Homeಮುಖಪುಟಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪ್ರತಿಧ್ವನಿಸಿದ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷ

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪ್ರತಿಧ್ವನಿಸಿದ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷ

- Advertisement -
- Advertisement -

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬುಧವಾರ (ಜು.24) ನಡೆದ ಇಸ್ರೇಲ್ ಮತ್ತು ಮಾಲಿ ನಡುವಿನ ಫುಟ್ಬಾಲ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿತ್ತು. ಆದರೆ, ಈ ಪಂದ್ಯ ಫುಟ್ಬಾಲ್ ಹೊರತುಪಡಿಸಿ ಮತ್ತೊಂದು ವಿಷಯಕ್ಕೆ ವಿಶ್ವದ ಗಮನ ಸೆಳೆದಿದೆ.

ಮುಸ್ಲಿಂ ರಾಷ್ಟ್ರ ಮಾಲಿ ಮತ್ತು ಯಹೂದಿ ರಾಷ್ಟ್ರ ಇಸ್ರೇಲ್ ನಡುವಿನ ಪಂದ್ಯದಲ್ಲಿ ಗಾಝಾ ಮೇಲಿನ ಇಸ್ರೇಲ್ ಆಕ್ರಮಣದ ವಿಷಯ ಪ್ರತಿಧ್ವನಿಸಿದೆ. ಫುಟ್ಬಾಲ್ ಪಂದ್ಯದ ವೇಳೆ ಗ್ಯಾಲರಿಯಲ್ಲಿ ಎರಡೂ ರಾಷ್ಟ್ರಗಳ ಅಭಿಮಾನಿಗಳ ನಡುವೆ ಇದೇ ವಿಚಾರಕ್ಕೆ ಪ್ರತಿಭಟನೆ ಮತ್ತು ಜಗಳ ನಡೆದಿದೆ ಎಂದು ವರದಿಯಾಗಿದೆ.

ಗಾಝಾದಲ್ಲಿ ಅಮಾಯಕ ನಾಗರಿಕ ಮಾರಣಹೋಮ ನಡೆಸುತ್ತಿರುವ ಇಸ್ರೇಲ್‌ಗೆ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ನೀಡಬಾರದು ಎಂದು ಪ್ಯಾಲೆಸ್ತೀನ್, ಮಾಲಿ ಸೇರಿದಂತೆ ಕೆಲ ರಾಷ್ಟ್ರಗಳು ಒಲಿಂಪಿಕ್ಸ್ ಸಮಿತಿಯನ್ನು ಕ್ರೀಡಾಕೂಟ ಆರಂಭಕ್ಕೆ ಮುನ್ನವೇ ಒತ್ತಾಯಿಸಿತ್ತು. ಒಲಿಂಪಿಕ್ಸ್ ಸಮಿತಿ ಅದನ್ನು ಪರಿಗಣಿಸಿಲ್ಲ.

ಇಸ್ರೇಲ್ ತಂಡಕ್ಕೆ ಭಾರೀ ಭದ್ರತೆ

1972ರ ಮ್ಯೂನಿಚ್ ಒಲಿಂಪಿಕ್ಸ್ ವೇಳೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಸ್ರೇಲ್ ತಂಡದ 12 ಮಂದಿ ಮತ್ತು ದಾಳಿ ನಡೆಸಿದ ತಂಡದ ಐವರು ಮೃತಪಟ್ಟಿದ್ದರು. ಅದೇ ರೀತಿಯ ದಾಳಿಯನ್ನು ಪ್ಯಾರಿಸ್‌ನಲ್ಲಿ ನಡೆಸಲಾಗುವುದು ಎಂದು ಇಸ್ರೇಲ್ ತಂಡಕ್ಕೆ ಬೆದರಿಕೆ ಹಾಕಲಾಗಿದೆಯಂತೆ. ಈ ಹಿನ್ನೆಲೆ ಇಸ್ರೇಲ್ ತಂಡಕ್ಕೆ ಪ್ಯಾರಿಸ್‌ನಲ್ಲಿ ಭಾರೀ ಭದ್ರತೆ ನೀಡಲಾಗಿದೆ.

ಇಸ್ರೇಲ್ ಮತ್ತು ಮಾಲಿ ತಂಡಗಳ ಪಂದ್ಯದ ವೇಳೆ ಎಲ್ಲಾ ರೀತಿಯ ಭದ್ರತೆಯನ್ನು ಏರ್ಪಡಿಸಲಾಗಿತ್ತು. ಇಸ್ರೇಲ್ ತಂಡ ಭಾರೀ ಪೊಲೀಸ್ ಬೆಂಗಾವಲಿನೊಂದಿಗೆ ಕ್ರೀಡಾಂಗಣ ಆಗಮಿಸಿತ್ತು. ತಂಡದ ಮುಂಭಾಗದಲ್ಲಿ ದ್ವಿಚಕ್ರ ವಾಹನ ಪಡೆ, ಹಿಂದೆ ಒಂದು ಡಝನ್‌ಗಿಂತಲೂ ಹೆಚ್ಚು ಗಲಭೆ ನಿಯಂತ್ರಣ ಪಡೆಯ ಪೊಲೀಸರು ಇದ್ದರು. ಅಸೋಸಿಯೇಟೆಡ್ ಪ್ರೆಸ್ ಪ್ರಕಾರ, ಶಸ್ತ್ರಸಜ್ಜಿತ ಪೊಲೀಸ್ ಅಧಿಕಾರಿಗಳು ಪಾರ್ಕ್ ಡೆಸ್ ಪ್ರಿನ್ಸಸ್ ಸ್ಟೇಡಿಯಂನಲ್ಲಿ ಗಸ್ತು ತಿರುಗುತ್ತಿದ್ದರು.

ಪ್ಯಾರಿಸ್ ಒಲಿಂಪಿಕ್ಸ್‌ಗೆ ಮುನ್ನ ಬೆದರಿಕೆಯ ವಿಡಿಯೋವೊಂದು ವೈರಲ್ ಆಗಿತ್ತು. ಅದರಲ್ಲಿ ಮುಖಗವಸು ಧರಿಸಿದ್ದ ವ್ಯಕ್ತಿಯೊಬ್ಬ ಪ್ಯಾಲೆಸ್ತೀನ್ ಧ್ವಜ ಹಿಡಿದು, ನಕಲಿ ಕತ್ತರಿಸಿದ ತಲೆಯೊಂದನ್ನು ಪ್ರದರ್ಶಿಸಿ ಫ್ರಾನ್ಸ್‌ ಇಸ್ರೇಲ್‌ ಅನ್ನು ಬೆಂಬಲಿಸುತ್ತಿರುವ ಕಾರಣ, ಪ್ಯಾರಿಸ್‌ನಲ್ಲಿ ‘ರಕ್ತದ ನದಿ ಹರಿಯಲಿದೆ’ ಎಂದಿದ್ದ.

ಈ ಬಾರಿಯ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಇಸ್ರೇಲ್‌ 88 ಅಥ್ಲೀಟ್‌ಗಳ ತಂಡವನ್ನು ಕಳುಹಿಸಿದೆ. ಇಸ್ರೇಲ್ ಒಲಿಂಪಿಕ್ಸ್ ಸಮಿತಿಯ ಅಧ್ಯಕ್ಷ ಯೆಲ್ ಅರಾದ್ ಇದನ್ನು “ವಿಜಯ” ಎಂದು ಕರೆದಿದ್ದು, ಹೆಚ್ಚಿನ ಕ್ರೀಡಾಪಟುಗಳಿಗೆ ಭಾಗವಹಿಸಲು ಸಾಧ್ಯವಾಗಿದೆ ಎಂದಿದ್ದಾರೆ.

ಪ್ಯಾಲೆಸ್ತೀನ್ ಒಲಿಂಪಿಕ್ಸ್ ಸಮಿತಿಯು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಮುಖ್ಯಸ್ಥ ಥಾಮಸ್ ಬಾಚ್ ಅವರಿಗೆ ಪತ್ರ ಬರೆದು “ಇಸ್ರೇಲ್ ಗಾಝಾ ಮೇಲೆ ಅಕ್ರಮಣ ನಡೆಸುತ್ತಿದೆ. ಗಾಝಾದಲ್ಲಿ ಇಸ್ರೇಲ್ ದಾಳಿಯಿಂದ ಸುಮಾರು 400 ಪ್ಯಾಲೆಸ್ತೀನ್ ಕ್ರೀಡಾಪಟುಗಳು ಕೊಲ್ಲಲ್ಪಟ್ಟಿದ್ದಾರೆ. ಇಸ್ರೇಲ್ ದಾಳಿ ನಡೆಸಿ ಕ್ರೀಡಾ ಸೌಲಭ್ಯಗಳನ್ನು ನಾಶಪಡಿಸಿದೆ” ಎಂದು ಹೇಳಿದೆ.

ಒಟ್ಟಿನಲ್ಲಿ ವಿವಿಧ ರೀತಿಯಲ್ಲಿ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟ ಗಾಝಾದ ಆಕ್ರಮಣದ ವಿರುದ್ದ ಪ್ರತಿಭಟಿಸಲು ಪ್ಯಾಲೆಸ್ತೀನ್ ಸೇರಿದಂತೆ ಹಲವು ರಾಷ್ಟ್ರಗಳಿಗೆ, ಜನರಿಗೆ ವೇದಿಕೆಯಾಗಿದೆ. ಈ ಹಿಂದೆಯೂ ಇಂತಹ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಹಲವು ರೀತಿಯ ಪ್ರತಿಭಟನೆಗಳು ವ್ಯಕ್ತವಾಗಿವೆ. ಒಲಿಂಪಿಕ್ಸ್‌ನಂತಹ ಇಡೀ ಜಗತ್ತಿನ ಗಮನ ಸೆಳೆಯುವ ಕಾರ್ಯಕ್ರಮಗಳಲ್ಲಿ ಪ್ರತಿಭಟನೆ ವ್ಯಕ್ತಪಡಿಸುವುದು ಅತ್ಯಂತ ಮಹತ್ವದ ವಿಷಯವಾಗಿದೆ.

ಇದನ್ನೂ ಓದಿ : ಧಾರ್ಮಿಕ ಭಾವನೆ ರಕ್ಷಿಸುವ ಉದ್ದೇಶದಿಂದ ಹೋಟೆಲ್ ಮಾಲೀಕರ ಹೆಸರು ಪ್ರದರ್ಶನ: ಯುಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...