Homeಮುಖಪುಟಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪ್ರತಿಧ್ವನಿಸಿದ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷ

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪ್ರತಿಧ್ವನಿಸಿದ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷ

- Advertisement -
- Advertisement -

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬುಧವಾರ (ಜು.24) ನಡೆದ ಇಸ್ರೇಲ್ ಮತ್ತು ಮಾಲಿ ನಡುವಿನ ಫುಟ್ಬಾಲ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿತ್ತು. ಆದರೆ, ಈ ಪಂದ್ಯ ಫುಟ್ಬಾಲ್ ಹೊರತುಪಡಿಸಿ ಮತ್ತೊಂದು ವಿಷಯಕ್ಕೆ ವಿಶ್ವದ ಗಮನ ಸೆಳೆದಿದೆ.

ಮುಸ್ಲಿಂ ರಾಷ್ಟ್ರ ಮಾಲಿ ಮತ್ತು ಯಹೂದಿ ರಾಷ್ಟ್ರ ಇಸ್ರೇಲ್ ನಡುವಿನ ಪಂದ್ಯದಲ್ಲಿ ಗಾಝಾ ಮೇಲಿನ ಇಸ್ರೇಲ್ ಆಕ್ರಮಣದ ವಿಷಯ ಪ್ರತಿಧ್ವನಿಸಿದೆ. ಫುಟ್ಬಾಲ್ ಪಂದ್ಯದ ವೇಳೆ ಗ್ಯಾಲರಿಯಲ್ಲಿ ಎರಡೂ ರಾಷ್ಟ್ರಗಳ ಅಭಿಮಾನಿಗಳ ನಡುವೆ ಇದೇ ವಿಚಾರಕ್ಕೆ ಪ್ರತಿಭಟನೆ ಮತ್ತು ಜಗಳ ನಡೆದಿದೆ ಎಂದು ವರದಿಯಾಗಿದೆ.

ಗಾಝಾದಲ್ಲಿ ಅಮಾಯಕ ನಾಗರಿಕ ಮಾರಣಹೋಮ ನಡೆಸುತ್ತಿರುವ ಇಸ್ರೇಲ್‌ಗೆ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ನೀಡಬಾರದು ಎಂದು ಪ್ಯಾಲೆಸ್ತೀನ್, ಮಾಲಿ ಸೇರಿದಂತೆ ಕೆಲ ರಾಷ್ಟ್ರಗಳು ಒಲಿಂಪಿಕ್ಸ್ ಸಮಿತಿಯನ್ನು ಕ್ರೀಡಾಕೂಟ ಆರಂಭಕ್ಕೆ ಮುನ್ನವೇ ಒತ್ತಾಯಿಸಿತ್ತು. ಒಲಿಂಪಿಕ್ಸ್ ಸಮಿತಿ ಅದನ್ನು ಪರಿಗಣಿಸಿಲ್ಲ.

ಇಸ್ರೇಲ್ ತಂಡಕ್ಕೆ ಭಾರೀ ಭದ್ರತೆ

1972ರ ಮ್ಯೂನಿಚ್ ಒಲಿಂಪಿಕ್ಸ್ ವೇಳೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಸ್ರೇಲ್ ತಂಡದ 12 ಮಂದಿ ಮತ್ತು ದಾಳಿ ನಡೆಸಿದ ತಂಡದ ಐವರು ಮೃತಪಟ್ಟಿದ್ದರು. ಅದೇ ರೀತಿಯ ದಾಳಿಯನ್ನು ಪ್ಯಾರಿಸ್‌ನಲ್ಲಿ ನಡೆಸಲಾಗುವುದು ಎಂದು ಇಸ್ರೇಲ್ ತಂಡಕ್ಕೆ ಬೆದರಿಕೆ ಹಾಕಲಾಗಿದೆಯಂತೆ. ಈ ಹಿನ್ನೆಲೆ ಇಸ್ರೇಲ್ ತಂಡಕ್ಕೆ ಪ್ಯಾರಿಸ್‌ನಲ್ಲಿ ಭಾರೀ ಭದ್ರತೆ ನೀಡಲಾಗಿದೆ.

ಇಸ್ರೇಲ್ ಮತ್ತು ಮಾಲಿ ತಂಡಗಳ ಪಂದ್ಯದ ವೇಳೆ ಎಲ್ಲಾ ರೀತಿಯ ಭದ್ರತೆಯನ್ನು ಏರ್ಪಡಿಸಲಾಗಿತ್ತು. ಇಸ್ರೇಲ್ ತಂಡ ಭಾರೀ ಪೊಲೀಸ್ ಬೆಂಗಾವಲಿನೊಂದಿಗೆ ಕ್ರೀಡಾಂಗಣ ಆಗಮಿಸಿತ್ತು. ತಂಡದ ಮುಂಭಾಗದಲ್ಲಿ ದ್ವಿಚಕ್ರ ವಾಹನ ಪಡೆ, ಹಿಂದೆ ಒಂದು ಡಝನ್‌ಗಿಂತಲೂ ಹೆಚ್ಚು ಗಲಭೆ ನಿಯಂತ್ರಣ ಪಡೆಯ ಪೊಲೀಸರು ಇದ್ದರು. ಅಸೋಸಿಯೇಟೆಡ್ ಪ್ರೆಸ್ ಪ್ರಕಾರ, ಶಸ್ತ್ರಸಜ್ಜಿತ ಪೊಲೀಸ್ ಅಧಿಕಾರಿಗಳು ಪಾರ್ಕ್ ಡೆಸ್ ಪ್ರಿನ್ಸಸ್ ಸ್ಟೇಡಿಯಂನಲ್ಲಿ ಗಸ್ತು ತಿರುಗುತ್ತಿದ್ದರು.

ಪ್ಯಾರಿಸ್ ಒಲಿಂಪಿಕ್ಸ್‌ಗೆ ಮುನ್ನ ಬೆದರಿಕೆಯ ವಿಡಿಯೋವೊಂದು ವೈರಲ್ ಆಗಿತ್ತು. ಅದರಲ್ಲಿ ಮುಖಗವಸು ಧರಿಸಿದ್ದ ವ್ಯಕ್ತಿಯೊಬ್ಬ ಪ್ಯಾಲೆಸ್ತೀನ್ ಧ್ವಜ ಹಿಡಿದು, ನಕಲಿ ಕತ್ತರಿಸಿದ ತಲೆಯೊಂದನ್ನು ಪ್ರದರ್ಶಿಸಿ ಫ್ರಾನ್ಸ್‌ ಇಸ್ರೇಲ್‌ ಅನ್ನು ಬೆಂಬಲಿಸುತ್ತಿರುವ ಕಾರಣ, ಪ್ಯಾರಿಸ್‌ನಲ್ಲಿ ‘ರಕ್ತದ ನದಿ ಹರಿಯಲಿದೆ’ ಎಂದಿದ್ದ.

ಈ ಬಾರಿಯ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಇಸ್ರೇಲ್‌ 88 ಅಥ್ಲೀಟ್‌ಗಳ ತಂಡವನ್ನು ಕಳುಹಿಸಿದೆ. ಇಸ್ರೇಲ್ ಒಲಿಂಪಿಕ್ಸ್ ಸಮಿತಿಯ ಅಧ್ಯಕ್ಷ ಯೆಲ್ ಅರಾದ್ ಇದನ್ನು “ವಿಜಯ” ಎಂದು ಕರೆದಿದ್ದು, ಹೆಚ್ಚಿನ ಕ್ರೀಡಾಪಟುಗಳಿಗೆ ಭಾಗವಹಿಸಲು ಸಾಧ್ಯವಾಗಿದೆ ಎಂದಿದ್ದಾರೆ.

ಪ್ಯಾಲೆಸ್ತೀನ್ ಒಲಿಂಪಿಕ್ಸ್ ಸಮಿತಿಯು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಮುಖ್ಯಸ್ಥ ಥಾಮಸ್ ಬಾಚ್ ಅವರಿಗೆ ಪತ್ರ ಬರೆದು “ಇಸ್ರೇಲ್ ಗಾಝಾ ಮೇಲೆ ಅಕ್ರಮಣ ನಡೆಸುತ್ತಿದೆ. ಗಾಝಾದಲ್ಲಿ ಇಸ್ರೇಲ್ ದಾಳಿಯಿಂದ ಸುಮಾರು 400 ಪ್ಯಾಲೆಸ್ತೀನ್ ಕ್ರೀಡಾಪಟುಗಳು ಕೊಲ್ಲಲ್ಪಟ್ಟಿದ್ದಾರೆ. ಇಸ್ರೇಲ್ ದಾಳಿ ನಡೆಸಿ ಕ್ರೀಡಾ ಸೌಲಭ್ಯಗಳನ್ನು ನಾಶಪಡಿಸಿದೆ” ಎಂದು ಹೇಳಿದೆ.

ಒಟ್ಟಿನಲ್ಲಿ ವಿವಿಧ ರೀತಿಯಲ್ಲಿ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟ ಗಾಝಾದ ಆಕ್ರಮಣದ ವಿರುದ್ದ ಪ್ರತಿಭಟಿಸಲು ಪ್ಯಾಲೆಸ್ತೀನ್ ಸೇರಿದಂತೆ ಹಲವು ರಾಷ್ಟ್ರಗಳಿಗೆ, ಜನರಿಗೆ ವೇದಿಕೆಯಾಗಿದೆ. ಈ ಹಿಂದೆಯೂ ಇಂತಹ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಹಲವು ರೀತಿಯ ಪ್ರತಿಭಟನೆಗಳು ವ್ಯಕ್ತವಾಗಿವೆ. ಒಲಿಂಪಿಕ್ಸ್‌ನಂತಹ ಇಡೀ ಜಗತ್ತಿನ ಗಮನ ಸೆಳೆಯುವ ಕಾರ್ಯಕ್ರಮಗಳಲ್ಲಿ ಪ್ರತಿಭಟನೆ ವ್ಯಕ್ತಪಡಿಸುವುದು ಅತ್ಯಂತ ಮಹತ್ವದ ವಿಷಯವಾಗಿದೆ.

ಇದನ್ನೂ ಓದಿ : ಧಾರ್ಮಿಕ ಭಾವನೆ ರಕ್ಷಿಸುವ ಉದ್ದೇಶದಿಂದ ಹೋಟೆಲ್ ಮಾಲೀಕರ ಹೆಸರು ಪ್ರದರ್ಶನ: ಯುಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...