯವನ್ನು ಪುನಃಸ್ಥಾಪಿಸಲು ಬಳಸುವ ಉಪಕರಣಗಳನ್ನು ಸಂಗ್ರಹಿಸುತ್ತಿದ್ದ ಹಿಜ್ಬೊಲ್ಲಾ ತಾಣಗಳ ಮೇಲೆ ದಾಳಿ ಮಾಡಿರುವುದಾಗಿ ಇಸ್ರೇಲ್ ಹೇಳಿಕೊಂಡಿದೆ.

ಆಕ್ರಮಿತ ಪಶ್ಚಿಮ ದಂಡೆಯ ದುರಾ ನಗರದ ಮೇಲೆ ದಾಳಿ ನಡೆಸಿದ ಇಸ್ರೇಲಿ ಸೇನೆಯು ಒಬ್ಬ ಪ್ಯಾಲೆಸ್ತೀನ್ ವ್ಯಕ್ತಿಯ ಮೇಲೆ ಗುಂಡು ಹಾರಿಸಿದೆ ಮತ್ತು ನಂತರ ಗಾಯಾಳು ವ್ಯಕ್ತಿಯನ್ನು ತಲುಪದಂತೆ ಆಂಬ್ಯುಲೆನ್ಸ್‌ಗಳನ್ನು ತಡೆದಿದೆ ಎಂದು ವರದಿಗಳು ಹೇಳಿವೆ.

ಎರಡು ವರ್ಷಗಳ ಗಾಝಾ ‘ನರಮೇಧ’: 20,179 ಕಂದಮ್ಮಗಳನ್ನು ಹತ್ಯೆಗೈದ ಇಸ್ರೇಲ್, ಆಹಾರ ವಂಚಿತರಾದ 12 ಲಕ್ಷಕ್ಕೂ ಅಧಿಕ ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...