Homeಅಂತರಾಷ್ಟ್ರೀಯಇಸ್ರೇಲ್| ಜೆರುಸಲೇಂ ಬಳಿ ಭೀಕರ ಕಾಡ್ಗಿಚ್ಚು: ಸಾವಿರಾರು ಜನರ ಸ್ಥಳಾಂತರ

ಇಸ್ರೇಲ್| ಜೆರುಸಲೇಂ ಬಳಿ ಭೀಕರ ಕಾಡ್ಗಿಚ್ಚು: ಸಾವಿರಾರು ಜನರ ಸ್ಥಳಾಂತರ

- Advertisement -
- Advertisement -

ಇಸ್ರೇಲ್‌ ರಾಜಧಾನಿ ಜೆರುಸಲೇಂ ನಗರದ ಹೊರವಲಯದಲ್ಲಿ ಭೀಕರ ಕಾಡ್ಗಿಚ್ಚು ಅವರಿಸಿದ್ದು, ಸರ್ಕಾರ ‘ರಾಷ್ಟ್ರೀಯ ತುರ್ತು ಪರಿಸ್ಥಿತಿ’ ಘೋಷಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಬೆಂಕಿಯಿಂದ ಜೆರುಸಲೇಂ ನಗರದ ಸುತ್ತಮುತ್ತಲಿನ ಹೆದ್ದಾರಿಗಳು ಹೊಗೆಯಿಂದ ಆವೃತ್ತವಾಗಿದೆ. ಘಟನಾ ಸ್ಥಳ ಮತ್ತು ಸುತ್ತಮುತ್ತಲಿನ ನಿವಾಸಿಗಳನ್ನು ಸುರಕ್ಷಿತ ಜಾಗಗಳಿಗೆ ಸ್ಥಳಾಂತರ ಮಾಡಲಾಗುತ್ತಿದೆ. ಅಧಿಕಾರಿಗಳು, ರಕ್ಷಣಾ ತಂಡಗಳು ಮತ್ತು ಸೇನಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಇಸ್ರೇಲ್‌ನಲ್ಲಿ ಸಂಭವಿಸಿದ ಅಂತ್ಯಂತ ಭೀಕರ ಕಾಡ್ಗಿಚ್ಚು ಇದಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಇಸ್ರೇಲ್‌ನ ರಕ್ಷಣಾ ಸಂಸ್ಥೆ ಮ್ಯಾಗೆನ್ ಡೇವಿಡ್ ಆಡಮ್ (ಎಂಡಿಎ)ಹೇಳಿದ್ದಾಗಿ ದಿ ಗಾರ್ಡಿಯನ್ ವರದಿ ಮಾಡಿದೆ.

ಇದುವರೆಗೆ ಸುಮಾರು 23 ಜನರಿಗೆ ಚಿಕಿತ್ಸೆ ನೀಡಲಾಗಿದ್ದು, ಅವರಲ್ಲಿ 13 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನವರು ಹೊಗೆಯಿಂದ ಉಸಿರಾಟದ ಸಮಸ್ಯೆ ಮತ್ತು ಬೆಂಕಿ ತಗುಲಿ ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ ಎಂದು ಎಂಡಿಎ ತಿಳಿಸಿದೆ. ಗಾಯಗೊಂಡವರಲ್ಲಿ ಇಬ್ಬರು ಗರ್ಭಿಣಿಯರು ಮತ್ತು ಒಂದು ವರ್ಷದೊಳಗಿನ ಎರಡು ಶಿಶುಗಳಿವೆ ಎಂದು ಅದು ಹೇಳಿದೆ. ಯಾವುದೇ ಮನುಷ್ಯರಿಗೆ ಜೀವಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಮತ್ತು ಫೋಟೋಗಳಲ್ಲಿ ಜೆರುಸಲೇಂನಿಂದ ಟೆಲ್ ಅವಿವ್‌ಗೆ ಹೋಗುವ ಮುಖ್ಯ ಮಾರ್ಗ 1 ರಲ್ಲಿ ಬೆಂಕಿ ಹೊತ್ತಿ ಉರಿಯುತ್ತಿರುವುದು ಕಂಡು ಬಂದಿದೆ. ಸುತ್ತಮುತ್ತಲಿನ ಬೆಟ್ಟಗಳ ತುದಿಯಲ್ಲಿ ದಟ್ಟವಾದ ಹೊಗೆ ಆವರಿಸಿರುವುದು. ಅನೇಕ ಜನರು ತಮ್ಮ ಕಾರುಗಳನ್ನು ತ್ಯಜಿಸಿ ಬೆಂಕಿಯಿಂದ ತಪ್ಪಿಸಿಕೊಳ್ಳಲು ಓಡುತ್ತಿರುವ ನೋಡಬಹುದು.

ಇಸ್ರೇಲಿ ಮಾಧ್ಯಮಗಳ ಪ್ರಕಾರ, 160ಕ್ಕೂ ಹೆಚ್ಚು ರಕ್ಷಣಾ ಮತ್ತು ಅಗ್ನಿಶಾಮಕ ದಳಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಹಲವು ವಿಮಾನ ಮತ್ತು ಹೆಲಿಕಾಪ್ಟರ್‌ಗಳು ಬೆಂಕಿ ನಂದಿಸಲು ಬಳಸಿಕೊಳ್ಳಲಾಗಿದೆ.

ಇಸ್ರೇಲಿ ಸೇನೆ ಕೂಡ ರಕ್ಷಣಾ ಕಾರ್ಯಾಚರಣೆಗಳಿಗೆ ಸಹಾಯ ಮಾಡುತ್ತಿದೆ. ಶುಷ್ಕ ಹವಾಮಾನ ಪರಿಸ್ಥಿತಿ ಮತ್ತು ಬಲವಾದ ಗಾಳಿಯಿಂದ ರಕ್ಷಣಾ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವರದಿಗಳು ಹೇಳಿವೆ.

ಇಸ್ರೇಲಿ ಅಗ್ನಿಶಾಮಕ ದಳ ನಿನ್ನೆ ಸಂಜೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಇದು ಇಸ್ರೇಲ್‌ನಲ್ಲಿ ಸಂಭವಿಸಿದ ಇದುವರೆಗಿನ ಅತಿದೊಡ್ಡ ಬೆಂಕಿ ದುರಂತ ಎಂದು ಹೇಳಿದೆ. ಬೆಂಕಿ ವ್ಯಾಪಿಸಿರುವ ಪ್ರದೇಶ ರಾಷ್ಟ್ರೀಯ ಉದ್ಯಾನವನಗಳು ಮತ್ತು ಕಾಡುಗಳಿಗೆ ಜನರ ಪ್ರವೇಶ ನಿಷೇಧಿಸಲಾಗಿದೆ. ಜೆರುಸಲೇಂನ ಪ್ರಮುಖ ಹೆದ್ದಾರಿ ಮಾರ್ಗ 1 ಸೇರಿದಂತೆ ಅನೇಕ ರಸ್ತೆಗಳನ್ನು ಸಹ ಮುಚ್ಚಲಾಗಿದೆ.

ಇದು ಇಸ್ರೇಲ್‌ನಲ್ಲಿ ಸಂಭವಿಸಿದ ಅತ್ಯಂತ ದೊಡ್ಡ ಅಗ್ನಿ ದುರಂತ. ಬೆಂಕಿ ನಿಯಂತ್ರಣಕ್ಕೆ ಬರಲು ಇನ್ನು ತುಂಬಾ ಸಮಯ ಬೇಕಾಗಬಹುದು. ಸದ್ಯಕ್ಕೆ ಬೆಂಕಿ ಹತೋಟಿ ಬರುತ್ತಿಲ್ಲ. ನಾವು ನಮ್ಮ ಗರಿಷ್ಠ ಪ್ರಯತ್ನ ಮಾಡುತ್ತಿದ್ದೇವೆ ಎಂದು ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಯ ಜೆರುಸಲೇಂ ಜಿಲ್ಲೆಯ ಕಮಾಂಡರ್ ಶ್ಮುಲಿಕ್ ಫ್ರೀಡ್ಮನ್ ಹೇಳಿದ್ದಾರೆ.

ಗಾಳಿಯು ಗಂಟೆಗೆ 90-100 ಕಿಲೋಮೀಟರ್ (56-62 mph) ವೇಗವನ್ನು ಪಡೆದುಕೊಳ್ಳುವ ನಿರೀಕ್ಷೆಯಿರುವುದರಿಂದ ಬೆಂಕಿ ಇನ್ನಷ್ಟು ತೀವ್ರಗೊಳ್ಳಬಹುದು ಎಂದು ಫ್ರೀಡ್ಮನ್ ಆತಂಕ ವ್ಯಕ್ತಪಡಿಸಿದ್ದಾಗಿ ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ.

ಇಸ್ರೇಲಿ ವಾಯುಪಡೆಯು 18,000 ಲೀಟರ್‌ಗಳಷ್ಟು ಅಗ್ನಿಶಾಮಕ ಸಾಮಗ್ರಿಗಳನ್ನು ಹಿಡಿದಿಟ್ಟುಕೊಳ್ಳಬಲ್ಲ C-130J ಸೂಪರ್ ಹರ್ಕ್ಯುಲಸ್ ಭಾರೀ ಸಾರಿಗೆ ವಿಮಾನಗಳನ್ನು ಕಾರ್ಯಾಚರಣೆಯಲ್ಲಿ ನಿಯೋಜಿಸಿದೆ ಎಂದು ವರದಿಯಾಗಿದೆ. ನಿನ್ನೆ ರಾತ್ರಿ ಕನಿಷ್ಠ ಎರಡು ವಿಮಾನಗಳಿಗೆ ಅಗ್ನಿಶಾಮಕ ವಸ್ತುಗಳನ್ನು ತುಂಬಲಾಗಿದೆ.

ಇದುವರೆಗೆ ಸುಮಾರು 3,000 ಎಕರೆ ಭೂಮಿ ಬೆಂಕಿಯಿಂದ ಸುಟ್ಟುಹೋಗಿದೆ ಎಂದು ವರದಿಯಾಗಿದೆ.

ಸ್ವಾತಂತ್ರ್ಯ ದಿನಾಚರಣೆ ರದ್ದು

ಕಾಡ್ಗಿಚ್ಚು ದುರಂತದ ಹಿನ್ನೆಲೆ, ಬುಧವಾರ ನಡೆಯಬೇಕಿದ್ದ ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ. ಜೆರುಸಲೇಂನಲ್ಲಿ ಸರ್ಕಾರದ ವತಿಯಿಂದ ನಡೆಯಬೇಕಿದ್ದ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮ ರದ್ದುಮಾಡಲಾಗಿದೆ. ಕಾರ್ಯಕ್ರಮವನ್ನು ರೆಕಾರ್ಡ್ ಮಾಡಿ ದೇಶದ ಜನರಿಗೆ ಪ್ರದರ್ಶಿಸಲಾಗಿದೆ.

ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಕಾಡ್ಗಿಚ್ಚು ಜೆರುಸಲೇಂ ನಗರದ ತಲುಪಬಹುದು ಎಂದು ಎಚ್ಚರಿಸಿದ್ದಾರೆ. ಗಾಳಿಯ ವೇಗಕ್ಕೆ ಬೆಂಕಿ ನಗರದೊಳಗೆ ವ್ಯಾಪಿಸಬಹುದು ಎಂದು ವಿಡಿಯೋ ಸಂದೇಶದಲ್ಲಿ ಅವರು ಹೇಳಿದ್ದಾರೆ.

ಬಾಂಗ್ಲಾದೇಶ | ದೇಶದ್ರೋಹ ಪ್ರಕರಣದಲ್ಲಿ ಬಂಧಿತರಾಗಿದ್ದ ಇಸ್ಕಾನ್‌ನ ಮಾಜಿ ನಾಯಕನಿಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...