Homeಅಂತರಾಷ್ಟ್ರೀಯಇಸ್ರೇಲ್-ಹಮಾಸ್ ಯುದ್ಧ: 'ಹೆಜ್ಬುಲ್ಲಾ' ಕ್ಷಿಪಣಿ ದಾಳಿಗೆ ಕೇರಳದ ವ್ಯಕ್ತಿ ಬಲಿ; ಮತ್ತಿಬ್ಬರಿಗೆ ಗಾಯ

ಇಸ್ರೇಲ್-ಹಮಾಸ್ ಯುದ್ಧ: ‘ಹೆಜ್ಬುಲ್ಲಾ’ ಕ್ಷಿಪಣಿ ದಾಳಿಗೆ ಕೇರಳದ ವ್ಯಕ್ತಿ ಬಲಿ; ಮತ್ತಿಬ್ಬರಿಗೆ ಗಾಯ

- Advertisement -
- Advertisement -

ಇಸ್ರೇಲ್-ಹಮಾಸ್ ಯುದ್ಧದಲ್ಲಿ ಮೊದಲ ಭಾರತೀಯ ಪ್ರಜೆ ಬಲಿಯಾಗಿದ್ದಾರೆ, ಕೇರಳ ಮೂಲದ ವ್ಯಕ್ತಿಯೊಬ್ಬರು ಉತ್ತರ ಇಸ್ರೇಲ್‌ನ ಮಾರ್ಗಲಿಯೊಟ್‌ನಲ್ಲಿ ನಿನ್ನೆ ಕ್ಷಿಪಣಿ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಭಾರತದಲ್ಲಿನ ಇಸ್ರೇಲ್ ರಾಯಭಾರ ಕಚೇರಿಯು ಇಂದು ಬೆಳಿಗ್ಗೆ ಹೇಳಿಕೆಯಲ್ಲಿ, ಹೆಜ್ಬುಲ್ಲಾದ “ಹೇಡಿಗಳ” ದಾಳಿಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿಸಿದೆ.

ಕ್ಷಿಪಣಿ ದಾಳಿಯ ಸಮಯದಲ್ಲಿ ಮೂವರು ಹಣ್ಣಿನ ತೋಟದಲ್ಲಿ ಕೆಲಸ ಮಾಡುತ್ತಿದ್ದರು ಎಂದು ಹೇಳಿಕೆ ತಿಳಿಸಿದೆ. ಇಸ್ರೇಲ್ ರಾಯಭಾರ ಕಚೇರಿಯು ಮೃತರ ಕುಟುಂಬಗಳಿಗೆ ಮತ್ತು ಗಾಯಗೊಂಡವರಿಗೆ ಪ್ರಾರ್ಥನೆ ಸಲ್ಲಿಸುವುದಾಗಿ ಹೇಳಿದೆ. ‘ಇಸ್ರೇಲಿ ವೈದ್ಯಕೀಯ ಸಂಸ್ಥೆಗಳು ಸಂಪೂರ್ಣವಾಗಿ ಗಾಯಗೊಂಡವರ ಸೇವೆಯಲ್ಲಿವೆ, ಅವರು ನಮ್ಮ ಅತ್ಯುತ್ತಮ ವೈದ್ಯಕೀಯ ಸಿಬ್ಬಂದಿಯಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಯೋತ್ಪಾದನೆಯಿಂದಾಗಿ ಗಾಯಗೊಂಡ ಅಥವಾ ಕೊಲ್ಲಲ್ಪಟ್ಟ ಎಲ್ಲಾ ಪ್ರಜೆಗಳು, ಇಸ್ರೇಲಿ ಅಥವಾ ವಿದೇಶಿಯರನ್ನು ಇಸ್ರೇಲ್ ಸಮಾನವಾಗಿ ಪರಿಗಣಿಸುತ್ತದೆ. ನಾವು ಮೃತರ ಕುಟುಂಬಗಳ ಬೆಂಬಲಕ್ಕೆ ಇರುತ್ತೇವೆ; ಅವರಿಗೆ ಸಹಾಯಹಸ್ತ ನೀಡುತ್ತವೆ’ ಎಂದು ಅದು ಹೇಳಿದೆ.

‘ನಾಗರಿಕ ಸಾವಿನಿಂದಾಗುವ ನಷ್ಟದ ಬಗ್ಗೆ ಚೆನ್ನಾಗಿ ತಿಳಿದಿರುವ ನಮ್ಮ ದೇಶಗಳು, ಗಾಯಗೊಂಡವರಿಗೆ ಶೀಘ್ರವಾಗಿ ಚೇತರಿಸಿಕೊಳ್ಳುವ ಮತ್ತು ದುಃಖಿತರ ಕುಟುಂಬಕ್ಕೆ ಸಾಂತ್ವನದ ಭರವಸೆಯಲ್ಲಿ ಒಗ್ಗಟ್ಟಿನಿಂದ ನಿಂತಿವೆ’ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕ್ಷಿಪಣಿಯನ್ನು ಲೆಬನಾನ್‌ನಿಂದ ಉಡಾಯಿಸಲಾಗಿದೆ ಎಂದು ತಿಳಿದುಬಂದಿದ್ದು, ಉತ್ತರ ಇಸ್ರೇಲ್‌ನಲ್ಲಿ ಯುದ್ಧ ಪ್ರಾರಂಭವಾದಾಗಿನಿಂದ ಹಮಾಸ್‌ಗೆ ಬೆಂಬಲವಾಗಿ ಹೆಜ್ಬೊಲ್ಲಾದ ಶಿಯಾ ಬಣವು ರಾಕೆಟ್ ದಾಳಿ ಮತ್ತು ಡ್ರೋನ್ ದಾಳಿಗಳನ್ನು ನಡೆಸುತ್ತಿದೆ.

ಇಸ್ರೇಲಿ ನಗರಗಳ ಮೇಲೆ ಅಕ್ಟೋಬರ್ 7ರ ದಾಳಿಯ ನಂತರ ಸುಮಾರು ಐದು ತಿಂಗಳ ಕಾಲ ಇಸ್ರೇಲ್-ಹಮಾಸ್ ಯುದ್ಧವು ಉಲ್ಬಣಗೊಂಡಿದೆ. ಟೆಲ್ ಅವಿವ್‌ನ ಕ್ರೂರ ಪ್ರತಿದಾಳಿಯು ಗಾಜಾ ಪಟ್ಟಿಯಲ್ಲಿ ಸಾವಿರಾರು ಸಾವುಗಳಿಗೆ ಕಾರಣವಾಗಿದೆ.

ಯುಎನ್ ಜನರಲ್ ಅಸೆಂಬ್ಲಿಯಲ್ಲಿ ನಡೆದ ಬ್ರೀಫಿಂಗ್‌ನಲ್ಲಿ, ಯುಎನ್‌ಗೆ ಭಾರತದ ಖಾಯಂ ಪ್ರತಿನಿಧಿ ರುಚಿರಾ ಕಾಂಬೋಜ್ ಮಾತನಾಡಿ, ‘ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಸಂಘರ್ಷವು ನಾಗರಿಕರ ಜೀವಗಳನ್ನು, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳ ದೊಡ್ಡ ಪ್ರಮಾಣದ ನಷ್ಟಕ್ಕೆ ಕಾರಣವಾಗಿದೆ’ ಎಂದು ಹೇಳಿದರು.

‘ಇದು ಸರಳವಾಗಿ ಸ್ವೀಕಾರಾರ್ಹವಲ್ಲ; ಸಂಘರ್ಷದಲ್ಲಿ ನಾಗರಿಕರ ಸಾವುಗಳನ್ನು ನಾವು ಬಲವಾಗಿ ಖಂಡಿಸಿದ್ದೇವೆ. ಭಾರತವು ಭಯೋತ್ಪಾದನೆಯ ವಿರುದ್ಧ ಅದರ ಎಲ್ಲ ರೂಪಗಳು ಮತ್ತು ಅಭಿವ್ಯಕ್ತಿಗಳಲ್ಲಿ ದೀರ್ಘಕಾಲದ, ರಾಜಿಯಾಗದ ಸ್ಥಾನವನ್ನು ಹೊಂದಿದೆ’ ಎಂದು ಅವರು ಹೇಳಿದರು.

‘ಇಸ್ರೇಲ್‌ನ ಭದ್ರತಾ ಅಗತ್ಯತೆಗಳಿಗೆ ಅನುಗುಣವಾಗಿ ಸುರಕ್ಷಿತ ಗಡಿಯೊಳಗೆ ಸ್ವತಂತ್ರ ದೇಶದಲ್ಲಿ ಪ್ಯಾಲೇಸ್ಟಿನಿಯನ್ ಜನರು ಮುಕ್ತವಾಗಿ ಬದುಕಲು ಸಾಧ್ಯವಾಗುವ ಎರಡು-ರಾಜ್ಯ ಪರಿಹಾರವನ್ನು ಬೆಂಬಲಿಸಲು ಭಾರತ ಬದ್ಧವಾಗಿದೆ’ ಎಂದು ಅವರು ಹೇಳಿದರು.

ಮೃತ ಭಾರತೀಯ ಯಾರು?

ಮೃತ ವ್ಯಕ್ತಿ ಕೇರಳದ ಕೊಲ್ಲಂನ ಪಟ್ನಿಬಿನ್ ಮ್ಯಾಕ್ಸ್‌ವೆಲ್ ಎಂದು ಗುರುತಿಸಲಾಗಿದೆ. ಇಬ್ಬರು ಗಾಯಾಳುಗಳಾದ ಬುಷ್ ಜೋಸೆಫ್ ಜಾರ್ಜ್ ಮತ್ತು ಪಾಲ್ ಮೆಲ್ವಿನ್ ಅವರಿಗೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಮ್ಯಾಕ್ಸ್‌ವೆಲ್ ಅವರ ಪಾರ್ಥಿವ ಶರೀರವನ್ನು ಜಿವ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ. ಮೆಲ್ವಿನ್‌ರನ್ನು ಉತ್ತರ ಇಸ್ರೇಲಿ ನಗರದ ಸಫೆದ್‌ನ ಝಿವ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಇವರು ಕೇರಳದ ಇಡುಕ್ಕಿ ಜಿಲ್ಲೆಯವರು.

ದಾಳಿಯಲ್ಲಿ ಓರ್ವ ವಿದೇಶಿ ಕಾರ್ಮಿಕ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಈ ಹಿಂದೆ ಎಂಡಿಎ ಹೇಳಿತ್ತು.

ಇದನ್ನೂ ಓದಿ; 5 ವರ್ಷದಲ್ಲಿ 22 ಸಾವಿರ ಚುನಾವಣಾ ಬಾಂಡ್ ಬಿಡುಗಡೆ : ಎಸ್‌ಬಿಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...