Homeಮುಖಪುಟಗಾಝಾದಲ್ಲಿ ನೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದ 136 UN ಸಿಬ್ಬಂದಿಗಳ ಹತ್ಯೆ

ಗಾಝಾದಲ್ಲಿ ನೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದ 136 UN ಸಿಬ್ಬಂದಿಗಳ ಹತ್ಯೆ

- Advertisement -
- Advertisement -

ಗಾಝಾ ಮೇಲೆ ಯುದ್ಧ ಘೋಷಿಸಿ ಇಸ್ರೇಲ್‌ ನಡೆಸಿದ ದಾಳಿಯಿಂದ 20,258ಕ್ಕೂ ಅಧಿಕ ಪ್ಯಾಲೆಸ್ತೀನ್‌ ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ. ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದಾರೆ. ಸಾವಿರಾರು ಮಂದಿ ಗಾಯಗೊಂಡಿದ್ದಾರೆ. ಇದಲ್ಲದೆ ಗಾಝಾದಲ್ಲಿ ಯುದ್ಧಪೀಡಿತ ಜನರಿಗೆ ನೆರವನ್ನು ನೀಡುತ್ತಿದ್ದ 136 ವಿಶ್ವಸಂಸ್ಥೆಯ ಸಿಬ್ಬಂದಿಗಳ ಹತ್ಯೆ ನಡೆದಿದೆ.

ಯುದ್ಧಪೀಡಿತ ಗಾಝಾದಲ್ಲಿ ಯುಎನ್‌ ನಿರಾಶ್ರಿತರ ಶಿಬಿರಗಳನ್ನು ನಡೆಸುತ್ತಿದೆ. ಜಬಾಲಿಯಾ ಮತ್ತು ಬುರೇಜ್ ಸೇರಿ ಹಲವೆಡೆ ಇರುವ ನಿರಾಶ್ರಿತರ ಶಿಬಿರಗಳಲ್ಲಿ ಲಕ್ಷಾಂತರ ಗಾಝಾ ಪಟ್ಟಿಯ ಜನ ಆಶ್ರಯವನ್ನು ಪಡೆದುಕೊಂಡಿದ್ದಾರೆ. ಯುಎನ್‌ ಅವರಿಗೆ ಆಹಾರ, ಔಷಧಿ ಸೇರಿ ಅಗತ್ಯ ನೆರವುಗಳನ್ನು ನೀಡುತ್ತಿದೆ. ಇಸ್ರೇಲ್‌ ಯದ್ಧದ ವೇಳೆ ಕಳೆದ 75 ದಿನಗಳಲ್ಲಿ 136 ವಿಶ್ವಸಂಸ್ಥೆಯ ಸಿಬ್ಬಂದಿಗಳ ಹತ್ಯೆ ನಡೆಸಿದೆ ಎಂದು ಯುಎನ್ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರೆಸ್ ಅವರು ಹೇಳಿಕೆಯನ್ನು ನೀಡಿದ್ದು, ಯುಎನ್ ಇತಿಹಾಸದಲ್ಲಿ ನಾವು ಎಂದಿಗೂ ಈ ರೀತಿ ಘಟನೆ ನೋಡಿರಲಿಲ್ಲ ಎಂದು ಆಘಾತ ವ್ಯಕ್ತಪಡಿಸಿದ್ದಾರೆ.

ಯುಎನ್ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರೆಸ್ ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ನಾನು ಹತ್ಯೆಯಾದ ಸಿಬ್ಬಂದಿಗಳಿಗೆ ಗೌರವ ಸಲ್ಲಿಸುತ್ತೇನೆ ಮತ್ತು ಗಾಝಾದಲ್ಲಿ ಸಾವಿರಾರು ಕಾರ್ಯಕರ್ತರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ನಾಗರಿಕರಿಗೆ ಸಹಾಯ ಮಾಡುತ್ತಿದ್ದಾರೆ ಎಂದು ಗುಟೆರೆಸ್ ಹೇಳಿದ್ದಾರೆ.

ಇಸ್ರೇಲ್  ಆಕ್ರಮಣವನ್ನು ನಡೆಸುತ್ತಿರುವ ರೀತಿಯು ಗಾಝಾದೊಳಗೆ ಮಾನವೀಯ ನೆರವು ವಿತರಣೆಗೆ ಭಾರಿ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಗಾಝಾದಲ್ಲಿ ಪರಿಣಾಮಕಾರಿ ನೆರವು ಕಾರ್ಯಾಚರಣೆಗೆ ಭದ್ರತೆಯ ಅಗತ್ಯವಿದೆ ಎಂದು ಗುಟೆರೆಸ್ ಹೇಳಿದ್ದಾರೆ. ಯುಎನ್ ಭದ್ರತಾ ಮಂಡಳಿಯು ಗಾಝಾದಲ್ಲಿ ಸುಮಾರು 2 ಮಿಲಿಯನ್ ಜನರಿಗೆ ಹೆಚ್ಚಿನ ಸಹಾಯವನ್ನು ಕೋರುವ ನಿರ್ಣಯವನ್ನು ಅಂಗೀಕರಿಸಿದ ಗಂಟೆಗಳ ನಂತರ ಯುಎನ್ ಮುಖ್ಯಸ್ಥರು ಈ ರೀತಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಯುಎಸ್ ಅಧ್ಯಕ್ಷ ಜೋ ಬಿಡೆನ್ ಮತ್ತು ಇಸ್ರೇಲ್‌ ಪಿಎಂ ಬೆಂಜಮಿನ್ ನೆತನ್ಯಾಹು ಅವರು ಗಾಝಾದಲ್ಲಿ ಇಸ್ರೇಲ್‌ನ ಮಿಲಿಟರಿ ಕಾರ್ಯಾಚರಣೆಯ ಕುರಿತು ಮತ್ತೆ ಚರ್ಚೆ ನಡೆಸಿದ್ದಾರೆ ಎಂದು ಶ್ವೇತಭವನ ಶನಿವಾರ ಹೇಳಿಕೆಯಲ್ಲಿ ತಿಳಿಸಿದೆ.

ನಿನ್ನೆ ಯುಎನ್‌ ಸೆಕ್ಯುರಿಟಿ ಕೌನ್ಸಿಲ್ ಹಲವಾರು ದಿನಗಳ ನಂತರ ಗಾಝಾಕ್ಕೆ ಹೆಚ್ಚಿನ ನೆರವನ್ನು ನೀಡುವ ಕುರಿತು ನಿರ್ಣಯವನ್ನು ಅಂಗೀಕರಿಸಿದೆ. ಆದರೆ ಕದನ ವಿರಾಮದ ಬಗ್ಗೆ ಪ್ರಸ್ತಾಪಿಸಿಲ್ಲ. ಈ ಮೊದಲು ಯುಎನ್‌ ಹಲವು ಬಾರಿ ಕದನ ವಿರಾಮದ ಬಗ್ಗೆ ಪ್ರಸ್ತಾಪಿಸಿದ್ದವು ಅದರೆ ಅಮೆರಿಕ ಇದಕ್ಕೆ ವಿರೋಧವನ್ನು ವ್ಯಕ್ತಪಡಿಸಿತ್ತು.

ಇಸ್ರೇಲ್‌ ಮಿಲಿಟರಿ ನಡೆಸಿದ ವೈಮಾನಿಕ ದಾಳಿಯು ಹಿರಿಯ ಯುಎನ್ ನೆರವು ಸಿಬ್ಬಂದಿ ಸೇರಿದಂತೆ ಆತನ ಕುಟುಂಬದ 70ಕ್ಕೂ ಹೆಚ್ಚು ಸದಸ್ಯರ ಹತ್ಯೆ ನಡೆದಿದೆ ಎಂದು ಯುಎನ್‌ ತಿಳಿಸಿದೆ. 56 ವರ್ಷದ ಇಸ್ಸಾಮ್ ಅಲ್-ಮುಘ್ರಾಬಿ ಮತ್ತು ಅವರ ಪತ್ನಿ, ಐದು ಮಕ್ಕಳು ಮತ್ತು ಇತರ ಸಂಬಂಧಿಕರು ಗಾಝಾ ನಗರದ ಬಳಿ ಬಾಂಬ್ ದಾಳಿಯಲ್ಲಿ ಕೊಲ್ಲಲ್ಪಟ್ಟರು ಎಂದು ಯುಎನ್ ಅಭಿವೃದ್ಧಿ ಕಾರ್ಯಕ್ರಮದ ಮುಖ್ಯಸ್ಥರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇಸ್ಸಾಮ್ ಮತ್ತು ಅವರ ಕುಟುಂಬದ ಸದಸ್ಯರ ನಷ್ಟವು ನಮ್ಮೆಲ್ಲರ ಮೇಲೆ ಆಳವಾದ ಪ್ರಭಾವ ಬೀರಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಶಾಲೆಗಳಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಜಾತಿ ದೌರ್ಜನ್ಯ: ಅಧ್ಯಯನದಿಂದ ಬಯಲು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...