Homeಅಂತರಾಷ್ಟ್ರೀಯಗಾಝಾ ನಾಗರಿಕರಿಗೆ ಕುಡಿಯಲು ನೀರು ಸಿಗದಂತೆ ಮಾಡುತ್ತಿರುವ ಇಸ್ರೇಲ್!

ಗಾಝಾ ನಾಗರಿಕರಿಗೆ ಕುಡಿಯಲು ನೀರು ಸಿಗದಂತೆ ಮಾಡುತ್ತಿರುವ ಇಸ್ರೇಲ್!

- Advertisement -
- Advertisement -

ಪ್ಯಾಲೆಸ್ತೀನ್‌ನ ಮಘಜಿ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ನಡೆಸಿದ ವಾಯು ದಾಳಿಯಲ್ಲಿ ಕನಿಷ್ಠ 70  ನಾಗರಿಕರು ಮೃತಪಟ್ಟಿದ್ದಾರೆ. ಇದರಿಂದ ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ಹತ್ಯಾಕಾಂಡಕ್ಕೆ ಬಲಿಯಾದವರ ಸಂಖ್ಯೆ 24,000 ದಾಟಿದೆ. ಗಾಝಾದಲ್ಲಿ ನಾಗರಿಕರ ನಿರಂತರ ಸಾವಿನ ಹೆಚ್ಚಳದ ಮಧ್ಯೆ ಇಸ್ರೇಲ್ ಉತ್ತರ ಗಾಝಾದಲ್ಲಿ ಬಾವಿಗಳು ಮತ್ತು ನೀರಿನ ಘಟಕಗಳ ಮೇಲೆ ಬಾಂಬ್ ದಾಳಿ ನಡೆಸಿ ಅದನ್ನು ಕಲುಷಿತಗೊಳಿಸುತ್ತಿದೆ ಮತ್ತು ನಾಗರಿಕರಿಗೆ ಕುಡಿಯಲು ಯೋಗ್ಯ ನೀರು ಸಿಗದಂತೆ ಮಾಡುತ್ತಿದೆ.

ಗಾಝಾದಲ್ಲಿ ಸುಮಾರು ಎರಡು ಮಿಲಿಯನ್ ಜನರು ತೀವ್ರ ಆಹಾರ ಮತ್ತು ನೀರಿನ ಕೊರತೆಯನ್ನು ಎದುರಿಸುತ್ತಿದ್ದಾರೆ ಎಂದು ಯುಎನ್ ಹೇಳಿದೆ. ಲಭ್ಯವಿರುವ ನೀರಿನ ಪೂರೈಕೆಯಲ್ಲಿ 96 ಪ್ರತಿಶತ ಮಾನವ ಬಳಕೆಗೆ ಅನರ್ಹವಾಗಿದೆ ಎಂದು ಅಂದಾಜಿಸಲಾಗಿದೆ. ಇಸ್ರೇಲ್‌ ಪಡೆಗಳು ಉತ್ತರ ಗಾಝಾದಲ್ಲಿ ಬಾವಿಗಳು ಮತ್ತು ನೀರಿನ ಘಟಕಗಳ ಮೇಲೆ ಬಾಂಬ್ ದಾಳಿ ನಡೆಸಿವೆ. ನೀರಿನ ಮೂಲವನ್ನು ಒಡೆದು ಹಾಕುವ ಜೊತೆಗೆ ನೀರನ್ನು ಕುಡಿಯಲು ಅಯೋಗ್ಯವನ್ನಾಗಿ ಮಾಡುತ್ತಿದೆ.

ಮಘಜಿ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ವಾಯು ದಾಳಿ ನಡೆಸಿ 70  ನಾಗರಿಕರನ್ನು ಹತ್ಯೆ ಮಾಡಿರುವುದನ್ನು ಪ್ಯಾಲೆಸ್ತೀನ್‌ನ ಆರೋಗ್ಯ ಸಚಿವಾಲಯದ ವಕ್ತಾರರು ದೃಢಪಡಿಸಿದ್ದು, ಇದನ್ನು ನಿರಾಶ್ರಿತರ ಶಿಬಿರದಲ್ಲಿನ ಹತ್ಯಾಕಾಂಡ ಎಂದು ಹೇಳಿಕೊಂಡಿದ್ದಾರೆ.

ಪ್ಯಾಲೆಸ್ತೀನ್‌ನ ಪತ್ರಕರ್ತರು ಸೆರೆಹಿಡಿದ ಮತ್ತು ಅಲ್ ಜಜೀರಾ ವರದಿ ಮಾಡಿದ ವರದಿಯ ದೃಶ್ಯಾವಳಿಗಳು ಘಟನೆಯಲ್ಲಿ ನವಜಾತ ಶಿಶುಗಳು ಸೇರಿದಂತೆ ಯುದ್ಧ ಬಲಿಪಶುಗಳು ಇರುವುದನ್ನು ಸೂಚಿಸುತ್ತದೆ.  ಹತ್ತಾರು ದೇಹಗಳನ್ನು ಗಾಝಾದ ಅಲ್-ಅಕ್ಸಾ ಹುತಾತ್ಮರ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಕೇಂದ್ರ ಗಾಝಾದ ನಿರಾಶ್ರಿತರ ಶಿಬಿರಗಳ ಬಳಿ ಮುಖ್ಯ ರಸ್ತೆಗಳ ಮೇಲೆ ಇಸ್ರೇಲ್‌ ವಾಯು ದಾಳಿಗಳ ಮೂಲಕ ಆಂಬ್ಯುಲೆನ್ಸ್‌ಗಳು ಮತ್ತು ಅರೆವೈದ್ಯಕೀಯ ಸಿಬ್ಬಂದಿಗಳಿಗೆ ಗಾಯಗೊಂಡ ಜನರನ್ನು ರಕ್ಷಿಸಲು ಅಡ್ಡಿಪಡಿಸುತ್ತಿದೆ.

ಗಾಝಾದ ದಕ್ಷಿಣ ನಗರವಾದ ಖಾನ್ ಯೂನಿಸ್ ನಗರವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ತಿಂಗಳುಗಳು ತೆಗೆದುಕೊಳ್ಳಬಹುದು ಎಂದು ಇಸ್ರೇಲ್‌ನ ಮಿಲಿಟರಿ ಹೇಳುತ್ತಿದೆ. ಭಾನುವಾರ ಪ್ರಕಟವಾದ ವಾಲ್ ಸ್ಟ್ರೀಟ್ ಜರ್ನಲ್ ವರದಿಯಲ್ಲಿ ಹಿರಿಯ ಇಸ್ರೇಲ್‌ ಮಿಲಿಟರಿ ಅಧಿಕಾರಿಯೊಬ್ಬರು ಇಸ್ರೇಲ್‌ ಪಡೆಗಳು ಉತ್ತರ ಗಾಝಾದಲ್ಲಿ ಮಾಡಿದ ರೀತಿಯಲ್ಲಿಯೇ ನಿಯಂತ್ರಣವನ್ನು ಸಾಧಿಸಲು ತಿಂಗಳುಗಳನ್ನು ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ.

ಯುದ್ಧ ಘೋಷಣೆ ಬಳಿಕ ಇಸ್ರೇಲ್‌ ಗಾಝಾ ಮೇಲೆ ನಡೆಸಿದ ದಾಳಿಯಲ್ಲಿ ಕನಿಷ್ಠ 24,424ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. 54,036 ಮಂದಿ ಗಾಯಗೊಂಡಿದ್ದಾರೆ ಎಂದು ಇತ್ತೀಚಿನ ಅಂಕಿ-ಅಂಶಗಳು ಬಹಿರಂಗಪಡಿಸುತ್ತಿದೆ. ಮೃತರಲ್ಲಿ 60% ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ ಎಂದು ಅಂಕಿ-ಅಂಶಗಳು ಬಹಿರಂಗಪಡಿಸಿದೆ.

ವಿಶ್ವವು ನರಮೇಧಕ್ಕೆ ಅವಕಾಶ ನೀಡುತ್ತಿದೆ: ಯುಎನ್ ಕಳವಳ

ಯುಎನ್‌ನ ಫ್ರಾನ್ಸೆಸ್ಕಾ ಅಲ್ಬನೀಸ್ ಇಸ್ರೇಲ್‌ ಗಾಝಾ ಮೇಲೆ ನಡೆಸುತ್ತಿರುವ ಯುದ್ಧ ಅಪರಾಧವನ್ನು ನರಮೇಧ ಎಂದು ಕರೆದ್ದಾರೆ. ಇದು ನರಮೇಧದ ಒಂದು ಪ್ರಕ್ರಿಯೆ, ಏಕ ಕ್ರಿಯೆಯಲ್ಲ ಎಂದು ಹೇಳಿದ್ದು, ನೀವು ಹತ್ತಿರದಿಂದ ನೋಡಿದರೆ ಇದು ನಾಗರಿಕರ ಇತರ ಹತ್ಯಾಕಾಂಡಗಳಿಗಿಂತ ಭಿನ್ನವಾಗಿಲ್ಲ ಎಂದು ಹೇಳಿದ್ದಾರೆ.

ನರಮೇಧವನ್ನು ತಡೆಯಬೇಕು. ಅದನ್ನು ಸಂಭವಿಸಲು ಬಿಡಬಾರದು ಆದರೆ ಗಾಝಾದಲ್ಲಿ ಅದನ್ನು ಸಂಭವಿಸಲು ಬಿಡಲಾಗುತ್ತದೆ  ಫ್ರಾನ್ಸೆಸ್ಕಾ ಅಲ್ಬನೀಸ್ ಆಘಾತವನ್ನು ವ್ಯಕ್ತಪಡಿಸಿದ್ದಾರೆ.

ಇದಲ್ಲದೆ ಕಳೆದ 10 ವಾರಗಳಿಂದ ನಡೆಯುತ್ತಿರುವ ಯುದ್ಧದಿಂದಾಗಿ ನಿರಂತರ ಬಾಂಬ್ ದಾಳಿಗಳು ವಾತಾವರಣವನ್ನೇ ಕಲುಷಿತಗೊಳಿಸಿದ್ದು, ಜನರು ಉಸಿರಾಟದ ಸಮಸ್ಯೆಯಿಂದ ಬಳಲುವಂತಾಗಿದೆ. ಹಸಿವು, ಅನಾರೋಗ್ಯದಿಂದ ಜನರು ಬಳಲುತ್ತಿದ್ದಾರೆ. ಚಿಕನ್ಪಾಕ್ಸ್, ದದ್ದುಗಳು, ಮೂತ್ರನಾಳದ ಸೋಂಕುಗಳು, ಮೆನಿಂಜೈಟಿಸ್, ಮಂಪ್ಸ್, ಸ್ಕೇಬೀಸ್, ದಡಾರ ಮತ್ತು ಪುಡ್‌ ಪ್ಯಾಯಿಸನಿಂಗ್‌, ಅತಿಸಾರ, ಕಾಮಾಲೆ ಮತ್ತು ಉಸಿರಾಟದ ಸೋಂಕುಗಳು ಗಾಝಾದಲ್ಲಿ ಹೆಚ್ಚುತ್ತಿದೆ ಎಂದು ಗಾಝಾದ ಆರೋಗ್ಯ ಸಚಿವಾಲಯವು ಮಾಹಿತಿ ನೀಡಿದೆ. ಇದಲ್ಲದೆ ಯುದ್ಧ ಪೀಡಿತ ಭೂಮಿಯಲ್ಲಿ ವಿಶ್ವಸಂಸ್ಥೆಯು ಸಂಭಾವ್ಯ 14 ರೋಗಗಳನ್ನು ಪತ್ತೆಹಚ್ಚಿದೆ.

ಯುದ್ಧದಿಂದಾಗಿ ಗಾಝಾದ ಪ್ರಾಥಮಿಕ ಆರೈಕೆ ಕೇಂದ್ರಗಳಲ್ಲಿ 3ನೇ ಎರಡರಷ್ಟು ಮುಚ್ಚಲಾಗಿದೆ ಎಂದು WHO ಹೇಳಿದೆ. ಗಾಝಾದ 36 ಆಸ್ಪತ್ರೆಗಳಲ್ಲಿ 11 ಭಾಗಶಃ ಮಾತ್ರ ಕಾರ್ಯನಿರ್ವಹಿಸುತ್ತಿವೆ. ಸುಮಾರು 1.3 ಮಿಲಿಯನ್ ಜನರು ನಿರಾಶ್ರಿತರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ. ಪ್ರತಿ 220 ಜನರಿಗೆ ಸರಾಸರಿ ಒಂದು ಶೌಚಾಲಯ ಮತ್ತು ಪ್ರತಿ 4,500ಗೆ ಒಂದು ಮಾತ್ರ ಶವರ್ ಇದೆ ಎನ್ನುವ ಆಘಾತಕಾರಿ ಸತ್ಯವು ಬಹಿರಂಗವಾಗಿದೆ.

ಇದನ್ನು ಓದಿ: ಗಾಝಾದಲ್ಲಿ ನೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದ 136 UN ಸಿಬ್ಬಂದಿಗಳ ಹತ್ಯೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...