Homeಅಂತರಾಷ್ಟ್ರೀಯಗಾಝಾ ನಾಗರಿಕರಿಗೆ ಕುಡಿಯಲು ನೀರು ಸಿಗದಂತೆ ಮಾಡುತ್ತಿರುವ ಇಸ್ರೇಲ್!

ಗಾಝಾ ನಾಗರಿಕರಿಗೆ ಕುಡಿಯಲು ನೀರು ಸಿಗದಂತೆ ಮಾಡುತ್ತಿರುವ ಇಸ್ರೇಲ್!

- Advertisement -
- Advertisement -

ಪ್ಯಾಲೆಸ್ತೀನ್‌ನ ಮಘಜಿ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ನಡೆಸಿದ ವಾಯು ದಾಳಿಯಲ್ಲಿ ಕನಿಷ್ಠ 70  ನಾಗರಿಕರು ಮೃತಪಟ್ಟಿದ್ದಾರೆ. ಇದರಿಂದ ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ಹತ್ಯಾಕಾಂಡಕ್ಕೆ ಬಲಿಯಾದವರ ಸಂಖ್ಯೆ 24,000 ದಾಟಿದೆ. ಗಾಝಾದಲ್ಲಿ ನಾಗರಿಕರ ನಿರಂತರ ಸಾವಿನ ಹೆಚ್ಚಳದ ಮಧ್ಯೆ ಇಸ್ರೇಲ್ ಉತ್ತರ ಗಾಝಾದಲ್ಲಿ ಬಾವಿಗಳು ಮತ್ತು ನೀರಿನ ಘಟಕಗಳ ಮೇಲೆ ಬಾಂಬ್ ದಾಳಿ ನಡೆಸಿ ಅದನ್ನು ಕಲುಷಿತಗೊಳಿಸುತ್ತಿದೆ ಮತ್ತು ನಾಗರಿಕರಿಗೆ ಕುಡಿಯಲು ಯೋಗ್ಯ ನೀರು ಸಿಗದಂತೆ ಮಾಡುತ್ತಿದೆ.

ಗಾಝಾದಲ್ಲಿ ಸುಮಾರು ಎರಡು ಮಿಲಿಯನ್ ಜನರು ತೀವ್ರ ಆಹಾರ ಮತ್ತು ನೀರಿನ ಕೊರತೆಯನ್ನು ಎದುರಿಸುತ್ತಿದ್ದಾರೆ ಎಂದು ಯುಎನ್ ಹೇಳಿದೆ. ಲಭ್ಯವಿರುವ ನೀರಿನ ಪೂರೈಕೆಯಲ್ಲಿ 96 ಪ್ರತಿಶತ ಮಾನವ ಬಳಕೆಗೆ ಅನರ್ಹವಾಗಿದೆ ಎಂದು ಅಂದಾಜಿಸಲಾಗಿದೆ. ಇಸ್ರೇಲ್‌ ಪಡೆಗಳು ಉತ್ತರ ಗಾಝಾದಲ್ಲಿ ಬಾವಿಗಳು ಮತ್ತು ನೀರಿನ ಘಟಕಗಳ ಮೇಲೆ ಬಾಂಬ್ ದಾಳಿ ನಡೆಸಿವೆ. ನೀರಿನ ಮೂಲವನ್ನು ಒಡೆದು ಹಾಕುವ ಜೊತೆಗೆ ನೀರನ್ನು ಕುಡಿಯಲು ಅಯೋಗ್ಯವನ್ನಾಗಿ ಮಾಡುತ್ತಿದೆ.

ಮಘಜಿ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ವಾಯು ದಾಳಿ ನಡೆಸಿ 70  ನಾಗರಿಕರನ್ನು ಹತ್ಯೆ ಮಾಡಿರುವುದನ್ನು ಪ್ಯಾಲೆಸ್ತೀನ್‌ನ ಆರೋಗ್ಯ ಸಚಿವಾಲಯದ ವಕ್ತಾರರು ದೃಢಪಡಿಸಿದ್ದು, ಇದನ್ನು ನಿರಾಶ್ರಿತರ ಶಿಬಿರದಲ್ಲಿನ ಹತ್ಯಾಕಾಂಡ ಎಂದು ಹೇಳಿಕೊಂಡಿದ್ದಾರೆ.

ಪ್ಯಾಲೆಸ್ತೀನ್‌ನ ಪತ್ರಕರ್ತರು ಸೆರೆಹಿಡಿದ ಮತ್ತು ಅಲ್ ಜಜೀರಾ ವರದಿ ಮಾಡಿದ ವರದಿಯ ದೃಶ್ಯಾವಳಿಗಳು ಘಟನೆಯಲ್ಲಿ ನವಜಾತ ಶಿಶುಗಳು ಸೇರಿದಂತೆ ಯುದ್ಧ ಬಲಿಪಶುಗಳು ಇರುವುದನ್ನು ಸೂಚಿಸುತ್ತದೆ.  ಹತ್ತಾರು ದೇಹಗಳನ್ನು ಗಾಝಾದ ಅಲ್-ಅಕ್ಸಾ ಹುತಾತ್ಮರ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಕೇಂದ್ರ ಗಾಝಾದ ನಿರಾಶ್ರಿತರ ಶಿಬಿರಗಳ ಬಳಿ ಮುಖ್ಯ ರಸ್ತೆಗಳ ಮೇಲೆ ಇಸ್ರೇಲ್‌ ವಾಯು ದಾಳಿಗಳ ಮೂಲಕ ಆಂಬ್ಯುಲೆನ್ಸ್‌ಗಳು ಮತ್ತು ಅರೆವೈದ್ಯಕೀಯ ಸಿಬ್ಬಂದಿಗಳಿಗೆ ಗಾಯಗೊಂಡ ಜನರನ್ನು ರಕ್ಷಿಸಲು ಅಡ್ಡಿಪಡಿಸುತ್ತಿದೆ.

ಗಾಝಾದ ದಕ್ಷಿಣ ನಗರವಾದ ಖಾನ್ ಯೂನಿಸ್ ನಗರವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ತಿಂಗಳುಗಳು ತೆಗೆದುಕೊಳ್ಳಬಹುದು ಎಂದು ಇಸ್ರೇಲ್‌ನ ಮಿಲಿಟರಿ ಹೇಳುತ್ತಿದೆ. ಭಾನುವಾರ ಪ್ರಕಟವಾದ ವಾಲ್ ಸ್ಟ್ರೀಟ್ ಜರ್ನಲ್ ವರದಿಯಲ್ಲಿ ಹಿರಿಯ ಇಸ್ರೇಲ್‌ ಮಿಲಿಟರಿ ಅಧಿಕಾರಿಯೊಬ್ಬರು ಇಸ್ರೇಲ್‌ ಪಡೆಗಳು ಉತ್ತರ ಗಾಝಾದಲ್ಲಿ ಮಾಡಿದ ರೀತಿಯಲ್ಲಿಯೇ ನಿಯಂತ್ರಣವನ್ನು ಸಾಧಿಸಲು ತಿಂಗಳುಗಳನ್ನು ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ.

ಯುದ್ಧ ಘೋಷಣೆ ಬಳಿಕ ಇಸ್ರೇಲ್‌ ಗಾಝಾ ಮೇಲೆ ನಡೆಸಿದ ದಾಳಿಯಲ್ಲಿ ಕನಿಷ್ಠ 24,424ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. 54,036 ಮಂದಿ ಗಾಯಗೊಂಡಿದ್ದಾರೆ ಎಂದು ಇತ್ತೀಚಿನ ಅಂಕಿ-ಅಂಶಗಳು ಬಹಿರಂಗಪಡಿಸುತ್ತಿದೆ. ಮೃತರಲ್ಲಿ 60% ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ ಎಂದು ಅಂಕಿ-ಅಂಶಗಳು ಬಹಿರಂಗಪಡಿಸಿದೆ.

ವಿಶ್ವವು ನರಮೇಧಕ್ಕೆ ಅವಕಾಶ ನೀಡುತ್ತಿದೆ: ಯುಎನ್ ಕಳವಳ

ಯುಎನ್‌ನ ಫ್ರಾನ್ಸೆಸ್ಕಾ ಅಲ್ಬನೀಸ್ ಇಸ್ರೇಲ್‌ ಗಾಝಾ ಮೇಲೆ ನಡೆಸುತ್ತಿರುವ ಯುದ್ಧ ಅಪರಾಧವನ್ನು ನರಮೇಧ ಎಂದು ಕರೆದ್ದಾರೆ. ಇದು ನರಮೇಧದ ಒಂದು ಪ್ರಕ್ರಿಯೆ, ಏಕ ಕ್ರಿಯೆಯಲ್ಲ ಎಂದು ಹೇಳಿದ್ದು, ನೀವು ಹತ್ತಿರದಿಂದ ನೋಡಿದರೆ ಇದು ನಾಗರಿಕರ ಇತರ ಹತ್ಯಾಕಾಂಡಗಳಿಗಿಂತ ಭಿನ್ನವಾಗಿಲ್ಲ ಎಂದು ಹೇಳಿದ್ದಾರೆ.

ನರಮೇಧವನ್ನು ತಡೆಯಬೇಕು. ಅದನ್ನು ಸಂಭವಿಸಲು ಬಿಡಬಾರದು ಆದರೆ ಗಾಝಾದಲ್ಲಿ ಅದನ್ನು ಸಂಭವಿಸಲು ಬಿಡಲಾಗುತ್ತದೆ  ಫ್ರಾನ್ಸೆಸ್ಕಾ ಅಲ್ಬನೀಸ್ ಆಘಾತವನ್ನು ವ್ಯಕ್ತಪಡಿಸಿದ್ದಾರೆ.

ಇದಲ್ಲದೆ ಕಳೆದ 10 ವಾರಗಳಿಂದ ನಡೆಯುತ್ತಿರುವ ಯುದ್ಧದಿಂದಾಗಿ ನಿರಂತರ ಬಾಂಬ್ ದಾಳಿಗಳು ವಾತಾವರಣವನ್ನೇ ಕಲುಷಿತಗೊಳಿಸಿದ್ದು, ಜನರು ಉಸಿರಾಟದ ಸಮಸ್ಯೆಯಿಂದ ಬಳಲುವಂತಾಗಿದೆ. ಹಸಿವು, ಅನಾರೋಗ್ಯದಿಂದ ಜನರು ಬಳಲುತ್ತಿದ್ದಾರೆ. ಚಿಕನ್ಪಾಕ್ಸ್, ದದ್ದುಗಳು, ಮೂತ್ರನಾಳದ ಸೋಂಕುಗಳು, ಮೆನಿಂಜೈಟಿಸ್, ಮಂಪ್ಸ್, ಸ್ಕೇಬೀಸ್, ದಡಾರ ಮತ್ತು ಪುಡ್‌ ಪ್ಯಾಯಿಸನಿಂಗ್‌, ಅತಿಸಾರ, ಕಾಮಾಲೆ ಮತ್ತು ಉಸಿರಾಟದ ಸೋಂಕುಗಳು ಗಾಝಾದಲ್ಲಿ ಹೆಚ್ಚುತ್ತಿದೆ ಎಂದು ಗಾಝಾದ ಆರೋಗ್ಯ ಸಚಿವಾಲಯವು ಮಾಹಿತಿ ನೀಡಿದೆ. ಇದಲ್ಲದೆ ಯುದ್ಧ ಪೀಡಿತ ಭೂಮಿಯಲ್ಲಿ ವಿಶ್ವಸಂಸ್ಥೆಯು ಸಂಭಾವ್ಯ 14 ರೋಗಗಳನ್ನು ಪತ್ತೆಹಚ್ಚಿದೆ.

ಯುದ್ಧದಿಂದಾಗಿ ಗಾಝಾದ ಪ್ರಾಥಮಿಕ ಆರೈಕೆ ಕೇಂದ್ರಗಳಲ್ಲಿ 3ನೇ ಎರಡರಷ್ಟು ಮುಚ್ಚಲಾಗಿದೆ ಎಂದು WHO ಹೇಳಿದೆ. ಗಾಝಾದ 36 ಆಸ್ಪತ್ರೆಗಳಲ್ಲಿ 11 ಭಾಗಶಃ ಮಾತ್ರ ಕಾರ್ಯನಿರ್ವಹಿಸುತ್ತಿವೆ. ಸುಮಾರು 1.3 ಮಿಲಿಯನ್ ಜನರು ನಿರಾಶ್ರಿತರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ. ಪ್ರತಿ 220 ಜನರಿಗೆ ಸರಾಸರಿ ಒಂದು ಶೌಚಾಲಯ ಮತ್ತು ಪ್ರತಿ 4,500ಗೆ ಒಂದು ಮಾತ್ರ ಶವರ್ ಇದೆ ಎನ್ನುವ ಆಘಾತಕಾರಿ ಸತ್ಯವು ಬಹಿರಂಗವಾಗಿದೆ.

ಇದನ್ನು ಓದಿ: ಗಾಝಾದಲ್ಲಿ ನೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದ 136 UN ಸಿಬ್ಬಂದಿಗಳ ಹತ್ಯೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...