Homeಅಂತರಾಷ್ಟ್ರೀಯಗಾಝಾ ನಾಗರಿಕರಿಗೆ ಕುಡಿಯಲು ನೀರು ಸಿಗದಂತೆ ಮಾಡುತ್ತಿರುವ ಇಸ್ರೇಲ್!

ಗಾಝಾ ನಾಗರಿಕರಿಗೆ ಕುಡಿಯಲು ನೀರು ಸಿಗದಂತೆ ಮಾಡುತ್ತಿರುವ ಇಸ್ರೇಲ್!

- Advertisement -
- Advertisement -

ಪ್ಯಾಲೆಸ್ತೀನ್‌ನ ಮಘಜಿ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ನಡೆಸಿದ ವಾಯು ದಾಳಿಯಲ್ಲಿ ಕನಿಷ್ಠ 70  ನಾಗರಿಕರು ಮೃತಪಟ್ಟಿದ್ದಾರೆ. ಇದರಿಂದ ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ಹತ್ಯಾಕಾಂಡಕ್ಕೆ ಬಲಿಯಾದವರ ಸಂಖ್ಯೆ 24,000 ದಾಟಿದೆ. ಗಾಝಾದಲ್ಲಿ ನಾಗರಿಕರ ನಿರಂತರ ಸಾವಿನ ಹೆಚ್ಚಳದ ಮಧ್ಯೆ ಇಸ್ರೇಲ್ ಉತ್ತರ ಗಾಝಾದಲ್ಲಿ ಬಾವಿಗಳು ಮತ್ತು ನೀರಿನ ಘಟಕಗಳ ಮೇಲೆ ಬಾಂಬ್ ದಾಳಿ ನಡೆಸಿ ಅದನ್ನು ಕಲುಷಿತಗೊಳಿಸುತ್ತಿದೆ ಮತ್ತು ನಾಗರಿಕರಿಗೆ ಕುಡಿಯಲು ಯೋಗ್ಯ ನೀರು ಸಿಗದಂತೆ ಮಾಡುತ್ತಿದೆ.

ಗಾಝಾದಲ್ಲಿ ಸುಮಾರು ಎರಡು ಮಿಲಿಯನ್ ಜನರು ತೀವ್ರ ಆಹಾರ ಮತ್ತು ನೀರಿನ ಕೊರತೆಯನ್ನು ಎದುರಿಸುತ್ತಿದ್ದಾರೆ ಎಂದು ಯುಎನ್ ಹೇಳಿದೆ. ಲಭ್ಯವಿರುವ ನೀರಿನ ಪೂರೈಕೆಯಲ್ಲಿ 96 ಪ್ರತಿಶತ ಮಾನವ ಬಳಕೆಗೆ ಅನರ್ಹವಾಗಿದೆ ಎಂದು ಅಂದಾಜಿಸಲಾಗಿದೆ. ಇಸ್ರೇಲ್‌ ಪಡೆಗಳು ಉತ್ತರ ಗಾಝಾದಲ್ಲಿ ಬಾವಿಗಳು ಮತ್ತು ನೀರಿನ ಘಟಕಗಳ ಮೇಲೆ ಬಾಂಬ್ ದಾಳಿ ನಡೆಸಿವೆ. ನೀರಿನ ಮೂಲವನ್ನು ಒಡೆದು ಹಾಕುವ ಜೊತೆಗೆ ನೀರನ್ನು ಕುಡಿಯಲು ಅಯೋಗ್ಯವನ್ನಾಗಿ ಮಾಡುತ್ತಿದೆ.

ಮಘಜಿ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ವಾಯು ದಾಳಿ ನಡೆಸಿ 70  ನಾಗರಿಕರನ್ನು ಹತ್ಯೆ ಮಾಡಿರುವುದನ್ನು ಪ್ಯಾಲೆಸ್ತೀನ್‌ನ ಆರೋಗ್ಯ ಸಚಿವಾಲಯದ ವಕ್ತಾರರು ದೃಢಪಡಿಸಿದ್ದು, ಇದನ್ನು ನಿರಾಶ್ರಿತರ ಶಿಬಿರದಲ್ಲಿನ ಹತ್ಯಾಕಾಂಡ ಎಂದು ಹೇಳಿಕೊಂಡಿದ್ದಾರೆ.

ಪ್ಯಾಲೆಸ್ತೀನ್‌ನ ಪತ್ರಕರ್ತರು ಸೆರೆಹಿಡಿದ ಮತ್ತು ಅಲ್ ಜಜೀರಾ ವರದಿ ಮಾಡಿದ ವರದಿಯ ದೃಶ್ಯಾವಳಿಗಳು ಘಟನೆಯಲ್ಲಿ ನವಜಾತ ಶಿಶುಗಳು ಸೇರಿದಂತೆ ಯುದ್ಧ ಬಲಿಪಶುಗಳು ಇರುವುದನ್ನು ಸೂಚಿಸುತ್ತದೆ.  ಹತ್ತಾರು ದೇಹಗಳನ್ನು ಗಾಝಾದ ಅಲ್-ಅಕ್ಸಾ ಹುತಾತ್ಮರ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಕೇಂದ್ರ ಗಾಝಾದ ನಿರಾಶ್ರಿತರ ಶಿಬಿರಗಳ ಬಳಿ ಮುಖ್ಯ ರಸ್ತೆಗಳ ಮೇಲೆ ಇಸ್ರೇಲ್‌ ವಾಯು ದಾಳಿಗಳ ಮೂಲಕ ಆಂಬ್ಯುಲೆನ್ಸ್‌ಗಳು ಮತ್ತು ಅರೆವೈದ್ಯಕೀಯ ಸಿಬ್ಬಂದಿಗಳಿಗೆ ಗಾಯಗೊಂಡ ಜನರನ್ನು ರಕ್ಷಿಸಲು ಅಡ್ಡಿಪಡಿಸುತ್ತಿದೆ.

ಗಾಝಾದ ದಕ್ಷಿಣ ನಗರವಾದ ಖಾನ್ ಯೂನಿಸ್ ನಗರವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ತಿಂಗಳುಗಳು ತೆಗೆದುಕೊಳ್ಳಬಹುದು ಎಂದು ಇಸ್ರೇಲ್‌ನ ಮಿಲಿಟರಿ ಹೇಳುತ್ತಿದೆ. ಭಾನುವಾರ ಪ್ರಕಟವಾದ ವಾಲ್ ಸ್ಟ್ರೀಟ್ ಜರ್ನಲ್ ವರದಿಯಲ್ಲಿ ಹಿರಿಯ ಇಸ್ರೇಲ್‌ ಮಿಲಿಟರಿ ಅಧಿಕಾರಿಯೊಬ್ಬರು ಇಸ್ರೇಲ್‌ ಪಡೆಗಳು ಉತ್ತರ ಗಾಝಾದಲ್ಲಿ ಮಾಡಿದ ರೀತಿಯಲ್ಲಿಯೇ ನಿಯಂತ್ರಣವನ್ನು ಸಾಧಿಸಲು ತಿಂಗಳುಗಳನ್ನು ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ.

ಯುದ್ಧ ಘೋಷಣೆ ಬಳಿಕ ಇಸ್ರೇಲ್‌ ಗಾಝಾ ಮೇಲೆ ನಡೆಸಿದ ದಾಳಿಯಲ್ಲಿ ಕನಿಷ್ಠ 24,424ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. 54,036 ಮಂದಿ ಗಾಯಗೊಂಡಿದ್ದಾರೆ ಎಂದು ಇತ್ತೀಚಿನ ಅಂಕಿ-ಅಂಶಗಳು ಬಹಿರಂಗಪಡಿಸುತ್ತಿದೆ. ಮೃತರಲ್ಲಿ 60% ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ ಎಂದು ಅಂಕಿ-ಅಂಶಗಳು ಬಹಿರಂಗಪಡಿಸಿದೆ.

ವಿಶ್ವವು ನರಮೇಧಕ್ಕೆ ಅವಕಾಶ ನೀಡುತ್ತಿದೆ: ಯುಎನ್ ಕಳವಳ

ಯುಎನ್‌ನ ಫ್ರಾನ್ಸೆಸ್ಕಾ ಅಲ್ಬನೀಸ್ ಇಸ್ರೇಲ್‌ ಗಾಝಾ ಮೇಲೆ ನಡೆಸುತ್ತಿರುವ ಯುದ್ಧ ಅಪರಾಧವನ್ನು ನರಮೇಧ ಎಂದು ಕರೆದ್ದಾರೆ. ಇದು ನರಮೇಧದ ಒಂದು ಪ್ರಕ್ರಿಯೆ, ಏಕ ಕ್ರಿಯೆಯಲ್ಲ ಎಂದು ಹೇಳಿದ್ದು, ನೀವು ಹತ್ತಿರದಿಂದ ನೋಡಿದರೆ ಇದು ನಾಗರಿಕರ ಇತರ ಹತ್ಯಾಕಾಂಡಗಳಿಗಿಂತ ಭಿನ್ನವಾಗಿಲ್ಲ ಎಂದು ಹೇಳಿದ್ದಾರೆ.

ನರಮೇಧವನ್ನು ತಡೆಯಬೇಕು. ಅದನ್ನು ಸಂಭವಿಸಲು ಬಿಡಬಾರದು ಆದರೆ ಗಾಝಾದಲ್ಲಿ ಅದನ್ನು ಸಂಭವಿಸಲು ಬಿಡಲಾಗುತ್ತದೆ  ಫ್ರಾನ್ಸೆಸ್ಕಾ ಅಲ್ಬನೀಸ್ ಆಘಾತವನ್ನು ವ್ಯಕ್ತಪಡಿಸಿದ್ದಾರೆ.

ಇದಲ್ಲದೆ ಕಳೆದ 10 ವಾರಗಳಿಂದ ನಡೆಯುತ್ತಿರುವ ಯುದ್ಧದಿಂದಾಗಿ ನಿರಂತರ ಬಾಂಬ್ ದಾಳಿಗಳು ವಾತಾವರಣವನ್ನೇ ಕಲುಷಿತಗೊಳಿಸಿದ್ದು, ಜನರು ಉಸಿರಾಟದ ಸಮಸ್ಯೆಯಿಂದ ಬಳಲುವಂತಾಗಿದೆ. ಹಸಿವು, ಅನಾರೋಗ್ಯದಿಂದ ಜನರು ಬಳಲುತ್ತಿದ್ದಾರೆ. ಚಿಕನ್ಪಾಕ್ಸ್, ದದ್ದುಗಳು, ಮೂತ್ರನಾಳದ ಸೋಂಕುಗಳು, ಮೆನಿಂಜೈಟಿಸ್, ಮಂಪ್ಸ್, ಸ್ಕೇಬೀಸ್, ದಡಾರ ಮತ್ತು ಪುಡ್‌ ಪ್ಯಾಯಿಸನಿಂಗ್‌, ಅತಿಸಾರ, ಕಾಮಾಲೆ ಮತ್ತು ಉಸಿರಾಟದ ಸೋಂಕುಗಳು ಗಾಝಾದಲ್ಲಿ ಹೆಚ್ಚುತ್ತಿದೆ ಎಂದು ಗಾಝಾದ ಆರೋಗ್ಯ ಸಚಿವಾಲಯವು ಮಾಹಿತಿ ನೀಡಿದೆ. ಇದಲ್ಲದೆ ಯುದ್ಧ ಪೀಡಿತ ಭೂಮಿಯಲ್ಲಿ ವಿಶ್ವಸಂಸ್ಥೆಯು ಸಂಭಾವ್ಯ 14 ರೋಗಗಳನ್ನು ಪತ್ತೆಹಚ್ಚಿದೆ.

ಯುದ್ಧದಿಂದಾಗಿ ಗಾಝಾದ ಪ್ರಾಥಮಿಕ ಆರೈಕೆ ಕೇಂದ್ರಗಳಲ್ಲಿ 3ನೇ ಎರಡರಷ್ಟು ಮುಚ್ಚಲಾಗಿದೆ ಎಂದು WHO ಹೇಳಿದೆ. ಗಾಝಾದ 36 ಆಸ್ಪತ್ರೆಗಳಲ್ಲಿ 11 ಭಾಗಶಃ ಮಾತ್ರ ಕಾರ್ಯನಿರ್ವಹಿಸುತ್ತಿವೆ. ಸುಮಾರು 1.3 ಮಿಲಿಯನ್ ಜನರು ನಿರಾಶ್ರಿತರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ. ಪ್ರತಿ 220 ಜನರಿಗೆ ಸರಾಸರಿ ಒಂದು ಶೌಚಾಲಯ ಮತ್ತು ಪ್ರತಿ 4,500ಗೆ ಒಂದು ಮಾತ್ರ ಶವರ್ ಇದೆ ಎನ್ನುವ ಆಘಾತಕಾರಿ ಸತ್ಯವು ಬಹಿರಂಗವಾಗಿದೆ.

ಇದನ್ನು ಓದಿ: ಗಾಝಾದಲ್ಲಿ ನೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದ 136 UN ಸಿಬ್ಬಂದಿಗಳ ಹತ್ಯೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...