Homeಮುಖಪುಟಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪ್ರತಿಧ್ವನಿಸಿದ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷ

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪ್ರತಿಧ್ವನಿಸಿದ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷ

- Advertisement -
- Advertisement -

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬುಧವಾರ (ಜು.24) ನಡೆದ ಇಸ್ರೇಲ್ ಮತ್ತು ಮಾಲಿ ನಡುವಿನ ಫುಟ್ಬಾಲ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿತ್ತು. ಆದರೆ, ಈ ಪಂದ್ಯ ಫುಟ್ಬಾಲ್ ಹೊರತುಪಡಿಸಿ ಮತ್ತೊಂದು ವಿಷಯಕ್ಕೆ ವಿಶ್ವದ ಗಮನ ಸೆಳೆದಿದೆ.

ಮುಸ್ಲಿಂ ರಾಷ್ಟ್ರ ಮಾಲಿ ಮತ್ತು ಯಹೂದಿ ರಾಷ್ಟ್ರ ಇಸ್ರೇಲ್ ನಡುವಿನ ಪಂದ್ಯದಲ್ಲಿ ಗಾಝಾ ಮೇಲಿನ ಇಸ್ರೇಲ್ ಆಕ್ರಮಣದ ವಿಷಯ ಪ್ರತಿಧ್ವನಿಸಿದೆ. ಫುಟ್ಬಾಲ್ ಪಂದ್ಯದ ವೇಳೆ ಗ್ಯಾಲರಿಯಲ್ಲಿ ಎರಡೂ ರಾಷ್ಟ್ರಗಳ ಅಭಿಮಾನಿಗಳ ನಡುವೆ ಇದೇ ವಿಚಾರಕ್ಕೆ ಪ್ರತಿಭಟನೆ ಮತ್ತು ಜಗಳ ನಡೆದಿದೆ ಎಂದು ವರದಿಯಾಗಿದೆ.

ಗಾಝಾದಲ್ಲಿ ಅಮಾಯಕ ನಾಗರಿಕ ಮಾರಣಹೋಮ ನಡೆಸುತ್ತಿರುವ ಇಸ್ರೇಲ್‌ಗೆ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ನೀಡಬಾರದು ಎಂದು ಪ್ಯಾಲೆಸ್ತೀನ್, ಮಾಲಿ ಸೇರಿದಂತೆ ಕೆಲ ರಾಷ್ಟ್ರಗಳು ಒಲಿಂಪಿಕ್ಸ್ ಸಮಿತಿಯನ್ನು ಕ್ರೀಡಾಕೂಟ ಆರಂಭಕ್ಕೆ ಮುನ್ನವೇ ಒತ್ತಾಯಿಸಿತ್ತು. ಒಲಿಂಪಿಕ್ಸ್ ಸಮಿತಿ ಅದನ್ನು ಪರಿಗಣಿಸಿಲ್ಲ.

ಇಸ್ರೇಲ್ ತಂಡಕ್ಕೆ ಭಾರೀ ಭದ್ರತೆ

1972ರ ಮ್ಯೂನಿಚ್ ಒಲಿಂಪಿಕ್ಸ್ ವೇಳೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಸ್ರೇಲ್ ತಂಡದ 12 ಮಂದಿ ಮತ್ತು ದಾಳಿ ನಡೆಸಿದ ತಂಡದ ಐವರು ಮೃತಪಟ್ಟಿದ್ದರು. ಅದೇ ರೀತಿಯ ದಾಳಿಯನ್ನು ಪ್ಯಾರಿಸ್‌ನಲ್ಲಿ ನಡೆಸಲಾಗುವುದು ಎಂದು ಇಸ್ರೇಲ್ ತಂಡಕ್ಕೆ ಬೆದರಿಕೆ ಹಾಕಲಾಗಿದೆಯಂತೆ. ಈ ಹಿನ್ನೆಲೆ ಇಸ್ರೇಲ್ ತಂಡಕ್ಕೆ ಪ್ಯಾರಿಸ್‌ನಲ್ಲಿ ಭಾರೀ ಭದ್ರತೆ ನೀಡಲಾಗಿದೆ.

ಇಸ್ರೇಲ್ ಮತ್ತು ಮಾಲಿ ತಂಡಗಳ ಪಂದ್ಯದ ವೇಳೆ ಎಲ್ಲಾ ರೀತಿಯ ಭದ್ರತೆಯನ್ನು ಏರ್ಪಡಿಸಲಾಗಿತ್ತು. ಇಸ್ರೇಲ್ ತಂಡ ಭಾರೀ ಪೊಲೀಸ್ ಬೆಂಗಾವಲಿನೊಂದಿಗೆ ಕ್ರೀಡಾಂಗಣ ಆಗಮಿಸಿತ್ತು. ತಂಡದ ಮುಂಭಾಗದಲ್ಲಿ ದ್ವಿಚಕ್ರ ವಾಹನ ಪಡೆ, ಹಿಂದೆ ಒಂದು ಡಝನ್‌ಗಿಂತಲೂ ಹೆಚ್ಚು ಗಲಭೆ ನಿಯಂತ್ರಣ ಪಡೆಯ ಪೊಲೀಸರು ಇದ್ದರು. ಅಸೋಸಿಯೇಟೆಡ್ ಪ್ರೆಸ್ ಪ್ರಕಾರ, ಶಸ್ತ್ರಸಜ್ಜಿತ ಪೊಲೀಸ್ ಅಧಿಕಾರಿಗಳು ಪಾರ್ಕ್ ಡೆಸ್ ಪ್ರಿನ್ಸಸ್ ಸ್ಟೇಡಿಯಂನಲ್ಲಿ ಗಸ್ತು ತಿರುಗುತ್ತಿದ್ದರು.

ಪ್ಯಾರಿಸ್ ಒಲಿಂಪಿಕ್ಸ್‌ಗೆ ಮುನ್ನ ಬೆದರಿಕೆಯ ವಿಡಿಯೋವೊಂದು ವೈರಲ್ ಆಗಿತ್ತು. ಅದರಲ್ಲಿ ಮುಖಗವಸು ಧರಿಸಿದ್ದ ವ್ಯಕ್ತಿಯೊಬ್ಬ ಪ್ಯಾಲೆಸ್ತೀನ್ ಧ್ವಜ ಹಿಡಿದು, ನಕಲಿ ಕತ್ತರಿಸಿದ ತಲೆಯೊಂದನ್ನು ಪ್ರದರ್ಶಿಸಿ ಫ್ರಾನ್ಸ್‌ ಇಸ್ರೇಲ್‌ ಅನ್ನು ಬೆಂಬಲಿಸುತ್ತಿರುವ ಕಾರಣ, ಪ್ಯಾರಿಸ್‌ನಲ್ಲಿ ‘ರಕ್ತದ ನದಿ ಹರಿಯಲಿದೆ’ ಎಂದಿದ್ದ.

ಈ ಬಾರಿಯ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಇಸ್ರೇಲ್‌ 88 ಅಥ್ಲೀಟ್‌ಗಳ ತಂಡವನ್ನು ಕಳುಹಿಸಿದೆ. ಇಸ್ರೇಲ್ ಒಲಿಂಪಿಕ್ಸ್ ಸಮಿತಿಯ ಅಧ್ಯಕ್ಷ ಯೆಲ್ ಅರಾದ್ ಇದನ್ನು “ವಿಜಯ” ಎಂದು ಕರೆದಿದ್ದು, ಹೆಚ್ಚಿನ ಕ್ರೀಡಾಪಟುಗಳಿಗೆ ಭಾಗವಹಿಸಲು ಸಾಧ್ಯವಾಗಿದೆ ಎಂದಿದ್ದಾರೆ.

ಪ್ಯಾಲೆಸ್ತೀನ್ ಒಲಿಂಪಿಕ್ಸ್ ಸಮಿತಿಯು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಮುಖ್ಯಸ್ಥ ಥಾಮಸ್ ಬಾಚ್ ಅವರಿಗೆ ಪತ್ರ ಬರೆದು “ಇಸ್ರೇಲ್ ಗಾಝಾ ಮೇಲೆ ಅಕ್ರಮಣ ನಡೆಸುತ್ತಿದೆ. ಗಾಝಾದಲ್ಲಿ ಇಸ್ರೇಲ್ ದಾಳಿಯಿಂದ ಸುಮಾರು 400 ಪ್ಯಾಲೆಸ್ತೀನ್ ಕ್ರೀಡಾಪಟುಗಳು ಕೊಲ್ಲಲ್ಪಟ್ಟಿದ್ದಾರೆ. ಇಸ್ರೇಲ್ ದಾಳಿ ನಡೆಸಿ ಕ್ರೀಡಾ ಸೌಲಭ್ಯಗಳನ್ನು ನಾಶಪಡಿಸಿದೆ” ಎಂದು ಹೇಳಿದೆ.

ಒಟ್ಟಿನಲ್ಲಿ ವಿವಿಧ ರೀತಿಯಲ್ಲಿ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟ ಗಾಝಾದ ಆಕ್ರಮಣದ ವಿರುದ್ದ ಪ್ರತಿಭಟಿಸಲು ಪ್ಯಾಲೆಸ್ತೀನ್ ಸೇರಿದಂತೆ ಹಲವು ರಾಷ್ಟ್ರಗಳಿಗೆ, ಜನರಿಗೆ ವೇದಿಕೆಯಾಗಿದೆ. ಈ ಹಿಂದೆಯೂ ಇಂತಹ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಹಲವು ರೀತಿಯ ಪ್ರತಿಭಟನೆಗಳು ವ್ಯಕ್ತವಾಗಿವೆ. ಒಲಿಂಪಿಕ್ಸ್‌ನಂತಹ ಇಡೀ ಜಗತ್ತಿನ ಗಮನ ಸೆಳೆಯುವ ಕಾರ್ಯಕ್ರಮಗಳಲ್ಲಿ ಪ್ರತಿಭಟನೆ ವ್ಯಕ್ತಪಡಿಸುವುದು ಅತ್ಯಂತ ಮಹತ್ವದ ವಿಷಯವಾಗಿದೆ.

ಇದನ್ನೂ ಓದಿ : ಧಾರ್ಮಿಕ ಭಾವನೆ ರಕ್ಷಿಸುವ ಉದ್ದೇಶದಿಂದ ಹೋಟೆಲ್ ಮಾಲೀಕರ ಹೆಸರು ಪ್ರದರ್ಶನ: ಯುಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....