Homeಅಂತರಾಷ್ಟ್ರೀಯಇಸ್ರೇಲ್| ಜೆರುಸಲೇಂ ಬಳಿ ಭೀಕರ ಕಾಡ್ಗಿಚ್ಚು: ಸಾವಿರಾರು ಜನರ ಸ್ಥಳಾಂತರ

ಇಸ್ರೇಲ್| ಜೆರುಸಲೇಂ ಬಳಿ ಭೀಕರ ಕಾಡ್ಗಿಚ್ಚು: ಸಾವಿರಾರು ಜನರ ಸ್ಥಳಾಂತರ

- Advertisement -
- Advertisement -

ಇಸ್ರೇಲ್‌ ರಾಜಧಾನಿ ಜೆರುಸಲೇಂ ನಗರದ ಹೊರವಲಯದಲ್ಲಿ ಭೀಕರ ಕಾಡ್ಗಿಚ್ಚು ಅವರಿಸಿದ್ದು, ಸರ್ಕಾರ ‘ರಾಷ್ಟ್ರೀಯ ತುರ್ತು ಪರಿಸ್ಥಿತಿ’ ಘೋಷಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಬೆಂಕಿಯಿಂದ ಜೆರುಸಲೇಂ ನಗರದ ಸುತ್ತಮುತ್ತಲಿನ ಹೆದ್ದಾರಿಗಳು ಹೊಗೆಯಿಂದ ಆವೃತ್ತವಾಗಿದೆ. ಘಟನಾ ಸ್ಥಳ ಮತ್ತು ಸುತ್ತಮುತ್ತಲಿನ ನಿವಾಸಿಗಳನ್ನು ಸುರಕ್ಷಿತ ಜಾಗಗಳಿಗೆ ಸ್ಥಳಾಂತರ ಮಾಡಲಾಗುತ್ತಿದೆ. ಅಧಿಕಾರಿಗಳು, ರಕ್ಷಣಾ ತಂಡಗಳು ಮತ್ತು ಸೇನಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಇಸ್ರೇಲ್‌ನಲ್ಲಿ ಸಂಭವಿಸಿದ ಅಂತ್ಯಂತ ಭೀಕರ ಕಾಡ್ಗಿಚ್ಚು ಇದಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಇಸ್ರೇಲ್‌ನ ರಕ್ಷಣಾ ಸಂಸ್ಥೆ ಮ್ಯಾಗೆನ್ ಡೇವಿಡ್ ಆಡಮ್ (ಎಂಡಿಎ)ಹೇಳಿದ್ದಾಗಿ ದಿ ಗಾರ್ಡಿಯನ್ ವರದಿ ಮಾಡಿದೆ.

ಇದುವರೆಗೆ ಸುಮಾರು 23 ಜನರಿಗೆ ಚಿಕಿತ್ಸೆ ನೀಡಲಾಗಿದ್ದು, ಅವರಲ್ಲಿ 13 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನವರು ಹೊಗೆಯಿಂದ ಉಸಿರಾಟದ ಸಮಸ್ಯೆ ಮತ್ತು ಬೆಂಕಿ ತಗುಲಿ ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ ಎಂದು ಎಂಡಿಎ ತಿಳಿಸಿದೆ. ಗಾಯಗೊಂಡವರಲ್ಲಿ ಇಬ್ಬರು ಗರ್ಭಿಣಿಯರು ಮತ್ತು ಒಂದು ವರ್ಷದೊಳಗಿನ ಎರಡು ಶಿಶುಗಳಿವೆ ಎಂದು ಅದು ಹೇಳಿದೆ. ಯಾವುದೇ ಮನುಷ್ಯರಿಗೆ ಜೀವಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಮತ್ತು ಫೋಟೋಗಳಲ್ಲಿ ಜೆರುಸಲೇಂನಿಂದ ಟೆಲ್ ಅವಿವ್‌ಗೆ ಹೋಗುವ ಮುಖ್ಯ ಮಾರ್ಗ 1 ರಲ್ಲಿ ಬೆಂಕಿ ಹೊತ್ತಿ ಉರಿಯುತ್ತಿರುವುದು ಕಂಡು ಬಂದಿದೆ. ಸುತ್ತಮುತ್ತಲಿನ ಬೆಟ್ಟಗಳ ತುದಿಯಲ್ಲಿ ದಟ್ಟವಾದ ಹೊಗೆ ಆವರಿಸಿರುವುದು. ಅನೇಕ ಜನರು ತಮ್ಮ ಕಾರುಗಳನ್ನು ತ್ಯಜಿಸಿ ಬೆಂಕಿಯಿಂದ ತಪ್ಪಿಸಿಕೊಳ್ಳಲು ಓಡುತ್ತಿರುವ ನೋಡಬಹುದು.

ಇಸ್ರೇಲಿ ಮಾಧ್ಯಮಗಳ ಪ್ರಕಾರ, 160ಕ್ಕೂ ಹೆಚ್ಚು ರಕ್ಷಣಾ ಮತ್ತು ಅಗ್ನಿಶಾಮಕ ದಳಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಹಲವು ವಿಮಾನ ಮತ್ತು ಹೆಲಿಕಾಪ್ಟರ್‌ಗಳು ಬೆಂಕಿ ನಂದಿಸಲು ಬಳಸಿಕೊಳ್ಳಲಾಗಿದೆ.

ಇಸ್ರೇಲಿ ಸೇನೆ ಕೂಡ ರಕ್ಷಣಾ ಕಾರ್ಯಾಚರಣೆಗಳಿಗೆ ಸಹಾಯ ಮಾಡುತ್ತಿದೆ. ಶುಷ್ಕ ಹವಾಮಾನ ಪರಿಸ್ಥಿತಿ ಮತ್ತು ಬಲವಾದ ಗಾಳಿಯಿಂದ ರಕ್ಷಣಾ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವರದಿಗಳು ಹೇಳಿವೆ.

ಇಸ್ರೇಲಿ ಅಗ್ನಿಶಾಮಕ ದಳ ನಿನ್ನೆ ಸಂಜೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಇದು ಇಸ್ರೇಲ್‌ನಲ್ಲಿ ಸಂಭವಿಸಿದ ಇದುವರೆಗಿನ ಅತಿದೊಡ್ಡ ಬೆಂಕಿ ದುರಂತ ಎಂದು ಹೇಳಿದೆ. ಬೆಂಕಿ ವ್ಯಾಪಿಸಿರುವ ಪ್ರದೇಶ ರಾಷ್ಟ್ರೀಯ ಉದ್ಯಾನವನಗಳು ಮತ್ತು ಕಾಡುಗಳಿಗೆ ಜನರ ಪ್ರವೇಶ ನಿಷೇಧಿಸಲಾಗಿದೆ. ಜೆರುಸಲೇಂನ ಪ್ರಮುಖ ಹೆದ್ದಾರಿ ಮಾರ್ಗ 1 ಸೇರಿದಂತೆ ಅನೇಕ ರಸ್ತೆಗಳನ್ನು ಸಹ ಮುಚ್ಚಲಾಗಿದೆ.

ಇದು ಇಸ್ರೇಲ್‌ನಲ್ಲಿ ಸಂಭವಿಸಿದ ಅತ್ಯಂತ ದೊಡ್ಡ ಅಗ್ನಿ ದುರಂತ. ಬೆಂಕಿ ನಿಯಂತ್ರಣಕ್ಕೆ ಬರಲು ಇನ್ನು ತುಂಬಾ ಸಮಯ ಬೇಕಾಗಬಹುದು. ಸದ್ಯಕ್ಕೆ ಬೆಂಕಿ ಹತೋಟಿ ಬರುತ್ತಿಲ್ಲ. ನಾವು ನಮ್ಮ ಗರಿಷ್ಠ ಪ್ರಯತ್ನ ಮಾಡುತ್ತಿದ್ದೇವೆ ಎಂದು ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಯ ಜೆರುಸಲೇಂ ಜಿಲ್ಲೆಯ ಕಮಾಂಡರ್ ಶ್ಮುಲಿಕ್ ಫ್ರೀಡ್ಮನ್ ಹೇಳಿದ್ದಾರೆ.

ಗಾಳಿಯು ಗಂಟೆಗೆ 90-100 ಕಿಲೋಮೀಟರ್ (56-62 mph) ವೇಗವನ್ನು ಪಡೆದುಕೊಳ್ಳುವ ನಿರೀಕ್ಷೆಯಿರುವುದರಿಂದ ಬೆಂಕಿ ಇನ್ನಷ್ಟು ತೀವ್ರಗೊಳ್ಳಬಹುದು ಎಂದು ಫ್ರೀಡ್ಮನ್ ಆತಂಕ ವ್ಯಕ್ತಪಡಿಸಿದ್ದಾಗಿ ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ.

ಇಸ್ರೇಲಿ ವಾಯುಪಡೆಯು 18,000 ಲೀಟರ್‌ಗಳಷ್ಟು ಅಗ್ನಿಶಾಮಕ ಸಾಮಗ್ರಿಗಳನ್ನು ಹಿಡಿದಿಟ್ಟುಕೊಳ್ಳಬಲ್ಲ C-130J ಸೂಪರ್ ಹರ್ಕ್ಯುಲಸ್ ಭಾರೀ ಸಾರಿಗೆ ವಿಮಾನಗಳನ್ನು ಕಾರ್ಯಾಚರಣೆಯಲ್ಲಿ ನಿಯೋಜಿಸಿದೆ ಎಂದು ವರದಿಯಾಗಿದೆ. ನಿನ್ನೆ ರಾತ್ರಿ ಕನಿಷ್ಠ ಎರಡು ವಿಮಾನಗಳಿಗೆ ಅಗ್ನಿಶಾಮಕ ವಸ್ತುಗಳನ್ನು ತುಂಬಲಾಗಿದೆ.

ಇದುವರೆಗೆ ಸುಮಾರು 3,000 ಎಕರೆ ಭೂಮಿ ಬೆಂಕಿಯಿಂದ ಸುಟ್ಟುಹೋಗಿದೆ ಎಂದು ವರದಿಯಾಗಿದೆ.

ಸ್ವಾತಂತ್ರ್ಯ ದಿನಾಚರಣೆ ರದ್ದು

ಕಾಡ್ಗಿಚ್ಚು ದುರಂತದ ಹಿನ್ನೆಲೆ, ಬುಧವಾರ ನಡೆಯಬೇಕಿದ್ದ ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ. ಜೆರುಸಲೇಂನಲ್ಲಿ ಸರ್ಕಾರದ ವತಿಯಿಂದ ನಡೆಯಬೇಕಿದ್ದ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮ ರದ್ದುಮಾಡಲಾಗಿದೆ. ಕಾರ್ಯಕ್ರಮವನ್ನು ರೆಕಾರ್ಡ್ ಮಾಡಿ ದೇಶದ ಜನರಿಗೆ ಪ್ರದರ್ಶಿಸಲಾಗಿದೆ.

ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಕಾಡ್ಗಿಚ್ಚು ಜೆರುಸಲೇಂ ನಗರದ ತಲುಪಬಹುದು ಎಂದು ಎಚ್ಚರಿಸಿದ್ದಾರೆ. ಗಾಳಿಯ ವೇಗಕ್ಕೆ ಬೆಂಕಿ ನಗರದೊಳಗೆ ವ್ಯಾಪಿಸಬಹುದು ಎಂದು ವಿಡಿಯೋ ಸಂದೇಶದಲ್ಲಿ ಅವರು ಹೇಳಿದ್ದಾರೆ.

ಬಾಂಗ್ಲಾದೇಶ | ದೇಶದ್ರೋಹ ಪ್ರಕರಣದಲ್ಲಿ ಬಂಧಿತರಾಗಿದ್ದ ಇಸ್ಕಾನ್‌ನ ಮಾಜಿ ನಾಯಕನಿಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...