Homeಅಂತರಾಷ್ಟ್ರೀಯಗಾಝಾ ನಾಗರಿಕರಿಗೆ ಕುಡಿಯಲು ನೀರು ಸಿಗದಂತೆ ಮಾಡುತ್ತಿರುವ ಇಸ್ರೇಲ್!

ಗಾಝಾ ನಾಗರಿಕರಿಗೆ ಕುಡಿಯಲು ನೀರು ಸಿಗದಂತೆ ಮಾಡುತ್ತಿರುವ ಇಸ್ರೇಲ್!

- Advertisement -
- Advertisement -

ಪ್ಯಾಲೆಸ್ತೀನ್‌ನ ಮಘಜಿ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ನಡೆಸಿದ ವಾಯು ದಾಳಿಯಲ್ಲಿ ಕನಿಷ್ಠ 70  ನಾಗರಿಕರು ಮೃತಪಟ್ಟಿದ್ದಾರೆ. ಇದರಿಂದ ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ಹತ್ಯಾಕಾಂಡಕ್ಕೆ ಬಲಿಯಾದವರ ಸಂಖ್ಯೆ 24,000 ದಾಟಿದೆ. ಗಾಝಾದಲ್ಲಿ ನಾಗರಿಕರ ನಿರಂತರ ಸಾವಿನ ಹೆಚ್ಚಳದ ಮಧ್ಯೆ ಇಸ್ರೇಲ್ ಉತ್ತರ ಗಾಝಾದಲ್ಲಿ ಬಾವಿಗಳು ಮತ್ತು ನೀರಿನ ಘಟಕಗಳ ಮೇಲೆ ಬಾಂಬ್ ದಾಳಿ ನಡೆಸಿ ಅದನ್ನು ಕಲುಷಿತಗೊಳಿಸುತ್ತಿದೆ ಮತ್ತು ನಾಗರಿಕರಿಗೆ ಕುಡಿಯಲು ಯೋಗ್ಯ ನೀರು ಸಿಗದಂತೆ ಮಾಡುತ್ತಿದೆ.

ಗಾಝಾದಲ್ಲಿ ಸುಮಾರು ಎರಡು ಮಿಲಿಯನ್ ಜನರು ತೀವ್ರ ಆಹಾರ ಮತ್ತು ನೀರಿನ ಕೊರತೆಯನ್ನು ಎದುರಿಸುತ್ತಿದ್ದಾರೆ ಎಂದು ಯುಎನ್ ಹೇಳಿದೆ. ಲಭ್ಯವಿರುವ ನೀರಿನ ಪೂರೈಕೆಯಲ್ಲಿ 96 ಪ್ರತಿಶತ ಮಾನವ ಬಳಕೆಗೆ ಅನರ್ಹವಾಗಿದೆ ಎಂದು ಅಂದಾಜಿಸಲಾಗಿದೆ. ಇಸ್ರೇಲ್‌ ಪಡೆಗಳು ಉತ್ತರ ಗಾಝಾದಲ್ಲಿ ಬಾವಿಗಳು ಮತ್ತು ನೀರಿನ ಘಟಕಗಳ ಮೇಲೆ ಬಾಂಬ್ ದಾಳಿ ನಡೆಸಿವೆ. ನೀರಿನ ಮೂಲವನ್ನು ಒಡೆದು ಹಾಕುವ ಜೊತೆಗೆ ನೀರನ್ನು ಕುಡಿಯಲು ಅಯೋಗ್ಯವನ್ನಾಗಿ ಮಾಡುತ್ತಿದೆ.

ಮಘಜಿ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ವಾಯು ದಾಳಿ ನಡೆಸಿ 70  ನಾಗರಿಕರನ್ನು ಹತ್ಯೆ ಮಾಡಿರುವುದನ್ನು ಪ್ಯಾಲೆಸ್ತೀನ್‌ನ ಆರೋಗ್ಯ ಸಚಿವಾಲಯದ ವಕ್ತಾರರು ದೃಢಪಡಿಸಿದ್ದು, ಇದನ್ನು ನಿರಾಶ್ರಿತರ ಶಿಬಿರದಲ್ಲಿನ ಹತ್ಯಾಕಾಂಡ ಎಂದು ಹೇಳಿಕೊಂಡಿದ್ದಾರೆ.

ಪ್ಯಾಲೆಸ್ತೀನ್‌ನ ಪತ್ರಕರ್ತರು ಸೆರೆಹಿಡಿದ ಮತ್ತು ಅಲ್ ಜಜೀರಾ ವರದಿ ಮಾಡಿದ ವರದಿಯ ದೃಶ್ಯಾವಳಿಗಳು ಘಟನೆಯಲ್ಲಿ ನವಜಾತ ಶಿಶುಗಳು ಸೇರಿದಂತೆ ಯುದ್ಧ ಬಲಿಪಶುಗಳು ಇರುವುದನ್ನು ಸೂಚಿಸುತ್ತದೆ.  ಹತ್ತಾರು ದೇಹಗಳನ್ನು ಗಾಝಾದ ಅಲ್-ಅಕ್ಸಾ ಹುತಾತ್ಮರ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಕೇಂದ್ರ ಗಾಝಾದ ನಿರಾಶ್ರಿತರ ಶಿಬಿರಗಳ ಬಳಿ ಮುಖ್ಯ ರಸ್ತೆಗಳ ಮೇಲೆ ಇಸ್ರೇಲ್‌ ವಾಯು ದಾಳಿಗಳ ಮೂಲಕ ಆಂಬ್ಯುಲೆನ್ಸ್‌ಗಳು ಮತ್ತು ಅರೆವೈದ್ಯಕೀಯ ಸಿಬ್ಬಂದಿಗಳಿಗೆ ಗಾಯಗೊಂಡ ಜನರನ್ನು ರಕ್ಷಿಸಲು ಅಡ್ಡಿಪಡಿಸುತ್ತಿದೆ.

ಗಾಝಾದ ದಕ್ಷಿಣ ನಗರವಾದ ಖಾನ್ ಯೂನಿಸ್ ನಗರವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ತಿಂಗಳುಗಳು ತೆಗೆದುಕೊಳ್ಳಬಹುದು ಎಂದು ಇಸ್ರೇಲ್‌ನ ಮಿಲಿಟರಿ ಹೇಳುತ್ತಿದೆ. ಭಾನುವಾರ ಪ್ರಕಟವಾದ ವಾಲ್ ಸ್ಟ್ರೀಟ್ ಜರ್ನಲ್ ವರದಿಯಲ್ಲಿ ಹಿರಿಯ ಇಸ್ರೇಲ್‌ ಮಿಲಿಟರಿ ಅಧಿಕಾರಿಯೊಬ್ಬರು ಇಸ್ರೇಲ್‌ ಪಡೆಗಳು ಉತ್ತರ ಗಾಝಾದಲ್ಲಿ ಮಾಡಿದ ರೀತಿಯಲ್ಲಿಯೇ ನಿಯಂತ್ರಣವನ್ನು ಸಾಧಿಸಲು ತಿಂಗಳುಗಳನ್ನು ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ.

ಯುದ್ಧ ಘೋಷಣೆ ಬಳಿಕ ಇಸ್ರೇಲ್‌ ಗಾಝಾ ಮೇಲೆ ನಡೆಸಿದ ದಾಳಿಯಲ್ಲಿ ಕನಿಷ್ಠ 24,424ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. 54,036 ಮಂದಿ ಗಾಯಗೊಂಡಿದ್ದಾರೆ ಎಂದು ಇತ್ತೀಚಿನ ಅಂಕಿ-ಅಂಶಗಳು ಬಹಿರಂಗಪಡಿಸುತ್ತಿದೆ. ಮೃತರಲ್ಲಿ 60% ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ ಎಂದು ಅಂಕಿ-ಅಂಶಗಳು ಬಹಿರಂಗಪಡಿಸಿದೆ.

ವಿಶ್ವವು ನರಮೇಧಕ್ಕೆ ಅವಕಾಶ ನೀಡುತ್ತಿದೆ: ಯುಎನ್ ಕಳವಳ

ಯುಎನ್‌ನ ಫ್ರಾನ್ಸೆಸ್ಕಾ ಅಲ್ಬನೀಸ್ ಇಸ್ರೇಲ್‌ ಗಾಝಾ ಮೇಲೆ ನಡೆಸುತ್ತಿರುವ ಯುದ್ಧ ಅಪರಾಧವನ್ನು ನರಮೇಧ ಎಂದು ಕರೆದ್ದಾರೆ. ಇದು ನರಮೇಧದ ಒಂದು ಪ್ರಕ್ರಿಯೆ, ಏಕ ಕ್ರಿಯೆಯಲ್ಲ ಎಂದು ಹೇಳಿದ್ದು, ನೀವು ಹತ್ತಿರದಿಂದ ನೋಡಿದರೆ ಇದು ನಾಗರಿಕರ ಇತರ ಹತ್ಯಾಕಾಂಡಗಳಿಗಿಂತ ಭಿನ್ನವಾಗಿಲ್ಲ ಎಂದು ಹೇಳಿದ್ದಾರೆ.

ನರಮೇಧವನ್ನು ತಡೆಯಬೇಕು. ಅದನ್ನು ಸಂಭವಿಸಲು ಬಿಡಬಾರದು ಆದರೆ ಗಾಝಾದಲ್ಲಿ ಅದನ್ನು ಸಂಭವಿಸಲು ಬಿಡಲಾಗುತ್ತದೆ  ಫ್ರಾನ್ಸೆಸ್ಕಾ ಅಲ್ಬನೀಸ್ ಆಘಾತವನ್ನು ವ್ಯಕ್ತಪಡಿಸಿದ್ದಾರೆ.

ಇದಲ್ಲದೆ ಕಳೆದ 10 ವಾರಗಳಿಂದ ನಡೆಯುತ್ತಿರುವ ಯುದ್ಧದಿಂದಾಗಿ ನಿರಂತರ ಬಾಂಬ್ ದಾಳಿಗಳು ವಾತಾವರಣವನ್ನೇ ಕಲುಷಿತಗೊಳಿಸಿದ್ದು, ಜನರು ಉಸಿರಾಟದ ಸಮಸ್ಯೆಯಿಂದ ಬಳಲುವಂತಾಗಿದೆ. ಹಸಿವು, ಅನಾರೋಗ್ಯದಿಂದ ಜನರು ಬಳಲುತ್ತಿದ್ದಾರೆ. ಚಿಕನ್ಪಾಕ್ಸ್, ದದ್ದುಗಳು, ಮೂತ್ರನಾಳದ ಸೋಂಕುಗಳು, ಮೆನಿಂಜೈಟಿಸ್, ಮಂಪ್ಸ್, ಸ್ಕೇಬೀಸ್, ದಡಾರ ಮತ್ತು ಪುಡ್‌ ಪ್ಯಾಯಿಸನಿಂಗ್‌, ಅತಿಸಾರ, ಕಾಮಾಲೆ ಮತ್ತು ಉಸಿರಾಟದ ಸೋಂಕುಗಳು ಗಾಝಾದಲ್ಲಿ ಹೆಚ್ಚುತ್ತಿದೆ ಎಂದು ಗಾಝಾದ ಆರೋಗ್ಯ ಸಚಿವಾಲಯವು ಮಾಹಿತಿ ನೀಡಿದೆ. ಇದಲ್ಲದೆ ಯುದ್ಧ ಪೀಡಿತ ಭೂಮಿಯಲ್ಲಿ ವಿಶ್ವಸಂಸ್ಥೆಯು ಸಂಭಾವ್ಯ 14 ರೋಗಗಳನ್ನು ಪತ್ತೆಹಚ್ಚಿದೆ.

ಯುದ್ಧದಿಂದಾಗಿ ಗಾಝಾದ ಪ್ರಾಥಮಿಕ ಆರೈಕೆ ಕೇಂದ್ರಗಳಲ್ಲಿ 3ನೇ ಎರಡರಷ್ಟು ಮುಚ್ಚಲಾಗಿದೆ ಎಂದು WHO ಹೇಳಿದೆ. ಗಾಝಾದ 36 ಆಸ್ಪತ್ರೆಗಳಲ್ಲಿ 11 ಭಾಗಶಃ ಮಾತ್ರ ಕಾರ್ಯನಿರ್ವಹಿಸುತ್ತಿವೆ. ಸುಮಾರು 1.3 ಮಿಲಿಯನ್ ಜನರು ನಿರಾಶ್ರಿತರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ. ಪ್ರತಿ 220 ಜನರಿಗೆ ಸರಾಸರಿ ಒಂದು ಶೌಚಾಲಯ ಮತ್ತು ಪ್ರತಿ 4,500ಗೆ ಒಂದು ಮಾತ್ರ ಶವರ್ ಇದೆ ಎನ್ನುವ ಆಘಾತಕಾರಿ ಸತ್ಯವು ಬಹಿರಂಗವಾಗಿದೆ.

ಇದನ್ನು ಓದಿ: ಗಾಝಾದಲ್ಲಿ ನೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದ 136 UN ಸಿಬ್ಬಂದಿಗಳ ಹತ್ಯೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...