Homeಅಂತರಾಷ್ಟ್ರೀಯಇಸ್ರೇಲ್‌ ಅಮಾಯಕ ಪ್ಯಾಲೆಸ್ತೀನ್‌ ನಾಗರಿಕರನ್ನು ಹತ್ಯೆ ಮಾಡಿದೆ: ಆಂಟೋನಿ ಬ್ಲಿಂಕೆನ್

ಇಸ್ರೇಲ್‌ ಅಮಾಯಕ ಪ್ಯಾಲೆಸ್ತೀನ್‌ ನಾಗರಿಕರನ್ನು ಹತ್ಯೆ ಮಾಡಿದೆ: ಆಂಟೋನಿ ಬ್ಲಿಂಕೆನ್

- Advertisement -
- Advertisement -

ಗಾಝಾ ಮೇಲೆ ಇಸ್ರೇಲ್‌ ನಡೆಸುವ ಯುದ್ಧ ಅಪರಾಧಕ್ಕೆ ಅಮೆರಿಕಾ ಬೆಂಬವನ್ನು ನೀಡುತ್ತಿದೆ. ಈ ಮೊದಲು ಅಮೆರಿಕ ಇಸ್ರೇಲ್‌ಗೆ ಶಸ್ತ್ರಶಸ್ತ್ರಗಳನ್ನು, ಯುದ್ಧ ವಿಮಾನಗಳನ್ನು ಕಳುಹಿಸಿತ್ತು. ಕದನ ವಿರಾಮಕ್ಕೆ ಆಗ್ರಹಿಸಿದ ಯುಎನ್‌ ನಿರ್ಣಯವನ್ನು ಕೂಡ ಯುಎಸ್‌ ತನ್ನ ವಿಟೋ ಅಧಿಕಾರ ಬಳಸಿ ತಡೆ ನೀಡಿತ್ತು. ಇದೀಗ ಇಸ್ರೇಲ್‌ ಹತ್ಯಾಕಾಂಡದ ಬಗ್ಗೆ US ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಕಳವಳ ವ್ಯಕ್ತಪಡಿಸಿದ್ದು, ಗಾಝಾದಲ್ಲಿನ ನಾಗರಿಕರನ್ನು ರಕ್ಷಿಸುವಂತೆ ಆಗ್ರಹಿಸಿದ್ದಾರೆ.

ಕತಾರ್‌ಗೆ ಬೇಟಿ ನೀಡಿದ ಆಂಟೋನಿ ಬ್ಲಿಂಕೆನ್, ಹಲವಾರು ಅಮಾಯಕ ಪ್ಯಾಲೆಸ್ತೀನ್‌ ನಾಗರಿಕರು ಈಗಾಗಲೇ ಕೊಲ್ಲಲ್ಪಟ್ಟಿದ್ದಾರೆ. ಅಲ್ ಜಜೀರಾ ಪತ್ರಕರ್ತರಾದ ಹಮ್ಜಾ ವೇಲ್ ಅಲ್-ದಹದೌ ಮತ್ತು ಮುಸ್ತಫಾ ತುರಾಯ ಅವರ ಹತ್ಯೆ ಊಹಿಸಲಾಗದ ದುರಂತ ಎಂದು ಆಂಟೋನಿ ಬ್ಲಿಂಕೆನ್ ಅವರು ಹೇಳಿದ್ದಾರೆ.

ಪ್ಯಾಲೆಸ್ತೀನ್‌ ನಾಗರಿಕರಿಗೆ ತಮ್ಮ ಮನೆಗೆ ಮರಳಲು ಅವಕಾಶ ನೀಡಬೇಕು ಮತ್ತು ನಾಗರಿಕರನ್ನು ಗಾಝಾ ಪಟ್ಟಿಯಿಂದ ಸ್ಥಳಾಂತರಿಸಬಾರದು ಎಂದು ಬ್ಲಿಂಕನ್ ಹೇಳಿದ್ದಾರೆ. ಒಂದು ವಾರದ ಬಳಿಕ ಆಂಟೋನಿ ಬ್ಲಿಂಕೆನ್ ಇಸ್ರೇಲ್‌ಗೆ ಭೇಟಿ ನೀಡಲಿದ್ದು, ಗಾಝಾದಲ್ಲಿ ನಾಗರಿಕರ ಸಾವುನೋವುಗಳನ್ನು ತಡೆಗಟ್ಟಲು ಹೆಚ್ಚಿನದನ್ನು ಮಾಡುವ ಅಗತ್ಯವನ್ನು ಹೇಳಿದ್ದಾರೆ.

ಅದೇ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕತಾರ್ ಪ್ರಧಾನಿ ಮೊಹಮ್ಮದ್ ಬಿನ್ ಅಬ್ದುಲ್ರಹ್ಮಾನ್ ಅಲ್ ಥಾನಿ, ಮಂಗಳವಾರ ಲೆಬನಾನ್‌ನಲ್ಲಿ ಹಿರಿಯ ಹಮಾಸ್ ಅಧಿಕಾರಿಯ ಹತ್ಯೆಯು ಇಸ್ರೇಲ್ ಮತ್ತು ಹಮಾಸ್ ನಡುವೆ ಮಾತುಕತೆ ನಡೆಸುವ ಕತಾರ್ ಪ್ರಯತ್ನಗಳ ಮೇಲೆ ಪರಿಣಾಮ ಬೀರಿದೆ ಎಂದು ಹೇಳಿದ್ದಾರೆ.

ಇಬ್ಬರು ಪತ್ರಕರ್ತರ ಹತ್ಯೆ

ಗಾಝಾದ ಸ್ವತಂತ್ರ ಪತ್ರಕರ್ತರಾದ ಹಮ್ಜಾ ವೇಲ್ ಅಲ್-ದಹದೌಹ್ ಮತ್ತು ಮುಸ್ತಫಾ ತುರಾಯಾ ಅವರು ದಕ್ಷಿಣ ಗಾಝಾದಲ್ಲಿ ರಫಾ ಮತ್ತು ಖಾನ್ ಯೂನಿಸ್ ನಡುವೆ ತೆರಳುವಾಗ ಮೃತಪಟ್ಟಿದ್ದಾರೆ. ಇತ್ತೀಚೆಗೆ ಇಸ್ರೇಲ್‌ ಬಾಂಬ್ ದಾಳಿ ಮಾಡಿದ ವಲಯಕ್ಕೆ ವರದಿ ಮಾಡಲು ಹೊರಟಿದ್ದ ವೇಳೆ ಇಸ್ರೇಲ್‌ ದಾಳಿಗೆ ಇವರು ಬಲಿಯಾಗಿದ್ದಾರೆ.

ಯೂಟ್ಯೂಬ್ ಚಾನೆಲ್‌ವೊಂದರಲ್ಲಿ ಪೋಸ್ಟ್ ಮಾಡಲಾದ ವೀಡಿಯೊವು ವೇಲ್ ಅಲ್-ದಹದೌಹ್ ತನ್ನ ಮಗನ ದೇಹದ ಪಕ್ಕದಲ್ಲಿ ಅಳುತ್ತಿರುವುದನ್ನು ಮತ್ತು ಅವನ ಕೈಯನ್ನು ಹಿಡಿದಿರುವುದನ್ನು ತೋರಿಸಿದೆ.

ಅಲ್ ಜಝೀರಾ ಮೀಡಿಯಾ ನೆಟ್‌ವರ್ಕ್, ಇಸ್ರೇಲ್‌ ಪಡೆಗಳು ಪ್ಯಾಲೆಸ್ತೀನ್‌ ಪತ್ರಕರ್ತರ ಕಾರನ್ನು ಗುರಿಯಾಗಿಸಿಕೊಂಡಿರುವುದನ್ನು ಬಲವಾಗಿ ಖಂಡಿಸುತ್ತದೆ ಎಂದು ಹೇಳಿದ್ದು, ಇಸ್ರೇಲ್ ಪತ್ರಿಕಾ ಸ್ವಾತಂತ್ರ್ಯದ ತತ್ವಗಳನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದೆ.

ಘಟನೆಯ ಬಗ್ಗೆ ಇಸ್ರೇಲ್‌ ಸೇನೆಯು ತಕ್ಷಣ ಪ್ರತಿಕ್ರಿಯಿಸಲಿಲ್ಲ. ಶನಿವಾರದವರೆಗೆ 77 ಪತ್ರಕರ್ತರು ಮತ್ತು ಮಾಧ್ಯಮ ಕಾರ್ಯಕರ್ತರು ಸಂಘರ್ಷವನ್ನು ವರದಿ ಮಾಡುವಾಗ ಕೊಲ್ಲಲ್ಪಟ್ಟಿದ್ದಾರೆ ಎಂದು ಅಂತರಾಷ್ಟ್ರೀಯ ಮಾಧ್ಯಮ ಹಕ್ಕುಗಳ ವಾಚ್‌ಡಾಗ್‌ನ ಪತ್ರಕರ್ತರ ರಕ್ಷಣಾ ಸಮಿತಿ ಹೇಳಿದೆ. ಇದರಲ್ಲಿ 70 ಪ್ಯಾಲೆಸ್ತೀನಿಯನ್ನರು, ನಾಲ್ವರು ಇಸ್ರೇಲ್‌ ಪತ್ರಕರ್ತರು ಮತ್ತು ಮೂವರು ಲೆಬನಾನಿ ಪತ್ರಕರ್ತರು ಮೃತಪಟ್ಟಿದ್ದಾರೆ. ಇವರು ರಾಯಿಟರ್ಸ್, ಏಜೆನ್ಸ್ ಫ್ರಾನ್ಸ್-ಪ್ರೆಸ್ ಮತ್ತು ಟರ್ಕಿಯ ಅನಾಡೋಲು ಸುದ್ದಿ ಸಂಸ್ಥೆ ಸೇರಿದಂತೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದರು.

ಇದನ್ನು ಓದಿ: ಬಿಲ್ಕಿಸ್ ಬಾನು ಪ್ರಕರಣ; 2 ವಾರಗಳಲ್ಲಿ ಜೈಲಿಗೆ ಮರಳುವಂತೆ 11 ಅಪರಾಧಿಗಳಿಗೆ ಸುಪ್ರೀಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...