Homeಅಂತರಾಷ್ಟ್ರೀಯಲೆಬನಾನ್‌ ಮೇಲೆ ಇಸ್ರೇಲ್‌ನಿಂದ ವೈಮಾನಿಕ ದಾಳಿ: ಹೆಚ್ಚಿದ ಪ್ರಾದೇಶಿಕ ಸಂಘರ್ಷದ ಭೀತಿ

ಲೆಬನಾನ್‌ ಮೇಲೆ ಇಸ್ರೇಲ್‌ನಿಂದ ವೈಮಾನಿಕ ದಾಳಿ: ಹೆಚ್ಚಿದ ಪ್ರಾದೇಶಿಕ ಸಂಘರ್ಷದ ಭೀತಿ

- Advertisement -
- Advertisement -

ಇಸ್ರೇಲ್‌- ಲೆಬನಾನ್‌ ಮೇಲೆ ರಾತ್ರೋ ರಾತ್ರಿ ವೈಮಾನಿಕ ದಾಳಿಯನ್ನು ನಡೆಸಿದೆ. ದಾಳಿಯಲ್ಲಿ ಹೆಜ್ಬೊಲ್ಲಾ ಕಮಾಂಡರ್‌ನ್ನು ಹತ್ಯೆ ಮಾಡಿರುವುದಾಗಿ ಹೇಳಿಕೊಂಡಿದ್ದು, ವಿಶ್ವಸಂಸ್ಥೆಯು ಯುದ್ಧ ವ್ಯಾಪಿಸುತ್ತಿರುವ ಬಗ್ಗೆ ಎಚ್ಚರಿಕೆಯನ್ನು ನೀಡಿದೆ. ಗಾಝಾ ನಡುವಿನ ಯುದ್ಧದ ಮಧ್ಯೆ ಇಸ್ರೇಲ್‌ ಇರಾನ್‌ ಮತ್ತು ಲೆಬನಾನ್‌ ಮೇಲೆ ದಾಳಿ ನಡೆಸುತ್ತಿದ್ದು, ಪ್ರಾದೇಶಿಕ ಸಂಘರ್ಷದ ಭೀತಿಯನ್ನು ಹೆಚ್ಚಿಸಿದೆ.

ದಕ್ಷಿಣ ಲೆಬನಾನ್‍ನ ಅಸ್-ಸುಲ್ತಾನಿಯಾ ಪ್ರದೇಶದಲ್ಲಿ ಇಸ್ರೇಲ್‍ ನಡೆಸಿದ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾದ  `ರದ್ವಾನ್ ಪಡೆ’ಯ ಕಮಾಂಡರ್ ಅಲಿ ಅಹ್ಮದ್ ಹುಸೈನ್ ಮೃತಪಟ್ಟಿದ್ದಾರೆ. ದಾಳಿಯಲ್ಲಿ ಇತರ ಮೂವರು ಹಿಜ್ಬುಲ್ಲಾ ಗುಂಪಿನ ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಈ ಮಧ್ಯೆ, ಲೆಬನಾನ್‍ನಿಂದ ಇಸ್ರೇಲ್ ಆಕ್ರಮಿತ ಗೊಲಾನ್ ಹೈಟ್ಸ್‍ಗೆ 10ಕ್ಕೂ ಅಧಿಕ ಕ್ಷಿಪಣಿ ದಾಳಿ ನಡೆದಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಅಲ್‍ಜಝೀರಾ ವರದಿ ಮಾಡಿದೆ. ಈ ಪ್ರದೇಶದಲ್ಲಿ ಸೇನಾ ನೆಲೆ ಮತ್ತು ವಾಯು ರಕ್ಷಣಾ ಪೋಸ್ಟ್‌ಗಳನ್ನು ಗುರಿಯಾಗಿಸಿಕೊಂಡಿರುವುದಾಗಿ ಹಿಜ್ಬುಲ್ಲಾ ಹೋರಾಟಗಾರರು ತಿಳಿಸಿದ್ದಾರೆ.

ಹಿಜ್ಬುಲ್ಲಾ ಮತ್ತು ಇಸ್ರೇಲ್‌ ಮಿಲಿಟರಿಯು ಲೆಬನಾನ್‌ನ ದಕ್ಷಿಣ ಗಡಿಯಲ್ಲಿ ಗಾಝಾ ಯುದ್ಧದ ಮಧ್ಯೆ  ದಾಳಿಯನ್ನು ನಡೆಸುತ್ತಿದೆ. ಇದು ವಿಶಾಲವಾದ ಪ್ರಾದೇಶಿಕ ಸಂಘರ್ಷದ ಭಯವನ್ನು ಹೆಚ್ಚಿಸಿದೆ.

ಇಸ್ರೇಲ್‌ ದಾಳಿಗೆ ಕಳೆದ ಆರು ತಿಂಗಳಲ್ಲಿ ಸುಮಾರು 270 ಹೆಜ್ಬೊಲ್ಲಾ ಹೋರಾಟಗಾರರು ಬಲಿಯಾಗಿದ್ದಾರೆ. ಮಕ್ಕಳು, ವೈದ್ಯರು ಮತ್ತು ಪತ್ರಕರ್ತರು ಸೇರಿದಂತೆ ಸುಮಾರು 50 ನಾಗರಿಕರ ಹತ್ಯೆ ಕೂಡ ನಡೆದಿದೆ. ಹಿಜ್ಬುಲ್ಲಾದ ರಾಕೆಟ್ ದಾಳಿಗೆ 12 ಮಂದಿ ಇಸ್ರೇಲ್‌ ಸೈನಿಕರು ಮತ್ತು 6 ಮಂದಿ ನಾಗರಿಕರು ಹತ್ಯೆಯಾಗಿದ್ದಾರೆ. ಶೆಲ್ ದಾಳಿಯು ಗಡಿಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಸ್ಥಳಾಂತರಕ್ಕೆ ಕಾರಣವಾಗಿದೆ ಮತ್ತು ದಕ್ಷಿಣ ಲೆಬನಾನ್‌ನಲ್ಲಿ ಕೃಷಿ ಆರ್ಥಿಕತೆಯ ಮೇಲೆ ತೀವ್ರವಾಗಿ ಪರಿಣಾಮ ಬೀರಿದೆ.

ಇತ್ತೀಚೆಗೆ ಇರಾನ್‌ನಲ್ಲಿ ರಾಯಭಾರಿ ಕಚೇರಿಯ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ ನಡೆಸಿತ್ತು. ದಾಳಿಯಲ್ಲಿ ಐಆರ್‌ಜಿಸಿಯ ಎಲೈಟ್ ಕುಡ್ಸ್ ಫೋರ್ಸ್‌ನ ಹಿರಿಯ ಕಮಾಂಡರ್ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ರೆಜಾ ಜಹೇದಿ ಮತ್ತು ಉಪ ಜನರಲ್ ಮೊಹಮ್ಮದ್ ಹಾದಿ ಹಜ್ರಿಯಾಹಿಮಿ ಅವರು ಸಾವನ್ನಪ್ಪಿದ್ದರು. ಇಸ್ರೇಲ್‌ನ ಈ ಭಯೋತ್ಪಾದಕ ದಾಳಿಯನ್ನು ಇರಾನ್‌ನ ವಿದೇಶಾಂಗ ಸಚಿವ ಹುಸೇನ್ ಅಮೀರ್-ಅಬ್ದೊಲ್ಲಾಹಿಯಾನ್, ವಿದೇಶಾಂಗ ಸಚಿವಾಲಯದ ವಕ್ತಾರ ನಾಸರ್ ಕನಾನಿ, ಸಿರಿಯಾದ ವಿದೇಶಾಂಗ ಸಚಿವ ಫೈಸಲ್ ಮೆಕ್ದಾದ್ ಸೇರಿ ಹಲವುರು ಖಂಡಿಸಿದ್ದರು. ಇಸ್ರೇಲ್‌ ವಿರುದ್ಧ ಪ್ರತಿಕಾರ ತೀರಿಸುವುದಾಗಿ ಹೇಳಿದ್ದರು.

ಇಬ್ಬರು ಉನ್ನತ ಕಮಾಂಡರ್‌ಗಳ ಹತ್ಯೆಯಿಂದ ಆಕ್ರೋಶಗೊಂಡಿರುವ ಇರಾನ್‌, ಇಸ್ರೇಲ್‍ನ ಯಾವುದೇ ರಾಯಭಾರಿ ಕಚೇರಿಗಳು ಇನ್ನು ಮುಂದೆ ಸುರಕ್ಷಿತವಾಗಿರುವುದಿಲ್ಲ ಎಂದು ಹೇಳಿದೆ. ಇರಾನ್‌ ಮೇಲಿನ ದಾಳಿಯಲ್ಲಿ ಇಸ್ರೇಲ್ ನೇರವಾಗಿ ತನ್ನ ಒಳಗೊಳ್ಳುವಿಕೆಯನ್ನು ಒಪ್ಪಿಕೊಂಡಿಲ್ಲ. ಇಸ್ರೇಲ್ ಯಾವುದೇ ಪ್ರತಿಕ್ರಿಯೆಗೆ ಸಿದ್ಧವಾಗಿದೆ ಎಂದು ನೆತನ್ಯಾಹು ಹೇಳಿದ್ದಾರೆ. ಕಳೆದ 6 ತಿಂಗಳಿನಿಂದ ಗಾಝಾದಲ್ಲಿ ಹತ್ಯಾಕಾಂಡವನ್ನು ನಡೆಸುತ್ತಿರುವ ಇಸ್ರೇಲ್‌ 33,000ಕ್ಕೂ ಅಧಿಕ ಮಂದಿಯನ್ನು ಹತ್ಯೆ ಮಾಡಿತ್ತು. ಆದರೂ ಯುದ್ಧ ದಾಹವನ್ನು ಮುಂದುವರಿಸಿರುವ ಇಸ್ರೇಲ್‌ ದೇಶವು ಇರಾನ್‌, ಲೆಬನಾನ್‌ ಮೇಲೆ ದಾಳಿಯನ್ನು ನಡೆಸುತ್ತಿದ್ದು, ಪ್ರತಿದಾಳಿ, ಪ್ರತಿರೋಧಗಳು ಕೂಡ ನಡೆಯುತ್ತಿದೆ. ಇದು ಇಸ್ರೇಲ್‌-ಗಾಝಾ ಯುದ್ಧದ ಮಧ್ಯೆ ಪ್ರಾದೇಶಿಕ ಸಂಘರ್ಷದ ಭೀತಿಯನ್ನು ಮತ್ತಷ್ಟು ಹೆಚ್ಚಿಸಿದೆ.

ಇದನ್ನು ಓದಿ:  ಬಿಜೆಪಿ ಕೊಟ್ಟ ಪಟ್ಟಿಯಂತೆ ಟಿಎಂಸಿ ನಾಯಕರನ್ನು ಟಾರ್ಗೆಟ್ ಮಾಡುತ್ತಿರುವ ಎನ್‌ಐಎ: ಸಾಕೇತ್ ಗೋಖಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...