Homeಅಂತರಾಷ್ಟ್ರೀಯಇಸ್ರೇಲ್| ಜೆರುಸಲೇಂ ಬಳಿ ಭೀಕರ ಕಾಡ್ಗಿಚ್ಚು: ಸಾವಿರಾರು ಜನರ ಸ್ಥಳಾಂತರ

ಇಸ್ರೇಲ್| ಜೆರುಸಲೇಂ ಬಳಿ ಭೀಕರ ಕಾಡ್ಗಿಚ್ಚು: ಸಾವಿರಾರು ಜನರ ಸ್ಥಳಾಂತರ

- Advertisement -
- Advertisement -

ಇಸ್ರೇಲ್‌ ರಾಜಧಾನಿ ಜೆರುಸಲೇಂ ನಗರದ ಹೊರವಲಯದಲ್ಲಿ ಭೀಕರ ಕಾಡ್ಗಿಚ್ಚು ಅವರಿಸಿದ್ದು, ಸರ್ಕಾರ ‘ರಾಷ್ಟ್ರೀಯ ತುರ್ತು ಪರಿಸ್ಥಿತಿ’ ಘೋಷಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಬೆಂಕಿಯಿಂದ ಜೆರುಸಲೇಂ ನಗರದ ಸುತ್ತಮುತ್ತಲಿನ ಹೆದ್ದಾರಿಗಳು ಹೊಗೆಯಿಂದ ಆವೃತ್ತವಾಗಿದೆ. ಘಟನಾ ಸ್ಥಳ ಮತ್ತು ಸುತ್ತಮುತ್ತಲಿನ ನಿವಾಸಿಗಳನ್ನು ಸುರಕ್ಷಿತ ಜಾಗಗಳಿಗೆ ಸ್ಥಳಾಂತರ ಮಾಡಲಾಗುತ್ತಿದೆ. ಅಧಿಕಾರಿಗಳು, ರಕ್ಷಣಾ ತಂಡಗಳು ಮತ್ತು ಸೇನಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಇಸ್ರೇಲ್‌ನಲ್ಲಿ ಸಂಭವಿಸಿದ ಅಂತ್ಯಂತ ಭೀಕರ ಕಾಡ್ಗಿಚ್ಚು ಇದಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಇಸ್ರೇಲ್‌ನ ರಕ್ಷಣಾ ಸಂಸ್ಥೆ ಮ್ಯಾಗೆನ್ ಡೇವಿಡ್ ಆಡಮ್ (ಎಂಡಿಎ)ಹೇಳಿದ್ದಾಗಿ ದಿ ಗಾರ್ಡಿಯನ್ ವರದಿ ಮಾಡಿದೆ.

ಇದುವರೆಗೆ ಸುಮಾರು 23 ಜನರಿಗೆ ಚಿಕಿತ್ಸೆ ನೀಡಲಾಗಿದ್ದು, ಅವರಲ್ಲಿ 13 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನವರು ಹೊಗೆಯಿಂದ ಉಸಿರಾಟದ ಸಮಸ್ಯೆ ಮತ್ತು ಬೆಂಕಿ ತಗುಲಿ ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ ಎಂದು ಎಂಡಿಎ ತಿಳಿಸಿದೆ. ಗಾಯಗೊಂಡವರಲ್ಲಿ ಇಬ್ಬರು ಗರ್ಭಿಣಿಯರು ಮತ್ತು ಒಂದು ವರ್ಷದೊಳಗಿನ ಎರಡು ಶಿಶುಗಳಿವೆ ಎಂದು ಅದು ಹೇಳಿದೆ. ಯಾವುದೇ ಮನುಷ್ಯರಿಗೆ ಜೀವಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಮತ್ತು ಫೋಟೋಗಳಲ್ಲಿ ಜೆರುಸಲೇಂನಿಂದ ಟೆಲ್ ಅವಿವ್‌ಗೆ ಹೋಗುವ ಮುಖ್ಯ ಮಾರ್ಗ 1 ರಲ್ಲಿ ಬೆಂಕಿ ಹೊತ್ತಿ ಉರಿಯುತ್ತಿರುವುದು ಕಂಡು ಬಂದಿದೆ. ಸುತ್ತಮುತ್ತಲಿನ ಬೆಟ್ಟಗಳ ತುದಿಯಲ್ಲಿ ದಟ್ಟವಾದ ಹೊಗೆ ಆವರಿಸಿರುವುದು. ಅನೇಕ ಜನರು ತಮ್ಮ ಕಾರುಗಳನ್ನು ತ್ಯಜಿಸಿ ಬೆಂಕಿಯಿಂದ ತಪ್ಪಿಸಿಕೊಳ್ಳಲು ಓಡುತ್ತಿರುವ ನೋಡಬಹುದು.

ಇಸ್ರೇಲಿ ಮಾಧ್ಯಮಗಳ ಪ್ರಕಾರ, 160ಕ್ಕೂ ಹೆಚ್ಚು ರಕ್ಷಣಾ ಮತ್ತು ಅಗ್ನಿಶಾಮಕ ದಳಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಹಲವು ವಿಮಾನ ಮತ್ತು ಹೆಲಿಕಾಪ್ಟರ್‌ಗಳು ಬೆಂಕಿ ನಂದಿಸಲು ಬಳಸಿಕೊಳ್ಳಲಾಗಿದೆ.

ಇಸ್ರೇಲಿ ಸೇನೆ ಕೂಡ ರಕ್ಷಣಾ ಕಾರ್ಯಾಚರಣೆಗಳಿಗೆ ಸಹಾಯ ಮಾಡುತ್ತಿದೆ. ಶುಷ್ಕ ಹವಾಮಾನ ಪರಿಸ್ಥಿತಿ ಮತ್ತು ಬಲವಾದ ಗಾಳಿಯಿಂದ ರಕ್ಷಣಾ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವರದಿಗಳು ಹೇಳಿವೆ.

ಇಸ್ರೇಲಿ ಅಗ್ನಿಶಾಮಕ ದಳ ನಿನ್ನೆ ಸಂಜೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಇದು ಇಸ್ರೇಲ್‌ನಲ್ಲಿ ಸಂಭವಿಸಿದ ಇದುವರೆಗಿನ ಅತಿದೊಡ್ಡ ಬೆಂಕಿ ದುರಂತ ಎಂದು ಹೇಳಿದೆ. ಬೆಂಕಿ ವ್ಯಾಪಿಸಿರುವ ಪ್ರದೇಶ ರಾಷ್ಟ್ರೀಯ ಉದ್ಯಾನವನಗಳು ಮತ್ತು ಕಾಡುಗಳಿಗೆ ಜನರ ಪ್ರವೇಶ ನಿಷೇಧಿಸಲಾಗಿದೆ. ಜೆರುಸಲೇಂನ ಪ್ರಮುಖ ಹೆದ್ದಾರಿ ಮಾರ್ಗ 1 ಸೇರಿದಂತೆ ಅನೇಕ ರಸ್ತೆಗಳನ್ನು ಸಹ ಮುಚ್ಚಲಾಗಿದೆ.

ಇದು ಇಸ್ರೇಲ್‌ನಲ್ಲಿ ಸಂಭವಿಸಿದ ಅತ್ಯಂತ ದೊಡ್ಡ ಅಗ್ನಿ ದುರಂತ. ಬೆಂಕಿ ನಿಯಂತ್ರಣಕ್ಕೆ ಬರಲು ಇನ್ನು ತುಂಬಾ ಸಮಯ ಬೇಕಾಗಬಹುದು. ಸದ್ಯಕ್ಕೆ ಬೆಂಕಿ ಹತೋಟಿ ಬರುತ್ತಿಲ್ಲ. ನಾವು ನಮ್ಮ ಗರಿಷ್ಠ ಪ್ರಯತ್ನ ಮಾಡುತ್ತಿದ್ದೇವೆ ಎಂದು ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಯ ಜೆರುಸಲೇಂ ಜಿಲ್ಲೆಯ ಕಮಾಂಡರ್ ಶ್ಮುಲಿಕ್ ಫ್ರೀಡ್ಮನ್ ಹೇಳಿದ್ದಾರೆ.

ಗಾಳಿಯು ಗಂಟೆಗೆ 90-100 ಕಿಲೋಮೀಟರ್ (56-62 mph) ವೇಗವನ್ನು ಪಡೆದುಕೊಳ್ಳುವ ನಿರೀಕ್ಷೆಯಿರುವುದರಿಂದ ಬೆಂಕಿ ಇನ್ನಷ್ಟು ತೀವ್ರಗೊಳ್ಳಬಹುದು ಎಂದು ಫ್ರೀಡ್ಮನ್ ಆತಂಕ ವ್ಯಕ್ತಪಡಿಸಿದ್ದಾಗಿ ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ.

ಇಸ್ರೇಲಿ ವಾಯುಪಡೆಯು 18,000 ಲೀಟರ್‌ಗಳಷ್ಟು ಅಗ್ನಿಶಾಮಕ ಸಾಮಗ್ರಿಗಳನ್ನು ಹಿಡಿದಿಟ್ಟುಕೊಳ್ಳಬಲ್ಲ C-130J ಸೂಪರ್ ಹರ್ಕ್ಯುಲಸ್ ಭಾರೀ ಸಾರಿಗೆ ವಿಮಾನಗಳನ್ನು ಕಾರ್ಯಾಚರಣೆಯಲ್ಲಿ ನಿಯೋಜಿಸಿದೆ ಎಂದು ವರದಿಯಾಗಿದೆ. ನಿನ್ನೆ ರಾತ್ರಿ ಕನಿಷ್ಠ ಎರಡು ವಿಮಾನಗಳಿಗೆ ಅಗ್ನಿಶಾಮಕ ವಸ್ತುಗಳನ್ನು ತುಂಬಲಾಗಿದೆ.

ಇದುವರೆಗೆ ಸುಮಾರು 3,000 ಎಕರೆ ಭೂಮಿ ಬೆಂಕಿಯಿಂದ ಸುಟ್ಟುಹೋಗಿದೆ ಎಂದು ವರದಿಯಾಗಿದೆ.

ಸ್ವಾತಂತ್ರ್ಯ ದಿನಾಚರಣೆ ರದ್ದು

ಕಾಡ್ಗಿಚ್ಚು ದುರಂತದ ಹಿನ್ನೆಲೆ, ಬುಧವಾರ ನಡೆಯಬೇಕಿದ್ದ ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ. ಜೆರುಸಲೇಂನಲ್ಲಿ ಸರ್ಕಾರದ ವತಿಯಿಂದ ನಡೆಯಬೇಕಿದ್ದ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮ ರದ್ದುಮಾಡಲಾಗಿದೆ. ಕಾರ್ಯಕ್ರಮವನ್ನು ರೆಕಾರ್ಡ್ ಮಾಡಿ ದೇಶದ ಜನರಿಗೆ ಪ್ರದರ್ಶಿಸಲಾಗಿದೆ.

ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಕಾಡ್ಗಿಚ್ಚು ಜೆರುಸಲೇಂ ನಗರದ ತಲುಪಬಹುದು ಎಂದು ಎಚ್ಚರಿಸಿದ್ದಾರೆ. ಗಾಳಿಯ ವೇಗಕ್ಕೆ ಬೆಂಕಿ ನಗರದೊಳಗೆ ವ್ಯಾಪಿಸಬಹುದು ಎಂದು ವಿಡಿಯೋ ಸಂದೇಶದಲ್ಲಿ ಅವರು ಹೇಳಿದ್ದಾರೆ.

ಬಾಂಗ್ಲಾದೇಶ | ದೇಶದ್ರೋಹ ಪ್ರಕರಣದಲ್ಲಿ ಬಂಧಿತರಾಗಿದ್ದ ಇಸ್ಕಾನ್‌ನ ಮಾಜಿ ನಾಯಕನಿಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...

ಶಬರಿಮಲೆ ತುಪ್ಪ ಮಾರಾಟ ಹಗರಣ: ತನಿಖೆ ಪೂರ್ಣಗೊಳಿಸಲು ವಿಎಸಿಬಿಗೆ 30 ದಿನ ಕಾಲಾವಕಾಶ ನೀಡಿದ ಕೇರಳ ಹೈಕೋರ್ಟ್ 

ಕೊಚ್ಚಿ: ಶಬರಿಮಲೆಯ ಅಯ್ಯಪ್ಪ ದೇಗುಲದಲ್ಲಿ ಭಕ್ತರಿಗೆ ಮಾರಾಟವಾಗುವ ಪವಿತ್ರ ನೈವೇದ್ಯ 'ಆದಿಯ ಸಿಷ್ಟಂ ತುಪ್ಪ' ಮಾರಾಟಕ್ಕೆ ಸಂಬಂಧಿಸಿದಂತೆ ಟಿಡಿಬಿ ನೌಕರರು ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪದ ತನಿಖೆಯನ್ನು ಪೂರ್ಣಗೊಳಿಸಲು ಕೇರಳ ಹೈಕೋರ್ಟ್ ಜಾಗೃತ...

ಧಾರ್ಮಿಕ ಆಚರಣೆ ಹೆಸರಿನಲ್ಲಿ ನರ್ಮದಾ ನದಿಗೆ 11,000 ಲೀಟರ್ ಹಾಲು ಸುರಿದ ಭಕ್ತರು

ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯ ನರ್ಮದಾ ನದಿ ದಂಡೆಯಲ್ಲಿ ಬುಧವಾರ ನಡೆದ ಧಾರ್ಮಿಕ ಆಚರಣೆಯ ಸಂದರ್ಭದಲ್ಲಿ 11,000 ಲೀಟರ್ ಹಾಲು ನರ್ಮದಾ ನದಿಗೆ ಸುರಿಯಲಾಗಿದ್ದು, ಇದು ನಂಬಿಕೆ ಮತ್ತು ಪರಿಸರ ಹಾನಿಯ ಕುರಿತು ಚರ್ಚೆಗೆ...

ಪಶ್ಚಿಮ ಬಂಗಾಳ: ಹುಮಾಯೂನ್ ಕಬೀರ್ ಪಕ್ಷದೊಂದಿಗಿನ ಮೈತ್ರಿ ಹಿಂತೆಗೆದುಕೊಂಡ ಎಐಎಂಐಎಂ; ಸ್ವತಂತ್ರ ಸ್ಪರ್ಧೆ ಘೋಷಣೆ

ಮುಂಬರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಹುಮಾಯೂನ್ ಕಬೀರ್ ನೇತೃತ್ವದ ಪಕ್ಷದೊಂದಿಗಿನ ಮೈತ್ರಿಯಿಂದ ಹಿಂದೆ ಸರಿಯುತ್ತಿರುವುದಾಗಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಘೋಷಿಸಿದೆ. ಕಬೀರ್ ಅವರ ಹೇಳಿಕೆಗಳು ಮತ್ತು ಬಹಿರಂಗಪಡಿಸುವಿಕೆಗಳು "ಮುಸ್ಲಿಮರ ಸಮಗ್ರತೆ"ಯ ಬಗ್ಗೆ...