Homeಅಂತರಾಷ್ಟ್ರೀಯಇಸ್ರೇಲ್-ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆ

ಇಸ್ರೇಲ್-ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆ

- Advertisement -
- Advertisement -

ಟೆಲ್‌ ಅವಿವ್‌: ಇಸ್ರೇಲ್‌-ಲೆಬನಾನ್‌ ನ ಹಿಜ್ಬುಲ್ಲಾಗಳ ಯುದ್ಧದ ನಡುವೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಇಸ್ರೇಲ್‌ನ ಭದ್ರತಾ ಸಚಿವಾಲಯವು ಯುಎಸ್ ಮತ್ತು ಫ್ರಾನ್ಸ್ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ  ಒಪ್ಪಂದವನ್ನು ಅನುಮೋದಿಸಿದೆ. ಭಾರತೀಯ ಕಾಲಮಾನದ ಪ್ರಕಾರ ಇಂದು ಬೆಳಗ್ಗೆ 7:30 ರಿಂದ ಜಾರಿಗೆ ಬರಲಿದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಇದನ್ನು ಔಪಚಾರಿಕವಾಗಿ ಘೋಷಿಸಿದ್ದಾರೆ. ಇಸ್ರೇಲ್ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ನಾವು ಮಧ್ಯಪ್ರಾಚ್ಯದ ಮುಖವನ್ನು ಬದಲಾಯಿಸುತ್ತಿದ್ದೇವೆ. ಉತ್ತಮ ಒಪ್ಪಂದವು ಕಾರ್ಯಗತಗೊಳಿಸಬಹುದಾದವುಗಳಲ್ಲಿ ಒಂದಾಗಿದೆ. ಕದನ ವಿರಾಮಕ್ಕೆ ಪ್ರಾಥಮಿಕ ಕಾರಣವೆಂದರೆ ಹಮಾಸ್ ಅನ್ನು ಪ್ರತ್ಯೇಕಿಸುವುದು ಮತ್ತು ಒತ್ತೆಯಾಳುಗಳನ್ನು ಹಿಂದಿರುಗಿಸುವುದು ಎಂದು ನೆತನ್ಯಾಹು ಹೇಳಿದ್ದಾರೆ.

ಪ್ರಧಾನಿ ಬೆಂಜಮಿನ್ ನೆತನ್ಯಾಹು ಮಂಗಳವಾರ ಸಂಜೆ ಟೆಲ್ ಅವಿವ್‌ನಲ್ಲಿ ತಮ್ಮ ವಾರ್ ಕ್ಯಾಬಿನೆಟ್ ಸಭೆಯನ್ನು ಕರೆದಿದ್ದರು. ಇದರಲ್ಲಿ ಲೆಬನಾನಿನ ಭಯೋತ್ಪಾದಕ ಸಂಘಟನೆ ಹಿಜ್ಬುಲ್ಲಾ ಜೊತೆ 60 ದಿನಗಳ ಕದನ ವಿರಾಮದ ಕುರಿತು ಚರ್ಚಿಸಲಾಯಿತು. ಇಸ್ರೇಲಿ ವಾರ್ ಕ್ಯಾಬಿನೆಟ್, ಲೆಬನಾನ್‌ನಲ್ಲಿ ಹೆಜ್ಬೊಲ್ಲಾ ಜೊತೆ ಕದನ ವಿರಾಮಕ್ಕೆ ಒಪ್ಪಿಗೆ ನೀಡಿದೆ ಎಂದು ಅಮೆರಿಕದ ಸುದ್ದಿ ವೆಬ್‌ಸೈಟ್ ದಿ ಹಿಲ್ ವರದಿ ಮಾಡಿದೆ.  ಈ ಕದನ ವಿರಾಮ ಇಂದು ಬೆಳಿಗ್ಗೆ ಪ್ರಾರಂಭವಾಗಲಿದೆ. ಇದಕ್ಕೂ ಮೊದಲು, ಲೆಬನಾನಿನ ಅಲ್ ಜದೀದ್ ವರದಿಯ ಪ್ರಕಾರ, ಅಮೆರಿಕ ಮತ್ತು ಫ್ರಾನ್ಸ್ ರಾತ್ರಿ 10 ಗಂಟೆಗೆ (ಸ್ಥಳೀಯ ಕಾಲಮಾನ) ಕದನ ವಿರಾಮವನ್ನು ಘೋಷಿಸುತ್ತವೆ ಮತ್ತು ಈ ಕದನ ವಿರಾಮ ಒಪ್ಪಂದವು ಬೆಳಿಗ್ಗೆ 10 ಗಂಟೆಗೆ ಜಾರಿಗೆ ಬರಲಿದೆ ಎಂದು ವರದಿ ಮಾಡಿತ್ತು.

ಕದನವಿರಾಮ ಘೋಷಣೆಯಾದರೆ ಅದನ್ನು ಜಾರಿಗೊಳಿಸಲು 60 ದಿನಗಳವರೆಗೆ ಕಾಲಾವಕಾಶ ನೀಡಲಾಗುತ್ತದೆ. ಈ ಅವಧಿಯಲ್ಲಿ ಹಿಬ್ಬುಲ್ಲಾದ ಹಿಡಿತದಲ್ಲಿರುವ ಲೆಬನಾನ್‌ನ ದಕ್ಷಿಣ ಭಾಗದಲ್ಲಿ ನಿಯೋಜನೆಗೊಂಡಿರುವ ಸೇನೆಯನ್ನು ಇಸ್ರೇಲ್ ವಾಪಸ್ ಕರೆಸಿಕೊಳ್ಳಬೇಕು. ಜೊತೆಗೆ, ಈ ಪ್ರದೇಶದಲ್ಲಿ ಲೆಬನಾನ್ ತನ್ನ ಸೈನ್ಯ ನಿಯೋಜನೆಗೊಳ್ಳಬೇಕು. ಜೊತೆಗೆ, ವಿಶ್ವಸಂಸ್ಥೆ ಶಾಂತಿಪಾಲನಾ ಪಡೆಯೂ ಇರಲಿದೆ ಎನ್ನಲಾಗಿದೆ.

ಕದನವಿರಾಮ ಕುರಿತು ನಿಗಾ ಇರಿಸಲು ಅಮೆರಿಕ ಅಧ್ಯಕ್ಷತೆಯ ಅಂತರರಾಷ್ಟ್ರೀಯ ಸಮಿತಿಯೊಂದನ್ನು ರಚಿಸಲಾಗುತ್ತದೆ ಎಂದು ಹೇಳಲಾಗಿದೆ. ಕಳೆದ ಒಂದು ವರ್ಷದಿಂದ ನಡೆಯುತ್ತಿರುವ ಯುದ್ಧದಲ್ಲಿ ಇಸ್ರೇಲ್ ದಾಳಿಗೆ ಲೆಬನಾನ್‌ 3,750 ಮಂದಿ ಮೃತಪಟ್ಟಿದ್ದಾರೆ ಹಾಗೂ 10 ಲಕ್ಷ ಜನರು ನಿರಾಶ್ರಿತರಾಗಿದ್ದಾರೆ.

ಇದನ್ನೂ ಓದಿ...ಪಾಕಿಸ್ತಾನದಲ್ಲಿ ಹಿಂಸಾಚಾರಕ್ಕೆ ತಿರುಗಿದ ಇಮ್ರಾನ್ ಖಾನ್ ಬೆಂಬಲಿಗರ ಪ್ರತಿಭಟನೆ : 6 ಮಂದಿ ಸಾವು, ಕಂಡಲ್ಲಿ ಗುಂಡು ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...