Homeಮುಖಪುಟಗಾಝಾ ಮೇಲಿನ ಇಸ್ರೇಲ್ ಆಕ್ರಮಣಕ್ಕೆ 6 ತಿಂಗಳು: 33 ಸಾವಿರ ದಾಟಿದ ಸಾವಿನ ಸಂಖ್ಯೆ

ಗಾಝಾ ಮೇಲಿನ ಇಸ್ರೇಲ್ ಆಕ್ರಮಣಕ್ಕೆ 6 ತಿಂಗಳು: 33 ಸಾವಿರ ದಾಟಿದ ಸಾವಿನ ಸಂಖ್ಯೆ

- Advertisement -
- Advertisement -

ಇಸ್ರೇಲ್-ಹಮಾಸ್ ನಡುವಿನ ಸಂಘರ್ಷ ಪ್ರಾರಂಭಗೊಂಡು ಆರು ತಿಂಗಳು ತುಂಬಿದ್ದು, ಗಾಝಾದಲ್ಲಿ ಸಾವಿನ ಸಂಖ್ಯೆ 33 ಸಾವಿರ ದಾಟಿದೆ ಎಂದು ಅಲ್ಲಿನ ಆರೋಗ್ಯ ಸಚಿವಾಲಯ ತಿಳಿಸಿದೆ.

ಗಾಝಾ ಮೇಲೆ ಇಸ್ರೇಲ್ ಆಕ್ರಮಣ ನಡೆಸಲು ಪ್ರಾರಂಭಿಸಿ ಅರ್ಧ ವರ್ಷ ಪೂರ್ಣಗೊಂಡರೂ, ಯುದ್ದ ನಿಲ್ಲುವ ಯಾವುದೇ ಲಕ್ಷಣ ಗೋಚರಿಸುತ್ತಿಲ್ಲ. ಪ್ರತಿ ದಿನವೂ ಗಾಝಾದಲ್ಲಿ ಕಟ್ಟಡಗಳು ಉರುಳುವುದು ನೂರಾರು ಜನರು ಸಾವನ್ನಪ್ಪುವುದು ಮುಂದುವರೆಯುತ್ತಲೇ ಇದೆ.

ಇಸ್ರೇಲ್ ಸೇನೆ ಹಮಾಸ್ ಹೆಸರೇಳಿಕೊಂಡು ಗಾಝಾದ ಮೇಲೆ ಮನ ಬಂದಂತೆ ಮಿಸೈಲ್ ದಾಳಿ, ಯುದ್ಧ ಟ್ಯಾಂಕರ್‌ಗಳ ಮೂಲಕ ದಾಳಿ, ಕಂಡ ಕಂಡಲ್ಲಿ ಮನುಷ್ಯರನ್ನು ಗುಂಡಿಟ್ಟು ಕೊಲ್ಲುವ ಮೂಲಕ ಅಕ್ಷರಶಃ ನರಕವನ್ನಾಗಿಸಿದೆ.

ಗಾಝಾದ ಲಕ್ಷಾಂತರ ನಾಗರಿಕರು ತಮ್ಮದೆಲ್ಲವನ್ನು ಬಿಟ್ಟು ದೂರದ ಊರುಗಳಿಗೆ ಪಲಾಯಣ ಮಾಡಿದ್ದಾರೆ. ಆದರೆ, ಅಲ್ಲಿಯೂ ಶಿಬಿರಗಳನ್ನು ಗುರಿಯಾಗಿಸಿ ಇಸ್ರೇಲ್ ದಾಳಿ ನಡೆಸುತ್ತಿದೆ. ಉತ್ತರ ಗಾಝಾದಲ್ಲಿ ಲಕ್ಷಾಂತರ ಜನರು ಹಸಿವಿನಿಂದ ನರಳುತ್ತಿದ್ದಾರೆ. ಒಂದೆಡೆ ಬರಗಾಲ ಮತ್ತೊಂದೆಡೆ ಆಹಾರದ ಕೊರತೆ ಜನರನ್ನು ನರಳುವಂತೆ ಮಾಡಿದೆ ಎಂದು ಅಲ್ ಜಝೀರಾ ವರದಿ ಮಾಡಿದೆ.

ಗಾಝಾದ ದಕ್ಷಿಣದ ನಗರದಲ್ಲಿ ಮಕ್ಕಳು, ಮಹಿಳೆಯರು, ವೃದ್ದರೂ ಎನ್ನದೆ ಎಲ್ಲಾ ವರ್ಗದ ಜನರು ಆಹಾರಕ್ಕಾಗಿ ಪಾತ್ರೆ ಹಿಡಿದು ನಿಂತಿರುವ ದೃಶ್ಯಗಳು ಕಾಣುತ್ತಿವೆ. ರಫಾ ನಗರದಲ್ಲಿ ಯಾವುದೇ ಸೌಲಭ್ಯಗಳಿಲ್ಲದ ಟೆಂಟ್‌ಗಳು ತುಂಬಿವೆ. ಗಾಝಾದ ಇತರ ಭಾಗಗಳಲ್ಲಿ ಇಸ್ರೇಲ್‌ನ ಆಕ್ರಮಣದಿಂದ ಪಲಾಯನ ಮಾಡಿದ ಲಕ್ಷಾಂತರ ಪ್ಯಾಲೆಸ್ತೀನಿಯರು ತುಂಬಿದ್ದಾರೆ. ರಫಾ ನಗರದಲ್ಲಿ ನಿರಾಶ್ರಿತ ಆಗಮನದಿಂದ ಜನಸಂಖ್ಯೆ ಸುಮಾರು 1.4 ಮಿಲಿಯನ್‌ಗೆ ತಲುಪಿದೆ. ಇದು ಅಲ್ಲಿನ ಸಾಮಾನ್ಯ ಜನಸಂಖ್ಯೆಗಿಂತ ಐದು ಪಟ್ಟು ಹೆಚ್ಚು ಎಂದು ಹೇಳಲಾಗ್ತಿದೆ.

ಆರು ತಿಂಗಳು ಕಳೆದರೂ ಇನ್ನೂ ಇಸ್ರೇಲ್ ಆಕ್ರಮಣ ಯಾವ ದಿಕ್ಕಿದೆ ಮುಂದುವರೆಯಿಲಿದೆ ಎಂದು ಗೊತ್ತಾಗುತ್ತಿಲ್ಲ. ವಿಶ್ವ ಸಂಸ್ಥೆಯ ಭದ್ರತಾ ಸಮಿತಿ, ಮಾನವ ಹಕ್ಕುಗಳ ಸಮಿತಿಯಲ್ಲಿ ಹಲವು ಬಾರಿ ತಕ್ಷಣ ಕದನ ವಿರಾಮಕ್ಕೆ ನಿರ್ಣಯ ಅಂಗೀಕರಿಸಿದರೂ ಯಾವುದೇ ಪರಿಣಾಮ ಬೀರಿಲ್ಲ. ಹಮಾಸ್ ಮತ್ತು ಇಸ್ರೇಲ್ ನಡುವೆ ಯುಎಸ್‌ಎಸ್‌ಎ, ಈಜಿಪ್ಟ್, ಕತಾರ್ ಮಧ್ಯಸ್ಥಿಕೆ ನಡೆಸಿದರೂ, ಅದೂ ಫಲ ಕೊಟ್ಟಿಲ್ಲ. ಇಸ್ರೇಲ್ ತನ್ನ ಆಕ್ರಮಣವನ್ನು ರಫಾಗೆ ವಿಸ್ತರಿಸಲು ನಿರ್ಧರಿಸಿದೆ ಎಂದು ಅಲ್ಲಿನ ರಕ್ಷಣಾ ಸಚಿವ ಹೇಳಿದ್ದಾರೆ. ಹಾಗೇನಾದರು ಆದರೆ, ಸಾವು-ನೋವುಗಳ ಸಂಖ್ಯೆ ಹೆಚ್ಚಾಗಬಹುದು.

ಅಕ್ಟೋಬರ್ 7, 2023ರಂದು ಪ್ರಾರಂಭಗೊಂಡ ಹಮಾಸ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ 6 ತಿಂಗಳ ಕಳೆದರೂ ಮುಂದುವರೆದಿದೆ. ಈ ಯುದ್ಧದಲ್ಲಿ ಇಸ್ರೇಲ್ ಮತ್ತು ಹಮಾಸ್‌ನ ಎಷ್ಟು ಜನರು ಬಲಿಯಾಗಿದ್ದಾರೆ ಗೊತ್ತಿಲ್ಲ. ಆದರೆ, 30 ಸಾವಿರದಷ್ಟು ಅಮಾಯಕ ನಾಗರಿಕರು ಮಾತ್ರ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.

ಇದನ್ನೂ ಓದಿ : ಇಸ್ರೇಲ್‌ನ ಯಾವುದೇ ರಾಯಭಾರಿ ಕಚೇರಿಗಳು ಇನ್ನು ಸುರಕ್ಷಿತವಾಗಿರಲ್ಲ: ಪ್ರತಿಕಾರದ ಎಚ್ಚರಿಕೆ ನೀಡಿದ ಇರಾನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....