Homeಅಂತರಾಷ್ಟ್ರೀಯಇಸ್ರೇಲ್-ಹಮಾಸ್ ಯುದ್ಧ: 'ಹೆಜ್ಬುಲ್ಲಾ' ಕ್ಷಿಪಣಿ ದಾಳಿಗೆ ಕೇರಳದ ವ್ಯಕ್ತಿ ಬಲಿ; ಮತ್ತಿಬ್ಬರಿಗೆ ಗಾಯ

ಇಸ್ರೇಲ್-ಹಮಾಸ್ ಯುದ್ಧ: ‘ಹೆಜ್ಬುಲ್ಲಾ’ ಕ್ಷಿಪಣಿ ದಾಳಿಗೆ ಕೇರಳದ ವ್ಯಕ್ತಿ ಬಲಿ; ಮತ್ತಿಬ್ಬರಿಗೆ ಗಾಯ

- Advertisement -
- Advertisement -

ಇಸ್ರೇಲ್-ಹಮಾಸ್ ಯುದ್ಧದಲ್ಲಿ ಮೊದಲ ಭಾರತೀಯ ಪ್ರಜೆ ಬಲಿಯಾಗಿದ್ದಾರೆ, ಕೇರಳ ಮೂಲದ ವ್ಯಕ್ತಿಯೊಬ್ಬರು ಉತ್ತರ ಇಸ್ರೇಲ್‌ನ ಮಾರ್ಗಲಿಯೊಟ್‌ನಲ್ಲಿ ನಿನ್ನೆ ಕ್ಷಿಪಣಿ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಭಾರತದಲ್ಲಿನ ಇಸ್ರೇಲ್ ರಾಯಭಾರ ಕಚೇರಿಯು ಇಂದು ಬೆಳಿಗ್ಗೆ ಹೇಳಿಕೆಯಲ್ಲಿ, ಹೆಜ್ಬುಲ್ಲಾದ “ಹೇಡಿಗಳ” ದಾಳಿಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿಸಿದೆ.

ಕ್ಷಿಪಣಿ ದಾಳಿಯ ಸಮಯದಲ್ಲಿ ಮೂವರು ಹಣ್ಣಿನ ತೋಟದಲ್ಲಿ ಕೆಲಸ ಮಾಡುತ್ತಿದ್ದರು ಎಂದು ಹೇಳಿಕೆ ತಿಳಿಸಿದೆ. ಇಸ್ರೇಲ್ ರಾಯಭಾರ ಕಚೇರಿಯು ಮೃತರ ಕುಟುಂಬಗಳಿಗೆ ಮತ್ತು ಗಾಯಗೊಂಡವರಿಗೆ ಪ್ರಾರ್ಥನೆ ಸಲ್ಲಿಸುವುದಾಗಿ ಹೇಳಿದೆ. ‘ಇಸ್ರೇಲಿ ವೈದ್ಯಕೀಯ ಸಂಸ್ಥೆಗಳು ಸಂಪೂರ್ಣವಾಗಿ ಗಾಯಗೊಂಡವರ ಸೇವೆಯಲ್ಲಿವೆ, ಅವರು ನಮ್ಮ ಅತ್ಯುತ್ತಮ ವೈದ್ಯಕೀಯ ಸಿಬ್ಬಂದಿಯಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಯೋತ್ಪಾದನೆಯಿಂದಾಗಿ ಗಾಯಗೊಂಡ ಅಥವಾ ಕೊಲ್ಲಲ್ಪಟ್ಟ ಎಲ್ಲಾ ಪ್ರಜೆಗಳು, ಇಸ್ರೇಲಿ ಅಥವಾ ವಿದೇಶಿಯರನ್ನು ಇಸ್ರೇಲ್ ಸಮಾನವಾಗಿ ಪರಿಗಣಿಸುತ್ತದೆ. ನಾವು ಮೃತರ ಕುಟುಂಬಗಳ ಬೆಂಬಲಕ್ಕೆ ಇರುತ್ತೇವೆ; ಅವರಿಗೆ ಸಹಾಯಹಸ್ತ ನೀಡುತ್ತವೆ’ ಎಂದು ಅದು ಹೇಳಿದೆ.

‘ನಾಗರಿಕ ಸಾವಿನಿಂದಾಗುವ ನಷ್ಟದ ಬಗ್ಗೆ ಚೆನ್ನಾಗಿ ತಿಳಿದಿರುವ ನಮ್ಮ ದೇಶಗಳು, ಗಾಯಗೊಂಡವರಿಗೆ ಶೀಘ್ರವಾಗಿ ಚೇತರಿಸಿಕೊಳ್ಳುವ ಮತ್ತು ದುಃಖಿತರ ಕುಟುಂಬಕ್ಕೆ ಸಾಂತ್ವನದ ಭರವಸೆಯಲ್ಲಿ ಒಗ್ಗಟ್ಟಿನಿಂದ ನಿಂತಿವೆ’ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕ್ಷಿಪಣಿಯನ್ನು ಲೆಬನಾನ್‌ನಿಂದ ಉಡಾಯಿಸಲಾಗಿದೆ ಎಂದು ತಿಳಿದುಬಂದಿದ್ದು, ಉತ್ತರ ಇಸ್ರೇಲ್‌ನಲ್ಲಿ ಯುದ್ಧ ಪ್ರಾರಂಭವಾದಾಗಿನಿಂದ ಹಮಾಸ್‌ಗೆ ಬೆಂಬಲವಾಗಿ ಹೆಜ್ಬೊಲ್ಲಾದ ಶಿಯಾ ಬಣವು ರಾಕೆಟ್ ದಾಳಿ ಮತ್ತು ಡ್ರೋನ್ ದಾಳಿಗಳನ್ನು ನಡೆಸುತ್ತಿದೆ.

ಇಸ್ರೇಲಿ ನಗರಗಳ ಮೇಲೆ ಅಕ್ಟೋಬರ್ 7ರ ದಾಳಿಯ ನಂತರ ಸುಮಾರು ಐದು ತಿಂಗಳ ಕಾಲ ಇಸ್ರೇಲ್-ಹಮಾಸ್ ಯುದ್ಧವು ಉಲ್ಬಣಗೊಂಡಿದೆ. ಟೆಲ್ ಅವಿವ್‌ನ ಕ್ರೂರ ಪ್ರತಿದಾಳಿಯು ಗಾಜಾ ಪಟ್ಟಿಯಲ್ಲಿ ಸಾವಿರಾರು ಸಾವುಗಳಿಗೆ ಕಾರಣವಾಗಿದೆ.

ಯುಎನ್ ಜನರಲ್ ಅಸೆಂಬ್ಲಿಯಲ್ಲಿ ನಡೆದ ಬ್ರೀಫಿಂಗ್‌ನಲ್ಲಿ, ಯುಎನ್‌ಗೆ ಭಾರತದ ಖಾಯಂ ಪ್ರತಿನಿಧಿ ರುಚಿರಾ ಕಾಂಬೋಜ್ ಮಾತನಾಡಿ, ‘ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಸಂಘರ್ಷವು ನಾಗರಿಕರ ಜೀವಗಳನ್ನು, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳ ದೊಡ್ಡ ಪ್ರಮಾಣದ ನಷ್ಟಕ್ಕೆ ಕಾರಣವಾಗಿದೆ’ ಎಂದು ಹೇಳಿದರು.

‘ಇದು ಸರಳವಾಗಿ ಸ್ವೀಕಾರಾರ್ಹವಲ್ಲ; ಸಂಘರ್ಷದಲ್ಲಿ ನಾಗರಿಕರ ಸಾವುಗಳನ್ನು ನಾವು ಬಲವಾಗಿ ಖಂಡಿಸಿದ್ದೇವೆ. ಭಾರತವು ಭಯೋತ್ಪಾದನೆಯ ವಿರುದ್ಧ ಅದರ ಎಲ್ಲ ರೂಪಗಳು ಮತ್ತು ಅಭಿವ್ಯಕ್ತಿಗಳಲ್ಲಿ ದೀರ್ಘಕಾಲದ, ರಾಜಿಯಾಗದ ಸ್ಥಾನವನ್ನು ಹೊಂದಿದೆ’ ಎಂದು ಅವರು ಹೇಳಿದರು.

‘ಇಸ್ರೇಲ್‌ನ ಭದ್ರತಾ ಅಗತ್ಯತೆಗಳಿಗೆ ಅನುಗುಣವಾಗಿ ಸುರಕ್ಷಿತ ಗಡಿಯೊಳಗೆ ಸ್ವತಂತ್ರ ದೇಶದಲ್ಲಿ ಪ್ಯಾಲೇಸ್ಟಿನಿಯನ್ ಜನರು ಮುಕ್ತವಾಗಿ ಬದುಕಲು ಸಾಧ್ಯವಾಗುವ ಎರಡು-ರಾಜ್ಯ ಪರಿಹಾರವನ್ನು ಬೆಂಬಲಿಸಲು ಭಾರತ ಬದ್ಧವಾಗಿದೆ’ ಎಂದು ಅವರು ಹೇಳಿದರು.

ಮೃತ ಭಾರತೀಯ ಯಾರು?

ಮೃತ ವ್ಯಕ್ತಿ ಕೇರಳದ ಕೊಲ್ಲಂನ ಪಟ್ನಿಬಿನ್ ಮ್ಯಾಕ್ಸ್‌ವೆಲ್ ಎಂದು ಗುರುತಿಸಲಾಗಿದೆ. ಇಬ್ಬರು ಗಾಯಾಳುಗಳಾದ ಬುಷ್ ಜೋಸೆಫ್ ಜಾರ್ಜ್ ಮತ್ತು ಪಾಲ್ ಮೆಲ್ವಿನ್ ಅವರಿಗೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಮ್ಯಾಕ್ಸ್‌ವೆಲ್ ಅವರ ಪಾರ್ಥಿವ ಶರೀರವನ್ನು ಜಿವ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ. ಮೆಲ್ವಿನ್‌ರನ್ನು ಉತ್ತರ ಇಸ್ರೇಲಿ ನಗರದ ಸಫೆದ್‌ನ ಝಿವ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಇವರು ಕೇರಳದ ಇಡುಕ್ಕಿ ಜಿಲ್ಲೆಯವರು.

ದಾಳಿಯಲ್ಲಿ ಓರ್ವ ವಿದೇಶಿ ಕಾರ್ಮಿಕ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಈ ಹಿಂದೆ ಎಂಡಿಎ ಹೇಳಿತ್ತು.

ಇದನ್ನೂ ಓದಿ; 5 ವರ್ಷದಲ್ಲಿ 22 ಸಾವಿರ ಚುನಾವಣಾ ಬಾಂಡ್ ಬಿಡುಗಡೆ : ಎಸ್‌ಬಿಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...