Homeಅಂತರಾಷ್ಟ್ರೀಯಇಸ್ರೇಲ್‌-ಹಮಾಸ್‌ನಿಂದ ಬಂಧಿತರು, ಒತ್ತೆಯಾಳುಗಳ ಹಸ್ತಾಂತರ: ಇಸ್ರೇಲ್‌ ಸಂಸತ್‌ನಲ್ಲಿ ಟ್ರಂಪ್ ಭಾಷಣ

ಇಸ್ರೇಲ್‌-ಹಮಾಸ್‌ನಿಂದ ಬಂಧಿತರು, ಒತ್ತೆಯಾಳುಗಳ ಹಸ್ತಾಂತರ: ಇಸ್ರೇಲ್‌ ಸಂಸತ್‌ನಲ್ಲಿ ಟ್ರಂಪ್ ಭಾಷಣ

- Advertisement -
- Advertisement -

ಕದನ ವಿರಾಮ ಒಪ್ಪಂದದ ಭಾಗವಾಗಿ ಇಸ್ರೇಲ್-ಹಮಾಸ್ ನಡುವೆ ಬಂಧಿತರು ಮತ್ತು ಒತ್ತೆಯಾಳುಗಳ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದೆ.

ಭಾರತೀಯ ಕಾಲಮಾನ ಸೋಮವಾರ (ಅ.13) ಪೂರ್ವಾಹ್ನ 12 ಗಂಟೆಯ ಸುಮಾರಿಗೆ ಮೊದಲ ಹಂತದಲ್ಲಿ ಏಳು ಮಂದಿ ಇಸ್ರೇಲಿ ಒತ್ತೆಯಾಳುಗಳನ್ನು ರೆಡ್ ಕ್ರಾಸ್ ಅಂತಾರಾಷ್ಟೀಯ ಸಮಿತಿ ಮೂಲಕ ಹಮಾಸ್ ಇಸ್ರೇಲ್‌ಗೆ ಹಸ್ತಾಂತರಿಸಿದೆ. .

ನಂತರ, ಎರಡನೇ ಹಂತದಲ್ಲಿ, 13 ಒತ್ತೆಯಾಳುಗಳನ್ನು ಹಸ್ತಾಂತರ ಮಾಡಿದೆ. ಈ ಮೂಲಕ ಜೀವಂತ ಇದ್ದ ಎಲ್ಲಾ 20 ಒತ್ತೆಯಾಳುಗಳನ್ನು ಹಮಾಸ್ ಹಸ್ತಾಂತರಿಸಿದೆ. ಗಾಝಾದ ಖಾನ್ ಯೂನಿಸ್ ನಗರದಲ್ಲಿ ಈ ಹಸ್ತಾಂತರ ಪ್ರಕ್ರಿಯೆ ನಡೆದಿದೆ.

ಇದಕ್ಕೆ ಬದಲಾಗಿ, ಜೈಲು ಶಿಕ್ಷೆಗೆ ಗುರಿಯಾದ ಸುಮಾರು 250ಕ್ಕೂ ಹೆಚ್ಚು ಅಪರಾಧಿಗಳು ಮತ್ತು 2023ರ ಅಕ್ಟೋಬರ್ 7ರ ನಂತರ ಬಂಧಿಸಲ್ಪಟ್ಟವರು ಸೇರಿದಂತೆ ಒಟ್ಟು 2000 ಪ್ಯಾಲೆಸ್ತೀನಿಯರನ್ನು ಇಸ್ರೇಲ್ ಬಿಡುಗಡೆ ಮಾಡುತ್ತಿದೆ.

ವರದಿಗಳ ಪ್ರಕಾರ, ಪ್ಯಾಲೆಸ್ತೀನಿಯರನ್ನು ಹೊತ್ತ ಮೊದಲ ಕೆಲ ಬಸ್‌ಗಳು ಆಕ್ರಮಿತ ಪಶ್ಚಿಮ ದಂಡೆಯ ರಾಮಲ್ಲಾ ತಲುಪಿದೆ. ಅಲ್ಲಿ ಸಾವಿರಾರು ಜನರು ತಮ್ಮವರನ್ನು ಸ್ವಾಗತಿಸಿದ್ದಾರೆ. ಬಿಡುಗಡೆಗೊಂಡವರನ್ನು ರಾಮಲ್ಲಾದಿಂದ ಗಾಝಾಕ್ಕೆ ಕರೆ ತರಲಾಗುತ್ತದೆ. ನಂತರ ದಕ್ಷಿಣ ಗಾಝಾದ ಖಾನ್ ಯೂನಿಸ್‌ನ ಯುರೋಪಿಯನ್ ಆಸ್ಪತ್ರೆ ಅಥವಾ ಕೇಂದ್ರ ಗಾಝಾದ ಅಲ್‌-ನಸರ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುತ್ತದೆ.

2000 ಪ್ಯಾಲೆಸ್ತೀನಿಯರು ಇಸ್ರೇಲ್‌ನ ಓಫರ್ ಮಿಲಿಟರಿ ಜೈಲು, ಮೆಗಿದ್ದೋ ಸೆರೆಮನೆ, ಗಿಲ್ಬೋವಾ ಜೈಲು, ಕೆಟ್ಜಿಯೊಟ್ ಜೈಲು ಮತ್ತು ಐಡಿಎಫ್ ಕಸ್ಟಡಿ ಸೌಲಭ್ಯಗಳಿಂದ ಬಿಡುಗಡೆಯಾಗಲಿದ್ದಾರೆ. ಹಮಾಸ್ ಒತ್ತೆಯಾಳುಗಳನ್ನು ಇದುವರೆಗೆ ಎಲ್ಲಿ ಬಚ್ಚಿಟ್ಟಿತ್ತು ಎಂಬ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ಬಿಡುಗಡೆ ಮಾತ್ರ ಖಾನ್ ಯೂನಿಸ್‌ನಲ್ಲಿ ನಡೆದಿದೆ.

ಜೀವಂತ ಇದ್ದ 20 ಇಸ್ರೇಲಿ ಒತ್ತೆಯಾಳುಗಳ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಂಡಿದೆ. ಇಸ್ರೇಲ್‌ನ ಟೆಲ್ ಅವೀವ್ ನಗರದ ತಲುಪಿದ ಅವರನ್ನು ಸಂಬಂಧಿಕರು ಸ್ವಾಗತಿಸಿದ್ದಾರೆ. ಇನ್ನು 28 ಮೃತ ಒತ್ತೆಯಾಳುಗಳ ದೇಹಗಳನ್ನು ಹಸ್ತಾಂತರಿಸಬೇಕಿದೆ.

ವರದಿಗಳ ಪ್ರಕಾರ, ಹಮಾಸ್ ಇಂದು (ಸೋಮವಾರ) 28 ಮೃತದೇಹಗಳ ಪೈಕಿ 4 ದೇಹಗಳನ್ನು ಹಸ್ತಾಂತರಿಸಿದೆ. ಇನ್ನುಳಿದ 24 ದೇಹಗಳ ಹಸ್ತಾಂತರ ಆಗಬೇಕಿದೆ. ಟೆಲ್‌ ಅವೀವ್‌ನಲ್ಲಿ ಜೀವಂತವಾಗಿ ತಲುಪಿದ ಒತ್ತೆಯಾಳುಗಳ ಸಂಬಂಧಿಕರು ಖುಷಿಯಿಂದ ಕುಣಿದಾಡಿದರೆ, ಮರಣ ಹೊಂದಿದವರ ಸಂಬಂಧಿಕರು ದುಖಃ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಸ್ರೇಲಿ ಸಂಸತ್ತಿನಲ್ಲಿ ಟ್ರಂಪ್ ಭಾಷಣ

ಇತ್ತ ಗಡಿಯಲ್ಲಿ ಬಂಧಿತರು ಒತ್ತೆಯಾಳುಗಳ ಹಸ್ತಾಂತರ ಕಾರ್ಯ ನಡೆಯುತ್ತಿದ್ದರೆ, ಅತ್ತ ಪಶ್ಚಿಮ ಜೆರುಸಲೆಮ್‌ನ ಇಸ್ರೇಲಿ ಸಂಸತ್‌ನಲ್ಲಿ (ನೆಸೆಟ್‌) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಷಣ ಮಾಡಿದ್ದಾರೆ.

“ಎರಡು ವರ್ಷಗಳ ಕತ್ತಲೆಯ ಸೆರೆವಾಸದ ಬಳಿಕ, 20 ಒತ್ತೆಯಾಳುಗಳು ತಮ್ಮ ಕುಟುಂಬವನ್ನು ಸೇರಿಕೊಂಡಿದ್ದಾರೆ” ಎಂದು ಟ್ರಂಪ್ ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಒತ್ತೆಯಾಳುಗಳ ಬಿಡುಗಡೆ ಮತ್ತು ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಲು ಹಮಾಸ್ ಮೇಲೆ ಒತ್ತಡೆ ಹೇರಿದ ಅರಬ್ ಮುಸ್ಲಿಂ ದೇಶಗಳಿಗೆ ಇದೇ ವೇಳೆ ಟ್ರಂಪ್ ಧನ್ಯವಾದ ತಿಳಿಸಿದ್ದಾರೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಟ್ರಂಪ್ ಕೊಂಡಾಡಿದ್ದಾರೆ. ಅಲ್ಲದೆ, ಕದನ ವಿರಾಮ ಜಾರಿಯಾಗುವಲ್ಲಿ ಅಮೆರಿಕದ ತನ್ನ ಆಡಳಿತ ಪ್ರಮುಖ ಪಾತ್ರ ವಹಿಸಿದೆ ಎಂದು ಹೇಳಿದ್ದಾರೆ.

ಲೆಬನಾನ್‌ನ ಹಿಜ್ಬುಲ್ಲಾ ಗುಂಪಿನ ವಿರುದ್ದ ಗುಡುಗಿದ ಟ್ರಂಪ್, ಹಿಜ್ಬುಲ್ಲಾ ಇಸ್ರೇಲ್‌ಗೆ ಯಾವತ್ತೂ ಅಪಾಯಕಾರಿ ಎಂದಿದ್ದಾರೆ. ಲೆಬನಾನ್‌ನ ಹೊಸ ಅಧ್ಯಕ್ಷ ಶಾಶ್ವತವಾಗಿ ಹಿಜ್ಬುಲ್ಲಾವನ್ನು ನಿಶಸ್ತ್ರಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಅವರು ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ನಾವು ನೀವು ಅವರನ್ನು ಬೆಂಬಲಿಸಬೇಕು ಎಂದು ಟ್ರಂಪ್ ಇಸ್ರೇಲ್‌ ನಾಯಕರಿಗೆ ಕರೆ ನೀಡಿದ್ದಾರೆ.

ಟ್ರಂಪ್ ಕೊಂಡಾಡಿದ ನೆತನ್ಯಾಹು

ಟ್ರಂಪ್‌ಗೂ ಮೊದಲು ಭಾಷಣ ಮಾಡಿದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, “ನಮ್ಮ ಜನರ ಇತಿಹಾಸದಲ್ಲಿ ಕೆತ್ತಲಾಗುವ ಭಾವನೆಗಳಿಂದ ತುಂಬಿರುವ ಈ ದಿನದಂದು, ನಿಮ್ಮ ಹೆಸರು ನಮ್ಮ ರಾಷ್ಟ್ರದ ಪರಂಪರೆಯಲ್ಲಿ ಕೆತ್ತಲ್ಪಡುತ್ತದೆ” ಎಂದು ಟ್ರಂಪ್ ಅವರನ್ನು ಕೊಂಡಾಡಿದ್ದಾರೆ.

ಶ್ವೇತ ಭವನದಲ್ಲಿ ಇಸ್ರೇಲ್ ಹೊಂದಿರುವ ‘ಶ್ರೇಷ್ಠ ಸ್ನೇಹಿತ’ ಟ್ರಂಪ್ ಎಂದ ನೆತನ್ಯಾಹು, ಯಾವ ಅಮೆರಿಕನ್ ಅಧ್ಯಕ್ಷರೂ ಇಸ್ರೇಲ್‌ಗೆ ಇದಕ್ಕಿಂತ ಹೆಚ್ಚಿನದನ್ನು ಮಾಡಿಲ್ಲ ಎಂದು ಟ್ರಂಪ್ ಅವರನ್ನು ಈ ಕೆಳಗಿನವುಗಳಿಗಾಗಿ ಶ್ಲಾಘಿಸಿದ್ದಾರೆ.

1.2018 ರಲ್ಲಿ ಅಮೆರಿಕ ರಾಯಭಾರ ಕಚೇರಿಯನ್ನು ಜೆರುಸಲೆಮ್‌ಗೆ ಸ್ಥಳಾಂತರಿಸುವುದು.
2.ಅಬ್ರಹಾಂ ಒಪ್ಪಂದಗಳಲ್ಲಿ ಮಧ್ಯಸ್ಥಿಕೆ ವಹಿಸಿರುವುದು
3. ಆಕ್ರಮಿತ ಗೋಲನ್ ಹೈಟ್ಸ್ ಮೇಲೆ ಇಸ್ರೇಲ್‌ನ ‘ಸಾರ್ವಭೌಮತ್ವ’ ವನ್ನು ಗುರುತಿಸಿರುವುದು

ಗಾಝಾ ಕದನ ವಿರಾಮ ಒಪ್ಪಂದಕ್ಕೆ ‘ಬಹುತೇಕ ಇಡೀ ಪ್ರಪಂಚದ ಬೆಂಬಲ’ ಸಿಕ್ಕಿದ್ದು ಟ್ರಂಪ್ ಅವರ ‘ಪ್ರಮುಖ ನಾಯಕತ್ವ ಎಂದು ನೆತನ್ಯಾಹು ಕೊಂಡಾಡಿದ್ದಾರೆ. ಇದೇ ವೇಳೆ ಇಸ್ರೇಲ್ ವಿರುದ್ದವಾಗಿ ನಿಂತಿದ್ದ ರಾಷ್ಟ್ರಗಳ ಹೆಸರನ್ನು ಉಲ್ಲೇಖಿಸದೆ ಅವರು ಟೀಕಿಸಿದ್ದಾರೆ.

ಟ್ರಂಪ್ ಭಾಷಣಕ್ಕೆ ಅಡ್ಡಿಪಡಿಸಿದ ಸಂಸತ್ ಸದಸ್ಯರು

ಅಯ್ಮನ್ ಒಡೆಹ್ ಮತ್ತು ಓಫರ್ ಕ್ಯಾಸಿಫ್ ಎಂಬ ಇಬ್ಬರು ಸಂಸತ್ ಸದಸ್ಯರು ಟ್ರಂಪ್ ಭಾಷಣಕ್ಕೆ ಅಡ್ಡಿಪಡಿಸಿದ ಘಟನೆ ನೆಸೆಟ್‌ನಲ್ಲಿ ನಡೆಯಿತು. ಇವರಿಬ್ಬರು ಟ್ರಂಪ್ ಭಾಷಣದ ವೇಳೆ ‘ನರಮೇಧ’ ಎಂದು ಘೋಷಣೆಗಳನ್ನು ಕೂಗಿ ಗಾಝಾ ಆಕ್ರಮಣವನ್ನು ಖಂಡಿಸಿದ್ದಾರೆ. ನಂತರ ಅವರಿಬ್ಬರನ್ನು ಸಂಸತ್‌ನಿಂದ ಹೊರಗೆ ಕಳಿಸಲಾಗಿದೆ ಎಂದು ವರದಿಯಾಗಿದೆ.

ಇರಾನ್ ಜೊತೆ ಶಾಂತಿ ಒಪ್ಪಂದಕ್ಕೆ ಸಿದ್ದ

ನೇರ ಶತ್ರು ಇರಾನ್ ಜೊತೆಯೂ ಶಾಂತಿ ಒಪ್ಪಂದ ಮಾಡಿಕೊಳ್ಳುವ ಇಂಗಿತವನ್ನು ಟ್ರಂಪ್ ವ್ಯಕ್ತಪಡಿಸಿದ್ದಾರೆ. ಇರಾನ್‌ ಶಾಂತಿ ಒಪ್ಪಂದಕ್ಕೆ ಮುಂದಾದರೆ ತುಂಬಾ ಒಳ್ಳೆಯದು. ಏಕೆಂದರೆ, ಅಲ್ಲಿನ ಜನತೆ ಬದುಕಲು ಬಯಸುತ್ತಿದ್ದಾರೆ ಎಂದು ಟ್ರಂಪ್ ಹೇಳಿದ್ದಾರೆ.

ಈಜಿಪ್ಟ್‌ನಲ್ಲಿ ಗಾಝಾ ಶಾಂತಿ ಶೃಂಗ 

ಇಸ್ರೇಲ್‌ ನೆಸೆಟ್‌ನಲ್ಲಿ ಭಾಷಣ ಮಾಡಿದ ಬಳಿಕ ಈಜಿಪ್ಟ್‌ನ ಶರ್ಮ್‌ ಅಲ್ ಶೇಕ್‌ನಲ್ಲಿ ನಡೆಯಲಿರುವ ‘ಗಾಝಾ ಶಾಂತಿ ಶೃಂಗ’ ದಲ್ಲಿ ಟ್ರಂಪ್ ಭಾಗವಹಿಸಲಿದ್ದಾರೆ. ಈಜಿಪ್ಟ್‌ ಅಧ್ಯಕ್ಷ ಅಬ್ದುಲ್ ಫತ್ತಾಹ್ ಅಲ್ ಸಿಸಿ ಮತ್ತು ಡೊನಾಲ್ಟ್ ಟ್ರಂಪ್ ಜಂಟಿಯಾಗಿ ಈ ಶೃಂಗಸಭೆಯ ನೇತೃತ್ವವಹಿಸಲಿದ್ದಾರೆ.

ಭಾರತ ಸೇರಿದಂತೆ ಸುಮಾರು 20 ದೇಶಗಳ ಪ್ರಮುಖರು ಈ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ವರದಿಗಳ ಪ್ರಕಾರ, ಭಾರತ ಪ್ರಧಾನಿ ನರೇಂದ್ರ ಮೋದಿಯವರಿಗೆ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿತ್ತು. ಆದರೆ, ಭಾರತ ಸರ್ಕಾರ ಪ್ರಧಾನಿ ಬದಲಾಗಿ ವಿದೇಶಾಂಗ ಇಲಾಖೆಯ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರನ್ನು ಕಳಿಸಿಕೊಟ್ಟಿದೆ ಎಂದು ತಿಳಿದು ಬಂದಿದೆ.

ಕದನ ವಿರಾಮ: ಮೊದಲ ಹಂತದಲ್ಲಿ 7 ಮಂದಿ ಇಸ್ರೇಲಿ ಒತ್ತೆಯಾಳುಗಳನ್ನು ಹಸ್ತಾಂತರಿಸಿದ ಹಮಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...