Homeಅಂತರಾಷ್ಟ್ರೀಯಇಸ್ರೇಲ್| ಜೆರುಸಲೇಂ ಬಳಿ ಭೀಕರ ಕಾಡ್ಗಿಚ್ಚು: ಸಾವಿರಾರು ಜನರ ಸ್ಥಳಾಂತರ

ಇಸ್ರೇಲ್| ಜೆರುಸಲೇಂ ಬಳಿ ಭೀಕರ ಕಾಡ್ಗಿಚ್ಚು: ಸಾವಿರಾರು ಜನರ ಸ್ಥಳಾಂತರ

- Advertisement -
- Advertisement -

ಇಸ್ರೇಲ್‌ ರಾಜಧಾನಿ ಜೆರುಸಲೇಂ ನಗರದ ಹೊರವಲಯದಲ್ಲಿ ಭೀಕರ ಕಾಡ್ಗಿಚ್ಚು ಅವರಿಸಿದ್ದು, ಸರ್ಕಾರ ‘ರಾಷ್ಟ್ರೀಯ ತುರ್ತು ಪರಿಸ್ಥಿತಿ’ ಘೋಷಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಬೆಂಕಿಯಿಂದ ಜೆರುಸಲೇಂ ನಗರದ ಸುತ್ತಮುತ್ತಲಿನ ಹೆದ್ದಾರಿಗಳು ಹೊಗೆಯಿಂದ ಆವೃತ್ತವಾಗಿದೆ. ಘಟನಾ ಸ್ಥಳ ಮತ್ತು ಸುತ್ತಮುತ್ತಲಿನ ನಿವಾಸಿಗಳನ್ನು ಸುರಕ್ಷಿತ ಜಾಗಗಳಿಗೆ ಸ್ಥಳಾಂತರ ಮಾಡಲಾಗುತ್ತಿದೆ. ಅಧಿಕಾರಿಗಳು, ರಕ್ಷಣಾ ತಂಡಗಳು ಮತ್ತು ಸೇನಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಇಸ್ರೇಲ್‌ನಲ್ಲಿ ಸಂಭವಿಸಿದ ಅಂತ್ಯಂತ ಭೀಕರ ಕಾಡ್ಗಿಚ್ಚು ಇದಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಇಸ್ರೇಲ್‌ನ ರಕ್ಷಣಾ ಸಂಸ್ಥೆ ಮ್ಯಾಗೆನ್ ಡೇವಿಡ್ ಆಡಮ್ (ಎಂಡಿಎ)ಹೇಳಿದ್ದಾಗಿ ದಿ ಗಾರ್ಡಿಯನ್ ವರದಿ ಮಾಡಿದೆ.

ಇದುವರೆಗೆ ಸುಮಾರು 23 ಜನರಿಗೆ ಚಿಕಿತ್ಸೆ ನೀಡಲಾಗಿದ್ದು, ಅವರಲ್ಲಿ 13 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನವರು ಹೊಗೆಯಿಂದ ಉಸಿರಾಟದ ಸಮಸ್ಯೆ ಮತ್ತು ಬೆಂಕಿ ತಗುಲಿ ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ ಎಂದು ಎಂಡಿಎ ತಿಳಿಸಿದೆ. ಗಾಯಗೊಂಡವರಲ್ಲಿ ಇಬ್ಬರು ಗರ್ಭಿಣಿಯರು ಮತ್ತು ಒಂದು ವರ್ಷದೊಳಗಿನ ಎರಡು ಶಿಶುಗಳಿವೆ ಎಂದು ಅದು ಹೇಳಿದೆ. ಯಾವುದೇ ಮನುಷ್ಯರಿಗೆ ಜೀವಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಮತ್ತು ಫೋಟೋಗಳಲ್ಲಿ ಜೆರುಸಲೇಂನಿಂದ ಟೆಲ್ ಅವಿವ್‌ಗೆ ಹೋಗುವ ಮುಖ್ಯ ಮಾರ್ಗ 1 ರಲ್ಲಿ ಬೆಂಕಿ ಹೊತ್ತಿ ಉರಿಯುತ್ತಿರುವುದು ಕಂಡು ಬಂದಿದೆ. ಸುತ್ತಮುತ್ತಲಿನ ಬೆಟ್ಟಗಳ ತುದಿಯಲ್ಲಿ ದಟ್ಟವಾದ ಹೊಗೆ ಆವರಿಸಿರುವುದು. ಅನೇಕ ಜನರು ತಮ್ಮ ಕಾರುಗಳನ್ನು ತ್ಯಜಿಸಿ ಬೆಂಕಿಯಿಂದ ತಪ್ಪಿಸಿಕೊಳ್ಳಲು ಓಡುತ್ತಿರುವ ನೋಡಬಹುದು.

ಇಸ್ರೇಲಿ ಮಾಧ್ಯಮಗಳ ಪ್ರಕಾರ, 160ಕ್ಕೂ ಹೆಚ್ಚು ರಕ್ಷಣಾ ಮತ್ತು ಅಗ್ನಿಶಾಮಕ ದಳಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಹಲವು ವಿಮಾನ ಮತ್ತು ಹೆಲಿಕಾಪ್ಟರ್‌ಗಳು ಬೆಂಕಿ ನಂದಿಸಲು ಬಳಸಿಕೊಳ್ಳಲಾಗಿದೆ.

ಇಸ್ರೇಲಿ ಸೇನೆ ಕೂಡ ರಕ್ಷಣಾ ಕಾರ್ಯಾಚರಣೆಗಳಿಗೆ ಸಹಾಯ ಮಾಡುತ್ತಿದೆ. ಶುಷ್ಕ ಹವಾಮಾನ ಪರಿಸ್ಥಿತಿ ಮತ್ತು ಬಲವಾದ ಗಾಳಿಯಿಂದ ರಕ್ಷಣಾ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವರದಿಗಳು ಹೇಳಿವೆ.

ಇಸ್ರೇಲಿ ಅಗ್ನಿಶಾಮಕ ದಳ ನಿನ್ನೆ ಸಂಜೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಇದು ಇಸ್ರೇಲ್‌ನಲ್ಲಿ ಸಂಭವಿಸಿದ ಇದುವರೆಗಿನ ಅತಿದೊಡ್ಡ ಬೆಂಕಿ ದುರಂತ ಎಂದು ಹೇಳಿದೆ. ಬೆಂಕಿ ವ್ಯಾಪಿಸಿರುವ ಪ್ರದೇಶ ರಾಷ್ಟ್ರೀಯ ಉದ್ಯಾನವನಗಳು ಮತ್ತು ಕಾಡುಗಳಿಗೆ ಜನರ ಪ್ರವೇಶ ನಿಷೇಧಿಸಲಾಗಿದೆ. ಜೆರುಸಲೇಂನ ಪ್ರಮುಖ ಹೆದ್ದಾರಿ ಮಾರ್ಗ 1 ಸೇರಿದಂತೆ ಅನೇಕ ರಸ್ತೆಗಳನ್ನು ಸಹ ಮುಚ್ಚಲಾಗಿದೆ.

ಇದು ಇಸ್ರೇಲ್‌ನಲ್ಲಿ ಸಂಭವಿಸಿದ ಅತ್ಯಂತ ದೊಡ್ಡ ಅಗ್ನಿ ದುರಂತ. ಬೆಂಕಿ ನಿಯಂತ್ರಣಕ್ಕೆ ಬರಲು ಇನ್ನು ತುಂಬಾ ಸಮಯ ಬೇಕಾಗಬಹುದು. ಸದ್ಯಕ್ಕೆ ಬೆಂಕಿ ಹತೋಟಿ ಬರುತ್ತಿಲ್ಲ. ನಾವು ನಮ್ಮ ಗರಿಷ್ಠ ಪ್ರಯತ್ನ ಮಾಡುತ್ತಿದ್ದೇವೆ ಎಂದು ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಯ ಜೆರುಸಲೇಂ ಜಿಲ್ಲೆಯ ಕಮಾಂಡರ್ ಶ್ಮುಲಿಕ್ ಫ್ರೀಡ್ಮನ್ ಹೇಳಿದ್ದಾರೆ.

ಗಾಳಿಯು ಗಂಟೆಗೆ 90-100 ಕಿಲೋಮೀಟರ್ (56-62 mph) ವೇಗವನ್ನು ಪಡೆದುಕೊಳ್ಳುವ ನಿರೀಕ್ಷೆಯಿರುವುದರಿಂದ ಬೆಂಕಿ ಇನ್ನಷ್ಟು ತೀವ್ರಗೊಳ್ಳಬಹುದು ಎಂದು ಫ್ರೀಡ್ಮನ್ ಆತಂಕ ವ್ಯಕ್ತಪಡಿಸಿದ್ದಾಗಿ ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ.

ಇಸ್ರೇಲಿ ವಾಯುಪಡೆಯು 18,000 ಲೀಟರ್‌ಗಳಷ್ಟು ಅಗ್ನಿಶಾಮಕ ಸಾಮಗ್ರಿಗಳನ್ನು ಹಿಡಿದಿಟ್ಟುಕೊಳ್ಳಬಲ್ಲ C-130J ಸೂಪರ್ ಹರ್ಕ್ಯುಲಸ್ ಭಾರೀ ಸಾರಿಗೆ ವಿಮಾನಗಳನ್ನು ಕಾರ್ಯಾಚರಣೆಯಲ್ಲಿ ನಿಯೋಜಿಸಿದೆ ಎಂದು ವರದಿಯಾಗಿದೆ. ನಿನ್ನೆ ರಾತ್ರಿ ಕನಿಷ್ಠ ಎರಡು ವಿಮಾನಗಳಿಗೆ ಅಗ್ನಿಶಾಮಕ ವಸ್ತುಗಳನ್ನು ತುಂಬಲಾಗಿದೆ.

ಇದುವರೆಗೆ ಸುಮಾರು 3,000 ಎಕರೆ ಭೂಮಿ ಬೆಂಕಿಯಿಂದ ಸುಟ್ಟುಹೋಗಿದೆ ಎಂದು ವರದಿಯಾಗಿದೆ.

ಸ್ವಾತಂತ್ರ್ಯ ದಿನಾಚರಣೆ ರದ್ದು

ಕಾಡ್ಗಿಚ್ಚು ದುರಂತದ ಹಿನ್ನೆಲೆ, ಬುಧವಾರ ನಡೆಯಬೇಕಿದ್ದ ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ. ಜೆರುಸಲೇಂನಲ್ಲಿ ಸರ್ಕಾರದ ವತಿಯಿಂದ ನಡೆಯಬೇಕಿದ್ದ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮ ರದ್ದುಮಾಡಲಾಗಿದೆ. ಕಾರ್ಯಕ್ರಮವನ್ನು ರೆಕಾರ್ಡ್ ಮಾಡಿ ದೇಶದ ಜನರಿಗೆ ಪ್ರದರ್ಶಿಸಲಾಗಿದೆ.

ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಕಾಡ್ಗಿಚ್ಚು ಜೆರುಸಲೇಂ ನಗರದ ತಲುಪಬಹುದು ಎಂದು ಎಚ್ಚರಿಸಿದ್ದಾರೆ. ಗಾಳಿಯ ವೇಗಕ್ಕೆ ಬೆಂಕಿ ನಗರದೊಳಗೆ ವ್ಯಾಪಿಸಬಹುದು ಎಂದು ವಿಡಿಯೋ ಸಂದೇಶದಲ್ಲಿ ಅವರು ಹೇಳಿದ್ದಾರೆ.

ಬಾಂಗ್ಲಾದೇಶ | ದೇಶದ್ರೋಹ ಪ್ರಕರಣದಲ್ಲಿ ಬಂಧಿತರಾಗಿದ್ದ ಇಸ್ಕಾನ್‌ನ ಮಾಜಿ ನಾಯಕನಿಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...