Homeಅಂತರಾಷ್ಟ್ರೀಯಗಾಝಾ ನಾಗರಿಕರಿಗೆ ಕುಡಿಯಲು ನೀರು ಸಿಗದಂತೆ ಮಾಡುತ್ತಿರುವ ಇಸ್ರೇಲ್!

ಗಾಝಾ ನಾಗರಿಕರಿಗೆ ಕುಡಿಯಲು ನೀರು ಸಿಗದಂತೆ ಮಾಡುತ್ತಿರುವ ಇಸ್ರೇಲ್!

- Advertisement -
- Advertisement -

ಪ್ಯಾಲೆಸ್ತೀನ್‌ನ ಮಘಜಿ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ನಡೆಸಿದ ವಾಯು ದಾಳಿಯಲ್ಲಿ ಕನಿಷ್ಠ 70  ನಾಗರಿಕರು ಮೃತಪಟ್ಟಿದ್ದಾರೆ. ಇದರಿಂದ ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ಹತ್ಯಾಕಾಂಡಕ್ಕೆ ಬಲಿಯಾದವರ ಸಂಖ್ಯೆ 24,000 ದಾಟಿದೆ. ಗಾಝಾದಲ್ಲಿ ನಾಗರಿಕರ ನಿರಂತರ ಸಾವಿನ ಹೆಚ್ಚಳದ ಮಧ್ಯೆ ಇಸ್ರೇಲ್ ಉತ್ತರ ಗಾಝಾದಲ್ಲಿ ಬಾವಿಗಳು ಮತ್ತು ನೀರಿನ ಘಟಕಗಳ ಮೇಲೆ ಬಾಂಬ್ ದಾಳಿ ನಡೆಸಿ ಅದನ್ನು ಕಲುಷಿತಗೊಳಿಸುತ್ತಿದೆ ಮತ್ತು ನಾಗರಿಕರಿಗೆ ಕುಡಿಯಲು ಯೋಗ್ಯ ನೀರು ಸಿಗದಂತೆ ಮಾಡುತ್ತಿದೆ.

ಗಾಝಾದಲ್ಲಿ ಸುಮಾರು ಎರಡು ಮಿಲಿಯನ್ ಜನರು ತೀವ್ರ ಆಹಾರ ಮತ್ತು ನೀರಿನ ಕೊರತೆಯನ್ನು ಎದುರಿಸುತ್ತಿದ್ದಾರೆ ಎಂದು ಯುಎನ್ ಹೇಳಿದೆ. ಲಭ್ಯವಿರುವ ನೀರಿನ ಪೂರೈಕೆಯಲ್ಲಿ 96 ಪ್ರತಿಶತ ಮಾನವ ಬಳಕೆಗೆ ಅನರ್ಹವಾಗಿದೆ ಎಂದು ಅಂದಾಜಿಸಲಾಗಿದೆ. ಇಸ್ರೇಲ್‌ ಪಡೆಗಳು ಉತ್ತರ ಗಾಝಾದಲ್ಲಿ ಬಾವಿಗಳು ಮತ್ತು ನೀರಿನ ಘಟಕಗಳ ಮೇಲೆ ಬಾಂಬ್ ದಾಳಿ ನಡೆಸಿವೆ. ನೀರಿನ ಮೂಲವನ್ನು ಒಡೆದು ಹಾಕುವ ಜೊತೆಗೆ ನೀರನ್ನು ಕುಡಿಯಲು ಅಯೋಗ್ಯವನ್ನಾಗಿ ಮಾಡುತ್ತಿದೆ.

ಮಘಜಿ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ವಾಯು ದಾಳಿ ನಡೆಸಿ 70  ನಾಗರಿಕರನ್ನು ಹತ್ಯೆ ಮಾಡಿರುವುದನ್ನು ಪ್ಯಾಲೆಸ್ತೀನ್‌ನ ಆರೋಗ್ಯ ಸಚಿವಾಲಯದ ವಕ್ತಾರರು ದೃಢಪಡಿಸಿದ್ದು, ಇದನ್ನು ನಿರಾಶ್ರಿತರ ಶಿಬಿರದಲ್ಲಿನ ಹತ್ಯಾಕಾಂಡ ಎಂದು ಹೇಳಿಕೊಂಡಿದ್ದಾರೆ.

ಪ್ಯಾಲೆಸ್ತೀನ್‌ನ ಪತ್ರಕರ್ತರು ಸೆರೆಹಿಡಿದ ಮತ್ತು ಅಲ್ ಜಜೀರಾ ವರದಿ ಮಾಡಿದ ವರದಿಯ ದೃಶ್ಯಾವಳಿಗಳು ಘಟನೆಯಲ್ಲಿ ನವಜಾತ ಶಿಶುಗಳು ಸೇರಿದಂತೆ ಯುದ್ಧ ಬಲಿಪಶುಗಳು ಇರುವುದನ್ನು ಸೂಚಿಸುತ್ತದೆ.  ಹತ್ತಾರು ದೇಹಗಳನ್ನು ಗಾಝಾದ ಅಲ್-ಅಕ್ಸಾ ಹುತಾತ್ಮರ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಕೇಂದ್ರ ಗಾಝಾದ ನಿರಾಶ್ರಿತರ ಶಿಬಿರಗಳ ಬಳಿ ಮುಖ್ಯ ರಸ್ತೆಗಳ ಮೇಲೆ ಇಸ್ರೇಲ್‌ ವಾಯು ದಾಳಿಗಳ ಮೂಲಕ ಆಂಬ್ಯುಲೆನ್ಸ್‌ಗಳು ಮತ್ತು ಅರೆವೈದ್ಯಕೀಯ ಸಿಬ್ಬಂದಿಗಳಿಗೆ ಗಾಯಗೊಂಡ ಜನರನ್ನು ರಕ್ಷಿಸಲು ಅಡ್ಡಿಪಡಿಸುತ್ತಿದೆ.

ಗಾಝಾದ ದಕ್ಷಿಣ ನಗರವಾದ ಖಾನ್ ಯೂನಿಸ್ ನಗರವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ತಿಂಗಳುಗಳು ತೆಗೆದುಕೊಳ್ಳಬಹುದು ಎಂದು ಇಸ್ರೇಲ್‌ನ ಮಿಲಿಟರಿ ಹೇಳುತ್ತಿದೆ. ಭಾನುವಾರ ಪ್ರಕಟವಾದ ವಾಲ್ ಸ್ಟ್ರೀಟ್ ಜರ್ನಲ್ ವರದಿಯಲ್ಲಿ ಹಿರಿಯ ಇಸ್ರೇಲ್‌ ಮಿಲಿಟರಿ ಅಧಿಕಾರಿಯೊಬ್ಬರು ಇಸ್ರೇಲ್‌ ಪಡೆಗಳು ಉತ್ತರ ಗಾಝಾದಲ್ಲಿ ಮಾಡಿದ ರೀತಿಯಲ್ಲಿಯೇ ನಿಯಂತ್ರಣವನ್ನು ಸಾಧಿಸಲು ತಿಂಗಳುಗಳನ್ನು ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ.

ಯುದ್ಧ ಘೋಷಣೆ ಬಳಿಕ ಇಸ್ರೇಲ್‌ ಗಾಝಾ ಮೇಲೆ ನಡೆಸಿದ ದಾಳಿಯಲ್ಲಿ ಕನಿಷ್ಠ 24,424ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. 54,036 ಮಂದಿ ಗಾಯಗೊಂಡಿದ್ದಾರೆ ಎಂದು ಇತ್ತೀಚಿನ ಅಂಕಿ-ಅಂಶಗಳು ಬಹಿರಂಗಪಡಿಸುತ್ತಿದೆ. ಮೃತರಲ್ಲಿ 60% ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ ಎಂದು ಅಂಕಿ-ಅಂಶಗಳು ಬಹಿರಂಗಪಡಿಸಿದೆ.

ವಿಶ್ವವು ನರಮೇಧಕ್ಕೆ ಅವಕಾಶ ನೀಡುತ್ತಿದೆ: ಯುಎನ್ ಕಳವಳ

ಯುಎನ್‌ನ ಫ್ರಾನ್ಸೆಸ್ಕಾ ಅಲ್ಬನೀಸ್ ಇಸ್ರೇಲ್‌ ಗಾಝಾ ಮೇಲೆ ನಡೆಸುತ್ತಿರುವ ಯುದ್ಧ ಅಪರಾಧವನ್ನು ನರಮೇಧ ಎಂದು ಕರೆದ್ದಾರೆ. ಇದು ನರಮೇಧದ ಒಂದು ಪ್ರಕ್ರಿಯೆ, ಏಕ ಕ್ರಿಯೆಯಲ್ಲ ಎಂದು ಹೇಳಿದ್ದು, ನೀವು ಹತ್ತಿರದಿಂದ ನೋಡಿದರೆ ಇದು ನಾಗರಿಕರ ಇತರ ಹತ್ಯಾಕಾಂಡಗಳಿಗಿಂತ ಭಿನ್ನವಾಗಿಲ್ಲ ಎಂದು ಹೇಳಿದ್ದಾರೆ.

ನರಮೇಧವನ್ನು ತಡೆಯಬೇಕು. ಅದನ್ನು ಸಂಭವಿಸಲು ಬಿಡಬಾರದು ಆದರೆ ಗಾಝಾದಲ್ಲಿ ಅದನ್ನು ಸಂಭವಿಸಲು ಬಿಡಲಾಗುತ್ತದೆ  ಫ್ರಾನ್ಸೆಸ್ಕಾ ಅಲ್ಬನೀಸ್ ಆಘಾತವನ್ನು ವ್ಯಕ್ತಪಡಿಸಿದ್ದಾರೆ.

ಇದಲ್ಲದೆ ಕಳೆದ 10 ವಾರಗಳಿಂದ ನಡೆಯುತ್ತಿರುವ ಯುದ್ಧದಿಂದಾಗಿ ನಿರಂತರ ಬಾಂಬ್ ದಾಳಿಗಳು ವಾತಾವರಣವನ್ನೇ ಕಲುಷಿತಗೊಳಿಸಿದ್ದು, ಜನರು ಉಸಿರಾಟದ ಸಮಸ್ಯೆಯಿಂದ ಬಳಲುವಂತಾಗಿದೆ. ಹಸಿವು, ಅನಾರೋಗ್ಯದಿಂದ ಜನರು ಬಳಲುತ್ತಿದ್ದಾರೆ. ಚಿಕನ್ಪಾಕ್ಸ್, ದದ್ದುಗಳು, ಮೂತ್ರನಾಳದ ಸೋಂಕುಗಳು, ಮೆನಿಂಜೈಟಿಸ್, ಮಂಪ್ಸ್, ಸ್ಕೇಬೀಸ್, ದಡಾರ ಮತ್ತು ಪುಡ್‌ ಪ್ಯಾಯಿಸನಿಂಗ್‌, ಅತಿಸಾರ, ಕಾಮಾಲೆ ಮತ್ತು ಉಸಿರಾಟದ ಸೋಂಕುಗಳು ಗಾಝಾದಲ್ಲಿ ಹೆಚ್ಚುತ್ತಿದೆ ಎಂದು ಗಾಝಾದ ಆರೋಗ್ಯ ಸಚಿವಾಲಯವು ಮಾಹಿತಿ ನೀಡಿದೆ. ಇದಲ್ಲದೆ ಯುದ್ಧ ಪೀಡಿತ ಭೂಮಿಯಲ್ಲಿ ವಿಶ್ವಸಂಸ್ಥೆಯು ಸಂಭಾವ್ಯ 14 ರೋಗಗಳನ್ನು ಪತ್ತೆಹಚ್ಚಿದೆ.

ಯುದ್ಧದಿಂದಾಗಿ ಗಾಝಾದ ಪ್ರಾಥಮಿಕ ಆರೈಕೆ ಕೇಂದ್ರಗಳಲ್ಲಿ 3ನೇ ಎರಡರಷ್ಟು ಮುಚ್ಚಲಾಗಿದೆ ಎಂದು WHO ಹೇಳಿದೆ. ಗಾಝಾದ 36 ಆಸ್ಪತ್ರೆಗಳಲ್ಲಿ 11 ಭಾಗಶಃ ಮಾತ್ರ ಕಾರ್ಯನಿರ್ವಹಿಸುತ್ತಿವೆ. ಸುಮಾರು 1.3 ಮಿಲಿಯನ್ ಜನರು ನಿರಾಶ್ರಿತರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ. ಪ್ರತಿ 220 ಜನರಿಗೆ ಸರಾಸರಿ ಒಂದು ಶೌಚಾಲಯ ಮತ್ತು ಪ್ರತಿ 4,500ಗೆ ಒಂದು ಮಾತ್ರ ಶವರ್ ಇದೆ ಎನ್ನುವ ಆಘಾತಕಾರಿ ಸತ್ಯವು ಬಹಿರಂಗವಾಗಿದೆ.

ಇದನ್ನು ಓದಿ: ಗಾಝಾದಲ್ಲಿ ನೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದ 136 UN ಸಿಬ್ಬಂದಿಗಳ ಹತ್ಯೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...