Homeಅಂತರಾಷ್ಟ್ರೀಯಇಸ್ರೇಲ್‌ ಅಮಾಯಕ ಪ್ಯಾಲೆಸ್ತೀನ್‌ ನಾಗರಿಕರನ್ನು ಹತ್ಯೆ ಮಾಡಿದೆ: ಆಂಟೋನಿ ಬ್ಲಿಂಕೆನ್

ಇಸ್ರೇಲ್‌ ಅಮಾಯಕ ಪ್ಯಾಲೆಸ್ತೀನ್‌ ನಾಗರಿಕರನ್ನು ಹತ್ಯೆ ಮಾಡಿದೆ: ಆಂಟೋನಿ ಬ್ಲಿಂಕೆನ್

- Advertisement -
- Advertisement -

ಗಾಝಾ ಮೇಲೆ ಇಸ್ರೇಲ್‌ ನಡೆಸುವ ಯುದ್ಧ ಅಪರಾಧಕ್ಕೆ ಅಮೆರಿಕಾ ಬೆಂಬವನ್ನು ನೀಡುತ್ತಿದೆ. ಈ ಮೊದಲು ಅಮೆರಿಕ ಇಸ್ರೇಲ್‌ಗೆ ಶಸ್ತ್ರಶಸ್ತ್ರಗಳನ್ನು, ಯುದ್ಧ ವಿಮಾನಗಳನ್ನು ಕಳುಹಿಸಿತ್ತು. ಕದನ ವಿರಾಮಕ್ಕೆ ಆಗ್ರಹಿಸಿದ ಯುಎನ್‌ ನಿರ್ಣಯವನ್ನು ಕೂಡ ಯುಎಸ್‌ ತನ್ನ ವಿಟೋ ಅಧಿಕಾರ ಬಳಸಿ ತಡೆ ನೀಡಿತ್ತು. ಇದೀಗ ಇಸ್ರೇಲ್‌ ಹತ್ಯಾಕಾಂಡದ ಬಗ್ಗೆ US ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಕಳವಳ ವ್ಯಕ್ತಪಡಿಸಿದ್ದು, ಗಾಝಾದಲ್ಲಿನ ನಾಗರಿಕರನ್ನು ರಕ್ಷಿಸುವಂತೆ ಆಗ್ರಹಿಸಿದ್ದಾರೆ.

ಕತಾರ್‌ಗೆ ಬೇಟಿ ನೀಡಿದ ಆಂಟೋನಿ ಬ್ಲಿಂಕೆನ್, ಹಲವಾರು ಅಮಾಯಕ ಪ್ಯಾಲೆಸ್ತೀನ್‌ ನಾಗರಿಕರು ಈಗಾಗಲೇ ಕೊಲ್ಲಲ್ಪಟ್ಟಿದ್ದಾರೆ. ಅಲ್ ಜಜೀರಾ ಪತ್ರಕರ್ತರಾದ ಹಮ್ಜಾ ವೇಲ್ ಅಲ್-ದಹದೌ ಮತ್ತು ಮುಸ್ತಫಾ ತುರಾಯ ಅವರ ಹತ್ಯೆ ಊಹಿಸಲಾಗದ ದುರಂತ ಎಂದು ಆಂಟೋನಿ ಬ್ಲಿಂಕೆನ್ ಅವರು ಹೇಳಿದ್ದಾರೆ.

ಪ್ಯಾಲೆಸ್ತೀನ್‌ ನಾಗರಿಕರಿಗೆ ತಮ್ಮ ಮನೆಗೆ ಮರಳಲು ಅವಕಾಶ ನೀಡಬೇಕು ಮತ್ತು ನಾಗರಿಕರನ್ನು ಗಾಝಾ ಪಟ್ಟಿಯಿಂದ ಸ್ಥಳಾಂತರಿಸಬಾರದು ಎಂದು ಬ್ಲಿಂಕನ್ ಹೇಳಿದ್ದಾರೆ. ಒಂದು ವಾರದ ಬಳಿಕ ಆಂಟೋನಿ ಬ್ಲಿಂಕೆನ್ ಇಸ್ರೇಲ್‌ಗೆ ಭೇಟಿ ನೀಡಲಿದ್ದು, ಗಾಝಾದಲ್ಲಿ ನಾಗರಿಕರ ಸಾವುನೋವುಗಳನ್ನು ತಡೆಗಟ್ಟಲು ಹೆಚ್ಚಿನದನ್ನು ಮಾಡುವ ಅಗತ್ಯವನ್ನು ಹೇಳಿದ್ದಾರೆ.

ಅದೇ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕತಾರ್ ಪ್ರಧಾನಿ ಮೊಹಮ್ಮದ್ ಬಿನ್ ಅಬ್ದುಲ್ರಹ್ಮಾನ್ ಅಲ್ ಥಾನಿ, ಮಂಗಳವಾರ ಲೆಬನಾನ್‌ನಲ್ಲಿ ಹಿರಿಯ ಹಮಾಸ್ ಅಧಿಕಾರಿಯ ಹತ್ಯೆಯು ಇಸ್ರೇಲ್ ಮತ್ತು ಹಮಾಸ್ ನಡುವೆ ಮಾತುಕತೆ ನಡೆಸುವ ಕತಾರ್ ಪ್ರಯತ್ನಗಳ ಮೇಲೆ ಪರಿಣಾಮ ಬೀರಿದೆ ಎಂದು ಹೇಳಿದ್ದಾರೆ.

ಇಬ್ಬರು ಪತ್ರಕರ್ತರ ಹತ್ಯೆ

ಗಾಝಾದ ಸ್ವತಂತ್ರ ಪತ್ರಕರ್ತರಾದ ಹಮ್ಜಾ ವೇಲ್ ಅಲ್-ದಹದೌಹ್ ಮತ್ತು ಮುಸ್ತಫಾ ತುರಾಯಾ ಅವರು ದಕ್ಷಿಣ ಗಾಝಾದಲ್ಲಿ ರಫಾ ಮತ್ತು ಖಾನ್ ಯೂನಿಸ್ ನಡುವೆ ತೆರಳುವಾಗ ಮೃತಪಟ್ಟಿದ್ದಾರೆ. ಇತ್ತೀಚೆಗೆ ಇಸ್ರೇಲ್‌ ಬಾಂಬ್ ದಾಳಿ ಮಾಡಿದ ವಲಯಕ್ಕೆ ವರದಿ ಮಾಡಲು ಹೊರಟಿದ್ದ ವೇಳೆ ಇಸ್ರೇಲ್‌ ದಾಳಿಗೆ ಇವರು ಬಲಿಯಾಗಿದ್ದಾರೆ.

ಯೂಟ್ಯೂಬ್ ಚಾನೆಲ್‌ವೊಂದರಲ್ಲಿ ಪೋಸ್ಟ್ ಮಾಡಲಾದ ವೀಡಿಯೊವು ವೇಲ್ ಅಲ್-ದಹದೌಹ್ ತನ್ನ ಮಗನ ದೇಹದ ಪಕ್ಕದಲ್ಲಿ ಅಳುತ್ತಿರುವುದನ್ನು ಮತ್ತು ಅವನ ಕೈಯನ್ನು ಹಿಡಿದಿರುವುದನ್ನು ತೋರಿಸಿದೆ.

ಅಲ್ ಜಝೀರಾ ಮೀಡಿಯಾ ನೆಟ್‌ವರ್ಕ್, ಇಸ್ರೇಲ್‌ ಪಡೆಗಳು ಪ್ಯಾಲೆಸ್ತೀನ್‌ ಪತ್ರಕರ್ತರ ಕಾರನ್ನು ಗುರಿಯಾಗಿಸಿಕೊಂಡಿರುವುದನ್ನು ಬಲವಾಗಿ ಖಂಡಿಸುತ್ತದೆ ಎಂದು ಹೇಳಿದ್ದು, ಇಸ್ರೇಲ್ ಪತ್ರಿಕಾ ಸ್ವಾತಂತ್ರ್ಯದ ತತ್ವಗಳನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದೆ.

ಘಟನೆಯ ಬಗ್ಗೆ ಇಸ್ರೇಲ್‌ ಸೇನೆಯು ತಕ್ಷಣ ಪ್ರತಿಕ್ರಿಯಿಸಲಿಲ್ಲ. ಶನಿವಾರದವರೆಗೆ 77 ಪತ್ರಕರ್ತರು ಮತ್ತು ಮಾಧ್ಯಮ ಕಾರ್ಯಕರ್ತರು ಸಂಘರ್ಷವನ್ನು ವರದಿ ಮಾಡುವಾಗ ಕೊಲ್ಲಲ್ಪಟ್ಟಿದ್ದಾರೆ ಎಂದು ಅಂತರಾಷ್ಟ್ರೀಯ ಮಾಧ್ಯಮ ಹಕ್ಕುಗಳ ವಾಚ್‌ಡಾಗ್‌ನ ಪತ್ರಕರ್ತರ ರಕ್ಷಣಾ ಸಮಿತಿ ಹೇಳಿದೆ. ಇದರಲ್ಲಿ 70 ಪ್ಯಾಲೆಸ್ತೀನಿಯನ್ನರು, ನಾಲ್ವರು ಇಸ್ರೇಲ್‌ ಪತ್ರಕರ್ತರು ಮತ್ತು ಮೂವರು ಲೆಬನಾನಿ ಪತ್ರಕರ್ತರು ಮೃತಪಟ್ಟಿದ್ದಾರೆ. ಇವರು ರಾಯಿಟರ್ಸ್, ಏಜೆನ್ಸ್ ಫ್ರಾನ್ಸ್-ಪ್ರೆಸ್ ಮತ್ತು ಟರ್ಕಿಯ ಅನಾಡೋಲು ಸುದ್ದಿ ಸಂಸ್ಥೆ ಸೇರಿದಂತೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದರು.

ಇದನ್ನು ಓದಿ: ಬಿಲ್ಕಿಸ್ ಬಾನು ಪ್ರಕರಣ; 2 ವಾರಗಳಲ್ಲಿ ಜೈಲಿಗೆ ಮರಳುವಂತೆ 11 ಅಪರಾಧಿಗಳಿಗೆ ಸುಪ್ರೀಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...