Homeಅಂತರಾಷ್ಟ್ರೀಯಇಸ್ರೇಲ್| ಜೆರುಸಲೇಂ ಬಳಿ ಭೀಕರ ಕಾಡ್ಗಿಚ್ಚು: ಸಾವಿರಾರು ಜನರ ಸ್ಥಳಾಂತರ

ಇಸ್ರೇಲ್| ಜೆರುಸಲೇಂ ಬಳಿ ಭೀಕರ ಕಾಡ್ಗಿಚ್ಚು: ಸಾವಿರಾರು ಜನರ ಸ್ಥಳಾಂತರ

- Advertisement -
- Advertisement -

ಇಸ್ರೇಲ್‌ ರಾಜಧಾನಿ ಜೆರುಸಲೇಂ ನಗರದ ಹೊರವಲಯದಲ್ಲಿ ಭೀಕರ ಕಾಡ್ಗಿಚ್ಚು ಅವರಿಸಿದ್ದು, ಸರ್ಕಾರ ‘ರಾಷ್ಟ್ರೀಯ ತುರ್ತು ಪರಿಸ್ಥಿತಿ’ ಘೋಷಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಬೆಂಕಿಯಿಂದ ಜೆರುಸಲೇಂ ನಗರದ ಸುತ್ತಮುತ್ತಲಿನ ಹೆದ್ದಾರಿಗಳು ಹೊಗೆಯಿಂದ ಆವೃತ್ತವಾಗಿದೆ. ಘಟನಾ ಸ್ಥಳ ಮತ್ತು ಸುತ್ತಮುತ್ತಲಿನ ನಿವಾಸಿಗಳನ್ನು ಸುರಕ್ಷಿತ ಜಾಗಗಳಿಗೆ ಸ್ಥಳಾಂತರ ಮಾಡಲಾಗುತ್ತಿದೆ. ಅಧಿಕಾರಿಗಳು, ರಕ್ಷಣಾ ತಂಡಗಳು ಮತ್ತು ಸೇನಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಇಸ್ರೇಲ್‌ನಲ್ಲಿ ಸಂಭವಿಸಿದ ಅಂತ್ಯಂತ ಭೀಕರ ಕಾಡ್ಗಿಚ್ಚು ಇದಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಇಸ್ರೇಲ್‌ನ ರಕ್ಷಣಾ ಸಂಸ್ಥೆ ಮ್ಯಾಗೆನ್ ಡೇವಿಡ್ ಆಡಮ್ (ಎಂಡಿಎ)ಹೇಳಿದ್ದಾಗಿ ದಿ ಗಾರ್ಡಿಯನ್ ವರದಿ ಮಾಡಿದೆ.

ಇದುವರೆಗೆ ಸುಮಾರು 23 ಜನರಿಗೆ ಚಿಕಿತ್ಸೆ ನೀಡಲಾಗಿದ್ದು, ಅವರಲ್ಲಿ 13 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನವರು ಹೊಗೆಯಿಂದ ಉಸಿರಾಟದ ಸಮಸ್ಯೆ ಮತ್ತು ಬೆಂಕಿ ತಗುಲಿ ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ ಎಂದು ಎಂಡಿಎ ತಿಳಿಸಿದೆ. ಗಾಯಗೊಂಡವರಲ್ಲಿ ಇಬ್ಬರು ಗರ್ಭಿಣಿಯರು ಮತ್ತು ಒಂದು ವರ್ಷದೊಳಗಿನ ಎರಡು ಶಿಶುಗಳಿವೆ ಎಂದು ಅದು ಹೇಳಿದೆ. ಯಾವುದೇ ಮನುಷ್ಯರಿಗೆ ಜೀವಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಮತ್ತು ಫೋಟೋಗಳಲ್ಲಿ ಜೆರುಸಲೇಂನಿಂದ ಟೆಲ್ ಅವಿವ್‌ಗೆ ಹೋಗುವ ಮುಖ್ಯ ಮಾರ್ಗ 1 ರಲ್ಲಿ ಬೆಂಕಿ ಹೊತ್ತಿ ಉರಿಯುತ್ತಿರುವುದು ಕಂಡು ಬಂದಿದೆ. ಸುತ್ತಮುತ್ತಲಿನ ಬೆಟ್ಟಗಳ ತುದಿಯಲ್ಲಿ ದಟ್ಟವಾದ ಹೊಗೆ ಆವರಿಸಿರುವುದು. ಅನೇಕ ಜನರು ತಮ್ಮ ಕಾರುಗಳನ್ನು ತ್ಯಜಿಸಿ ಬೆಂಕಿಯಿಂದ ತಪ್ಪಿಸಿಕೊಳ್ಳಲು ಓಡುತ್ತಿರುವ ನೋಡಬಹುದು.

ಇಸ್ರೇಲಿ ಮಾಧ್ಯಮಗಳ ಪ್ರಕಾರ, 160ಕ್ಕೂ ಹೆಚ್ಚು ರಕ್ಷಣಾ ಮತ್ತು ಅಗ್ನಿಶಾಮಕ ದಳಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಹಲವು ವಿಮಾನ ಮತ್ತು ಹೆಲಿಕಾಪ್ಟರ್‌ಗಳು ಬೆಂಕಿ ನಂದಿಸಲು ಬಳಸಿಕೊಳ್ಳಲಾಗಿದೆ.

ಇಸ್ರೇಲಿ ಸೇನೆ ಕೂಡ ರಕ್ಷಣಾ ಕಾರ್ಯಾಚರಣೆಗಳಿಗೆ ಸಹಾಯ ಮಾಡುತ್ತಿದೆ. ಶುಷ್ಕ ಹವಾಮಾನ ಪರಿಸ್ಥಿತಿ ಮತ್ತು ಬಲವಾದ ಗಾಳಿಯಿಂದ ರಕ್ಷಣಾ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವರದಿಗಳು ಹೇಳಿವೆ.

ಇಸ್ರೇಲಿ ಅಗ್ನಿಶಾಮಕ ದಳ ನಿನ್ನೆ ಸಂಜೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಇದು ಇಸ್ರೇಲ್‌ನಲ್ಲಿ ಸಂಭವಿಸಿದ ಇದುವರೆಗಿನ ಅತಿದೊಡ್ಡ ಬೆಂಕಿ ದುರಂತ ಎಂದು ಹೇಳಿದೆ. ಬೆಂಕಿ ವ್ಯಾಪಿಸಿರುವ ಪ್ರದೇಶ ರಾಷ್ಟ್ರೀಯ ಉದ್ಯಾನವನಗಳು ಮತ್ತು ಕಾಡುಗಳಿಗೆ ಜನರ ಪ್ರವೇಶ ನಿಷೇಧಿಸಲಾಗಿದೆ. ಜೆರುಸಲೇಂನ ಪ್ರಮುಖ ಹೆದ್ದಾರಿ ಮಾರ್ಗ 1 ಸೇರಿದಂತೆ ಅನೇಕ ರಸ್ತೆಗಳನ್ನು ಸಹ ಮುಚ್ಚಲಾಗಿದೆ.

ಇದು ಇಸ್ರೇಲ್‌ನಲ್ಲಿ ಸಂಭವಿಸಿದ ಅತ್ಯಂತ ದೊಡ್ಡ ಅಗ್ನಿ ದುರಂತ. ಬೆಂಕಿ ನಿಯಂತ್ರಣಕ್ಕೆ ಬರಲು ಇನ್ನು ತುಂಬಾ ಸಮಯ ಬೇಕಾಗಬಹುದು. ಸದ್ಯಕ್ಕೆ ಬೆಂಕಿ ಹತೋಟಿ ಬರುತ್ತಿಲ್ಲ. ನಾವು ನಮ್ಮ ಗರಿಷ್ಠ ಪ್ರಯತ್ನ ಮಾಡುತ್ತಿದ್ದೇವೆ ಎಂದು ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಯ ಜೆರುಸಲೇಂ ಜಿಲ್ಲೆಯ ಕಮಾಂಡರ್ ಶ್ಮುಲಿಕ್ ಫ್ರೀಡ್ಮನ್ ಹೇಳಿದ್ದಾರೆ.

ಗಾಳಿಯು ಗಂಟೆಗೆ 90-100 ಕಿಲೋಮೀಟರ್ (56-62 mph) ವೇಗವನ್ನು ಪಡೆದುಕೊಳ್ಳುವ ನಿರೀಕ್ಷೆಯಿರುವುದರಿಂದ ಬೆಂಕಿ ಇನ್ನಷ್ಟು ತೀವ್ರಗೊಳ್ಳಬಹುದು ಎಂದು ಫ್ರೀಡ್ಮನ್ ಆತಂಕ ವ್ಯಕ್ತಪಡಿಸಿದ್ದಾಗಿ ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ.

ಇಸ್ರೇಲಿ ವಾಯುಪಡೆಯು 18,000 ಲೀಟರ್‌ಗಳಷ್ಟು ಅಗ್ನಿಶಾಮಕ ಸಾಮಗ್ರಿಗಳನ್ನು ಹಿಡಿದಿಟ್ಟುಕೊಳ್ಳಬಲ್ಲ C-130J ಸೂಪರ್ ಹರ್ಕ್ಯುಲಸ್ ಭಾರೀ ಸಾರಿಗೆ ವಿಮಾನಗಳನ್ನು ಕಾರ್ಯಾಚರಣೆಯಲ್ಲಿ ನಿಯೋಜಿಸಿದೆ ಎಂದು ವರದಿಯಾಗಿದೆ. ನಿನ್ನೆ ರಾತ್ರಿ ಕನಿಷ್ಠ ಎರಡು ವಿಮಾನಗಳಿಗೆ ಅಗ್ನಿಶಾಮಕ ವಸ್ತುಗಳನ್ನು ತುಂಬಲಾಗಿದೆ.

ಇದುವರೆಗೆ ಸುಮಾರು 3,000 ಎಕರೆ ಭೂಮಿ ಬೆಂಕಿಯಿಂದ ಸುಟ್ಟುಹೋಗಿದೆ ಎಂದು ವರದಿಯಾಗಿದೆ.

ಸ್ವಾತಂತ್ರ್ಯ ದಿನಾಚರಣೆ ರದ್ದು

ಕಾಡ್ಗಿಚ್ಚು ದುರಂತದ ಹಿನ್ನೆಲೆ, ಬುಧವಾರ ನಡೆಯಬೇಕಿದ್ದ ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ. ಜೆರುಸಲೇಂನಲ್ಲಿ ಸರ್ಕಾರದ ವತಿಯಿಂದ ನಡೆಯಬೇಕಿದ್ದ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮ ರದ್ದುಮಾಡಲಾಗಿದೆ. ಕಾರ್ಯಕ್ರಮವನ್ನು ರೆಕಾರ್ಡ್ ಮಾಡಿ ದೇಶದ ಜನರಿಗೆ ಪ್ರದರ್ಶಿಸಲಾಗಿದೆ.

ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಕಾಡ್ಗಿಚ್ಚು ಜೆರುಸಲೇಂ ನಗರದ ತಲುಪಬಹುದು ಎಂದು ಎಚ್ಚರಿಸಿದ್ದಾರೆ. ಗಾಳಿಯ ವೇಗಕ್ಕೆ ಬೆಂಕಿ ನಗರದೊಳಗೆ ವ್ಯಾಪಿಸಬಹುದು ಎಂದು ವಿಡಿಯೋ ಸಂದೇಶದಲ್ಲಿ ಅವರು ಹೇಳಿದ್ದಾರೆ.

ಬಾಂಗ್ಲಾದೇಶ | ದೇಶದ್ರೋಹ ಪ್ರಕರಣದಲ್ಲಿ ಬಂಧಿತರಾಗಿದ್ದ ಇಸ್ಕಾನ್‌ನ ಮಾಜಿ ನಾಯಕನಿಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...