Homeಮುಖಪುಟಇಸ್ರೇಲ್-ಹಮಾಸ್ ಯುದ್ಧ: ಕ್ಷಿಪಣಿ ದಾಳಿಗೆ ಬಲಿಯಾದ ಮ್ಯಾಕ್ಸ್‌ವೆಲ್ ಪತ್ನಿ 7 ತಿಂಗಳ ಗರ್ಭಿಣಿ

ಇಸ್ರೇಲ್-ಹಮಾಸ್ ಯುದ್ಧ: ಕ್ಷಿಪಣಿ ದಾಳಿಗೆ ಬಲಿಯಾದ ಮ್ಯಾಕ್ಸ್‌ವೆಲ್ ಪತ್ನಿ 7 ತಿಂಗಳ ಗರ್ಭಿಣಿ

- Advertisement -
- Advertisement -

ಇಸ್ರೇಲ್-ಲೆಬನಾನ್ ಗಡಿಯಲ್ಲಿ ಕ್ಷಿಪಣಿ ದಾಳಿಗೆ ಬಲಿಯಾದ 31 ವರ್ಷದ ಭಾರತೀಯ ವ್ಯಕ್ತಿ ಎರಡು ತಿಂಗಳ ಹಿಂದೆಯಷ್ಟೇ ಕೇರಳದ ಕೊಲ್ಲಂನಲ್ಲಿರುವ ತನ್ನ ಮನೆಯಿಂದ ತೆರಳಿದ್ದ ಎಂದು ತಿಳಿದುಬಂದಿದೆ. ಅವರ ಐದು ವರ್ಷದ ಮಗಳು ಮತ್ತು ಗರ್ಭಿಣಿ ಪತ್ನಿ ಅವರನ್ನು ಇಸ್ರೇಲಿಗೆ ಬೀಳ್ಕೊಟ್ಟಿದ್ದರು. ಇದೇ ಅವರಿಗೆ ಅಂತಿಮ ವಿದಾಯ ಎಂದು ಯಾರಿಗೂ ತಿಳಿದಿರಲಿಲ್ಲ.

ನಿನ್ನೆ ಉತ್ತರ ಇಸ್ರೇಲ್‌ನ ಮಾರ್ಗಲಿಯೋಟ್‌ನ ಹಣ್ಣಿನ ತೋಟದ ಬಳಿ ಕ್ಷಿಪಣಿ ದಾಳಿಯಲ್ಲಿ ಪ್ಯಾಟ್ ನಿಬಿನ್ ಮ್ಯಾಕ್ಸ್‌ವೆಲ್ ಕೊಲ್ಲಲ್ಪಟ್ಟಿದ್ದು, ದಾಳಿಯಲ್ಲಿ ಕೇರಳ ಮೂಲದ ಇನ್ನಿಬ್ಬರು ಗಾಯಗೊಂಡಿದ್ದಾರೆ. ಇಡುಕ್ಕಿ ಮೂಲದ ಪಾಲ್ ಮೆಲ್ವಿನ್ ಮತ್ತು ಬುಷ್ ಜೋಸೆಫ್ ಜಾರ್ಜ್ ಇಸ್ರೇಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿನ ಇಸ್ರೇಲ್ ರಾಯಭಾರ ಕಚೇರಿಯು ಈ ಬಗ್ಗೆ ಮಾಹಿತಿ ನೀಡಿ ಹಣ್ಣಿನ ತೋಟದಲ್ಲಿ ಕೆಲಸ ಮಾಡುತ್ತಿದ್ದ ಶಾಂತಿಯುತ ಕೃಷಿ ಕಾರ್ಮಿಕರ ಮೇಲೆ ನಡೆದ ಹೇಡಿತನದ ಭಯೋತ್ಪಾದಕ ದಾಳಿಯನ್ನು ಖಂಡಿಸಿದೆ. ಭಾರತದಲ್ಲಿರುವ ಇಸ್ರೇಲ್ ರಾಯಭಾರಿ ನೌರ್ ಗಿಲೋನ್ ಅವರು ಮ್ಯಾಕ್ಸ್‌ವೆಲ್ ಅವರ ಸಹೋದರನೊಂದಿಗೆ ಮಾತನಾಡಿದ್ದಾರೆ ಮತ್ತು ಅವರಿಗೆ ಎಲ್ಲಾ ಸಹಾಯದ ಭರವಸೆ ನೀಡಿದ್ದಾರೆ.

ನಿಬಿನ್ ಅವರ ತಂದೆ ಪಾಥ್ರೋಸ್ ಅವರು 31 ವರ್ಷ ವಯಸ್ಸಿನ ಮಗ ತನ್ನ ಹಿರಿಯ ಸಹೋದರನನ್ನು ಜೊತೆ ಇಸ್ರೇಲಿಗೆ ತೆರಳಿದ್ದರು ಎಂದು ಹೇಳಿದರು. ‘ಅವರು ಮಸ್ಕತ್ ಮತ್ತು ದುಬೈನಲ್ಲಿದ್ದರು; ನಂತರ ಮನೆಗೆ ಮರಳಿದರು. ನಂತರ ಅವರು ಇಸ್ರೇಲಿಗೆ ಹೋದರು. ಮೊದಲು ನನ್ನ ಹಿರಿಯ ಮಗ ಅಲ್ಲಿಗೆ ಹೋದನು; ಒಂದು ವಾರದ ನಂತರ ನನ್ನ ಕಿರಿಯ ಮಗ ಅವನನ್ನು ಹಿಂಬಾಲಿಸಿದನು’ ಎಂದು ಅವರು ಹೇಳಿದರು.

ಪಾಥ್ರೋಸ್ ಮ್ಯಾಕ್ಸ್‌ವೆಲ್ ಅವರು ತಮ್ಮ ಸೊಸೆಯಿಂದ ಮಗನ ಸುದ್ದಿ ತಿಳಿದುಕೊಂಡಿದ್ದಾರೆ. ‘ಸೋಮವಾರ ಸಂಜೆ 4.30 ರ ಸುಮಾರಿಗೆ ನನಗೆ ಕರೆ ಮಾಡಿ ನಿಬಿನ್ ಹಲ್ಲೆಯಿಂದ ಗಾಯಗೊಂಡು ಆಸ್ಪತ್ರೆಯಲ್ಲಿದ್ದಾರೆ ಎಂದು ತಿಳಿಸಿದಳು. ನಂತರ ಮಧ್ಯರಾತ್ರಿ 12.45 ರ ಸುಮಾರಿಗೆ ಅವರು ಸಾವನ್ನಪ್ಪಿದ್ದಾರೆ ಎಂದು ನಮಗೆ ಮಾಹಿತಿ ಸಿಕ್ಕಿತು’ ಎಂದು ನೋವು ತೋಡಿಕೊಂಡಿದ್ದಾರೆ.

ಮಗನ ಸಾವಿನಿಂದ ಆಘಾತಕ್ಕೊಳಗಾದ ತಂದೆ ನಿಬಿನ್, ‘ನನ್ನ ಮಗ ನಾಲ್ಕೂವರೆ ವರ್ಷದ ಮಗಳನ್ನು ಅಗಲಿದ್ದಾನೆ; ಅತನ ಪತ್ನಿ ತಮ್ಮ ಎರಡನೇ ಮಗುವಿಗೆ ಏಳು ತಿಂಗಳ ಗರ್ಭಿಣಿಯಾಗಿದ್ದಾರೆ’ ಎಂದು ಹೇಳಿದರು.

ದಾಖಲೆ ಪತ್ರಗಳು ಮತ್ತು ವಿಧಿವಿಧಾನಗಳ ನಂತರ ನಿಬಿನ್ ಮೃತದೇಹವನ್ನು ನಾಲ್ಕು ದಿನಗಳಲ್ಲಿ ಕೇರಳಕ್ಕೆ ತರಲಾಗುವುದು ಎಂದು ನಿರೀಕ್ಷಿಸಲಾಗಿದೆ.

ಇಸ್ರೇಲ್-ಹಮಾಸ್ ಯುದ್ಧದಲ್ಲಿ ಮೊದಲ ಭಾರತೀಯ ಸಾವು ಸಂಭವಿಸಿದ ಹಿನ್ನೆಲೆಯಲ್ಲಿ, ಇಸ್ರೇಲ್‌ನಲ್ಲಿ ವಾಸಿಸುವ ಭಾರತೀಯರಿಗೆ ಕೇಂದ್ರ ಸರ್ಕಾರ ಹಲವು ಸಲಹೆಯನ್ನು ನೀಡಿದೆ.

‘ಪ್ರಚಲಿತ ಭದ್ರತಾ ಪರಿಸ್ಥಿತಿ ಮತ್ತು ಸ್ಥಳೀಯ ಸುರಕ್ಷತಾ ಸಲಹೆಗಳ ದೃಷ್ಟಿಯಿಂದ, ಇಸ್ರೇಲ್‌ನಲ್ಲಿರುವ ಎಲ್ಲಾ ಭಾರತೀಯರು, ವಿಶೇಷವಾಗಿ ಉತ್ತರ ಮತ್ತು ದಕ್ಷಿಣದ ಗಡಿ ಪ್ರದೇಶಗಳಲ್ಲಿ ಕೆಲಸ ಮಾಡುವ ಅಥವಾ ಭೇಟಿ ನೀಡುವವರು, ಇಸ್ರೇಲ್‌ನ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲು ಸೂಚಿಸಲಾಗಿದೆ. ರಾಯಭಾರ ಕಚೇರಿಯು ಕಾರ್ಮಿಕರ ಸಂಪರ್ಕದಲ್ಲಿದೆ. ಇಸ್ರೇಲಿ ಅಧಿಕಾರಿಗಳು ನಮ್ಮ ಎಲ್ಲಾ ಪ್ರಜೆಗಳ ಸುರಕ್ಷತೆಯನ್ನು ಖಾತ್ರಿಪಡಿಸಬೇಕು’ ಎಂದು ಇಸ್ರೇಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಹೇಳಿದೆ.

ಉತ್ತರ ಇಸ್ರೇಲ್‌ನಲ್ಲಿ ಯುದ್ಧ ಪ್ರಾರಂಭವಾದಾಗಿನಿಂದ ಹಮಾಸ್‌ಗೆ ಬೆಂಬಲವಾಗಿ ಹೆಜ್ಬೊಲ್ಲಾದ ಶಿಯಾ ಬಣವು ರಾಕೆಟ್ ದಾಳಿ ಮತ್ತು ಡ್ರೋನ್ ದಾಳಿಗಳನ್ನು ನಡೆಸುತ್ತಿದೆ.

ಇಸ್ರೇಲಿ ನಗರಗಳ ಮೇಲೆ ಅಕ್ಟೋಬರ್ 7 ರ ದಾಳಿಯ ನಂತರ ಸುಮಾರು ಐದು ತಿಂಗಳ ಕಾಲ ಇಸ್ರೇಲ್-ಹಮಾಸ್ ಯುದ್ಧವು ಉಲ್ಬಣಗೊಂಡಿದೆ. ಟೆಲ್ ಅವಿವ್‌ನ ಕ್ರೂರ ಪ್ರತಿದಾಳಿಯು ಗಾಜಾ ಪಟ್ಟಿಯಲ್ಲಿ ಸಾವಿರಾರು ಸಾವುಗಳಿಗೆ ಕಾರಣವಾಗಿದೆ. ಸಂಘರ್ಷ ಮತ್ತು ಅದು ಕಾರಣವಾದ ಮಾನವೀಯ ಬಿಕ್ಕಟ್ಟಿನಿಂದ ತಾನು ತೀವ್ರವಾಗಿ ತೊಂದರೆಗೀಡಾಗಿದೆ ಎಂದು ಭಾರತ ಸರ್ಕಾರ ಹೇಳಿದೆ.

ಇದನ್ನೂ ಓದಿ; ಇಸ್ರೇಲ್-ಹಮಾಸ್ ಯುದ್ಧ: ‘ಹೆಜ್ಬುಲ್ಲಾ’ ಕ್ಷಿಪಣಿ ದಾಳಿಗೆ ಕೇರಳದ ವ್ಯಕ್ತಿ ಬಲಿ; ಮತ್ತಿಬ್ಬರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...