Homeಮುಖಪುಟಗಾಝಾದಲ್ಲಿ ನೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದ 136 UN ಸಿಬ್ಬಂದಿಗಳ ಹತ್ಯೆ

ಗಾಝಾದಲ್ಲಿ ನೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದ 136 UN ಸಿಬ್ಬಂದಿಗಳ ಹತ್ಯೆ

- Advertisement -
- Advertisement -

ಗಾಝಾ ಮೇಲೆ ಯುದ್ಧ ಘೋಷಿಸಿ ಇಸ್ರೇಲ್‌ ನಡೆಸಿದ ದಾಳಿಯಿಂದ 20,258ಕ್ಕೂ ಅಧಿಕ ಪ್ಯಾಲೆಸ್ತೀನ್‌ ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ. ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದಾರೆ. ಸಾವಿರಾರು ಮಂದಿ ಗಾಯಗೊಂಡಿದ್ದಾರೆ. ಇದಲ್ಲದೆ ಗಾಝಾದಲ್ಲಿ ಯುದ್ಧಪೀಡಿತ ಜನರಿಗೆ ನೆರವನ್ನು ನೀಡುತ್ತಿದ್ದ 136 ವಿಶ್ವಸಂಸ್ಥೆಯ ಸಿಬ್ಬಂದಿಗಳ ಹತ್ಯೆ ನಡೆದಿದೆ.

ಯುದ್ಧಪೀಡಿತ ಗಾಝಾದಲ್ಲಿ ಯುಎನ್‌ ನಿರಾಶ್ರಿತರ ಶಿಬಿರಗಳನ್ನು ನಡೆಸುತ್ತಿದೆ. ಜಬಾಲಿಯಾ ಮತ್ತು ಬುರೇಜ್ ಸೇರಿ ಹಲವೆಡೆ ಇರುವ ನಿರಾಶ್ರಿತರ ಶಿಬಿರಗಳಲ್ಲಿ ಲಕ್ಷಾಂತರ ಗಾಝಾ ಪಟ್ಟಿಯ ಜನ ಆಶ್ರಯವನ್ನು ಪಡೆದುಕೊಂಡಿದ್ದಾರೆ. ಯುಎನ್‌ ಅವರಿಗೆ ಆಹಾರ, ಔಷಧಿ ಸೇರಿ ಅಗತ್ಯ ನೆರವುಗಳನ್ನು ನೀಡುತ್ತಿದೆ. ಇಸ್ರೇಲ್‌ ಯದ್ಧದ ವೇಳೆ ಕಳೆದ 75 ದಿನಗಳಲ್ಲಿ 136 ವಿಶ್ವಸಂಸ್ಥೆಯ ಸಿಬ್ಬಂದಿಗಳ ಹತ್ಯೆ ನಡೆಸಿದೆ ಎಂದು ಯುಎನ್ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರೆಸ್ ಅವರು ಹೇಳಿಕೆಯನ್ನು ನೀಡಿದ್ದು, ಯುಎನ್ ಇತಿಹಾಸದಲ್ಲಿ ನಾವು ಎಂದಿಗೂ ಈ ರೀತಿ ಘಟನೆ ನೋಡಿರಲಿಲ್ಲ ಎಂದು ಆಘಾತ ವ್ಯಕ್ತಪಡಿಸಿದ್ದಾರೆ.

ಯುಎನ್ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರೆಸ್ ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ನಾನು ಹತ್ಯೆಯಾದ ಸಿಬ್ಬಂದಿಗಳಿಗೆ ಗೌರವ ಸಲ್ಲಿಸುತ್ತೇನೆ ಮತ್ತು ಗಾಝಾದಲ್ಲಿ ಸಾವಿರಾರು ಕಾರ್ಯಕರ್ತರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ನಾಗರಿಕರಿಗೆ ಸಹಾಯ ಮಾಡುತ್ತಿದ್ದಾರೆ ಎಂದು ಗುಟೆರೆಸ್ ಹೇಳಿದ್ದಾರೆ.

ಇಸ್ರೇಲ್  ಆಕ್ರಮಣವನ್ನು ನಡೆಸುತ್ತಿರುವ ರೀತಿಯು ಗಾಝಾದೊಳಗೆ ಮಾನವೀಯ ನೆರವು ವಿತರಣೆಗೆ ಭಾರಿ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಗಾಝಾದಲ್ಲಿ ಪರಿಣಾಮಕಾರಿ ನೆರವು ಕಾರ್ಯಾಚರಣೆಗೆ ಭದ್ರತೆಯ ಅಗತ್ಯವಿದೆ ಎಂದು ಗುಟೆರೆಸ್ ಹೇಳಿದ್ದಾರೆ. ಯುಎನ್ ಭದ್ರತಾ ಮಂಡಳಿಯು ಗಾಝಾದಲ್ಲಿ ಸುಮಾರು 2 ಮಿಲಿಯನ್ ಜನರಿಗೆ ಹೆಚ್ಚಿನ ಸಹಾಯವನ್ನು ಕೋರುವ ನಿರ್ಣಯವನ್ನು ಅಂಗೀಕರಿಸಿದ ಗಂಟೆಗಳ ನಂತರ ಯುಎನ್ ಮುಖ್ಯಸ್ಥರು ಈ ರೀತಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಯುಎಸ್ ಅಧ್ಯಕ್ಷ ಜೋ ಬಿಡೆನ್ ಮತ್ತು ಇಸ್ರೇಲ್‌ ಪಿಎಂ ಬೆಂಜಮಿನ್ ನೆತನ್ಯಾಹು ಅವರು ಗಾಝಾದಲ್ಲಿ ಇಸ್ರೇಲ್‌ನ ಮಿಲಿಟರಿ ಕಾರ್ಯಾಚರಣೆಯ ಕುರಿತು ಮತ್ತೆ ಚರ್ಚೆ ನಡೆಸಿದ್ದಾರೆ ಎಂದು ಶ್ವೇತಭವನ ಶನಿವಾರ ಹೇಳಿಕೆಯಲ್ಲಿ ತಿಳಿಸಿದೆ.

ನಿನ್ನೆ ಯುಎನ್‌ ಸೆಕ್ಯುರಿಟಿ ಕೌನ್ಸಿಲ್ ಹಲವಾರು ದಿನಗಳ ನಂತರ ಗಾಝಾಕ್ಕೆ ಹೆಚ್ಚಿನ ನೆರವನ್ನು ನೀಡುವ ಕುರಿತು ನಿರ್ಣಯವನ್ನು ಅಂಗೀಕರಿಸಿದೆ. ಆದರೆ ಕದನ ವಿರಾಮದ ಬಗ್ಗೆ ಪ್ರಸ್ತಾಪಿಸಿಲ್ಲ. ಈ ಮೊದಲು ಯುಎನ್‌ ಹಲವು ಬಾರಿ ಕದನ ವಿರಾಮದ ಬಗ್ಗೆ ಪ್ರಸ್ತಾಪಿಸಿದ್ದವು ಅದರೆ ಅಮೆರಿಕ ಇದಕ್ಕೆ ವಿರೋಧವನ್ನು ವ್ಯಕ್ತಪಡಿಸಿತ್ತು.

ಇಸ್ರೇಲ್‌ ಮಿಲಿಟರಿ ನಡೆಸಿದ ವೈಮಾನಿಕ ದಾಳಿಯು ಹಿರಿಯ ಯುಎನ್ ನೆರವು ಸಿಬ್ಬಂದಿ ಸೇರಿದಂತೆ ಆತನ ಕುಟುಂಬದ 70ಕ್ಕೂ ಹೆಚ್ಚು ಸದಸ್ಯರ ಹತ್ಯೆ ನಡೆದಿದೆ ಎಂದು ಯುಎನ್‌ ತಿಳಿಸಿದೆ. 56 ವರ್ಷದ ಇಸ್ಸಾಮ್ ಅಲ್-ಮುಘ್ರಾಬಿ ಮತ್ತು ಅವರ ಪತ್ನಿ, ಐದು ಮಕ್ಕಳು ಮತ್ತು ಇತರ ಸಂಬಂಧಿಕರು ಗಾಝಾ ನಗರದ ಬಳಿ ಬಾಂಬ್ ದಾಳಿಯಲ್ಲಿ ಕೊಲ್ಲಲ್ಪಟ್ಟರು ಎಂದು ಯುಎನ್ ಅಭಿವೃದ್ಧಿ ಕಾರ್ಯಕ್ರಮದ ಮುಖ್ಯಸ್ಥರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇಸ್ಸಾಮ್ ಮತ್ತು ಅವರ ಕುಟುಂಬದ ಸದಸ್ಯರ ನಷ್ಟವು ನಮ್ಮೆಲ್ಲರ ಮೇಲೆ ಆಳವಾದ ಪ್ರಭಾವ ಬೀರಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಶಾಲೆಗಳಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಜಾತಿ ದೌರ್ಜನ್ಯ: ಅಧ್ಯಯನದಿಂದ ಬಯಲು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...