Homeಅಂತರಾಷ್ಟ್ರೀಯ2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ 'ನರಮೇಧ' ಎಂದ ವರದಿ

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

- Advertisement -
- Advertisement -

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ.

ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ 20,000ಕ್ಕೂ ಹೆಚ್ಚು ಮಕ್ಕಳನ್ನು ಹತ್ಯೆ ಮಾಡಿದ್ದು, 44,000ಕ್ಕೂ ಹೆಚ್ಚು ಮಕ್ಕಳನ್ನು ಗಾಯಗೊಳಿಸಿವೆ ಎಂದು ಆಯೋಗ ವಿವರಿಸಿದೆ.

ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನಿನ ಉಲ್ಲಂಘನೆಗಳ ಬಗ್ಗೆ ತನಿಖೆ ನಡೆಸಲು 2021ರಲ್ಲಿ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಿಂದ ಸ್ಥಾಪಿಸಲ್ಪಟ್ಟ ಆಯೋಗ ತನ್ನ ವರದಿಯಲ್ಲಿ, ಇಸ್ರೇಲ್ ಮತ್ತು ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶಗಳಲ್ಲಿ ನಡೆದ ಮಿಲಿಟರಿ ಕಾರ್ಯಾಚರಣೆಗಳ ಪ್ರಮಾಣ ಮತ್ತು ಸ್ವರೂಪವು “ಪ್ಯಾಲೆಸ್ತೀನ್ ಮಕ್ಕಳ ದೊಡ್ಡ ಮಟ್ಟದ ಸಾವು, ಗಾಯ ಮತ್ತು ಆಘಾತಕ್ಕೆ” ಕಾರಣವಾಗಿದೆ ಎಂದು ಹೇಳಿದೆ.

ಅಕ್ಟೋಬರ್ 2025ರ ಕದನ ವಿರಾಮದ ನಂತರವೂ ಮಕ್ಕಳು ಕೊಲ್ಲಲ್ಪಡುತ್ತಿದ್ದಾರೆ ಮತ್ತು ತೀವ್ರವಾಗಿ ಗಾಯಗೊಳ್ಳುತ್ತಿದ್ದಾರೆ. ಇಸ್ರೇಲ್ ಕದನ ವಿರಾಮವನ್ನು ಮತ್ತು ಅಂತಾರಾಷ್ಟ್ರೀಯ ಕಾನೂನಿನಡಿ ಪ್ಯಾಲೆಸ್ತೀನ್ ಮಕ್ಕಳಿಗೆ ನೀಡಬೇಕಾದ ರಕ್ಷಣೆಯನ್ನು ನಿರಂತರವಾಗಿ ನಿರ್ಲಕ್ಷಿಸುತ್ತಿದೆ ಎಂದು ಆಯೋಗದ ಅಧ್ಯಕ್ಷರಾದ ಶ್ರೀನಿವಾಸನ್ ಮುರಳಿಧರ್ ತಿಳಿಸಿದ್ದಾರೆ.

ಪ್ಯಾಲೆಸ್ತೀನ್ ಮಕ್ಕಳನ್ನು ಬಂಧಿಸಿ, ಬಂಧನ ಕೇಂದ್ರಗಳಲ್ಲಿ ಚಿತ್ರಹಿಂಸೆ ಮತ್ತು ಇತರ ರೀತಿಯ ದುರ್ನಡತೆಗೆ ಒಳಪಡಿಸಲಾಗಿದೆ ಎಂದು ಆಯೋಗ ಪತ್ತೆಹಚ್ಚಿದೆ. ಅಲ್ಲದೆ, ಬಂಧನದಲ್ಲಿರುವ ಕೆಲವು ವ್ಯಕ್ತಿಗಳು ಎಲ್ಲಿದ್ದಾರೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಅದು ತಿಳಿಸಿದೆ.

ಇಸ್ರೇಲಿ ಆಕ್ರಮಣ ಮತ್ತು ಹಗೆತನದ ದೀರ್ಘಕಾಲದ, ಜನಾಂಗೀಯ, ಲಿಂಗ ಆಧಾರಿತ ಮತ್ತು ತಲೆಮಾರುಗಳ ನಡುವಿನ ಸ್ವರೂಪದಲ್ಲಿ ಬೇರೂರಿರುವ “ಸಾಮೂಹಿಕ ಅವಮಾನ ಮತ್ತು ದಬ್ಬಾಳಿಕೆಯ” ಭಾಗವಾಗಿ ಮಕ್ಕಳ ವಿರುದ್ಧ ಲೈಂಗಿಕ ದೌರ್ಜನ್ಯವನ್ನು ಬಳಸಲಾಗಿದೆ ಎಂದೂ ಸಹ ಆಯೋಗ ಆರೋಪಿಸಿದೆ.

ನವಜಾತ ಶಿಶುಗಳು ಮತ್ತು ಹೆರಿಗೆ ಆರೈಕೆ ಕೇಂದ್ರಗಳಿಗೆ ಉಂಟಾದ ಹಾನಿಯು ನವಜಾತ ಶಿಶುಗಳ ಬದುಕುಳಿಯುವಿಕೆ ಮತ್ತು ಸಂತಾನೋತ್ಪತ್ತಿ ಆರೋಗ್ಯದ ಮೇಲೆ ದೊಡ್ಡ ಪರಿಣಾಮ ಬೀರಿದೆ. ಅದೇ ಸಮಯದಲ್ಲಿ, ಇಸ್ರೇಲ್ ವಿಧಿಸಿದ ದಿಗ್ಬಂಧನ ಮತ್ತು ಮುತ್ತಿಗೆಯಿಂದ ಉಂಟಾದ ಹಸಿವು ಮಕ್ಕಳ ಸಾವುಗಳಿಗೆ ಮತ್ತು ಆರೋಗ್ಯ ಪರಿಸ್ಥಿತಿಗಳು ಕ್ಷೀಣಿಸಲು ಕಾರಣವಾಗಿದೆ ಎಂದು ಆಯೋಗವು ತಿಳಿಸಿದೆ.

ಗಾಝಾ ಮತ್ತು ಪಶ್ಚಿಮ ದಂಡೆಯ ಅನಾಥಾಶ್ರಮಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ಧ್ವಂಸಗೊಳಿಸಲಾಗಿದೆ ಅಥವಾ ನಾಶಪಡಿಸಲಾಗಿದೆ, ಇದು ಮಕ್ಕಳ ಬೆಳವಣಿಗೆ ಮತ್ತು ಆರೈಕೆಯ ಲಭ್ಯತೆಗೆ ಅಡ್ಡಿಪಡಿಸಿದೆ ಎಂದು ಆಯೋಗ ಹೇಳಿದೆ.

ಮಕ್ಕಳಲ್ಲಿ ಮಾನಸಿಕ ಹಾನಿ ವ್ಯಾಪಕವಾಗಿದೆ ಮತ್ತು ದೀರ್ಘಕಾಲದವರೆಗೆ ಇರುತ್ತದೆ ಎಂದು ತಿಳಿಸಿದ ಆಯೋಗವು, ಇದನ್ನು “ಆಕ್ರಮಿತ ಮನಸ್ಸು” (occupied psyche) ಎಂದು ಬಣ್ಣಿಸಿದೆ. ಇದರಲ್ಲಿ ಮಕ್ಕಳು ಆಟವಾಡುವ, ಕಲ್ಪಿಸಿಕೊಳ್ಳುವ, ಭರವಸೆ ಹೊಂದುವ ಮತ್ತು ತಮ್ಮದೇ ಆದ ಗುರುತನ್ನು ಬೆಳೆಸಿಕೊಳ್ಳುವ ಸ್ವಾತಂತ್ರ್ಯದಿಂದ ವಂಚಿತರಾಗಿದ್ದಾರೆ ಎಂದು ತಿಳಿಸಿದೆ.

“ಗಾಝಾ ಮತ್ತು ಪಶ್ಚಿಮ ದಂಡೆಯಲ್ಲಿ ಬಾಂಬ್‌ಗಳು ಮತ್ತು ಬಂದೂಕುಗಳು ಶಾಂತವಾದರೂ, ಪ್ಯಾಲೆಸ್ತೀನ್ ಮಕ್ಕಳು ಒಂದೇ ರಾತ್ರಿಯಲ್ಲಿ ಚೇತರಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಮುರಳಿಧರ್ ಹೇಳಿದ್ದಾರೆ. ಅವರ ಆರೋಗ್ಯ, ಶಿಕ್ಷಣ ಮತ್ತು ಬೆಳವಣಿಗೆಗೆ ಉಂಟಾಗಿರುವ ನಾಶವು ಸರಿಪಡಿಸಲಾಗದಂಥದ್ದಾಗಿದೆ ಎಂದಿದ್ದಾರೆ.

ಅಲ್ಲದೆ, ಮಕ್ಕಳನ್ನು ಗುರಿಯಾಗಿಸುವುದು ಪ್ಯಾಲೆಸ್ತೀನ್ ಸಮಾಜದ ಜನಸಂಖ್ಯಾ ಮತ್ತು ಸಾಮಾಜಿಕ ಅಡಿಪಾಯಗಳು ಸೇರಿದಂತೆ ಅದರ ಒಟ್ಟಾರೆ ರಚನೆ ಮತ್ತು ಭವಿಷ್ಯಕ್ಕೆ ಧಕ್ಕೆ ತರುತ್ತದೆ ಎಂದು ತಿಳಿಸಿದ್ದಾರೆ. “ಮಕ್ಕಳನ್ನು ಗುರಿಯಾಗಿಸುವ ಮೂಲಕ, ಇಸ್ರೇಲ್ ಪ್ಯಾಲೆಸ್ತೀನ್ ಜನರ ಅಸ್ತಿತ್ವದ ಸಾಮರ್ಥ್ಯ ಮತ್ತು ಅವರ ಭವಿಷ್ಯವನ್ನು ನಿರ್ಧರಿಸುವ ಹಕ್ಕಿನ ಮೇಲೆಯೇ ದಾಳಿ ಮಾಡುತ್ತಿದೆ” ಎಂದು ಅವರು ಹೇಳಿದ್ದಾರೆ.

ಅಂತಾರಾಷ್ಟ್ರೀಯ ನ್ಯಾಯಾಲಯದ ಸಲಹಾ ಅಭಿಪ್ರಾಯಕ್ಕೆ ಅನುಗುಣವಾಗಿ, ಪ್ಯಾಲೆಸ್ತೀನ್ ಮಕ್ಕಳಿಗೆ ಹಾನಿ ಮಾಡುವ ಉಲ್ಲಂಘನೆಗಳನ್ನು ನಿಲ್ಲಿಸುವಂತೆ ಮತ್ತು ಪೂರ್ವ ಜೆರುಸಲೆಮ್ ಸೇರಿದಂತೆ ಆಕ್ರಮಿತ ಪಶ್ಚಿಮ ದಂಡೆ ತನ್ನ ಉಪಸ್ಥಿತಿಯನ್ನು ಕೊನೆಗೊಳಿಸುವಂತೆ ಆಯೋಗವು ಇಸ್ರೇಲ್‌ ಅನ್ನು ಒತ್ತಾಯಿಸಿದೆ.  

ಅಲ್ಲದೆ, ಆರೋಪಿತ ಅಪರಾಧಗಳಿಗೆ ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳುವಂತೆ ಅದು ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳಿಗೆ ಕರೆ ನೀಡಿದೆ.

ಇಸ್ರೇಲ್ ವರದಿಯನ್ನು ತಿರಸ್ಕರಿಸಿದೆ. ವರದಿಯನ್ನು ಒಂದು “ಪ್ರಚಾರದ ತುಣುಕು” (propaganda piece) ಎಂದು ಬಣ್ಣಿಸಿದೆ.

“ಆಯೋಗ ಸತ್ಯವನ್ನು ಹುಡುಕುವ ಬದಲು, ಇಸ್ರೇಲ್ ಅನ್ನು ಮಾತ್ರ ಪ್ರತ್ಯೇಕಿಸಿ ನಿಂದಿಸುವ ಉದ್ದೇಶವನ್ನು ಹೊಂದಿರುವ “ಮೂಲಭೂತವಾಗಿ ದೋಷಪೂರಿತವಾದ ವ್ಯವಸ್ಥೆ” ಎಂದು ಇಸ್ರೇಲ್ ವಿದೇಶಾಂಗ ಸಚಿವಾಲಯ ಟೀಕಿಸಿದೆ.

“ಪ್ಯಾಲೆಸ್ತೀನ್ ಉಗ್ರಗಾಮಿ ಸಂಘಟನೆಯಾದ ಹಮಾಸ್‌ನಿಂದ ಕೊಲ್ಲಲ್ಪಟ್ಟ ಅಥವಾ ಅಪಹರಣಕ್ಕೊಳಗಾದ ಇಸ್ರೇಲಿ ಮಕ್ಕಳನ್ನು ಈ ವರದಿಯು ನಿರ್ಲಕ್ಷಿಸಿದೆ ಎಂದು ಅದು ಹೇಳಿದೆ ಮತ್ತು ವಿಶ್ವಾಸಾರ್ಹ ಪರಿಶೀಲನಾ ವಿಧಾನಗಳ ಕೊರತೆಯನ್ನು ಹೊಂದಿದೆ ಎಂದು ಆಯೋಗದ ಮೇಲೆ ಆರೋಪ ಮಾಡಿದೆ. “ಇಸ್ರೇಲ್ ಈ ಮಾನಹಾನಿಕರ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸುತ್ತದೆ” ಎಂದು ಹೇಳಿದೆ.

ದಕ್ಷಿಣ ಇಸ್ರೇಲ್ ಮೇಲೆ ಹಮಾಸ್ ದಾಳಿ ನಡೆಸಿ 1,200 ಜನರನ್ನು ಕೊಂದು, ಒತ್ತೆಯಾಳುಗಳನ್ನು ಕರೆದೊಯ್ದ ನಂತರ, ಅಕ್ಟೋಬರ್ 2023ರಲ್ಲಿ ಗಾಝಾದಲ್ಲಿ ಇಸ್ರೇಲ್‌ನ ಮಿಲಿಟರಿ ಕಾರ್ಯಾಚರಣೆ ಪ್ರಾರಂಭವಾಯಿತು. ಅಂದಿನಿಂದ ಇಸ್ರೇಲ್ ಗಾಝಾದ ಮೇಲೆ ಭೀಕರ ವೈಮಾನಿಕ ಮತ್ತು ಭೂಪ್ರದೇಶದ ದಾಳಿಗಳನ್ನು ನಡೆಸುತ್ತಿದ್ದು, 75,000ಕ್ಕೂ ಹೆಚ್ಚು ಜನರನ್ನು ಹತ್ಯೆ ಮಾಡಿದೆ.

ಸೆಪ್ಟೆಂಬರ್‌ನಲ್ಲಿ, ವಿಶ್ವಸಂಸ್ಥೆಯ ವಿಚಾರಣಾ ಆಯೋಗವು ಗಾಝಾದಲ್ಲಿ ಪ್ಯಾಲೆಸ್ತೀನಿಯರ ವಿರುದ್ಧ ಇಸ್ರೇಲ್ ನರಮೇಧ ಎಸಗಿದೆ ಎಂದು ಹೇಳಿತ್ತು. ಇಸ್ರೇಲ್ ವಿದೇಶಾಂಗ ಸಚಿವಾಲಯವು ಆ ವರದಿಯನ್ನೂ ‘ವಿಕೃತ ಮತ್ತು ಸುಳ್ಳು’ ಎಂದು ಬಣ್ಣಿಸಿ ತಿರಸ್ಕರಿಸಿತ್ತು.

ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ನವೆಂಬರ್ 2024ರಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ವಿರುದ್ಧ ಗಾಝಾದಲ್ಲಿ ಯುದ್ಧ ಅಪರಾಧಗಳನ್ನು ಎಸಗಿದ್ದಾರೆ ಎಂದು ಆರೋಪಿಸಿ ಬಂಧನ ವಾರಂಟ್ ಹೊರಡಿಸಿತ್ತು. 






ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...