Homeಅಂತರಾಷ್ಟ್ರೀಯಇಸ್ರೇಲ್| ಜೆರುಸಲೇಂ ಬಳಿ ಭೀಕರ ಕಾಡ್ಗಿಚ್ಚು: ಸಾವಿರಾರು ಜನರ ಸ್ಥಳಾಂತರ

ಇಸ್ರೇಲ್| ಜೆರುಸಲೇಂ ಬಳಿ ಭೀಕರ ಕಾಡ್ಗಿಚ್ಚು: ಸಾವಿರಾರು ಜನರ ಸ್ಥಳಾಂತರ

- Advertisement -
- Advertisement -

ಇಸ್ರೇಲ್‌ ರಾಜಧಾನಿ ಜೆರುಸಲೇಂ ನಗರದ ಹೊರವಲಯದಲ್ಲಿ ಭೀಕರ ಕಾಡ್ಗಿಚ್ಚು ಅವರಿಸಿದ್ದು, ಸರ್ಕಾರ ‘ರಾಷ್ಟ್ರೀಯ ತುರ್ತು ಪರಿಸ್ಥಿತಿ’ ಘೋಷಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಬೆಂಕಿಯಿಂದ ಜೆರುಸಲೇಂ ನಗರದ ಸುತ್ತಮುತ್ತಲಿನ ಹೆದ್ದಾರಿಗಳು ಹೊಗೆಯಿಂದ ಆವೃತ್ತವಾಗಿದೆ. ಘಟನಾ ಸ್ಥಳ ಮತ್ತು ಸುತ್ತಮುತ್ತಲಿನ ನಿವಾಸಿಗಳನ್ನು ಸುರಕ್ಷಿತ ಜಾಗಗಳಿಗೆ ಸ್ಥಳಾಂತರ ಮಾಡಲಾಗುತ್ತಿದೆ. ಅಧಿಕಾರಿಗಳು, ರಕ್ಷಣಾ ತಂಡಗಳು ಮತ್ತು ಸೇನಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಇಸ್ರೇಲ್‌ನಲ್ಲಿ ಸಂಭವಿಸಿದ ಅಂತ್ಯಂತ ಭೀಕರ ಕಾಡ್ಗಿಚ್ಚು ಇದಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಇಸ್ರೇಲ್‌ನ ರಕ್ಷಣಾ ಸಂಸ್ಥೆ ಮ್ಯಾಗೆನ್ ಡೇವಿಡ್ ಆಡಮ್ (ಎಂಡಿಎ)ಹೇಳಿದ್ದಾಗಿ ದಿ ಗಾರ್ಡಿಯನ್ ವರದಿ ಮಾಡಿದೆ.

ಇದುವರೆಗೆ ಸುಮಾರು 23 ಜನರಿಗೆ ಚಿಕಿತ್ಸೆ ನೀಡಲಾಗಿದ್ದು, ಅವರಲ್ಲಿ 13 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನವರು ಹೊಗೆಯಿಂದ ಉಸಿರಾಟದ ಸಮಸ್ಯೆ ಮತ್ತು ಬೆಂಕಿ ತಗುಲಿ ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ ಎಂದು ಎಂಡಿಎ ತಿಳಿಸಿದೆ. ಗಾಯಗೊಂಡವರಲ್ಲಿ ಇಬ್ಬರು ಗರ್ಭಿಣಿಯರು ಮತ್ತು ಒಂದು ವರ್ಷದೊಳಗಿನ ಎರಡು ಶಿಶುಗಳಿವೆ ಎಂದು ಅದು ಹೇಳಿದೆ. ಯಾವುದೇ ಮನುಷ್ಯರಿಗೆ ಜೀವಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಮತ್ತು ಫೋಟೋಗಳಲ್ಲಿ ಜೆರುಸಲೇಂನಿಂದ ಟೆಲ್ ಅವಿವ್‌ಗೆ ಹೋಗುವ ಮುಖ್ಯ ಮಾರ್ಗ 1 ರಲ್ಲಿ ಬೆಂಕಿ ಹೊತ್ತಿ ಉರಿಯುತ್ತಿರುವುದು ಕಂಡು ಬಂದಿದೆ. ಸುತ್ತಮುತ್ತಲಿನ ಬೆಟ್ಟಗಳ ತುದಿಯಲ್ಲಿ ದಟ್ಟವಾದ ಹೊಗೆ ಆವರಿಸಿರುವುದು. ಅನೇಕ ಜನರು ತಮ್ಮ ಕಾರುಗಳನ್ನು ತ್ಯಜಿಸಿ ಬೆಂಕಿಯಿಂದ ತಪ್ಪಿಸಿಕೊಳ್ಳಲು ಓಡುತ್ತಿರುವ ನೋಡಬಹುದು.

ಇಸ್ರೇಲಿ ಮಾಧ್ಯಮಗಳ ಪ್ರಕಾರ, 160ಕ್ಕೂ ಹೆಚ್ಚು ರಕ್ಷಣಾ ಮತ್ತು ಅಗ್ನಿಶಾಮಕ ದಳಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಹಲವು ವಿಮಾನ ಮತ್ತು ಹೆಲಿಕಾಪ್ಟರ್‌ಗಳು ಬೆಂಕಿ ನಂದಿಸಲು ಬಳಸಿಕೊಳ್ಳಲಾಗಿದೆ.

ಇಸ್ರೇಲಿ ಸೇನೆ ಕೂಡ ರಕ್ಷಣಾ ಕಾರ್ಯಾಚರಣೆಗಳಿಗೆ ಸಹಾಯ ಮಾಡುತ್ತಿದೆ. ಶುಷ್ಕ ಹವಾಮಾನ ಪರಿಸ್ಥಿತಿ ಮತ್ತು ಬಲವಾದ ಗಾಳಿಯಿಂದ ರಕ್ಷಣಾ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವರದಿಗಳು ಹೇಳಿವೆ.

ಇಸ್ರೇಲಿ ಅಗ್ನಿಶಾಮಕ ದಳ ನಿನ್ನೆ ಸಂಜೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಇದು ಇಸ್ರೇಲ್‌ನಲ್ಲಿ ಸಂಭವಿಸಿದ ಇದುವರೆಗಿನ ಅತಿದೊಡ್ಡ ಬೆಂಕಿ ದುರಂತ ಎಂದು ಹೇಳಿದೆ. ಬೆಂಕಿ ವ್ಯಾಪಿಸಿರುವ ಪ್ರದೇಶ ರಾಷ್ಟ್ರೀಯ ಉದ್ಯಾನವನಗಳು ಮತ್ತು ಕಾಡುಗಳಿಗೆ ಜನರ ಪ್ರವೇಶ ನಿಷೇಧಿಸಲಾಗಿದೆ. ಜೆರುಸಲೇಂನ ಪ್ರಮುಖ ಹೆದ್ದಾರಿ ಮಾರ್ಗ 1 ಸೇರಿದಂತೆ ಅನೇಕ ರಸ್ತೆಗಳನ್ನು ಸಹ ಮುಚ್ಚಲಾಗಿದೆ.

ಇದು ಇಸ್ರೇಲ್‌ನಲ್ಲಿ ಸಂಭವಿಸಿದ ಅತ್ಯಂತ ದೊಡ್ಡ ಅಗ್ನಿ ದುರಂತ. ಬೆಂಕಿ ನಿಯಂತ್ರಣಕ್ಕೆ ಬರಲು ಇನ್ನು ತುಂಬಾ ಸಮಯ ಬೇಕಾಗಬಹುದು. ಸದ್ಯಕ್ಕೆ ಬೆಂಕಿ ಹತೋಟಿ ಬರುತ್ತಿಲ್ಲ. ನಾವು ನಮ್ಮ ಗರಿಷ್ಠ ಪ್ರಯತ್ನ ಮಾಡುತ್ತಿದ್ದೇವೆ ಎಂದು ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಯ ಜೆರುಸಲೇಂ ಜಿಲ್ಲೆಯ ಕಮಾಂಡರ್ ಶ್ಮುಲಿಕ್ ಫ್ರೀಡ್ಮನ್ ಹೇಳಿದ್ದಾರೆ.

ಗಾಳಿಯು ಗಂಟೆಗೆ 90-100 ಕಿಲೋಮೀಟರ್ (56-62 mph) ವೇಗವನ್ನು ಪಡೆದುಕೊಳ್ಳುವ ನಿರೀಕ್ಷೆಯಿರುವುದರಿಂದ ಬೆಂಕಿ ಇನ್ನಷ್ಟು ತೀವ್ರಗೊಳ್ಳಬಹುದು ಎಂದು ಫ್ರೀಡ್ಮನ್ ಆತಂಕ ವ್ಯಕ್ತಪಡಿಸಿದ್ದಾಗಿ ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ.

ಇಸ್ರೇಲಿ ವಾಯುಪಡೆಯು 18,000 ಲೀಟರ್‌ಗಳಷ್ಟು ಅಗ್ನಿಶಾಮಕ ಸಾಮಗ್ರಿಗಳನ್ನು ಹಿಡಿದಿಟ್ಟುಕೊಳ್ಳಬಲ್ಲ C-130J ಸೂಪರ್ ಹರ್ಕ್ಯುಲಸ್ ಭಾರೀ ಸಾರಿಗೆ ವಿಮಾನಗಳನ್ನು ಕಾರ್ಯಾಚರಣೆಯಲ್ಲಿ ನಿಯೋಜಿಸಿದೆ ಎಂದು ವರದಿಯಾಗಿದೆ. ನಿನ್ನೆ ರಾತ್ರಿ ಕನಿಷ್ಠ ಎರಡು ವಿಮಾನಗಳಿಗೆ ಅಗ್ನಿಶಾಮಕ ವಸ್ತುಗಳನ್ನು ತುಂಬಲಾಗಿದೆ.

ಇದುವರೆಗೆ ಸುಮಾರು 3,000 ಎಕರೆ ಭೂಮಿ ಬೆಂಕಿಯಿಂದ ಸುಟ್ಟುಹೋಗಿದೆ ಎಂದು ವರದಿಯಾಗಿದೆ.

ಸ್ವಾತಂತ್ರ್ಯ ದಿನಾಚರಣೆ ರದ್ದು

ಕಾಡ್ಗಿಚ್ಚು ದುರಂತದ ಹಿನ್ನೆಲೆ, ಬುಧವಾರ ನಡೆಯಬೇಕಿದ್ದ ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ. ಜೆರುಸಲೇಂನಲ್ಲಿ ಸರ್ಕಾರದ ವತಿಯಿಂದ ನಡೆಯಬೇಕಿದ್ದ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮ ರದ್ದುಮಾಡಲಾಗಿದೆ. ಕಾರ್ಯಕ್ರಮವನ್ನು ರೆಕಾರ್ಡ್ ಮಾಡಿ ದೇಶದ ಜನರಿಗೆ ಪ್ರದರ್ಶಿಸಲಾಗಿದೆ.

ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಕಾಡ್ಗಿಚ್ಚು ಜೆರುಸಲೇಂ ನಗರದ ತಲುಪಬಹುದು ಎಂದು ಎಚ್ಚರಿಸಿದ್ದಾರೆ. ಗಾಳಿಯ ವೇಗಕ್ಕೆ ಬೆಂಕಿ ನಗರದೊಳಗೆ ವ್ಯಾಪಿಸಬಹುದು ಎಂದು ವಿಡಿಯೋ ಸಂದೇಶದಲ್ಲಿ ಅವರು ಹೇಳಿದ್ದಾರೆ.

ಬಾಂಗ್ಲಾದೇಶ | ದೇಶದ್ರೋಹ ಪ್ರಕರಣದಲ್ಲಿ ಬಂಧಿತರಾಗಿದ್ದ ಇಸ್ಕಾನ್‌ನ ಮಾಜಿ ನಾಯಕನಿಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...