Homeಮುಖಪುಟಗಾಝಾಕ್ಕೆ ವೈದ್ಯಕೀಯ ನೆರವು ರವಾನಿಸಿದ ಜೋರ್ಡಾನ್‌

ಗಾಝಾಕ್ಕೆ ವೈದ್ಯಕೀಯ ನೆರವು ರವಾನಿಸಿದ ಜೋರ್ಡಾನ್‌

- Advertisement -
- Advertisement -

ಗಾಝಾದಲ್ಲಿರುವ ಆಸ್ಪತ್ರೆಗೆ ತುರ್ತು ವೈದ್ಯಕೀಯ ಸಹಾಯವನ್ನು ಜೋರ್ಡಾನ್‌ನ ಕಿಂಗ್ ಅಬ್ದುಲ್ಲಾ II ಘೋಷಿಸಿದ್ದು, ವಾಯುಪಡೆಯು ಮೂಲಕ ವೈದ್ಯಕೀಯ ನೆರವನ್ನು ಕಳುಹಿಸಿಕೊಟ್ಟಿದ್ದಾರೆ.

ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್‌ ಮಾಡಿದ ಜೋರ್ಡಾನ್‌ನ ಕಿಂಗ್ ಅಬ್ದುಲ್ಲಾ II, ವಾಯುಪಡೆಯ ಸಿಬ್ಬಂದಿಗಳು ಮಧ್ಯರಾತ್ರಿಯಲ್ಲಿ ಗಾಝಾದ ಆಸ್ಪತ್ರೆಗೆ ತುರ್ತು ವೈದ್ಯಕೀಯ ನೆರವು ರವಾನಿಸಿದ್ದಾರೆ. ಗಾಝಾದಲ್ಲಿನ ಯುದ್ಧದಲ್ಲಿ ಗಾಯಗೊಂಡ ನಮ್ಮ ಸಹೋದರ ಸಹೋದರಿಯರಿಗೆ ಸಹಾಯ ಮಾಡುವುದು ನಮ್ಮ ಕರ್ತವ್ಯವಾಗಿದೆ. ನಾವು ನಮ್ಮ ಪ್ಯಾಲೆಸ್ತೀನ್ ಸಹೋದರರಿಗೆ ಸಹಾಯ ಮಾಡಲು ಸದಾ ಸಿದ್ದರಾಗಿದ್ದೇವೆ ಎಂದು ಹೇಳಿದ್ದಾರೆ.

ನ.1ರಂದು ಜೋರ್ಡಾನ್ ದೇಶವು ಗಾಝಾದ ಮೇಲೆ ನಡೆಯುತ್ತಿರುವ ದಾಳಿಯನ್ನು ಪ್ರತಿಭಟಿಸಿ ಇಸ್ರೇಲ್‌ನಿಂದ ತನ್ನ ರಾಯಭಾರಿಯನ್ನು ವಾಪಾಸ್ಸು ಕರೆಸಿಕೊಂಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ವಿದೇಶಾಂಗ ಸಚಿವ ಅಯ್ಮನ್ ಸಫಾದಿ, ರಾಯಭಾರಿಯನ್ನು ವಾಪಾಸ್ಸು ಕರೆಸಿಕೊಂಡಿರುವುದು ಗಾಝಾದ ಮೇಲಿನ ಯುದ್ಧ ನಿಲುಗಡೆಗೆ ಸಂಬಂಧಿಸಿದೆ. ಪ್ಯಾಲೆಸ್ತೀನಿಯಾದ ಜನರ ಆಹಾರ, ನೀರು, ಔಷಧಿಗಳ ಹಕ್ಕನ್ನು ಕಸಿದುಕೊಂಡ ಕ್ರಮಗಳಿಗೆ ಸಂಬಂಧಿಸಿದೆ ಎಂದು ಹೇಳಿದ್ದಾರೆ.

ಗಾಝಾದಲ್ಲಿನ ಸಂಘರ್ಷವನ್ನು ಕೊನೆಗೊಳಿಸಲು ಜೋರ್ಡಾನ್ ಕೆಲಸ ಮಾಡುವುದನ್ನು ಮುಂದುವರಿಸಲಿದೆ.  ಮಾನವೀಯ ನೆರವು ನೀಡಲು, ನಾಗರಿಕರನ್ನು ರಕ್ಷಿಸಲು ಜೋರ್ಡಾನ್ ಸದಾ ಬದ್ಧವಾಗಿದೆ ಎಂದು ಸಫಾದಿ  ಹೇಳಿದ್ದಾರೆ.

ಇಸ್ರೇಲ್-ಹಮಾಸ್ ಯುದ್ಧವು  30ನೇ ದಿನಕ್ಕೆ ಕಾಲಿಟ್ಟಿದೆ. ಗಾಝಾ ಪಟ್ಟಿಯಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 9,770ಕ್ಕೂ ಅಧಿಕವಾಗಿದೆ. ಬಲಿಯಾದವರಲ್ಲಿ 4,008 ಮಕ್ಕಳು ಮತ್ತು 2,550 ಮಹಿಳೆಯರು ಸೇರಿದ್ದಾರೆ ಎಂದು ಪ್ಯಾಲೆಸ್ತೀನ್‌ ಆರೋಗ್ಯ ಸಚಿವಾಲಯ ಇತ್ತೀಚಿನ ಅಂಕಿ ಅಂಶಗಳನ್ನು ಬಿಡುಗಡೆಗೊಳಿಸಿ ತಿಳಿಸಿದೆ.

ಇಸ್ರೇಲ್‌ ಅಧಿಕಾರಿಗಳ ಪ್ರಕಾರ, ಇಸ್ರೇಲ್‌ನಲ್ಲಿ ಈವರೆಗೆ 1400ಜನರು ಮೃತಪಟ್ಟಿದ್ದಾರೆ. ಮತ್ತು ವಿದೇಶಿ ಪ್ರಜೆಗಳು ಸೇರಿದಂತೆ 242 ಜನರು ಗಾಝಾದಲ್ಲಿ ಬಂಧಿತರಾಗಿದ್ದಾರೆ. ಇಲ್ಲಿಯವರೆಗೆ ನಾಲ್ಕು ನಾಗರಿಕ ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದೆ ಮತ್ತು ಒಬ್ಬ ಮಹಿಳಾ ಸೈನಿಕರನ್ನು ಇಸ್ರೇಲ್‌ ಪಡೆಗಳು ರಕ್ಷಿಸಿವೆ. ಒತ್ತೆಯಾಳುಗಳಲ್ಲಿ 57 ಮಂದಿ ಇಸ್ರೇಲ್‌ ವೈಮಾನಿಕ ದಾಳಿಯಿಂದ ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಹೇಳಿಕೊಂಡಿದೆ. ಭಾನುವಾರ ಗಾಝಾದಲ್ಲಿ ಒಬ್ಬ ಇಸ್ರೇಲ್‌ ಸೈನಿಕನನ್ನು ಕೊಲ್ಲಲಾಗಿದೆ ಎಂದು ವರದಿಯಾಗಿದೆ. ಈ ಮೂಲಕ ಕೊಲ್ಲಲ್ಪಟ್ಟ ಒಟ್ಟು ಸೈನಿಕರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.

ಇದನ್ನು ಓದಿ: 29ನೇ ದಿನಕ್ಕೆ ಕಾಲಿಟ್ಟ ಯುದ್ಧ; ಇಸ್ರೇಲ್‌ನಿಂದ ಗಾಝಾದಲ್ಲಿ 9,770 ನಾಗರಿಕರ ಹತ್ಯೆ; ಮೃತರಲ್ಲಿ ಹೆಚ್ಚಿನವರು ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...