Homeಅಂತರಾಷ್ಟ್ರೀಯ2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ 'ನರಮೇಧ' ಎಂದ ವರದಿ

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

- Advertisement -
- Advertisement -

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ.

ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ 20,000ಕ್ಕೂ ಹೆಚ್ಚು ಮಕ್ಕಳನ್ನು ಹತ್ಯೆ ಮಾಡಿದ್ದು, 44,000ಕ್ಕೂ ಹೆಚ್ಚು ಮಕ್ಕಳನ್ನು ಗಾಯಗೊಳಿಸಿವೆ ಎಂದು ಆಯೋಗ ವಿವರಿಸಿದೆ.

ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನಿನ ಉಲ್ಲಂಘನೆಗಳ ಬಗ್ಗೆ ತನಿಖೆ ನಡೆಸಲು 2021ರಲ್ಲಿ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಿಂದ ಸ್ಥಾಪಿಸಲ್ಪಟ್ಟ ಆಯೋಗ ತನ್ನ ವರದಿಯಲ್ಲಿ, ಇಸ್ರೇಲ್ ಮತ್ತು ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶಗಳಲ್ಲಿ ನಡೆದ ಮಿಲಿಟರಿ ಕಾರ್ಯಾಚರಣೆಗಳ ಪ್ರಮಾಣ ಮತ್ತು ಸ್ವರೂಪವು “ಪ್ಯಾಲೆಸ್ತೀನ್ ಮಕ್ಕಳ ದೊಡ್ಡ ಮಟ್ಟದ ಸಾವು, ಗಾಯ ಮತ್ತು ಆಘಾತಕ್ಕೆ” ಕಾರಣವಾಗಿದೆ ಎಂದು ಹೇಳಿದೆ.

ಅಕ್ಟೋಬರ್ 2025ರ ಕದನ ವಿರಾಮದ ನಂತರವೂ ಮಕ್ಕಳು ಕೊಲ್ಲಲ್ಪಡುತ್ತಿದ್ದಾರೆ ಮತ್ತು ತೀವ್ರವಾಗಿ ಗಾಯಗೊಳ್ಳುತ್ತಿದ್ದಾರೆ. ಇಸ್ರೇಲ್ ಕದನ ವಿರಾಮವನ್ನು ಮತ್ತು ಅಂತಾರಾಷ್ಟ್ರೀಯ ಕಾನೂನಿನಡಿ ಪ್ಯಾಲೆಸ್ತೀನ್ ಮಕ್ಕಳಿಗೆ ನೀಡಬೇಕಾದ ರಕ್ಷಣೆಯನ್ನು ನಿರಂತರವಾಗಿ ನಿರ್ಲಕ್ಷಿಸುತ್ತಿದೆ ಎಂದು ಆಯೋಗದ ಅಧ್ಯಕ್ಷರಾದ ಶ್ರೀನಿವಾಸನ್ ಮುರಳಿಧರ್ ತಿಳಿಸಿದ್ದಾರೆ.

ಪ್ಯಾಲೆಸ್ತೀನ್ ಮಕ್ಕಳನ್ನು ಬಂಧಿಸಿ, ಬಂಧನ ಕೇಂದ್ರಗಳಲ್ಲಿ ಚಿತ್ರಹಿಂಸೆ ಮತ್ತು ಇತರ ರೀತಿಯ ದುರ್ನಡತೆಗೆ ಒಳಪಡಿಸಲಾಗಿದೆ ಎಂದು ಆಯೋಗ ಪತ್ತೆಹಚ್ಚಿದೆ. ಅಲ್ಲದೆ, ಬಂಧನದಲ್ಲಿರುವ ಕೆಲವು ವ್ಯಕ್ತಿಗಳು ಎಲ್ಲಿದ್ದಾರೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಅದು ತಿಳಿಸಿದೆ.

ಇಸ್ರೇಲಿ ಆಕ್ರಮಣ ಮತ್ತು ಹಗೆತನದ ದೀರ್ಘಕಾಲದ, ಜನಾಂಗೀಯ, ಲಿಂಗ ಆಧಾರಿತ ಮತ್ತು ತಲೆಮಾರುಗಳ ನಡುವಿನ ಸ್ವರೂಪದಲ್ಲಿ ಬೇರೂರಿರುವ “ಸಾಮೂಹಿಕ ಅವಮಾನ ಮತ್ತು ದಬ್ಬಾಳಿಕೆಯ” ಭಾಗವಾಗಿ ಮಕ್ಕಳ ವಿರುದ್ಧ ಲೈಂಗಿಕ ದೌರ್ಜನ್ಯವನ್ನು ಬಳಸಲಾಗಿದೆ ಎಂದೂ ಸಹ ಆಯೋಗ ಆರೋಪಿಸಿದೆ.

ನವಜಾತ ಶಿಶುಗಳು ಮತ್ತು ಹೆರಿಗೆ ಆರೈಕೆ ಕೇಂದ್ರಗಳಿಗೆ ಉಂಟಾದ ಹಾನಿಯು ನವಜಾತ ಶಿಶುಗಳ ಬದುಕುಳಿಯುವಿಕೆ ಮತ್ತು ಸಂತಾನೋತ್ಪತ್ತಿ ಆರೋಗ್ಯದ ಮೇಲೆ ದೊಡ್ಡ ಪರಿಣಾಮ ಬೀರಿದೆ. ಅದೇ ಸಮಯದಲ್ಲಿ, ಇಸ್ರೇಲ್ ವಿಧಿಸಿದ ದಿಗ್ಬಂಧನ ಮತ್ತು ಮುತ್ತಿಗೆಯಿಂದ ಉಂಟಾದ ಹಸಿವು ಮಕ್ಕಳ ಸಾವುಗಳಿಗೆ ಮತ್ತು ಆರೋಗ್ಯ ಪರಿಸ್ಥಿತಿಗಳು ಕ್ಷೀಣಿಸಲು ಕಾರಣವಾಗಿದೆ ಎಂದು ಆಯೋಗವು ತಿಳಿಸಿದೆ.

ಗಾಝಾ ಮತ್ತು ಪಶ್ಚಿಮ ದಂಡೆಯ ಅನಾಥಾಶ್ರಮಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ಧ್ವಂಸಗೊಳಿಸಲಾಗಿದೆ ಅಥವಾ ನಾಶಪಡಿಸಲಾಗಿದೆ, ಇದು ಮಕ್ಕಳ ಬೆಳವಣಿಗೆ ಮತ್ತು ಆರೈಕೆಯ ಲಭ್ಯತೆಗೆ ಅಡ್ಡಿಪಡಿಸಿದೆ ಎಂದು ಆಯೋಗ ಹೇಳಿದೆ.

ಮಕ್ಕಳಲ್ಲಿ ಮಾನಸಿಕ ಹಾನಿ ವ್ಯಾಪಕವಾಗಿದೆ ಮತ್ತು ದೀರ್ಘಕಾಲದವರೆಗೆ ಇರುತ್ತದೆ ಎಂದು ತಿಳಿಸಿದ ಆಯೋಗವು, ಇದನ್ನು “ಆಕ್ರಮಿತ ಮನಸ್ಸು” (occupied psyche) ಎಂದು ಬಣ್ಣಿಸಿದೆ. ಇದರಲ್ಲಿ ಮಕ್ಕಳು ಆಟವಾಡುವ, ಕಲ್ಪಿಸಿಕೊಳ್ಳುವ, ಭರವಸೆ ಹೊಂದುವ ಮತ್ತು ತಮ್ಮದೇ ಆದ ಗುರುತನ್ನು ಬೆಳೆಸಿಕೊಳ್ಳುವ ಸ್ವಾತಂತ್ರ್ಯದಿಂದ ವಂಚಿತರಾಗಿದ್ದಾರೆ ಎಂದು ತಿಳಿಸಿದೆ.

“ಗಾಝಾ ಮತ್ತು ಪಶ್ಚಿಮ ದಂಡೆಯಲ್ಲಿ ಬಾಂಬ್‌ಗಳು ಮತ್ತು ಬಂದೂಕುಗಳು ಶಾಂತವಾದರೂ, ಪ್ಯಾಲೆಸ್ತೀನ್ ಮಕ್ಕಳು ಒಂದೇ ರಾತ್ರಿಯಲ್ಲಿ ಚೇತರಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಮುರಳಿಧರ್ ಹೇಳಿದ್ದಾರೆ. ಅವರ ಆರೋಗ್ಯ, ಶಿಕ್ಷಣ ಮತ್ತು ಬೆಳವಣಿಗೆಗೆ ಉಂಟಾಗಿರುವ ನಾಶವು ಸರಿಪಡಿಸಲಾಗದಂಥದ್ದಾಗಿದೆ ಎಂದಿದ್ದಾರೆ.

ಅಲ್ಲದೆ, ಮಕ್ಕಳನ್ನು ಗುರಿಯಾಗಿಸುವುದು ಪ್ಯಾಲೆಸ್ತೀನ್ ಸಮಾಜದ ಜನಸಂಖ್ಯಾ ಮತ್ತು ಸಾಮಾಜಿಕ ಅಡಿಪಾಯಗಳು ಸೇರಿದಂತೆ ಅದರ ಒಟ್ಟಾರೆ ರಚನೆ ಮತ್ತು ಭವಿಷ್ಯಕ್ಕೆ ಧಕ್ಕೆ ತರುತ್ತದೆ ಎಂದು ತಿಳಿಸಿದ್ದಾರೆ. “ಮಕ್ಕಳನ್ನು ಗುರಿಯಾಗಿಸುವ ಮೂಲಕ, ಇಸ್ರೇಲ್ ಪ್ಯಾಲೆಸ್ತೀನ್ ಜನರ ಅಸ್ತಿತ್ವದ ಸಾಮರ್ಥ್ಯ ಮತ್ತು ಅವರ ಭವಿಷ್ಯವನ್ನು ನಿರ್ಧರಿಸುವ ಹಕ್ಕಿನ ಮೇಲೆಯೇ ದಾಳಿ ಮಾಡುತ್ತಿದೆ” ಎಂದು ಅವರು ಹೇಳಿದ್ದಾರೆ.

ಅಂತಾರಾಷ್ಟ್ರೀಯ ನ್ಯಾಯಾಲಯದ ಸಲಹಾ ಅಭಿಪ್ರಾಯಕ್ಕೆ ಅನುಗುಣವಾಗಿ, ಪ್ಯಾಲೆಸ್ತೀನ್ ಮಕ್ಕಳಿಗೆ ಹಾನಿ ಮಾಡುವ ಉಲ್ಲಂಘನೆಗಳನ್ನು ನಿಲ್ಲಿಸುವಂತೆ ಮತ್ತು ಪೂರ್ವ ಜೆರುಸಲೆಮ್ ಸೇರಿದಂತೆ ಆಕ್ರಮಿತ ಪಶ್ಚಿಮ ದಂಡೆ ತನ್ನ ಉಪಸ್ಥಿತಿಯನ್ನು ಕೊನೆಗೊಳಿಸುವಂತೆ ಆಯೋಗವು ಇಸ್ರೇಲ್‌ ಅನ್ನು ಒತ್ತಾಯಿಸಿದೆ.  

ಅಲ್ಲದೆ, ಆರೋಪಿತ ಅಪರಾಧಗಳಿಗೆ ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳುವಂತೆ ಅದು ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳಿಗೆ ಕರೆ ನೀಡಿದೆ.

ಇಸ್ರೇಲ್ ವರದಿಯನ್ನು ತಿರಸ್ಕರಿಸಿದೆ. ವರದಿಯನ್ನು ಒಂದು “ಪ್ರಚಾರದ ತುಣುಕು” (propaganda piece) ಎಂದು ಬಣ್ಣಿಸಿದೆ.

“ಆಯೋಗ ಸತ್ಯವನ್ನು ಹುಡುಕುವ ಬದಲು, ಇಸ್ರೇಲ್ ಅನ್ನು ಮಾತ್ರ ಪ್ರತ್ಯೇಕಿಸಿ ನಿಂದಿಸುವ ಉದ್ದೇಶವನ್ನು ಹೊಂದಿರುವ “ಮೂಲಭೂತವಾಗಿ ದೋಷಪೂರಿತವಾದ ವ್ಯವಸ್ಥೆ” ಎಂದು ಇಸ್ರೇಲ್ ವಿದೇಶಾಂಗ ಸಚಿವಾಲಯ ಟೀಕಿಸಿದೆ.

“ಪ್ಯಾಲೆಸ್ತೀನ್ ಉಗ್ರಗಾಮಿ ಸಂಘಟನೆಯಾದ ಹಮಾಸ್‌ನಿಂದ ಕೊಲ್ಲಲ್ಪಟ್ಟ ಅಥವಾ ಅಪಹರಣಕ್ಕೊಳಗಾದ ಇಸ್ರೇಲಿ ಮಕ್ಕಳನ್ನು ಈ ವರದಿಯು ನಿರ್ಲಕ್ಷಿಸಿದೆ ಎಂದು ಅದು ಹೇಳಿದೆ ಮತ್ತು ವಿಶ್ವಾಸಾರ್ಹ ಪರಿಶೀಲನಾ ವಿಧಾನಗಳ ಕೊರತೆಯನ್ನು ಹೊಂದಿದೆ ಎಂದು ಆಯೋಗದ ಮೇಲೆ ಆರೋಪ ಮಾಡಿದೆ. “ಇಸ್ರೇಲ್ ಈ ಮಾನಹಾನಿಕರ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸುತ್ತದೆ” ಎಂದು ಹೇಳಿದೆ.

ದಕ್ಷಿಣ ಇಸ್ರೇಲ್ ಮೇಲೆ ಹಮಾಸ್ ದಾಳಿ ನಡೆಸಿ 1,200 ಜನರನ್ನು ಕೊಂದು, ಒತ್ತೆಯಾಳುಗಳನ್ನು ಕರೆದೊಯ್ದ ನಂತರ, ಅಕ್ಟೋಬರ್ 2023ರಲ್ಲಿ ಗಾಝಾದಲ್ಲಿ ಇಸ್ರೇಲ್‌ನ ಮಿಲಿಟರಿ ಕಾರ್ಯಾಚರಣೆ ಪ್ರಾರಂಭವಾಯಿತು. ಅಂದಿನಿಂದ ಇಸ್ರೇಲ್ ಗಾಝಾದ ಮೇಲೆ ಭೀಕರ ವೈಮಾನಿಕ ಮತ್ತು ಭೂಪ್ರದೇಶದ ದಾಳಿಗಳನ್ನು ನಡೆಸುತ್ತಿದ್ದು, 75,000ಕ್ಕೂ ಹೆಚ್ಚು ಜನರನ್ನು ಹತ್ಯೆ ಮಾಡಿದೆ.

ಸೆಪ್ಟೆಂಬರ್‌ನಲ್ಲಿ, ವಿಶ್ವಸಂಸ್ಥೆಯ ವಿಚಾರಣಾ ಆಯೋಗವು ಗಾಝಾದಲ್ಲಿ ಪ್ಯಾಲೆಸ್ತೀನಿಯರ ವಿರುದ್ಧ ಇಸ್ರೇಲ್ ನರಮೇಧ ಎಸಗಿದೆ ಎಂದು ಹೇಳಿತ್ತು. ಇಸ್ರೇಲ್ ವಿದೇಶಾಂಗ ಸಚಿವಾಲಯವು ಆ ವರದಿಯನ್ನೂ ‘ವಿಕೃತ ಮತ್ತು ಸುಳ್ಳು’ ಎಂದು ಬಣ್ಣಿಸಿ ತಿರಸ್ಕರಿಸಿತ್ತು.

ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ನವೆಂಬರ್ 2024ರಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ವಿರುದ್ಧ ಗಾಝಾದಲ್ಲಿ ಯುದ್ಧ ಅಪರಾಧಗಳನ್ನು ಎಸಗಿದ್ದಾರೆ ಎಂದು ಆರೋಪಿಸಿ ಬಂಧನ ವಾರಂಟ್ ಹೊರಡಿಸಿತ್ತು. 






ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...