Homeಅಂತರಾಷ್ಟ್ರೀಯ2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ 'ನರಮೇಧ' ಎಂದ ವರದಿ

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

- Advertisement -
- Advertisement -

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ.

ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ 20,000ಕ್ಕೂ ಹೆಚ್ಚು ಮಕ್ಕಳನ್ನು ಹತ್ಯೆ ಮಾಡಿದ್ದು, 44,000ಕ್ಕೂ ಹೆಚ್ಚು ಮಕ್ಕಳನ್ನು ಗಾಯಗೊಳಿಸಿವೆ ಎಂದು ಆಯೋಗ ವಿವರಿಸಿದೆ.

ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನಿನ ಉಲ್ಲಂಘನೆಗಳ ಬಗ್ಗೆ ತನಿಖೆ ನಡೆಸಲು 2021ರಲ್ಲಿ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಿಂದ ಸ್ಥಾಪಿಸಲ್ಪಟ್ಟ ಆಯೋಗ ತನ್ನ ವರದಿಯಲ್ಲಿ, ಇಸ್ರೇಲ್ ಮತ್ತು ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶಗಳಲ್ಲಿ ನಡೆದ ಮಿಲಿಟರಿ ಕಾರ್ಯಾಚರಣೆಗಳ ಪ್ರಮಾಣ ಮತ್ತು ಸ್ವರೂಪವು “ಪ್ಯಾಲೆಸ್ತೀನ್ ಮಕ್ಕಳ ದೊಡ್ಡ ಮಟ್ಟದ ಸಾವು, ಗಾಯ ಮತ್ತು ಆಘಾತಕ್ಕೆ” ಕಾರಣವಾಗಿದೆ ಎಂದು ಹೇಳಿದೆ.

ಅಕ್ಟೋಬರ್ 2025ರ ಕದನ ವಿರಾಮದ ನಂತರವೂ ಮಕ್ಕಳು ಕೊಲ್ಲಲ್ಪಡುತ್ತಿದ್ದಾರೆ ಮತ್ತು ತೀವ್ರವಾಗಿ ಗಾಯಗೊಳ್ಳುತ್ತಿದ್ದಾರೆ. ಇಸ್ರೇಲ್ ಕದನ ವಿರಾಮವನ್ನು ಮತ್ತು ಅಂತಾರಾಷ್ಟ್ರೀಯ ಕಾನೂನಿನಡಿ ಪ್ಯಾಲೆಸ್ತೀನ್ ಮಕ್ಕಳಿಗೆ ನೀಡಬೇಕಾದ ರಕ್ಷಣೆಯನ್ನು ನಿರಂತರವಾಗಿ ನಿರ್ಲಕ್ಷಿಸುತ್ತಿದೆ ಎಂದು ಆಯೋಗದ ಅಧ್ಯಕ್ಷರಾದ ಶ್ರೀನಿವಾಸನ್ ಮುರಳಿಧರ್ ತಿಳಿಸಿದ್ದಾರೆ.

ಪ್ಯಾಲೆಸ್ತೀನ್ ಮಕ್ಕಳನ್ನು ಬಂಧಿಸಿ, ಬಂಧನ ಕೇಂದ್ರಗಳಲ್ಲಿ ಚಿತ್ರಹಿಂಸೆ ಮತ್ತು ಇತರ ರೀತಿಯ ದುರ್ನಡತೆಗೆ ಒಳಪಡಿಸಲಾಗಿದೆ ಎಂದು ಆಯೋಗ ಪತ್ತೆಹಚ್ಚಿದೆ. ಅಲ್ಲದೆ, ಬಂಧನದಲ್ಲಿರುವ ಕೆಲವು ವ್ಯಕ್ತಿಗಳು ಎಲ್ಲಿದ್ದಾರೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಅದು ತಿಳಿಸಿದೆ.

ಇಸ್ರೇಲಿ ಆಕ್ರಮಣ ಮತ್ತು ಹಗೆತನದ ದೀರ್ಘಕಾಲದ, ಜನಾಂಗೀಯ, ಲಿಂಗ ಆಧಾರಿತ ಮತ್ತು ತಲೆಮಾರುಗಳ ನಡುವಿನ ಸ್ವರೂಪದಲ್ಲಿ ಬೇರೂರಿರುವ “ಸಾಮೂಹಿಕ ಅವಮಾನ ಮತ್ತು ದಬ್ಬಾಳಿಕೆಯ” ಭಾಗವಾಗಿ ಮಕ್ಕಳ ವಿರುದ್ಧ ಲೈಂಗಿಕ ದೌರ್ಜನ್ಯವನ್ನು ಬಳಸಲಾಗಿದೆ ಎಂದೂ ಸಹ ಆಯೋಗ ಆರೋಪಿಸಿದೆ.

ನವಜಾತ ಶಿಶುಗಳು ಮತ್ತು ಹೆರಿಗೆ ಆರೈಕೆ ಕೇಂದ್ರಗಳಿಗೆ ಉಂಟಾದ ಹಾನಿಯು ನವಜಾತ ಶಿಶುಗಳ ಬದುಕುಳಿಯುವಿಕೆ ಮತ್ತು ಸಂತಾನೋತ್ಪತ್ತಿ ಆರೋಗ್ಯದ ಮೇಲೆ ದೊಡ್ಡ ಪರಿಣಾಮ ಬೀರಿದೆ. ಅದೇ ಸಮಯದಲ್ಲಿ, ಇಸ್ರೇಲ್ ವಿಧಿಸಿದ ದಿಗ್ಬಂಧನ ಮತ್ತು ಮುತ್ತಿಗೆಯಿಂದ ಉಂಟಾದ ಹಸಿವು ಮಕ್ಕಳ ಸಾವುಗಳಿಗೆ ಮತ್ತು ಆರೋಗ್ಯ ಪರಿಸ್ಥಿತಿಗಳು ಕ್ಷೀಣಿಸಲು ಕಾರಣವಾಗಿದೆ ಎಂದು ಆಯೋಗವು ತಿಳಿಸಿದೆ.

ಗಾಝಾ ಮತ್ತು ಪಶ್ಚಿಮ ದಂಡೆಯ ಅನಾಥಾಶ್ರಮಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ಧ್ವಂಸಗೊಳಿಸಲಾಗಿದೆ ಅಥವಾ ನಾಶಪಡಿಸಲಾಗಿದೆ, ಇದು ಮಕ್ಕಳ ಬೆಳವಣಿಗೆ ಮತ್ತು ಆರೈಕೆಯ ಲಭ್ಯತೆಗೆ ಅಡ್ಡಿಪಡಿಸಿದೆ ಎಂದು ಆಯೋಗ ಹೇಳಿದೆ.

ಮಕ್ಕಳಲ್ಲಿ ಮಾನಸಿಕ ಹಾನಿ ವ್ಯಾಪಕವಾಗಿದೆ ಮತ್ತು ದೀರ್ಘಕಾಲದವರೆಗೆ ಇರುತ್ತದೆ ಎಂದು ತಿಳಿಸಿದ ಆಯೋಗವು, ಇದನ್ನು “ಆಕ್ರಮಿತ ಮನಸ್ಸು” (occupied psyche) ಎಂದು ಬಣ್ಣಿಸಿದೆ. ಇದರಲ್ಲಿ ಮಕ್ಕಳು ಆಟವಾಡುವ, ಕಲ್ಪಿಸಿಕೊಳ್ಳುವ, ಭರವಸೆ ಹೊಂದುವ ಮತ್ತು ತಮ್ಮದೇ ಆದ ಗುರುತನ್ನು ಬೆಳೆಸಿಕೊಳ್ಳುವ ಸ್ವಾತಂತ್ರ್ಯದಿಂದ ವಂಚಿತರಾಗಿದ್ದಾರೆ ಎಂದು ತಿಳಿಸಿದೆ.

“ಗಾಝಾ ಮತ್ತು ಪಶ್ಚಿಮ ದಂಡೆಯಲ್ಲಿ ಬಾಂಬ್‌ಗಳು ಮತ್ತು ಬಂದೂಕುಗಳು ಶಾಂತವಾದರೂ, ಪ್ಯಾಲೆಸ್ತೀನ್ ಮಕ್ಕಳು ಒಂದೇ ರಾತ್ರಿಯಲ್ಲಿ ಚೇತರಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಮುರಳಿಧರ್ ಹೇಳಿದ್ದಾರೆ. ಅವರ ಆರೋಗ್ಯ, ಶಿಕ್ಷಣ ಮತ್ತು ಬೆಳವಣಿಗೆಗೆ ಉಂಟಾಗಿರುವ ನಾಶವು ಸರಿಪಡಿಸಲಾಗದಂಥದ್ದಾಗಿದೆ ಎಂದಿದ್ದಾರೆ.

ಅಲ್ಲದೆ, ಮಕ್ಕಳನ್ನು ಗುರಿಯಾಗಿಸುವುದು ಪ್ಯಾಲೆಸ್ತೀನ್ ಸಮಾಜದ ಜನಸಂಖ್ಯಾ ಮತ್ತು ಸಾಮಾಜಿಕ ಅಡಿಪಾಯಗಳು ಸೇರಿದಂತೆ ಅದರ ಒಟ್ಟಾರೆ ರಚನೆ ಮತ್ತು ಭವಿಷ್ಯಕ್ಕೆ ಧಕ್ಕೆ ತರುತ್ತದೆ ಎಂದು ತಿಳಿಸಿದ್ದಾರೆ. “ಮಕ್ಕಳನ್ನು ಗುರಿಯಾಗಿಸುವ ಮೂಲಕ, ಇಸ್ರೇಲ್ ಪ್ಯಾಲೆಸ್ತೀನ್ ಜನರ ಅಸ್ತಿತ್ವದ ಸಾಮರ್ಥ್ಯ ಮತ್ತು ಅವರ ಭವಿಷ್ಯವನ್ನು ನಿರ್ಧರಿಸುವ ಹಕ್ಕಿನ ಮೇಲೆಯೇ ದಾಳಿ ಮಾಡುತ್ತಿದೆ” ಎಂದು ಅವರು ಹೇಳಿದ್ದಾರೆ.

ಅಂತಾರಾಷ್ಟ್ರೀಯ ನ್ಯಾಯಾಲಯದ ಸಲಹಾ ಅಭಿಪ್ರಾಯಕ್ಕೆ ಅನುಗುಣವಾಗಿ, ಪ್ಯಾಲೆಸ್ತೀನ್ ಮಕ್ಕಳಿಗೆ ಹಾನಿ ಮಾಡುವ ಉಲ್ಲಂಘನೆಗಳನ್ನು ನಿಲ್ಲಿಸುವಂತೆ ಮತ್ತು ಪೂರ್ವ ಜೆರುಸಲೆಮ್ ಸೇರಿದಂತೆ ಆಕ್ರಮಿತ ಪಶ್ಚಿಮ ದಂಡೆ ತನ್ನ ಉಪಸ್ಥಿತಿಯನ್ನು ಕೊನೆಗೊಳಿಸುವಂತೆ ಆಯೋಗವು ಇಸ್ರೇಲ್‌ ಅನ್ನು ಒತ್ತಾಯಿಸಿದೆ.  

ಅಲ್ಲದೆ, ಆರೋಪಿತ ಅಪರಾಧಗಳಿಗೆ ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳುವಂತೆ ಅದು ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳಿಗೆ ಕರೆ ನೀಡಿದೆ.

ಇಸ್ರೇಲ್ ವರದಿಯನ್ನು ತಿರಸ್ಕರಿಸಿದೆ. ವರದಿಯನ್ನು ಒಂದು “ಪ್ರಚಾರದ ತುಣುಕು” (propaganda piece) ಎಂದು ಬಣ್ಣಿಸಿದೆ.

“ಆಯೋಗ ಸತ್ಯವನ್ನು ಹುಡುಕುವ ಬದಲು, ಇಸ್ರೇಲ್ ಅನ್ನು ಮಾತ್ರ ಪ್ರತ್ಯೇಕಿಸಿ ನಿಂದಿಸುವ ಉದ್ದೇಶವನ್ನು ಹೊಂದಿರುವ “ಮೂಲಭೂತವಾಗಿ ದೋಷಪೂರಿತವಾದ ವ್ಯವಸ್ಥೆ” ಎಂದು ಇಸ್ರೇಲ್ ವಿದೇಶಾಂಗ ಸಚಿವಾಲಯ ಟೀಕಿಸಿದೆ.

“ಪ್ಯಾಲೆಸ್ತೀನ್ ಉಗ್ರಗಾಮಿ ಸಂಘಟನೆಯಾದ ಹಮಾಸ್‌ನಿಂದ ಕೊಲ್ಲಲ್ಪಟ್ಟ ಅಥವಾ ಅಪಹರಣಕ್ಕೊಳಗಾದ ಇಸ್ರೇಲಿ ಮಕ್ಕಳನ್ನು ಈ ವರದಿಯು ನಿರ್ಲಕ್ಷಿಸಿದೆ ಎಂದು ಅದು ಹೇಳಿದೆ ಮತ್ತು ವಿಶ್ವಾಸಾರ್ಹ ಪರಿಶೀಲನಾ ವಿಧಾನಗಳ ಕೊರತೆಯನ್ನು ಹೊಂದಿದೆ ಎಂದು ಆಯೋಗದ ಮೇಲೆ ಆರೋಪ ಮಾಡಿದೆ. “ಇಸ್ರೇಲ್ ಈ ಮಾನಹಾನಿಕರ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸುತ್ತದೆ” ಎಂದು ಹೇಳಿದೆ.

ದಕ್ಷಿಣ ಇಸ್ರೇಲ್ ಮೇಲೆ ಹಮಾಸ್ ದಾಳಿ ನಡೆಸಿ 1,200 ಜನರನ್ನು ಕೊಂದು, ಒತ್ತೆಯಾಳುಗಳನ್ನು ಕರೆದೊಯ್ದ ನಂತರ, ಅಕ್ಟೋಬರ್ 2023ರಲ್ಲಿ ಗಾಝಾದಲ್ಲಿ ಇಸ್ರೇಲ್‌ನ ಮಿಲಿಟರಿ ಕಾರ್ಯಾಚರಣೆ ಪ್ರಾರಂಭವಾಯಿತು. ಅಂದಿನಿಂದ ಇಸ್ರೇಲ್ ಗಾಝಾದ ಮೇಲೆ ಭೀಕರ ವೈಮಾನಿಕ ಮತ್ತು ಭೂಪ್ರದೇಶದ ದಾಳಿಗಳನ್ನು ನಡೆಸುತ್ತಿದ್ದು, 75,000ಕ್ಕೂ ಹೆಚ್ಚು ಜನರನ್ನು ಹತ್ಯೆ ಮಾಡಿದೆ.

ಸೆಪ್ಟೆಂಬರ್‌ನಲ್ಲಿ, ವಿಶ್ವಸಂಸ್ಥೆಯ ವಿಚಾರಣಾ ಆಯೋಗವು ಗಾಝಾದಲ್ಲಿ ಪ್ಯಾಲೆಸ್ತೀನಿಯರ ವಿರುದ್ಧ ಇಸ್ರೇಲ್ ನರಮೇಧ ಎಸಗಿದೆ ಎಂದು ಹೇಳಿತ್ತು. ಇಸ್ರೇಲ್ ವಿದೇಶಾಂಗ ಸಚಿವಾಲಯವು ಆ ವರದಿಯನ್ನೂ ‘ವಿಕೃತ ಮತ್ತು ಸುಳ್ಳು’ ಎಂದು ಬಣ್ಣಿಸಿ ತಿರಸ್ಕರಿಸಿತ್ತು.

ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ನವೆಂಬರ್ 2024ರಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ವಿರುದ್ಧ ಗಾಝಾದಲ್ಲಿ ಯುದ್ಧ ಅಪರಾಧಗಳನ್ನು ಎಸಗಿದ್ದಾರೆ ಎಂದು ಆರೋಪಿಸಿ ಬಂಧನ ವಾರಂಟ್ ಹೊರಡಿಸಿತ್ತು. 






ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...