Homeಅಂತರಾಷ್ಟ್ರೀಯಲೆಬನಾನ್‌ ಮೇಲೆ ಇಸ್ರೇಲ್‌ನಿಂದ ವೈಮಾನಿಕ ದಾಳಿ: ಹೆಚ್ಚಿದ ಪ್ರಾದೇಶಿಕ ಸಂಘರ್ಷದ ಭೀತಿ

ಲೆಬನಾನ್‌ ಮೇಲೆ ಇಸ್ರೇಲ್‌ನಿಂದ ವೈಮಾನಿಕ ದಾಳಿ: ಹೆಚ್ಚಿದ ಪ್ರಾದೇಶಿಕ ಸಂಘರ್ಷದ ಭೀತಿ

- Advertisement -
- Advertisement -

ಇಸ್ರೇಲ್‌- ಲೆಬನಾನ್‌ ಮೇಲೆ ರಾತ್ರೋ ರಾತ್ರಿ ವೈಮಾನಿಕ ದಾಳಿಯನ್ನು ನಡೆಸಿದೆ. ದಾಳಿಯಲ್ಲಿ ಹೆಜ್ಬೊಲ್ಲಾ ಕಮಾಂಡರ್‌ನ್ನು ಹತ್ಯೆ ಮಾಡಿರುವುದಾಗಿ ಹೇಳಿಕೊಂಡಿದ್ದು, ವಿಶ್ವಸಂಸ್ಥೆಯು ಯುದ್ಧ ವ್ಯಾಪಿಸುತ್ತಿರುವ ಬಗ್ಗೆ ಎಚ್ಚರಿಕೆಯನ್ನು ನೀಡಿದೆ. ಗಾಝಾ ನಡುವಿನ ಯುದ್ಧದ ಮಧ್ಯೆ ಇಸ್ರೇಲ್‌ ಇರಾನ್‌ ಮತ್ತು ಲೆಬನಾನ್‌ ಮೇಲೆ ದಾಳಿ ನಡೆಸುತ್ತಿದ್ದು, ಪ್ರಾದೇಶಿಕ ಸಂಘರ್ಷದ ಭೀತಿಯನ್ನು ಹೆಚ್ಚಿಸಿದೆ.

ದಕ್ಷಿಣ ಲೆಬನಾನ್‍ನ ಅಸ್-ಸುಲ್ತಾನಿಯಾ ಪ್ರದೇಶದಲ್ಲಿ ಇಸ್ರೇಲ್‍ ನಡೆಸಿದ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾದ  `ರದ್ವಾನ್ ಪಡೆ’ಯ ಕಮಾಂಡರ್ ಅಲಿ ಅಹ್ಮದ್ ಹುಸೈನ್ ಮೃತಪಟ್ಟಿದ್ದಾರೆ. ದಾಳಿಯಲ್ಲಿ ಇತರ ಮೂವರು ಹಿಜ್ಬುಲ್ಲಾ ಗುಂಪಿನ ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಈ ಮಧ್ಯೆ, ಲೆಬನಾನ್‍ನಿಂದ ಇಸ್ರೇಲ್ ಆಕ್ರಮಿತ ಗೊಲಾನ್ ಹೈಟ್ಸ್‍ಗೆ 10ಕ್ಕೂ ಅಧಿಕ ಕ್ಷಿಪಣಿ ದಾಳಿ ನಡೆದಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಅಲ್‍ಜಝೀರಾ ವರದಿ ಮಾಡಿದೆ. ಈ ಪ್ರದೇಶದಲ್ಲಿ ಸೇನಾ ನೆಲೆ ಮತ್ತು ವಾಯು ರಕ್ಷಣಾ ಪೋಸ್ಟ್‌ಗಳನ್ನು ಗುರಿಯಾಗಿಸಿಕೊಂಡಿರುವುದಾಗಿ ಹಿಜ್ಬುಲ್ಲಾ ಹೋರಾಟಗಾರರು ತಿಳಿಸಿದ್ದಾರೆ.

ಹಿಜ್ಬುಲ್ಲಾ ಮತ್ತು ಇಸ್ರೇಲ್‌ ಮಿಲಿಟರಿಯು ಲೆಬನಾನ್‌ನ ದಕ್ಷಿಣ ಗಡಿಯಲ್ಲಿ ಗಾಝಾ ಯುದ್ಧದ ಮಧ್ಯೆ  ದಾಳಿಯನ್ನು ನಡೆಸುತ್ತಿದೆ. ಇದು ವಿಶಾಲವಾದ ಪ್ರಾದೇಶಿಕ ಸಂಘರ್ಷದ ಭಯವನ್ನು ಹೆಚ್ಚಿಸಿದೆ.

ಇಸ್ರೇಲ್‌ ದಾಳಿಗೆ ಕಳೆದ ಆರು ತಿಂಗಳಲ್ಲಿ ಸುಮಾರು 270 ಹೆಜ್ಬೊಲ್ಲಾ ಹೋರಾಟಗಾರರು ಬಲಿಯಾಗಿದ್ದಾರೆ. ಮಕ್ಕಳು, ವೈದ್ಯರು ಮತ್ತು ಪತ್ರಕರ್ತರು ಸೇರಿದಂತೆ ಸುಮಾರು 50 ನಾಗರಿಕರ ಹತ್ಯೆ ಕೂಡ ನಡೆದಿದೆ. ಹಿಜ್ಬುಲ್ಲಾದ ರಾಕೆಟ್ ದಾಳಿಗೆ 12 ಮಂದಿ ಇಸ್ರೇಲ್‌ ಸೈನಿಕರು ಮತ್ತು 6 ಮಂದಿ ನಾಗರಿಕರು ಹತ್ಯೆಯಾಗಿದ್ದಾರೆ. ಶೆಲ್ ದಾಳಿಯು ಗಡಿಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಸ್ಥಳಾಂತರಕ್ಕೆ ಕಾರಣವಾಗಿದೆ ಮತ್ತು ದಕ್ಷಿಣ ಲೆಬನಾನ್‌ನಲ್ಲಿ ಕೃಷಿ ಆರ್ಥಿಕತೆಯ ಮೇಲೆ ತೀವ್ರವಾಗಿ ಪರಿಣಾಮ ಬೀರಿದೆ.

ಇತ್ತೀಚೆಗೆ ಇರಾನ್‌ನಲ್ಲಿ ರಾಯಭಾರಿ ಕಚೇರಿಯ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ ನಡೆಸಿತ್ತು. ದಾಳಿಯಲ್ಲಿ ಐಆರ್‌ಜಿಸಿಯ ಎಲೈಟ್ ಕುಡ್ಸ್ ಫೋರ್ಸ್‌ನ ಹಿರಿಯ ಕಮಾಂಡರ್ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ರೆಜಾ ಜಹೇದಿ ಮತ್ತು ಉಪ ಜನರಲ್ ಮೊಹಮ್ಮದ್ ಹಾದಿ ಹಜ್ರಿಯಾಹಿಮಿ ಅವರು ಸಾವನ್ನಪ್ಪಿದ್ದರು. ಇಸ್ರೇಲ್‌ನ ಈ ಭಯೋತ್ಪಾದಕ ದಾಳಿಯನ್ನು ಇರಾನ್‌ನ ವಿದೇಶಾಂಗ ಸಚಿವ ಹುಸೇನ್ ಅಮೀರ್-ಅಬ್ದೊಲ್ಲಾಹಿಯಾನ್, ವಿದೇಶಾಂಗ ಸಚಿವಾಲಯದ ವಕ್ತಾರ ನಾಸರ್ ಕನಾನಿ, ಸಿರಿಯಾದ ವಿದೇಶಾಂಗ ಸಚಿವ ಫೈಸಲ್ ಮೆಕ್ದಾದ್ ಸೇರಿ ಹಲವುರು ಖಂಡಿಸಿದ್ದರು. ಇಸ್ರೇಲ್‌ ವಿರುದ್ಧ ಪ್ರತಿಕಾರ ತೀರಿಸುವುದಾಗಿ ಹೇಳಿದ್ದರು.

ಇಬ್ಬರು ಉನ್ನತ ಕಮಾಂಡರ್‌ಗಳ ಹತ್ಯೆಯಿಂದ ಆಕ್ರೋಶಗೊಂಡಿರುವ ಇರಾನ್‌, ಇಸ್ರೇಲ್‍ನ ಯಾವುದೇ ರಾಯಭಾರಿ ಕಚೇರಿಗಳು ಇನ್ನು ಮುಂದೆ ಸುರಕ್ಷಿತವಾಗಿರುವುದಿಲ್ಲ ಎಂದು ಹೇಳಿದೆ. ಇರಾನ್‌ ಮೇಲಿನ ದಾಳಿಯಲ್ಲಿ ಇಸ್ರೇಲ್ ನೇರವಾಗಿ ತನ್ನ ಒಳಗೊಳ್ಳುವಿಕೆಯನ್ನು ಒಪ್ಪಿಕೊಂಡಿಲ್ಲ. ಇಸ್ರೇಲ್ ಯಾವುದೇ ಪ್ರತಿಕ್ರಿಯೆಗೆ ಸಿದ್ಧವಾಗಿದೆ ಎಂದು ನೆತನ್ಯಾಹು ಹೇಳಿದ್ದಾರೆ. ಕಳೆದ 6 ತಿಂಗಳಿನಿಂದ ಗಾಝಾದಲ್ಲಿ ಹತ್ಯಾಕಾಂಡವನ್ನು ನಡೆಸುತ್ತಿರುವ ಇಸ್ರೇಲ್‌ 33,000ಕ್ಕೂ ಅಧಿಕ ಮಂದಿಯನ್ನು ಹತ್ಯೆ ಮಾಡಿತ್ತು. ಆದರೂ ಯುದ್ಧ ದಾಹವನ್ನು ಮುಂದುವರಿಸಿರುವ ಇಸ್ರೇಲ್‌ ದೇಶವು ಇರಾನ್‌, ಲೆಬನಾನ್‌ ಮೇಲೆ ದಾಳಿಯನ್ನು ನಡೆಸುತ್ತಿದ್ದು, ಪ್ರತಿದಾಳಿ, ಪ್ರತಿರೋಧಗಳು ಕೂಡ ನಡೆಯುತ್ತಿದೆ. ಇದು ಇಸ್ರೇಲ್‌-ಗಾಝಾ ಯುದ್ಧದ ಮಧ್ಯೆ ಪ್ರಾದೇಶಿಕ ಸಂಘರ್ಷದ ಭೀತಿಯನ್ನು ಮತ್ತಷ್ಟು ಹೆಚ್ಚಿಸಿದೆ.

ಇದನ್ನು ಓದಿ:  ಬಿಜೆಪಿ ಕೊಟ್ಟ ಪಟ್ಟಿಯಂತೆ ಟಿಎಂಸಿ ನಾಯಕರನ್ನು ಟಾರ್ಗೆಟ್ ಮಾಡುತ್ತಿರುವ ಎನ್‌ಐಎ: ಸಾಕೇತ್ ಗೋಖಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...