Homeಅಂತರಾಷ್ಟ್ರೀಯಇಸ್ರೇಲ್-ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆ

ಇಸ್ರೇಲ್-ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆ

- Advertisement -
- Advertisement -

ಟೆಲ್‌ ಅವಿವ್‌: ಇಸ್ರೇಲ್‌-ಲೆಬನಾನ್‌ ನ ಹಿಜ್ಬುಲ್ಲಾಗಳ ಯುದ್ಧದ ನಡುವೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಇಸ್ರೇಲ್‌ನ ಭದ್ರತಾ ಸಚಿವಾಲಯವು ಯುಎಸ್ ಮತ್ತು ಫ್ರಾನ್ಸ್ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ  ಒಪ್ಪಂದವನ್ನು ಅನುಮೋದಿಸಿದೆ. ಭಾರತೀಯ ಕಾಲಮಾನದ ಪ್ರಕಾರ ಇಂದು ಬೆಳಗ್ಗೆ 7:30 ರಿಂದ ಜಾರಿಗೆ ಬರಲಿದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಇದನ್ನು ಔಪಚಾರಿಕವಾಗಿ ಘೋಷಿಸಿದ್ದಾರೆ. ಇಸ್ರೇಲ್ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ನಾವು ಮಧ್ಯಪ್ರಾಚ್ಯದ ಮುಖವನ್ನು ಬದಲಾಯಿಸುತ್ತಿದ್ದೇವೆ. ಉತ್ತಮ ಒಪ್ಪಂದವು ಕಾರ್ಯಗತಗೊಳಿಸಬಹುದಾದವುಗಳಲ್ಲಿ ಒಂದಾಗಿದೆ. ಕದನ ವಿರಾಮಕ್ಕೆ ಪ್ರಾಥಮಿಕ ಕಾರಣವೆಂದರೆ ಹಮಾಸ್ ಅನ್ನು ಪ್ರತ್ಯೇಕಿಸುವುದು ಮತ್ತು ಒತ್ತೆಯಾಳುಗಳನ್ನು ಹಿಂದಿರುಗಿಸುವುದು ಎಂದು ನೆತನ್ಯಾಹು ಹೇಳಿದ್ದಾರೆ.

ಪ್ರಧಾನಿ ಬೆಂಜಮಿನ್ ನೆತನ್ಯಾಹು ಮಂಗಳವಾರ ಸಂಜೆ ಟೆಲ್ ಅವಿವ್‌ನಲ್ಲಿ ತಮ್ಮ ವಾರ್ ಕ್ಯಾಬಿನೆಟ್ ಸಭೆಯನ್ನು ಕರೆದಿದ್ದರು. ಇದರಲ್ಲಿ ಲೆಬನಾನಿನ ಭಯೋತ್ಪಾದಕ ಸಂಘಟನೆ ಹಿಜ್ಬುಲ್ಲಾ ಜೊತೆ 60 ದಿನಗಳ ಕದನ ವಿರಾಮದ ಕುರಿತು ಚರ್ಚಿಸಲಾಯಿತು. ಇಸ್ರೇಲಿ ವಾರ್ ಕ್ಯಾಬಿನೆಟ್, ಲೆಬನಾನ್‌ನಲ್ಲಿ ಹೆಜ್ಬೊಲ್ಲಾ ಜೊತೆ ಕದನ ವಿರಾಮಕ್ಕೆ ಒಪ್ಪಿಗೆ ನೀಡಿದೆ ಎಂದು ಅಮೆರಿಕದ ಸುದ್ದಿ ವೆಬ್‌ಸೈಟ್ ದಿ ಹಿಲ್ ವರದಿ ಮಾಡಿದೆ.  ಈ ಕದನ ವಿರಾಮ ಇಂದು ಬೆಳಿಗ್ಗೆ ಪ್ರಾರಂಭವಾಗಲಿದೆ. ಇದಕ್ಕೂ ಮೊದಲು, ಲೆಬನಾನಿನ ಅಲ್ ಜದೀದ್ ವರದಿಯ ಪ್ರಕಾರ, ಅಮೆರಿಕ ಮತ್ತು ಫ್ರಾನ್ಸ್ ರಾತ್ರಿ 10 ಗಂಟೆಗೆ (ಸ್ಥಳೀಯ ಕಾಲಮಾನ) ಕದನ ವಿರಾಮವನ್ನು ಘೋಷಿಸುತ್ತವೆ ಮತ್ತು ಈ ಕದನ ವಿರಾಮ ಒಪ್ಪಂದವು ಬೆಳಿಗ್ಗೆ 10 ಗಂಟೆಗೆ ಜಾರಿಗೆ ಬರಲಿದೆ ಎಂದು ವರದಿ ಮಾಡಿತ್ತು.

ಕದನವಿರಾಮ ಘೋಷಣೆಯಾದರೆ ಅದನ್ನು ಜಾರಿಗೊಳಿಸಲು 60 ದಿನಗಳವರೆಗೆ ಕಾಲಾವಕಾಶ ನೀಡಲಾಗುತ್ತದೆ. ಈ ಅವಧಿಯಲ್ಲಿ ಹಿಬ್ಬುಲ್ಲಾದ ಹಿಡಿತದಲ್ಲಿರುವ ಲೆಬನಾನ್‌ನ ದಕ್ಷಿಣ ಭಾಗದಲ್ಲಿ ನಿಯೋಜನೆಗೊಂಡಿರುವ ಸೇನೆಯನ್ನು ಇಸ್ರೇಲ್ ವಾಪಸ್ ಕರೆಸಿಕೊಳ್ಳಬೇಕು. ಜೊತೆಗೆ, ಈ ಪ್ರದೇಶದಲ್ಲಿ ಲೆಬನಾನ್ ತನ್ನ ಸೈನ್ಯ ನಿಯೋಜನೆಗೊಳ್ಳಬೇಕು. ಜೊತೆಗೆ, ವಿಶ್ವಸಂಸ್ಥೆ ಶಾಂತಿಪಾಲನಾ ಪಡೆಯೂ ಇರಲಿದೆ ಎನ್ನಲಾಗಿದೆ.

ಕದನವಿರಾಮ ಕುರಿತು ನಿಗಾ ಇರಿಸಲು ಅಮೆರಿಕ ಅಧ್ಯಕ್ಷತೆಯ ಅಂತರರಾಷ್ಟ್ರೀಯ ಸಮಿತಿಯೊಂದನ್ನು ರಚಿಸಲಾಗುತ್ತದೆ ಎಂದು ಹೇಳಲಾಗಿದೆ. ಕಳೆದ ಒಂದು ವರ್ಷದಿಂದ ನಡೆಯುತ್ತಿರುವ ಯುದ್ಧದಲ್ಲಿ ಇಸ್ರೇಲ್ ದಾಳಿಗೆ ಲೆಬನಾನ್‌ 3,750 ಮಂದಿ ಮೃತಪಟ್ಟಿದ್ದಾರೆ ಹಾಗೂ 10 ಲಕ್ಷ ಜನರು ನಿರಾಶ್ರಿತರಾಗಿದ್ದಾರೆ.

ಇದನ್ನೂ ಓದಿ...ಪಾಕಿಸ್ತಾನದಲ್ಲಿ ಹಿಂಸಾಚಾರಕ್ಕೆ ತಿರುಗಿದ ಇಮ್ರಾನ್ ಖಾನ್ ಬೆಂಬಲಿಗರ ಪ್ರತಿಭಟನೆ : 6 ಮಂದಿ ಸಾವು, ಕಂಡಲ್ಲಿ ಗುಂಡು ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...