Homeಅಂತರಾಷ್ಟ್ರೀಯಗಾಝಾ ನಾಗರಿಕರಿಗೆ ಕುಡಿಯಲು ನೀರು ಸಿಗದಂತೆ ಮಾಡುತ್ತಿರುವ ಇಸ್ರೇಲ್!

ಗಾಝಾ ನಾಗರಿಕರಿಗೆ ಕುಡಿಯಲು ನೀರು ಸಿಗದಂತೆ ಮಾಡುತ್ತಿರುವ ಇಸ್ರೇಲ್!

- Advertisement -
- Advertisement -

ಪ್ಯಾಲೆಸ್ತೀನ್‌ನ ಮಘಜಿ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ನಡೆಸಿದ ವಾಯು ದಾಳಿಯಲ್ಲಿ ಕನಿಷ್ಠ 70  ನಾಗರಿಕರು ಮೃತಪಟ್ಟಿದ್ದಾರೆ. ಇದರಿಂದ ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ಹತ್ಯಾಕಾಂಡಕ್ಕೆ ಬಲಿಯಾದವರ ಸಂಖ್ಯೆ 24,000 ದಾಟಿದೆ. ಗಾಝಾದಲ್ಲಿ ನಾಗರಿಕರ ನಿರಂತರ ಸಾವಿನ ಹೆಚ್ಚಳದ ಮಧ್ಯೆ ಇಸ್ರೇಲ್ ಉತ್ತರ ಗಾಝಾದಲ್ಲಿ ಬಾವಿಗಳು ಮತ್ತು ನೀರಿನ ಘಟಕಗಳ ಮೇಲೆ ಬಾಂಬ್ ದಾಳಿ ನಡೆಸಿ ಅದನ್ನು ಕಲುಷಿತಗೊಳಿಸುತ್ತಿದೆ ಮತ್ತು ನಾಗರಿಕರಿಗೆ ಕುಡಿಯಲು ಯೋಗ್ಯ ನೀರು ಸಿಗದಂತೆ ಮಾಡುತ್ತಿದೆ.

ಗಾಝಾದಲ್ಲಿ ಸುಮಾರು ಎರಡು ಮಿಲಿಯನ್ ಜನರು ತೀವ್ರ ಆಹಾರ ಮತ್ತು ನೀರಿನ ಕೊರತೆಯನ್ನು ಎದುರಿಸುತ್ತಿದ್ದಾರೆ ಎಂದು ಯುಎನ್ ಹೇಳಿದೆ. ಲಭ್ಯವಿರುವ ನೀರಿನ ಪೂರೈಕೆಯಲ್ಲಿ 96 ಪ್ರತಿಶತ ಮಾನವ ಬಳಕೆಗೆ ಅನರ್ಹವಾಗಿದೆ ಎಂದು ಅಂದಾಜಿಸಲಾಗಿದೆ. ಇಸ್ರೇಲ್‌ ಪಡೆಗಳು ಉತ್ತರ ಗಾಝಾದಲ್ಲಿ ಬಾವಿಗಳು ಮತ್ತು ನೀರಿನ ಘಟಕಗಳ ಮೇಲೆ ಬಾಂಬ್ ದಾಳಿ ನಡೆಸಿವೆ. ನೀರಿನ ಮೂಲವನ್ನು ಒಡೆದು ಹಾಕುವ ಜೊತೆಗೆ ನೀರನ್ನು ಕುಡಿಯಲು ಅಯೋಗ್ಯವನ್ನಾಗಿ ಮಾಡುತ್ತಿದೆ.

ಮಘಜಿ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ವಾಯು ದಾಳಿ ನಡೆಸಿ 70  ನಾಗರಿಕರನ್ನು ಹತ್ಯೆ ಮಾಡಿರುವುದನ್ನು ಪ್ಯಾಲೆಸ್ತೀನ್‌ನ ಆರೋಗ್ಯ ಸಚಿವಾಲಯದ ವಕ್ತಾರರು ದೃಢಪಡಿಸಿದ್ದು, ಇದನ್ನು ನಿರಾಶ್ರಿತರ ಶಿಬಿರದಲ್ಲಿನ ಹತ್ಯಾಕಾಂಡ ಎಂದು ಹೇಳಿಕೊಂಡಿದ್ದಾರೆ.

ಪ್ಯಾಲೆಸ್ತೀನ್‌ನ ಪತ್ರಕರ್ತರು ಸೆರೆಹಿಡಿದ ಮತ್ತು ಅಲ್ ಜಜೀರಾ ವರದಿ ಮಾಡಿದ ವರದಿಯ ದೃಶ್ಯಾವಳಿಗಳು ಘಟನೆಯಲ್ಲಿ ನವಜಾತ ಶಿಶುಗಳು ಸೇರಿದಂತೆ ಯುದ್ಧ ಬಲಿಪಶುಗಳು ಇರುವುದನ್ನು ಸೂಚಿಸುತ್ತದೆ.  ಹತ್ತಾರು ದೇಹಗಳನ್ನು ಗಾಝಾದ ಅಲ್-ಅಕ್ಸಾ ಹುತಾತ್ಮರ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಕೇಂದ್ರ ಗಾಝಾದ ನಿರಾಶ್ರಿತರ ಶಿಬಿರಗಳ ಬಳಿ ಮುಖ್ಯ ರಸ್ತೆಗಳ ಮೇಲೆ ಇಸ್ರೇಲ್‌ ವಾಯು ದಾಳಿಗಳ ಮೂಲಕ ಆಂಬ್ಯುಲೆನ್ಸ್‌ಗಳು ಮತ್ತು ಅರೆವೈದ್ಯಕೀಯ ಸಿಬ್ಬಂದಿಗಳಿಗೆ ಗಾಯಗೊಂಡ ಜನರನ್ನು ರಕ್ಷಿಸಲು ಅಡ್ಡಿಪಡಿಸುತ್ತಿದೆ.

ಗಾಝಾದ ದಕ್ಷಿಣ ನಗರವಾದ ಖಾನ್ ಯೂನಿಸ್ ನಗರವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ತಿಂಗಳುಗಳು ತೆಗೆದುಕೊಳ್ಳಬಹುದು ಎಂದು ಇಸ್ರೇಲ್‌ನ ಮಿಲಿಟರಿ ಹೇಳುತ್ತಿದೆ. ಭಾನುವಾರ ಪ್ರಕಟವಾದ ವಾಲ್ ಸ್ಟ್ರೀಟ್ ಜರ್ನಲ್ ವರದಿಯಲ್ಲಿ ಹಿರಿಯ ಇಸ್ರೇಲ್‌ ಮಿಲಿಟರಿ ಅಧಿಕಾರಿಯೊಬ್ಬರು ಇಸ್ರೇಲ್‌ ಪಡೆಗಳು ಉತ್ತರ ಗಾಝಾದಲ್ಲಿ ಮಾಡಿದ ರೀತಿಯಲ್ಲಿಯೇ ನಿಯಂತ್ರಣವನ್ನು ಸಾಧಿಸಲು ತಿಂಗಳುಗಳನ್ನು ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ.

ಯುದ್ಧ ಘೋಷಣೆ ಬಳಿಕ ಇಸ್ರೇಲ್‌ ಗಾಝಾ ಮೇಲೆ ನಡೆಸಿದ ದಾಳಿಯಲ್ಲಿ ಕನಿಷ್ಠ 24,424ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. 54,036 ಮಂದಿ ಗಾಯಗೊಂಡಿದ್ದಾರೆ ಎಂದು ಇತ್ತೀಚಿನ ಅಂಕಿ-ಅಂಶಗಳು ಬಹಿರಂಗಪಡಿಸುತ್ತಿದೆ. ಮೃತರಲ್ಲಿ 60% ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ ಎಂದು ಅಂಕಿ-ಅಂಶಗಳು ಬಹಿರಂಗಪಡಿಸಿದೆ.

ವಿಶ್ವವು ನರಮೇಧಕ್ಕೆ ಅವಕಾಶ ನೀಡುತ್ತಿದೆ: ಯುಎನ್ ಕಳವಳ

ಯುಎನ್‌ನ ಫ್ರಾನ್ಸೆಸ್ಕಾ ಅಲ್ಬನೀಸ್ ಇಸ್ರೇಲ್‌ ಗಾಝಾ ಮೇಲೆ ನಡೆಸುತ್ತಿರುವ ಯುದ್ಧ ಅಪರಾಧವನ್ನು ನರಮೇಧ ಎಂದು ಕರೆದ್ದಾರೆ. ಇದು ನರಮೇಧದ ಒಂದು ಪ್ರಕ್ರಿಯೆ, ಏಕ ಕ್ರಿಯೆಯಲ್ಲ ಎಂದು ಹೇಳಿದ್ದು, ನೀವು ಹತ್ತಿರದಿಂದ ನೋಡಿದರೆ ಇದು ನಾಗರಿಕರ ಇತರ ಹತ್ಯಾಕಾಂಡಗಳಿಗಿಂತ ಭಿನ್ನವಾಗಿಲ್ಲ ಎಂದು ಹೇಳಿದ್ದಾರೆ.

ನರಮೇಧವನ್ನು ತಡೆಯಬೇಕು. ಅದನ್ನು ಸಂಭವಿಸಲು ಬಿಡಬಾರದು ಆದರೆ ಗಾಝಾದಲ್ಲಿ ಅದನ್ನು ಸಂಭವಿಸಲು ಬಿಡಲಾಗುತ್ತದೆ  ಫ್ರಾನ್ಸೆಸ್ಕಾ ಅಲ್ಬನೀಸ್ ಆಘಾತವನ್ನು ವ್ಯಕ್ತಪಡಿಸಿದ್ದಾರೆ.

ಇದಲ್ಲದೆ ಕಳೆದ 10 ವಾರಗಳಿಂದ ನಡೆಯುತ್ತಿರುವ ಯುದ್ಧದಿಂದಾಗಿ ನಿರಂತರ ಬಾಂಬ್ ದಾಳಿಗಳು ವಾತಾವರಣವನ್ನೇ ಕಲುಷಿತಗೊಳಿಸಿದ್ದು, ಜನರು ಉಸಿರಾಟದ ಸಮಸ್ಯೆಯಿಂದ ಬಳಲುವಂತಾಗಿದೆ. ಹಸಿವು, ಅನಾರೋಗ್ಯದಿಂದ ಜನರು ಬಳಲುತ್ತಿದ್ದಾರೆ. ಚಿಕನ್ಪಾಕ್ಸ್, ದದ್ದುಗಳು, ಮೂತ್ರನಾಳದ ಸೋಂಕುಗಳು, ಮೆನಿಂಜೈಟಿಸ್, ಮಂಪ್ಸ್, ಸ್ಕೇಬೀಸ್, ದಡಾರ ಮತ್ತು ಪುಡ್‌ ಪ್ಯಾಯಿಸನಿಂಗ್‌, ಅತಿಸಾರ, ಕಾಮಾಲೆ ಮತ್ತು ಉಸಿರಾಟದ ಸೋಂಕುಗಳು ಗಾಝಾದಲ್ಲಿ ಹೆಚ್ಚುತ್ತಿದೆ ಎಂದು ಗಾಝಾದ ಆರೋಗ್ಯ ಸಚಿವಾಲಯವು ಮಾಹಿತಿ ನೀಡಿದೆ. ಇದಲ್ಲದೆ ಯುದ್ಧ ಪೀಡಿತ ಭೂಮಿಯಲ್ಲಿ ವಿಶ್ವಸಂಸ್ಥೆಯು ಸಂಭಾವ್ಯ 14 ರೋಗಗಳನ್ನು ಪತ್ತೆಹಚ್ಚಿದೆ.

ಯುದ್ಧದಿಂದಾಗಿ ಗಾಝಾದ ಪ್ರಾಥಮಿಕ ಆರೈಕೆ ಕೇಂದ್ರಗಳಲ್ಲಿ 3ನೇ ಎರಡರಷ್ಟು ಮುಚ್ಚಲಾಗಿದೆ ಎಂದು WHO ಹೇಳಿದೆ. ಗಾಝಾದ 36 ಆಸ್ಪತ್ರೆಗಳಲ್ಲಿ 11 ಭಾಗಶಃ ಮಾತ್ರ ಕಾರ್ಯನಿರ್ವಹಿಸುತ್ತಿವೆ. ಸುಮಾರು 1.3 ಮಿಲಿಯನ್ ಜನರು ನಿರಾಶ್ರಿತರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ. ಪ್ರತಿ 220 ಜನರಿಗೆ ಸರಾಸರಿ ಒಂದು ಶೌಚಾಲಯ ಮತ್ತು ಪ್ರತಿ 4,500ಗೆ ಒಂದು ಮಾತ್ರ ಶವರ್ ಇದೆ ಎನ್ನುವ ಆಘಾತಕಾರಿ ಸತ್ಯವು ಬಹಿರಂಗವಾಗಿದೆ.

ಇದನ್ನು ಓದಿ: ಗಾಝಾದಲ್ಲಿ ನೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದ 136 UN ಸಿಬ್ಬಂದಿಗಳ ಹತ್ಯೆ

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಹುಲ್ ಗಾಂಧಿಯನ್ನು ರಾಯ್ ಬರೇಲಿ ಜನರಿಗೆ ಕೊಡುತ್ತಿದ್ದೇನೆ; ಅವನು ನಿಮ್ಮನ್ನು ನಿರಾಸೆಗೊಳಿಸುವುದಿಲ್ಲ: ಸೋನಿಯಾ ಗಾಂಧಿ

0
'ನನ್ನ ಮಗನನ್ನು ರಾಯ್ ಬರೇಲಿಯ ಜನರಿಗೆ ನೀಡುತ್ತಿದ್ದೇನೆ; ರಾಹುಲ್ ಗಾಂಧಿ ನಿಮ್ಮನ್ನು ನಿರಾಶೆಗೊಳಿಸುವುದಿಲ್ಲ' ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಶುಕ್ರವಾರ ಹೇಳಿದ್ದಾರೆ. 20 ವರ್ಷಗಳ ಕಾಲ ಸಂಸದರಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ...