Homeಮುಖಪುಟಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪ್ರತಿಧ್ವನಿಸಿದ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷ

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪ್ರತಿಧ್ವನಿಸಿದ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷ

- Advertisement -
- Advertisement -

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬುಧವಾರ (ಜು.24) ನಡೆದ ಇಸ್ರೇಲ್ ಮತ್ತು ಮಾಲಿ ನಡುವಿನ ಫುಟ್ಬಾಲ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿತ್ತು. ಆದರೆ, ಈ ಪಂದ್ಯ ಫುಟ್ಬಾಲ್ ಹೊರತುಪಡಿಸಿ ಮತ್ತೊಂದು ವಿಷಯಕ್ಕೆ ವಿಶ್ವದ ಗಮನ ಸೆಳೆದಿದೆ.

ಮುಸ್ಲಿಂ ರಾಷ್ಟ್ರ ಮಾಲಿ ಮತ್ತು ಯಹೂದಿ ರಾಷ್ಟ್ರ ಇಸ್ರೇಲ್ ನಡುವಿನ ಪಂದ್ಯದಲ್ಲಿ ಗಾಝಾ ಮೇಲಿನ ಇಸ್ರೇಲ್ ಆಕ್ರಮಣದ ವಿಷಯ ಪ್ರತಿಧ್ವನಿಸಿದೆ. ಫುಟ್ಬಾಲ್ ಪಂದ್ಯದ ವೇಳೆ ಗ್ಯಾಲರಿಯಲ್ಲಿ ಎರಡೂ ರಾಷ್ಟ್ರಗಳ ಅಭಿಮಾನಿಗಳ ನಡುವೆ ಇದೇ ವಿಚಾರಕ್ಕೆ ಪ್ರತಿಭಟನೆ ಮತ್ತು ಜಗಳ ನಡೆದಿದೆ ಎಂದು ವರದಿಯಾಗಿದೆ.

ಗಾಝಾದಲ್ಲಿ ಅಮಾಯಕ ನಾಗರಿಕ ಮಾರಣಹೋಮ ನಡೆಸುತ್ತಿರುವ ಇಸ್ರೇಲ್‌ಗೆ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ನೀಡಬಾರದು ಎಂದು ಪ್ಯಾಲೆಸ್ತೀನ್, ಮಾಲಿ ಸೇರಿದಂತೆ ಕೆಲ ರಾಷ್ಟ್ರಗಳು ಒಲಿಂಪಿಕ್ಸ್ ಸಮಿತಿಯನ್ನು ಕ್ರೀಡಾಕೂಟ ಆರಂಭಕ್ಕೆ ಮುನ್ನವೇ ಒತ್ತಾಯಿಸಿತ್ತು. ಒಲಿಂಪಿಕ್ಸ್ ಸಮಿತಿ ಅದನ್ನು ಪರಿಗಣಿಸಿಲ್ಲ.

ಇಸ್ರೇಲ್ ತಂಡಕ್ಕೆ ಭಾರೀ ಭದ್ರತೆ

1972ರ ಮ್ಯೂನಿಚ್ ಒಲಿಂಪಿಕ್ಸ್ ವೇಳೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಸ್ರೇಲ್ ತಂಡದ 12 ಮಂದಿ ಮತ್ತು ದಾಳಿ ನಡೆಸಿದ ತಂಡದ ಐವರು ಮೃತಪಟ್ಟಿದ್ದರು. ಅದೇ ರೀತಿಯ ದಾಳಿಯನ್ನು ಪ್ಯಾರಿಸ್‌ನಲ್ಲಿ ನಡೆಸಲಾಗುವುದು ಎಂದು ಇಸ್ರೇಲ್ ತಂಡಕ್ಕೆ ಬೆದರಿಕೆ ಹಾಕಲಾಗಿದೆಯಂತೆ. ಈ ಹಿನ್ನೆಲೆ ಇಸ್ರೇಲ್ ತಂಡಕ್ಕೆ ಪ್ಯಾರಿಸ್‌ನಲ್ಲಿ ಭಾರೀ ಭದ್ರತೆ ನೀಡಲಾಗಿದೆ.

ಇಸ್ರೇಲ್ ಮತ್ತು ಮಾಲಿ ತಂಡಗಳ ಪಂದ್ಯದ ವೇಳೆ ಎಲ್ಲಾ ರೀತಿಯ ಭದ್ರತೆಯನ್ನು ಏರ್ಪಡಿಸಲಾಗಿತ್ತು. ಇಸ್ರೇಲ್ ತಂಡ ಭಾರೀ ಪೊಲೀಸ್ ಬೆಂಗಾವಲಿನೊಂದಿಗೆ ಕ್ರೀಡಾಂಗಣ ಆಗಮಿಸಿತ್ತು. ತಂಡದ ಮುಂಭಾಗದಲ್ಲಿ ದ್ವಿಚಕ್ರ ವಾಹನ ಪಡೆ, ಹಿಂದೆ ಒಂದು ಡಝನ್‌ಗಿಂತಲೂ ಹೆಚ್ಚು ಗಲಭೆ ನಿಯಂತ್ರಣ ಪಡೆಯ ಪೊಲೀಸರು ಇದ್ದರು. ಅಸೋಸಿಯೇಟೆಡ್ ಪ್ರೆಸ್ ಪ್ರಕಾರ, ಶಸ್ತ್ರಸಜ್ಜಿತ ಪೊಲೀಸ್ ಅಧಿಕಾರಿಗಳು ಪಾರ್ಕ್ ಡೆಸ್ ಪ್ರಿನ್ಸಸ್ ಸ್ಟೇಡಿಯಂನಲ್ಲಿ ಗಸ್ತು ತಿರುಗುತ್ತಿದ್ದರು.

ಪ್ಯಾರಿಸ್ ಒಲಿಂಪಿಕ್ಸ್‌ಗೆ ಮುನ್ನ ಬೆದರಿಕೆಯ ವಿಡಿಯೋವೊಂದು ವೈರಲ್ ಆಗಿತ್ತು. ಅದರಲ್ಲಿ ಮುಖಗವಸು ಧರಿಸಿದ್ದ ವ್ಯಕ್ತಿಯೊಬ್ಬ ಪ್ಯಾಲೆಸ್ತೀನ್ ಧ್ವಜ ಹಿಡಿದು, ನಕಲಿ ಕತ್ತರಿಸಿದ ತಲೆಯೊಂದನ್ನು ಪ್ರದರ್ಶಿಸಿ ಫ್ರಾನ್ಸ್‌ ಇಸ್ರೇಲ್‌ ಅನ್ನು ಬೆಂಬಲಿಸುತ್ತಿರುವ ಕಾರಣ, ಪ್ಯಾರಿಸ್‌ನಲ್ಲಿ ‘ರಕ್ತದ ನದಿ ಹರಿಯಲಿದೆ’ ಎಂದಿದ್ದ.

ಈ ಬಾರಿಯ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಇಸ್ರೇಲ್‌ 88 ಅಥ್ಲೀಟ್‌ಗಳ ತಂಡವನ್ನು ಕಳುಹಿಸಿದೆ. ಇಸ್ರೇಲ್ ಒಲಿಂಪಿಕ್ಸ್ ಸಮಿತಿಯ ಅಧ್ಯಕ್ಷ ಯೆಲ್ ಅರಾದ್ ಇದನ್ನು “ವಿಜಯ” ಎಂದು ಕರೆದಿದ್ದು, ಹೆಚ್ಚಿನ ಕ್ರೀಡಾಪಟುಗಳಿಗೆ ಭಾಗವಹಿಸಲು ಸಾಧ್ಯವಾಗಿದೆ ಎಂದಿದ್ದಾರೆ.

ಪ್ಯಾಲೆಸ್ತೀನ್ ಒಲಿಂಪಿಕ್ಸ್ ಸಮಿತಿಯು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಮುಖ್ಯಸ್ಥ ಥಾಮಸ್ ಬಾಚ್ ಅವರಿಗೆ ಪತ್ರ ಬರೆದು “ಇಸ್ರೇಲ್ ಗಾಝಾ ಮೇಲೆ ಅಕ್ರಮಣ ನಡೆಸುತ್ತಿದೆ. ಗಾಝಾದಲ್ಲಿ ಇಸ್ರೇಲ್ ದಾಳಿಯಿಂದ ಸುಮಾರು 400 ಪ್ಯಾಲೆಸ್ತೀನ್ ಕ್ರೀಡಾಪಟುಗಳು ಕೊಲ್ಲಲ್ಪಟ್ಟಿದ್ದಾರೆ. ಇಸ್ರೇಲ್ ದಾಳಿ ನಡೆಸಿ ಕ್ರೀಡಾ ಸೌಲಭ್ಯಗಳನ್ನು ನಾಶಪಡಿಸಿದೆ” ಎಂದು ಹೇಳಿದೆ.

ಒಟ್ಟಿನಲ್ಲಿ ವಿವಿಧ ರೀತಿಯಲ್ಲಿ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟ ಗಾಝಾದ ಆಕ್ರಮಣದ ವಿರುದ್ದ ಪ್ರತಿಭಟಿಸಲು ಪ್ಯಾಲೆಸ್ತೀನ್ ಸೇರಿದಂತೆ ಹಲವು ರಾಷ್ಟ್ರಗಳಿಗೆ, ಜನರಿಗೆ ವೇದಿಕೆಯಾಗಿದೆ. ಈ ಹಿಂದೆಯೂ ಇಂತಹ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಹಲವು ರೀತಿಯ ಪ್ರತಿಭಟನೆಗಳು ವ್ಯಕ್ತವಾಗಿವೆ. ಒಲಿಂಪಿಕ್ಸ್‌ನಂತಹ ಇಡೀ ಜಗತ್ತಿನ ಗಮನ ಸೆಳೆಯುವ ಕಾರ್ಯಕ್ರಮಗಳಲ್ಲಿ ಪ್ರತಿಭಟನೆ ವ್ಯಕ್ತಪಡಿಸುವುದು ಅತ್ಯಂತ ಮಹತ್ವದ ವಿಷಯವಾಗಿದೆ.

ಇದನ್ನೂ ಓದಿ : ಧಾರ್ಮಿಕ ಭಾವನೆ ರಕ್ಷಿಸುವ ಉದ್ದೇಶದಿಂದ ಹೋಟೆಲ್ ಮಾಲೀಕರ ಹೆಸರು ಪ್ರದರ್ಶನ: ಯುಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...