Homeಮುಖಪುಟಇಸ್ರೇಲ್-ಹಮಾಸ್ ಸಂಘರ್ಷ: ಬಿಳಿ ರಂಜಕದ ಬಳಕೆಯ ಬಗ್ಗೆ ಅಂತಾರಾಷ್ಟ್ರೀಯ ಕಾನೂನು ಏನು ಹೇಳುತ್ತದೆ?

ಇಸ್ರೇಲ್-ಹಮಾಸ್ ಸಂಘರ್ಷ: ಬಿಳಿ ರಂಜಕದ ಬಳಕೆಯ ಬಗ್ಗೆ ಅಂತಾರಾಷ್ಟ್ರೀಯ ಕಾನೂನು ಏನು ಹೇಳುತ್ತದೆ?

- Advertisement -
- Advertisement -

ಕಳೆದ ಅಕ್ಟೋಬರ್‌ನಲ್ಲಿ ಲೆಬನಾನ್‌ನ ಹಿಜ್ಬುಲ್ಲಾ ಗುಂಪಿನ ಮೇಲೆ ನಡೆಸಿದ ದಾಳಿಯಲ್ಲಿ ಇಸ್ರೇಲ್‌ ಸೇನೆ ನಿಷೇಧಿತ ಬಿಳಿ ರಂಜಕವನ್ನು ಬಳಸಿದೆ ಎಂದು ಆರೋಪಿಸಲಾಗಿದೆ. ಈ ದಾಳಿಯಲ್ಲಿ ಕನಿಷ್ಠ ಒಂಬತ್ತು ನಾಗರಿಕರು ಗಾಯಗೊಂಡಿದ್ದರು.

ಯುದ್ಧದ ವೇಳೆ ಬಿಳಿ ರಂಜಕ ಬಳಕೆಯ ಕುರಿತು ಯುಎಸ್‌ನ ಜೊ ಬೈಡೆನ್‌ ಆಡಳಿತ ಕಳವಳ ವ್ಯಕ್ತಪಡಿಸಿದೆ. ಆದರೆ, ಲೆಬನಾನ್‌ನಲ್ಲಿ ಬಿಳಿ ರಂಜಕದ ಕಾನೂನುಬಾಹಿರ ಬಳಕೆಯ ಆರೋಪವನ್ನು ಇಸ್ರೇಲ್ ತಿರಸ್ಕರಿಸಿದೆ.

ಹಾಗಾದರೆ, ಏನಿದು ಬಿಳಿ ರಂಜಕ, ಇದರ ಬಳಕೆಯ ಪರಿಣಾಮಗಳೇನು?, ಅಂತಾರಾಷ್ಟ್ರೀಯ ಮಾನವೀಯ ಕಾನೂನು ಬಿಳಿ ರಂಜಕದ ಬಳಕೆಯ ಕುರಿತು ಏನು ಹೇಳುತ್ತದೆ? ಇದರ ಬಳಕೆಯನ್ನು ಯುದ್ಧ ಅಪರಾಧವೆಂದು ಪರಿಗಣಿಸಬಹುದೇ? ಎಂದು ತಿಳಿಯೋಣ. 

ಏನಿದು ಬಿಳಿ ರಂಜಕ?

ಬಿಳಿ ರಂಜಕವು ರಾಸಾಯನಿಕ ಅಂಶಗಳಿಂದ ಕೂಡಿದ್ದು, ಇದು ಗಾಳಿಯ ಸಂಪರ್ಕಕ್ಕೆ ಬಂದರೆ ಉರಿಯುತ್ತದೆ. ಇದು ಸುಮಾರು 1,500 ಡಿಗ್ರಿ ಫ್ಯಾರನ್‌ಹೀಟ್ (815 ಸೆಲ್ಸಿಯಸ್) ನಲ್ಲಿ ಸುಡುತ್ತದೆ. ಇದು ಮನುಷ್ಯರ ಸಂಪರ್ಕಕ್ಕೆ ಬಂದರೆ ಗಂಭೀರವಾದ ಗಾಯ ಮತ್ತು ಸಾವಿಗೆ ಕಾರಣವಾಗುತ್ತದೆ.

ಬಿಳಿ ರಂಜಕವನ್ನು ಫೆನಿಯನ್ (ಐರಿಶ್ ರಾಷ್ಟ್ರೀಯತಾವಾದಿ) ಅಗ್ನಿಶಾಮಕವಾದಿಗಳು 19 ನೇ ಶತಮಾನದಲ್ಲಿ “ಫೆನಿಯನ್ ಫೈರ್” ಎಂದು ಕರೆಯಲ್ಪಡುವ ಸೂತ್ರೀಕರಣದಲ್ಲಿ ಬಳಸಿದರು. ರಂಜಕವು ಕಾರ್ಬನ್ ಡೈಸಲ್ಫೈಡ್‌ನ ದ್ರಾವಣದಲ್ಲಿರುತ್ತದೆ. ಕಾರ್ಬನ್ ಡೈಸಲ್ಫೈಡ್ ಆವಿಯಾದಾಗ ರಂಜಕವು ಜ್ವಾಲೆಯಾಗಿ ಸಿಡಿಯುತ್ತದೆ.

ಬಿಳಿ ರಂಜಕ ಮತ್ತು ನೇಪಾಮ್‌ನಂತಹ ಬೆಂಕಿ ಉಗುಳುವ ರಾಸಾಯನಿಕಗಳು ಮಾನವ ದೇಹದ ಮೇಲೆ ಗಂಭೀರ ಪರಿಣಾಮ ಬೀರುವುದರಿಂದ ಪ್ರಸಕ್ತ ಸಶಸ್ತ್ರ ಸಂಘರ್ಷಗಳಲ್ಲಿ ಅವುಗಳನ್ನು ಬಳಸುವ ಅತ್ಯಂತ ಕ್ರೂರ ಆಯುಧಗಳ ಬಳಕೆ ಎಂದು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನು ಪರಿಗಣಿಸಿದೆ.

ಮಾನವ ಹಕ್ಕುಗಳ ಸಂಶೋಧಕರೊಬ್ಬರು “ದಹನಕಾರಿ ಆಯುಧಗಳು ಜನರನ್ನು ಬೆಂಕಿಯಿಂದ ಸುಡುವ ಆಯುಧಗಳಾಗಿವೆ” ಎಂದಿದ್ದು, ಬಿಳಿ ರಂಜಕದಂತಹ ವಸ್ತುಗಳ ಬಳಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಯಾವಾಗ ಬಿಳಿ ರಂಜಕ ಬಳಸಬಹುದು?

ಯುದ್ದದ ಸಂದರ್ಭಗಳಲ್ಲಿ ನೆಲದ ಮೇಲೆ ಸೈನ್ಯದ ಚಲನೆಯನ್ನು ಮರೆಮಾಚಲು, ಯುದ್ಧಭೂಮಿಯನ್ನು ಬೆಳಗಿಸಲು ಅಥವಾ ಸಂಕೇತ ಸಾಧನವಾಗಿ, ಹೊಗೆ ಪರದೆಯಾಗಿ ಬಿಳಿ ರಂಜಕವನ್ನು ಬಳಸಬಹುದು. ಶತ್ರುಗಳನ್ನು ದಿಕ್ಕು ತಪ್ಪಿಸಲು ಮಾತ್ರ ಇದನ್ನು ಬಳಸಬಹುದು.

ಬೆಂಕಿ ಉಗುಳುವ ಆಯುಧಗಳಾದ ಮಾರ್ಟರ್ ಬಾಂಬ್‌, ರಾಕೆಟ್‌ ಮತ್ತು ಫಿರಂಗಿ ಮದ್ದುಗುಂಡುಗಳಲ್ಲಿ ಆಕ್ರಮಣಕಾರಿಯಾಗಿ ಕೂಡ ಇದನ್ನು ಬಳಸಬಹುದು. ಬಿಳಿ ರಂಜಕವನ್ನು ಒಂದನೇ ಮತ್ತು ಎರಡನೆಯ ಮಹಾಯುದ್ಧಗಳಲ್ಲಿ ಶತ್ರು ಸೈನಿಕರು ಮತ್ತು ನಾಗರಿಕರನ್ನು ಸಮಾನವಾಗಿ ಗುರಿಯಾಗಿಸಿಕೊಂಡು ಅನೇಕರು ಬಳಸಿದ್ದರು.

ವಿಯೆಟ್ನಾಂ ಯುದ್ಧದಲ್ಲಿ, ಇರಾಕ್‌ನಲ್ಲಿ 2004 ರಲ್ಲಿ ಫಲ್ಲುಜಾಹ್ ಯುದ್ಧದ ಸಮಯದಲ್ಲಿ, ಸಿರಿಯಾ ಮತ್ತು ಇರಾಕ್ ಎರಡೂ ಇಸ್ಲಾಮಿಕ್ ರಾಷ್ಟ್ರಗಳ ವಿರುದ್ಧ ನೇಪಾಮ್ ಜೊತೆಗೆ ಬಿಳಿ ರಂಜಕವನ್ನು ಯುಎಸ್ ಬಳಸಿತ್ತು. ಉಕ್ರೇನ್ ಮತ್ತು ಸಿರಿಯಾ ಎರಡರಲ್ಲೂ ನಾಗರಿಕರು ಮತ್ತು ಹೋರಾಟಗಾರರ ವಿರುದ್ಧ ವಿವೇಚನೆಯಿಲ್ಲದೆ ಬಿಳಿ ರಂಜಕವನ್ನು ಬಳಸುತ್ತಿರುವ ಆರೋಪವನ್ನು ರಷ್ಯಾ ಹೊಂದಿದೆ.

2008-09 ರಲ್ಲಿ ಗಾಜಾದಲ್ಲಿ ಹಮಾಸ್ ವಿರುದ್ಧ ಇಸ್ರೇಲ್ ಬಿಳಿ ರಂಜಕವನ್ನು ಬಳಸಿದ್ದನ್ನು ಮಾನವ ಹಕ್ಕುಗಳ ಒಕ್ಕೂಟ ವಿರೋಧಿಸಿತ್ತು. ಇದು ಸಂಭಾವ್ಯ ಯುದ್ಧ ಅಪರಾಧಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿತ್ತು.

ಇದರಿಂದ ಎಚ್ಚೆತ್ತಗೊಂಡ ಇಸ್ರೇಲಿ ರಕ್ಷಣಾ ಪಡೆಗಳು 2013 ರಲ್ಲಿ ಯುದ್ಧಭೂಮಿಯಲ್ಲಿ ಬಿಳಿ ರಂಜಕವನ್ನು ಬಳಸುವುದನ್ನು ನಿಲ್ಲಿಸುವುದಾಗಿ ಪ್ರತಿಜ್ಞೆ ಮಾಡಿತ್ತು. ಬದಲಿಗೆ ಅನಿಲ ಆಧಾರಿತ ಹೊಗೆ ಚಿಪ್ಪುಗಳನ್ನು ಬಳುಸುವುದಾಗಿ ಹೇಳಿತ್ತು.

ಅಂತಾರಾಷ್ಟ್ರೀಯ ಕಾನೂನು ಏನು ಹೇಳುತ್ತದೆ?

ಬೆಂಕಿಯಿಡುವ ಆಯುಧಗಳು 1980ರ ಸಾಂಪ್ರದಾಯಿಕ ಶಸ್ತ್ರಾಸ್ತ್ರಗಳ ಒಪ್ಪಂದದ ಅಡಿಯಲ್ಲಿ ಬರುತ್ತವೆ. ಈ ಒಪ್ಪಂದವು ನಿರ್ದಿಷ್ಟವಾಗಿ ಅಪಾಯಕಾರಿ ಎಂದು ಪರಿಗಣಿಸಲಾದ ಕೆಲವು ಶಸ್ತ್ರಾಸ್ತ್ರಗಳ ಬಳಕೆಯನ್ನು ಸೀಮಿತಗೊಳಿಸುವ ಮೂಲಕ ನಾಗರಿಕರನ್ನು ರಕ್ಷಿಸುವ ಗುರಿಯನ್ನು ಹೊಂದಿದೆ.

ಅಂತಾರಾಷ್ಟ್ರೀಯ ಕಾನೂನು ಮತ್ತು ಸಶಸ್ತ್ರ ಸಂಘರ್ಷದ ಕಾನೂನಿನಡಿಯಲ್ಲಿ ಬಿಳಿ ರಂಜಕವನ್ನು ರಕ್ಷಣಾತ್ಮಕವಾಗಿ ಹೊಗೆ ಪರದೆಯಂತೆ ಅಥವಾ ಯುದ್ಧಭೂಮಿಯ ಪ್ರಕಾಶವಾಗಿ ಬಳಸುವುದು ಅಪರಾಧವಲ್ಲ.

ನಾಗರಿಕರ ವಿರುದ್ಧ ನೇರವಾಗಿ ಬೆಂಕಿಯಿಡುವ ಆಯುಧಗಳ ಉದ್ದೇಶಿತ ಬಳಕೆ ಕಾನೂನುಬಾಹಿರವಾಗಿದೆ. ಇದನ್ನು ಯುದ್ಧ ಅಪರಾಧವೆಂದು ಪರಿಗಣಿಸಬಹುದು. ನಾಗರಿಕ ಪ್ರದೇಶದಲ್ಲಿರುವ ಮಿಲಿಟರಿಯನ್ನು ಗುರಿಯಾಗಿಸಿ ಬೆಂಕಿಯಿಡುವ ಆಯುಧಗಳ (ವಿಮಾನದಿಂದ ಬೀಳಿಸಿದ ಬಿಳಿ ರಂಜಕ) ಬಳಕೆಯನ್ನು ಸಹ ನಿಷೇಧಿಸಲಾಗಿದೆ.

ಹಾಗಾಗಿ, ಬಿಳಿ ರಂಜಕದ ಬಳಕೆ ಮಾಡದೆ, ನಾಗರಿಕರ ಸುರಕ್ಷತೆಯನ್ನು ಖಾತ್ರಿಪಡಿಸಿಕೊಂಡು ಹಮಾಸ್ ಮತ್ತು ಹಿಜ್ಬುಲ್ಲಾವನ್ನು ಇಸ್ರೇಲ್ ಗುರಿಯಾಗಿಸಬಹುದು.

ಇಸ್ರೇಲ್ ಮೇಲಿನ ಗಂಭೀರ ಅರೋಪವೇನು?

ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆ ಅಮ್ನೆಸ್ಟಿ ಇಂಟರ್‌ನ್ಯಾಶನಲ್, ಅಕ್ಟೋಬರ್‌ನಲ್ಲಿ ಲೆಬನಾನಿನ ಪಟ್ಟಣವಾದ ಧೀರಾ ಮೇಲೆ ಇಸ್ರೇಲ್ ಬಿಳಿ ರಂಜಕವನ್ನು ಪ್ರಯೋಗಿಸಿದೆ ಎಂದು ಸೂಚಿಸುವ ಪುರಾವೆಗಳನ್ನು ಸಂಗ್ರಹಿಸಿದೆ. ಧೀರಾ ಪಟ್ಟಣದ ನಾಗರಿಕರ ಮೇಲೆ ಇಸ್ರೇಲ್ ಕಾನೂನು ಬಾಹಿರವಾಗಿ ಬಿಳಿರಂಜಕ ಬಳಸಿದೆ ಎಂದು ವಾಷಿಂಗ್ಟನ್ ಪೋಸ್ಟ್‌ಗೆ ಆಮ್ನೆಸ್ಟಿ ತಿಳಿಸಿದೆ.

ಆಮ್ನೆಸ್ಟಿ ಆರೋಪದಂತೆ ಇಸ್ರೇಲ್ ಲೆಬನಾನ್ ಪಟ್ಟಣದ ಮೇಲೆ ಬಿಳಿ ರಂಜಕ ಬಳಸಿದೆಯಾ? ಬಳಿಸಿದ್ದರೆ ಅಂತಾರಾಷ್ಟ್ರೀಯ ಕಾನೂನನ್ನು ಅನುಸಿರಿಸಿದೆಯಾ? ಎಂಬುವುದು ನಿಖರವಾಗಿ ತಿಳಿಯಲು ಸೂಕ್ತ ತನಿಖೆಯ ಅಗತ್ಯವಿದೆ.

ಇಸ್ರೇಲ್ ಒಂದು ವೇಳೆ ನಾಗರಿಕರ ಮೇಲೆ ಬಿಳಿ ರಂಜಕ ಪ್ರಯೋಗಿಸಿದ್ದರೆ, ಅದು 1949 ರ ಜಿನೀವಾ ಒಪ್ಪಂದ ಅಡಿಯಲ್ಲಿ ಯುದ್ದಪರಾಧವಾಗಿದೆ. ಈ ಕುರಿತು ಅಂತರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ ತನಿಖೆ ನಡೆಸಬೇಕಿದೆ. ಆದರೆ, ಇದು ಅಸಾಧ್ಯದ ಮಾತಾಗಿದೆ. ಏಕೆಂದರೆ. ಇಸ್ರೇಲ್ ಅಂತಾರಾಷ್ಟ್ರೀಯ ಕ್ರಿಮಿನಿನಲ್ ಕೋರ್ಟ್‌ ವ್ಯಾಪ್ತಿಗೆ ಬರುವುದಿಲ್ಲ. ಹಮಾಸ್ ಮತ್ತು ಹಿಜ್ಬುಲ್ಲಾ ರಾಜ್ಯೇತರ ಸಂಘಟನೆಗಳಾಗಿವೆ.

ಇದನ್ನೂ ಓದಿ: ಗಾಝಾದಲ್ಲಿ ಕದನ ವಿರಾಮ: ವಿಶ್ವಸಂಸ್ಥೆ ನಿರ್ಣಯ ಬೆಂಬಲಿಸಿದ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...