Homeಅಂತರಾಷ್ಟ್ರೀಯಗಾಝಾದತ್ತ ಹೊರಟಿದ್ದ 'ಸುಮುದ್ ಫ್ಲೋಟಿಲ್ಲಾ'ಗೆ ಇಸ್ರೇಲ್ ತಡೆ : ಗ್ರೇಟಾ ಥನ್‌ಬರ್ಗ್ ಸೇರಿದಂತೆ ಹೋರಾಟಗಾರರ ಬಂಧನ

ಗಾಝಾದತ್ತ ಹೊರಟಿದ್ದ ‘ಸುಮುದ್ ಫ್ಲೋಟಿಲ್ಲಾ’ಗೆ ಇಸ್ರೇಲ್ ತಡೆ : ಗ್ರೇಟಾ ಥನ್‌ಬರ್ಗ್ ಸೇರಿದಂತೆ ಹೋರಾಟಗಾರರ ಬಂಧನ

- Advertisement -
- Advertisement -

ಮಾನವೀಯ ನೆರವು ಹೊತ್ತು ಗಾಝಾಗೆ ಹೊರಟಿದ್ದ ‘ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ’ ತಂಡವನ್ನು ಇಸ್ರೇಲ್ ತಡೆದಿದ್ದು, ಗ್ರೇಟಾ ಥನ್‌ಬರ್ಗ್ ಸೇರಿದಂತೆ ಹೋರಾಟಗಾರರನ್ನು ಬಂಧಿಸಿದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ಗುರುವಾರ (ಅ.2) ವರದಿ ಮಾಡಿದೆ.

ಆರಂಭದಲ್ಲಿ ಗಾಝಾ ಕರಾವಳಿಯಿಂದ ಸುಮಾರು 75 ನಾಟಿಕಲ್ ಮೈಲಿ ದೂರದಲ್ಲಿ ಸುಮುದ್ ಫ್ಲೋಟಿಲ್ಲಾ ತಂಡದ ಎರಡು ಹಡಗುಗಳನ್ನು ಇಸ್ರೇಲ್‌ ವಶಕ್ಕೆ ಪಡೆದಿತ್ತು. ಬಳಿಕ ಆಶ್ಡೋದ್ ಬಂದರಿನಲ್ಲಿ ಗ್ರೇಟಾ ಅವರನ್ನು ಬಂಧಿಸಿದೆ. ಈ ವೇಳೆ ಅವರು ಫ್ಲೋಟಿಲ್ಲಾದ ಅಲ್ಮಾ ಹಡಗಿನಲ್ಲಿದ್ದರು. ಇತ್ತೀಚಿನ ಮಾಹಿತಿ ಪ್ರಕಾರ, ಸಿರಸ್, ಅಲ್ಮಾ, ಸ್ಪೆಕ್ಟ್ರಾ, ಹೋಗಾ, ಅದಾರ ಮತ್ತು ಡೀರ್ ಯಾಸಿನ್ ಸೇರಿದಂತೆ ಫ್ಲೋಟಿಲ್ಲಾದ 6 ಹಡಗುಗಳನ್ನು ಇಸ್ರೇಲ್ ವಶಕ್ಕೆ ಪಡೆದಿದೆ.

ಗ್ರೇಟಾ ಥನ್‌ಬರ್ಗ್ ಬಂಧನದ ವಿಡಿಯೋವನ್ನು ಇಸ್ರೇಲ್ ವಿದೇಶಾಂಗ ಸಚಿವಾಲಯ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿದೆ. “ಈಗಾಗಲೇ ಹಮಾಸ್-ಸುಮುದ್ ಫ್ಲೋಟಿಲ್ಲಾದ ಹಲವಾರು ಹಡಗುಗಳನ್ನು ಸುರಕ್ಷಿತವಾಗಿ ತಡೆಯಲಾಗಿದೆ ಮತ್ತು ಅವುಗಳಲ್ಲಿದ್ದ ಪ್ರಯಾಣಿಕರನ್ನು ಇಸ್ರೇಲಿ ಬಂದರಿಗೆ ಸ್ಥಳಾಂತರಿಸಲಾಗುತ್ತಿದೆ. ಗ್ರೇಟಾ ಮತ್ತು ಆಕೆಯ ಸ್ನೇಹಿತರು ಸುರಕ್ಷಿತ ಮತ್ತು ಆರೋಗ್ಯವಾಗಿದ್ದಾರೆ” ಎಂದು ತಿಳಿಸಿದೆ.

ವಿಶ್ವಸಂಸ್ಥೆಯ ವಿಶೇಷ ವರದಿಗಾರ ಫ್ರಾನ್ಸೆಸ್ಕಾ ಅಲ್ಬನೀಸ್ ಮತ್ತು ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ ಅವರು ಫ್ಲೋಟಿಲ್ಲಾಗೆ ಹಾನಿ ಮಾಡದೆ, ಅವುಗಳು ಗಾಝಾಗೆ ನೆರವು ತಲುಪಿಸಲು ಅನುವು ಮಾಡಿಕೊಡಬೇಕು ಎಂದು ಬುಧವಾರ ಆಗ್ರಹಿಸಿದ್ದರು.

ಇಸ್ರೇಲ್ ದಾಳಿ ಮಾಡುವ ಮುನ್ಸೂಚನೆ ಸಿಕ್ಕಿದ ಹಿನ್ನೆಲೆ, ಗಾಝಾ ಸಮೀಪಿಸುತ್ತಿದ್ದಂತೆ ಸುಮುದ್ ಫ್ಲೋಟಿಲ್ಲಾ ತಂಡ ತಮ್ಮ ಪ್ರಯಾಣವನ್ನು ಸಾಮಾಜಿಕ ಜಾಲತಾಣಗಳಲ್ಲಿ ಬುಧವಾರದಿಂದ ನೇರ ಪ್ರಸಾರ ಮಾಡಿತ್ತು.

ಫ್ಲೋಟಿಲ್ಲಾ ತಂಡವನ್ನು ತಡೆಯುವುದಾಗಿ ಇಸ್ರೇಲ್ ಈಗಾಗಲೇ ಹೇಳಿತ್ತು. ಆದರೆ, ಫ್ಲೋಟಿಲ್ಲಾ ತಂಡ ಇಸ್ರೇಲ್ ದಿಗ್ಬಂಧನ ಮುರಿದು ಗಾಝಾಗೆ ನೆರವು ತಲುಪಿಸುವ ಶಪಥ ಮಾಡಿತ್ತು.

‘ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಎನ್ನುವುದು ಇಸ್ರೇಲ್‌ ಗಾಝಾ ಮೇಲೆ ವಿಧಿಸಿರುವ ದಿಗ್ಭಂಧನವನ್ನು ಭೇದಿಸುವ ಗುರಿಯನ್ನು ಹೊಂದಿರುವ ಒಂದು ಪ್ರಮುಖ ಅಂತಾರಾಷ್ಟ್ರೀಯ ಮಿಷನ್ ಆಗಿದೆ. ಈ ಫ್ಲೋಟಿಲ್ಲಾದಲ್ಲಿ 45 ರಿಂದ 50 ಹಡಗುಗಳು ಇದ್ದು, ಇವು ಮಾನವೀಯ ನೆರವುಗಳಾದ ಆಹಾರ, ಔಷಧ ಮತ್ತು ಇತರ ಅಗತ್ಯ ವಸ್ತುಗಳನ್ನು ಒಯ್ಯುತ್ತಿವೆ. ಜೊತೆಗೆ, ವಿಶ್ವದ ವಿವಿಧ ಭಾಗಗಳ ನೂರಾರು ಪ್ರತಿನಿಧಿಗಳು ಈ ಮಿಷನ್‌ನ ಭಾಗವಾಗಿದ್ದಾರೆ.

ಗಾಝಾ ನಗರದಲ್ಲಿ ಶಾಲೆ, ನಿರಾಶ್ರಿತರ ಶಿಬಿರ, ಕುಡಿಯುವ ನೀರಿನ ಸೌಲಭ್ಯದ ಮೇಲೆ ಇಸ್ರೇಲ್ ಬಾಂಬ್ ದಾಳಿ: ಕನಿಷ್ಠ 16 ಪ್ಯಾಲೆಸ್ತೀನಿಯರು ಸಾವು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...