Homeಮುಖಪುಟಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪ್ರತಿಧ್ವನಿಸಿದ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷ

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪ್ರತಿಧ್ವನಿಸಿದ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷ

- Advertisement -
- Advertisement -

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬುಧವಾರ (ಜು.24) ನಡೆದ ಇಸ್ರೇಲ್ ಮತ್ತು ಮಾಲಿ ನಡುವಿನ ಫುಟ್ಬಾಲ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿತ್ತು. ಆದರೆ, ಈ ಪಂದ್ಯ ಫುಟ್ಬಾಲ್ ಹೊರತುಪಡಿಸಿ ಮತ್ತೊಂದು ವಿಷಯಕ್ಕೆ ವಿಶ್ವದ ಗಮನ ಸೆಳೆದಿದೆ.

ಮುಸ್ಲಿಂ ರಾಷ್ಟ್ರ ಮಾಲಿ ಮತ್ತು ಯಹೂದಿ ರಾಷ್ಟ್ರ ಇಸ್ರೇಲ್ ನಡುವಿನ ಪಂದ್ಯದಲ್ಲಿ ಗಾಝಾ ಮೇಲಿನ ಇಸ್ರೇಲ್ ಆಕ್ರಮಣದ ವಿಷಯ ಪ್ರತಿಧ್ವನಿಸಿದೆ. ಫುಟ್ಬಾಲ್ ಪಂದ್ಯದ ವೇಳೆ ಗ್ಯಾಲರಿಯಲ್ಲಿ ಎರಡೂ ರಾಷ್ಟ್ರಗಳ ಅಭಿಮಾನಿಗಳ ನಡುವೆ ಇದೇ ವಿಚಾರಕ್ಕೆ ಪ್ರತಿಭಟನೆ ಮತ್ತು ಜಗಳ ನಡೆದಿದೆ ಎಂದು ವರದಿಯಾಗಿದೆ.

ಗಾಝಾದಲ್ಲಿ ಅಮಾಯಕ ನಾಗರಿಕ ಮಾರಣಹೋಮ ನಡೆಸುತ್ತಿರುವ ಇಸ್ರೇಲ್‌ಗೆ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ನೀಡಬಾರದು ಎಂದು ಪ್ಯಾಲೆಸ್ತೀನ್, ಮಾಲಿ ಸೇರಿದಂತೆ ಕೆಲ ರಾಷ್ಟ್ರಗಳು ಒಲಿಂಪಿಕ್ಸ್ ಸಮಿತಿಯನ್ನು ಕ್ರೀಡಾಕೂಟ ಆರಂಭಕ್ಕೆ ಮುನ್ನವೇ ಒತ್ತಾಯಿಸಿತ್ತು. ಒಲಿಂಪಿಕ್ಸ್ ಸಮಿತಿ ಅದನ್ನು ಪರಿಗಣಿಸಿಲ್ಲ.

ಇಸ್ರೇಲ್ ತಂಡಕ್ಕೆ ಭಾರೀ ಭದ್ರತೆ

1972ರ ಮ್ಯೂನಿಚ್ ಒಲಿಂಪಿಕ್ಸ್ ವೇಳೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಸ್ರೇಲ್ ತಂಡದ 12 ಮಂದಿ ಮತ್ತು ದಾಳಿ ನಡೆಸಿದ ತಂಡದ ಐವರು ಮೃತಪಟ್ಟಿದ್ದರು. ಅದೇ ರೀತಿಯ ದಾಳಿಯನ್ನು ಪ್ಯಾರಿಸ್‌ನಲ್ಲಿ ನಡೆಸಲಾಗುವುದು ಎಂದು ಇಸ್ರೇಲ್ ತಂಡಕ್ಕೆ ಬೆದರಿಕೆ ಹಾಕಲಾಗಿದೆಯಂತೆ. ಈ ಹಿನ್ನೆಲೆ ಇಸ್ರೇಲ್ ತಂಡಕ್ಕೆ ಪ್ಯಾರಿಸ್‌ನಲ್ಲಿ ಭಾರೀ ಭದ್ರತೆ ನೀಡಲಾಗಿದೆ.

ಇಸ್ರೇಲ್ ಮತ್ತು ಮಾಲಿ ತಂಡಗಳ ಪಂದ್ಯದ ವೇಳೆ ಎಲ್ಲಾ ರೀತಿಯ ಭದ್ರತೆಯನ್ನು ಏರ್ಪಡಿಸಲಾಗಿತ್ತು. ಇಸ್ರೇಲ್ ತಂಡ ಭಾರೀ ಪೊಲೀಸ್ ಬೆಂಗಾವಲಿನೊಂದಿಗೆ ಕ್ರೀಡಾಂಗಣ ಆಗಮಿಸಿತ್ತು. ತಂಡದ ಮುಂಭಾಗದಲ್ಲಿ ದ್ವಿಚಕ್ರ ವಾಹನ ಪಡೆ, ಹಿಂದೆ ಒಂದು ಡಝನ್‌ಗಿಂತಲೂ ಹೆಚ್ಚು ಗಲಭೆ ನಿಯಂತ್ರಣ ಪಡೆಯ ಪೊಲೀಸರು ಇದ್ದರು. ಅಸೋಸಿಯೇಟೆಡ್ ಪ್ರೆಸ್ ಪ್ರಕಾರ, ಶಸ್ತ್ರಸಜ್ಜಿತ ಪೊಲೀಸ್ ಅಧಿಕಾರಿಗಳು ಪಾರ್ಕ್ ಡೆಸ್ ಪ್ರಿನ್ಸಸ್ ಸ್ಟೇಡಿಯಂನಲ್ಲಿ ಗಸ್ತು ತಿರುಗುತ್ತಿದ್ದರು.

ಪ್ಯಾರಿಸ್ ಒಲಿಂಪಿಕ್ಸ್‌ಗೆ ಮುನ್ನ ಬೆದರಿಕೆಯ ವಿಡಿಯೋವೊಂದು ವೈರಲ್ ಆಗಿತ್ತು. ಅದರಲ್ಲಿ ಮುಖಗವಸು ಧರಿಸಿದ್ದ ವ್ಯಕ್ತಿಯೊಬ್ಬ ಪ್ಯಾಲೆಸ್ತೀನ್ ಧ್ವಜ ಹಿಡಿದು, ನಕಲಿ ಕತ್ತರಿಸಿದ ತಲೆಯೊಂದನ್ನು ಪ್ರದರ್ಶಿಸಿ ಫ್ರಾನ್ಸ್‌ ಇಸ್ರೇಲ್‌ ಅನ್ನು ಬೆಂಬಲಿಸುತ್ತಿರುವ ಕಾರಣ, ಪ್ಯಾರಿಸ್‌ನಲ್ಲಿ ‘ರಕ್ತದ ನದಿ ಹರಿಯಲಿದೆ’ ಎಂದಿದ್ದ.

ಈ ಬಾರಿಯ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಇಸ್ರೇಲ್‌ 88 ಅಥ್ಲೀಟ್‌ಗಳ ತಂಡವನ್ನು ಕಳುಹಿಸಿದೆ. ಇಸ್ರೇಲ್ ಒಲಿಂಪಿಕ್ಸ್ ಸಮಿತಿಯ ಅಧ್ಯಕ್ಷ ಯೆಲ್ ಅರಾದ್ ಇದನ್ನು “ವಿಜಯ” ಎಂದು ಕರೆದಿದ್ದು, ಹೆಚ್ಚಿನ ಕ್ರೀಡಾಪಟುಗಳಿಗೆ ಭಾಗವಹಿಸಲು ಸಾಧ್ಯವಾಗಿದೆ ಎಂದಿದ್ದಾರೆ.

ಪ್ಯಾಲೆಸ್ತೀನ್ ಒಲಿಂಪಿಕ್ಸ್ ಸಮಿತಿಯು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಮುಖ್ಯಸ್ಥ ಥಾಮಸ್ ಬಾಚ್ ಅವರಿಗೆ ಪತ್ರ ಬರೆದು “ಇಸ್ರೇಲ್ ಗಾಝಾ ಮೇಲೆ ಅಕ್ರಮಣ ನಡೆಸುತ್ತಿದೆ. ಗಾಝಾದಲ್ಲಿ ಇಸ್ರೇಲ್ ದಾಳಿಯಿಂದ ಸುಮಾರು 400 ಪ್ಯಾಲೆಸ್ತೀನ್ ಕ್ರೀಡಾಪಟುಗಳು ಕೊಲ್ಲಲ್ಪಟ್ಟಿದ್ದಾರೆ. ಇಸ್ರೇಲ್ ದಾಳಿ ನಡೆಸಿ ಕ್ರೀಡಾ ಸೌಲಭ್ಯಗಳನ್ನು ನಾಶಪಡಿಸಿದೆ” ಎಂದು ಹೇಳಿದೆ.

ಒಟ್ಟಿನಲ್ಲಿ ವಿವಿಧ ರೀತಿಯಲ್ಲಿ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟ ಗಾಝಾದ ಆಕ್ರಮಣದ ವಿರುದ್ದ ಪ್ರತಿಭಟಿಸಲು ಪ್ಯಾಲೆಸ್ತೀನ್ ಸೇರಿದಂತೆ ಹಲವು ರಾಷ್ಟ್ರಗಳಿಗೆ, ಜನರಿಗೆ ವೇದಿಕೆಯಾಗಿದೆ. ಈ ಹಿಂದೆಯೂ ಇಂತಹ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಹಲವು ರೀತಿಯ ಪ್ರತಿಭಟನೆಗಳು ವ್ಯಕ್ತವಾಗಿವೆ. ಒಲಿಂಪಿಕ್ಸ್‌ನಂತಹ ಇಡೀ ಜಗತ್ತಿನ ಗಮನ ಸೆಳೆಯುವ ಕಾರ್ಯಕ್ರಮಗಳಲ್ಲಿ ಪ್ರತಿಭಟನೆ ವ್ಯಕ್ತಪಡಿಸುವುದು ಅತ್ಯಂತ ಮಹತ್ವದ ವಿಷಯವಾಗಿದೆ.

ಇದನ್ನೂ ಓದಿ : ಧಾರ್ಮಿಕ ಭಾವನೆ ರಕ್ಷಿಸುವ ಉದ್ದೇಶದಿಂದ ಹೋಟೆಲ್ ಮಾಲೀಕರ ಹೆಸರು ಪ್ರದರ್ಶನ: ಯುಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...