Homeಮುಖಪುಟಗಾಝಾಕ್ಕೆ ವೈದ್ಯಕೀಯ ನೆರವು ರವಾನಿಸಿದ ಜೋರ್ಡಾನ್‌

ಗಾಝಾಕ್ಕೆ ವೈದ್ಯಕೀಯ ನೆರವು ರವಾನಿಸಿದ ಜೋರ್ಡಾನ್‌

- Advertisement -
- Advertisement -

ಗಾಝಾದಲ್ಲಿರುವ ಆಸ್ಪತ್ರೆಗೆ ತುರ್ತು ವೈದ್ಯಕೀಯ ಸಹಾಯವನ್ನು ಜೋರ್ಡಾನ್‌ನ ಕಿಂಗ್ ಅಬ್ದುಲ್ಲಾ II ಘೋಷಿಸಿದ್ದು, ವಾಯುಪಡೆಯು ಮೂಲಕ ವೈದ್ಯಕೀಯ ನೆರವನ್ನು ಕಳುಹಿಸಿಕೊಟ್ಟಿದ್ದಾರೆ.

ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್‌ ಮಾಡಿದ ಜೋರ್ಡಾನ್‌ನ ಕಿಂಗ್ ಅಬ್ದುಲ್ಲಾ II, ವಾಯುಪಡೆಯ ಸಿಬ್ಬಂದಿಗಳು ಮಧ್ಯರಾತ್ರಿಯಲ್ಲಿ ಗಾಝಾದ ಆಸ್ಪತ್ರೆಗೆ ತುರ್ತು ವೈದ್ಯಕೀಯ ನೆರವು ರವಾನಿಸಿದ್ದಾರೆ. ಗಾಝಾದಲ್ಲಿನ ಯುದ್ಧದಲ್ಲಿ ಗಾಯಗೊಂಡ ನಮ್ಮ ಸಹೋದರ ಸಹೋದರಿಯರಿಗೆ ಸಹಾಯ ಮಾಡುವುದು ನಮ್ಮ ಕರ್ತವ್ಯವಾಗಿದೆ. ನಾವು ನಮ್ಮ ಪ್ಯಾಲೆಸ್ತೀನ್ ಸಹೋದರರಿಗೆ ಸಹಾಯ ಮಾಡಲು ಸದಾ ಸಿದ್ದರಾಗಿದ್ದೇವೆ ಎಂದು ಹೇಳಿದ್ದಾರೆ.

ನ.1ರಂದು ಜೋರ್ಡಾನ್ ದೇಶವು ಗಾಝಾದ ಮೇಲೆ ನಡೆಯುತ್ತಿರುವ ದಾಳಿಯನ್ನು ಪ್ರತಿಭಟಿಸಿ ಇಸ್ರೇಲ್‌ನಿಂದ ತನ್ನ ರಾಯಭಾರಿಯನ್ನು ವಾಪಾಸ್ಸು ಕರೆಸಿಕೊಂಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ವಿದೇಶಾಂಗ ಸಚಿವ ಅಯ್ಮನ್ ಸಫಾದಿ, ರಾಯಭಾರಿಯನ್ನು ವಾಪಾಸ್ಸು ಕರೆಸಿಕೊಂಡಿರುವುದು ಗಾಝಾದ ಮೇಲಿನ ಯುದ್ಧ ನಿಲುಗಡೆಗೆ ಸಂಬಂಧಿಸಿದೆ. ಪ್ಯಾಲೆಸ್ತೀನಿಯಾದ ಜನರ ಆಹಾರ, ನೀರು, ಔಷಧಿಗಳ ಹಕ್ಕನ್ನು ಕಸಿದುಕೊಂಡ ಕ್ರಮಗಳಿಗೆ ಸಂಬಂಧಿಸಿದೆ ಎಂದು ಹೇಳಿದ್ದಾರೆ.

ಗಾಝಾದಲ್ಲಿನ ಸಂಘರ್ಷವನ್ನು ಕೊನೆಗೊಳಿಸಲು ಜೋರ್ಡಾನ್ ಕೆಲಸ ಮಾಡುವುದನ್ನು ಮುಂದುವರಿಸಲಿದೆ.  ಮಾನವೀಯ ನೆರವು ನೀಡಲು, ನಾಗರಿಕರನ್ನು ರಕ್ಷಿಸಲು ಜೋರ್ಡಾನ್ ಸದಾ ಬದ್ಧವಾಗಿದೆ ಎಂದು ಸಫಾದಿ  ಹೇಳಿದ್ದಾರೆ.

ಇಸ್ರೇಲ್-ಹಮಾಸ್ ಯುದ್ಧವು  30ನೇ ದಿನಕ್ಕೆ ಕಾಲಿಟ್ಟಿದೆ. ಗಾಝಾ ಪಟ್ಟಿಯಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 9,770ಕ್ಕೂ ಅಧಿಕವಾಗಿದೆ. ಬಲಿಯಾದವರಲ್ಲಿ 4,008 ಮಕ್ಕಳು ಮತ್ತು 2,550 ಮಹಿಳೆಯರು ಸೇರಿದ್ದಾರೆ ಎಂದು ಪ್ಯಾಲೆಸ್ತೀನ್‌ ಆರೋಗ್ಯ ಸಚಿವಾಲಯ ಇತ್ತೀಚಿನ ಅಂಕಿ ಅಂಶಗಳನ್ನು ಬಿಡುಗಡೆಗೊಳಿಸಿ ತಿಳಿಸಿದೆ.

ಇಸ್ರೇಲ್‌ ಅಧಿಕಾರಿಗಳ ಪ್ರಕಾರ, ಇಸ್ರೇಲ್‌ನಲ್ಲಿ ಈವರೆಗೆ 1400ಜನರು ಮೃತಪಟ್ಟಿದ್ದಾರೆ. ಮತ್ತು ವಿದೇಶಿ ಪ್ರಜೆಗಳು ಸೇರಿದಂತೆ 242 ಜನರು ಗಾಝಾದಲ್ಲಿ ಬಂಧಿತರಾಗಿದ್ದಾರೆ. ಇಲ್ಲಿಯವರೆಗೆ ನಾಲ್ಕು ನಾಗರಿಕ ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದೆ ಮತ್ತು ಒಬ್ಬ ಮಹಿಳಾ ಸೈನಿಕರನ್ನು ಇಸ್ರೇಲ್‌ ಪಡೆಗಳು ರಕ್ಷಿಸಿವೆ. ಒತ್ತೆಯಾಳುಗಳಲ್ಲಿ 57 ಮಂದಿ ಇಸ್ರೇಲ್‌ ವೈಮಾನಿಕ ದಾಳಿಯಿಂದ ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಹೇಳಿಕೊಂಡಿದೆ. ಭಾನುವಾರ ಗಾಝಾದಲ್ಲಿ ಒಬ್ಬ ಇಸ್ರೇಲ್‌ ಸೈನಿಕನನ್ನು ಕೊಲ್ಲಲಾಗಿದೆ ಎಂದು ವರದಿಯಾಗಿದೆ. ಈ ಮೂಲಕ ಕೊಲ್ಲಲ್ಪಟ್ಟ ಒಟ್ಟು ಸೈನಿಕರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.

ಇದನ್ನು ಓದಿ: 29ನೇ ದಿನಕ್ಕೆ ಕಾಲಿಟ್ಟ ಯುದ್ಧ; ಇಸ್ರೇಲ್‌ನಿಂದ ಗಾಝಾದಲ್ಲಿ 9,770 ನಾಗರಿಕರ ಹತ್ಯೆ; ಮೃತರಲ್ಲಿ ಹೆಚ್ಚಿನವರು ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...