Homeಅಂತರಾಷ್ಟ್ರೀಯಇಸ್ರೇಲ್-ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆ

ಇಸ್ರೇಲ್-ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆ

- Advertisement -
- Advertisement -

ಟೆಲ್‌ ಅವಿವ್‌: ಇಸ್ರೇಲ್‌-ಲೆಬನಾನ್‌ ನ ಹಿಜ್ಬುಲ್ಲಾಗಳ ಯುದ್ಧದ ನಡುವೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಇಸ್ರೇಲ್‌ನ ಭದ್ರತಾ ಸಚಿವಾಲಯವು ಯುಎಸ್ ಮತ್ತು ಫ್ರಾನ್ಸ್ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ  ಒಪ್ಪಂದವನ್ನು ಅನುಮೋದಿಸಿದೆ. ಭಾರತೀಯ ಕಾಲಮಾನದ ಪ್ರಕಾರ ಇಂದು ಬೆಳಗ್ಗೆ 7:30 ರಿಂದ ಜಾರಿಗೆ ಬರಲಿದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಇದನ್ನು ಔಪಚಾರಿಕವಾಗಿ ಘೋಷಿಸಿದ್ದಾರೆ. ಇಸ್ರೇಲ್ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ನಾವು ಮಧ್ಯಪ್ರಾಚ್ಯದ ಮುಖವನ್ನು ಬದಲಾಯಿಸುತ್ತಿದ್ದೇವೆ. ಉತ್ತಮ ಒಪ್ಪಂದವು ಕಾರ್ಯಗತಗೊಳಿಸಬಹುದಾದವುಗಳಲ್ಲಿ ಒಂದಾಗಿದೆ. ಕದನ ವಿರಾಮಕ್ಕೆ ಪ್ರಾಥಮಿಕ ಕಾರಣವೆಂದರೆ ಹಮಾಸ್ ಅನ್ನು ಪ್ರತ್ಯೇಕಿಸುವುದು ಮತ್ತು ಒತ್ತೆಯಾಳುಗಳನ್ನು ಹಿಂದಿರುಗಿಸುವುದು ಎಂದು ನೆತನ್ಯಾಹು ಹೇಳಿದ್ದಾರೆ.

ಪ್ರಧಾನಿ ಬೆಂಜಮಿನ್ ನೆತನ್ಯಾಹು ಮಂಗಳವಾರ ಸಂಜೆ ಟೆಲ್ ಅವಿವ್‌ನಲ್ಲಿ ತಮ್ಮ ವಾರ್ ಕ್ಯಾಬಿನೆಟ್ ಸಭೆಯನ್ನು ಕರೆದಿದ್ದರು. ಇದರಲ್ಲಿ ಲೆಬನಾನಿನ ಭಯೋತ್ಪಾದಕ ಸಂಘಟನೆ ಹಿಜ್ಬುಲ್ಲಾ ಜೊತೆ 60 ದಿನಗಳ ಕದನ ವಿರಾಮದ ಕುರಿತು ಚರ್ಚಿಸಲಾಯಿತು. ಇಸ್ರೇಲಿ ವಾರ್ ಕ್ಯಾಬಿನೆಟ್, ಲೆಬನಾನ್‌ನಲ್ಲಿ ಹೆಜ್ಬೊಲ್ಲಾ ಜೊತೆ ಕದನ ವಿರಾಮಕ್ಕೆ ಒಪ್ಪಿಗೆ ನೀಡಿದೆ ಎಂದು ಅಮೆರಿಕದ ಸುದ್ದಿ ವೆಬ್‌ಸೈಟ್ ದಿ ಹಿಲ್ ವರದಿ ಮಾಡಿದೆ.  ಈ ಕದನ ವಿರಾಮ ಇಂದು ಬೆಳಿಗ್ಗೆ ಪ್ರಾರಂಭವಾಗಲಿದೆ. ಇದಕ್ಕೂ ಮೊದಲು, ಲೆಬನಾನಿನ ಅಲ್ ಜದೀದ್ ವರದಿಯ ಪ್ರಕಾರ, ಅಮೆರಿಕ ಮತ್ತು ಫ್ರಾನ್ಸ್ ರಾತ್ರಿ 10 ಗಂಟೆಗೆ (ಸ್ಥಳೀಯ ಕಾಲಮಾನ) ಕದನ ವಿರಾಮವನ್ನು ಘೋಷಿಸುತ್ತವೆ ಮತ್ತು ಈ ಕದನ ವಿರಾಮ ಒಪ್ಪಂದವು ಬೆಳಿಗ್ಗೆ 10 ಗಂಟೆಗೆ ಜಾರಿಗೆ ಬರಲಿದೆ ಎಂದು ವರದಿ ಮಾಡಿತ್ತು.

ಕದನವಿರಾಮ ಘೋಷಣೆಯಾದರೆ ಅದನ್ನು ಜಾರಿಗೊಳಿಸಲು 60 ದಿನಗಳವರೆಗೆ ಕಾಲಾವಕಾಶ ನೀಡಲಾಗುತ್ತದೆ. ಈ ಅವಧಿಯಲ್ಲಿ ಹಿಬ್ಬುಲ್ಲಾದ ಹಿಡಿತದಲ್ಲಿರುವ ಲೆಬನಾನ್‌ನ ದಕ್ಷಿಣ ಭಾಗದಲ್ಲಿ ನಿಯೋಜನೆಗೊಂಡಿರುವ ಸೇನೆಯನ್ನು ಇಸ್ರೇಲ್ ವಾಪಸ್ ಕರೆಸಿಕೊಳ್ಳಬೇಕು. ಜೊತೆಗೆ, ಈ ಪ್ರದೇಶದಲ್ಲಿ ಲೆಬನಾನ್ ತನ್ನ ಸೈನ್ಯ ನಿಯೋಜನೆಗೊಳ್ಳಬೇಕು. ಜೊತೆಗೆ, ವಿಶ್ವಸಂಸ್ಥೆ ಶಾಂತಿಪಾಲನಾ ಪಡೆಯೂ ಇರಲಿದೆ ಎನ್ನಲಾಗಿದೆ.

ಕದನವಿರಾಮ ಕುರಿತು ನಿಗಾ ಇರಿಸಲು ಅಮೆರಿಕ ಅಧ್ಯಕ್ಷತೆಯ ಅಂತರರಾಷ್ಟ್ರೀಯ ಸಮಿತಿಯೊಂದನ್ನು ರಚಿಸಲಾಗುತ್ತದೆ ಎಂದು ಹೇಳಲಾಗಿದೆ. ಕಳೆದ ಒಂದು ವರ್ಷದಿಂದ ನಡೆಯುತ್ತಿರುವ ಯುದ್ಧದಲ್ಲಿ ಇಸ್ರೇಲ್ ದಾಳಿಗೆ ಲೆಬನಾನ್‌ 3,750 ಮಂದಿ ಮೃತಪಟ್ಟಿದ್ದಾರೆ ಹಾಗೂ 10 ಲಕ್ಷ ಜನರು ನಿರಾಶ್ರಿತರಾಗಿದ್ದಾರೆ.

ಇದನ್ನೂ ಓದಿ...ಪಾಕಿಸ್ತಾನದಲ್ಲಿ ಹಿಂಸಾಚಾರಕ್ಕೆ ತಿರುಗಿದ ಇಮ್ರಾನ್ ಖಾನ್ ಬೆಂಬಲಿಗರ ಪ್ರತಿಭಟನೆ : 6 ಮಂದಿ ಸಾವು, ಕಂಡಲ್ಲಿ ಗುಂಡು ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...