Homeಅಂತರಾಷ್ಟ್ರೀಯಇಸ್ರೇಲ್‌ ಅಮಾಯಕ ಪ್ಯಾಲೆಸ್ತೀನ್‌ ನಾಗರಿಕರನ್ನು ಹತ್ಯೆ ಮಾಡಿದೆ: ಆಂಟೋನಿ ಬ್ಲಿಂಕೆನ್

ಇಸ್ರೇಲ್‌ ಅಮಾಯಕ ಪ್ಯಾಲೆಸ್ತೀನ್‌ ನಾಗರಿಕರನ್ನು ಹತ್ಯೆ ಮಾಡಿದೆ: ಆಂಟೋನಿ ಬ್ಲಿಂಕೆನ್

- Advertisement -
- Advertisement -

ಗಾಝಾ ಮೇಲೆ ಇಸ್ರೇಲ್‌ ನಡೆಸುವ ಯುದ್ಧ ಅಪರಾಧಕ್ಕೆ ಅಮೆರಿಕಾ ಬೆಂಬವನ್ನು ನೀಡುತ್ತಿದೆ. ಈ ಮೊದಲು ಅಮೆರಿಕ ಇಸ್ರೇಲ್‌ಗೆ ಶಸ್ತ್ರಶಸ್ತ್ರಗಳನ್ನು, ಯುದ್ಧ ವಿಮಾನಗಳನ್ನು ಕಳುಹಿಸಿತ್ತು. ಕದನ ವಿರಾಮಕ್ಕೆ ಆಗ್ರಹಿಸಿದ ಯುಎನ್‌ ನಿರ್ಣಯವನ್ನು ಕೂಡ ಯುಎಸ್‌ ತನ್ನ ವಿಟೋ ಅಧಿಕಾರ ಬಳಸಿ ತಡೆ ನೀಡಿತ್ತು. ಇದೀಗ ಇಸ್ರೇಲ್‌ ಹತ್ಯಾಕಾಂಡದ ಬಗ್ಗೆ US ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಕಳವಳ ವ್ಯಕ್ತಪಡಿಸಿದ್ದು, ಗಾಝಾದಲ್ಲಿನ ನಾಗರಿಕರನ್ನು ರಕ್ಷಿಸುವಂತೆ ಆಗ್ರಹಿಸಿದ್ದಾರೆ.

ಕತಾರ್‌ಗೆ ಬೇಟಿ ನೀಡಿದ ಆಂಟೋನಿ ಬ್ಲಿಂಕೆನ್, ಹಲವಾರು ಅಮಾಯಕ ಪ್ಯಾಲೆಸ್ತೀನ್‌ ನಾಗರಿಕರು ಈಗಾಗಲೇ ಕೊಲ್ಲಲ್ಪಟ್ಟಿದ್ದಾರೆ. ಅಲ್ ಜಜೀರಾ ಪತ್ರಕರ್ತರಾದ ಹಮ್ಜಾ ವೇಲ್ ಅಲ್-ದಹದೌ ಮತ್ತು ಮುಸ್ತಫಾ ತುರಾಯ ಅವರ ಹತ್ಯೆ ಊಹಿಸಲಾಗದ ದುರಂತ ಎಂದು ಆಂಟೋನಿ ಬ್ಲಿಂಕೆನ್ ಅವರು ಹೇಳಿದ್ದಾರೆ.

ಪ್ಯಾಲೆಸ್ತೀನ್‌ ನಾಗರಿಕರಿಗೆ ತಮ್ಮ ಮನೆಗೆ ಮರಳಲು ಅವಕಾಶ ನೀಡಬೇಕು ಮತ್ತು ನಾಗರಿಕರನ್ನು ಗಾಝಾ ಪಟ್ಟಿಯಿಂದ ಸ್ಥಳಾಂತರಿಸಬಾರದು ಎಂದು ಬ್ಲಿಂಕನ್ ಹೇಳಿದ್ದಾರೆ. ಒಂದು ವಾರದ ಬಳಿಕ ಆಂಟೋನಿ ಬ್ಲಿಂಕೆನ್ ಇಸ್ರೇಲ್‌ಗೆ ಭೇಟಿ ನೀಡಲಿದ್ದು, ಗಾಝಾದಲ್ಲಿ ನಾಗರಿಕರ ಸಾವುನೋವುಗಳನ್ನು ತಡೆಗಟ್ಟಲು ಹೆಚ್ಚಿನದನ್ನು ಮಾಡುವ ಅಗತ್ಯವನ್ನು ಹೇಳಿದ್ದಾರೆ.

ಅದೇ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕತಾರ್ ಪ್ರಧಾನಿ ಮೊಹಮ್ಮದ್ ಬಿನ್ ಅಬ್ದುಲ್ರಹ್ಮಾನ್ ಅಲ್ ಥಾನಿ, ಮಂಗಳವಾರ ಲೆಬನಾನ್‌ನಲ್ಲಿ ಹಿರಿಯ ಹಮಾಸ್ ಅಧಿಕಾರಿಯ ಹತ್ಯೆಯು ಇಸ್ರೇಲ್ ಮತ್ತು ಹಮಾಸ್ ನಡುವೆ ಮಾತುಕತೆ ನಡೆಸುವ ಕತಾರ್ ಪ್ರಯತ್ನಗಳ ಮೇಲೆ ಪರಿಣಾಮ ಬೀರಿದೆ ಎಂದು ಹೇಳಿದ್ದಾರೆ.

ಇಬ್ಬರು ಪತ್ರಕರ್ತರ ಹತ್ಯೆ

ಗಾಝಾದ ಸ್ವತಂತ್ರ ಪತ್ರಕರ್ತರಾದ ಹಮ್ಜಾ ವೇಲ್ ಅಲ್-ದಹದೌಹ್ ಮತ್ತು ಮುಸ್ತಫಾ ತುರಾಯಾ ಅವರು ದಕ್ಷಿಣ ಗಾಝಾದಲ್ಲಿ ರಫಾ ಮತ್ತು ಖಾನ್ ಯೂನಿಸ್ ನಡುವೆ ತೆರಳುವಾಗ ಮೃತಪಟ್ಟಿದ್ದಾರೆ. ಇತ್ತೀಚೆಗೆ ಇಸ್ರೇಲ್‌ ಬಾಂಬ್ ದಾಳಿ ಮಾಡಿದ ವಲಯಕ್ಕೆ ವರದಿ ಮಾಡಲು ಹೊರಟಿದ್ದ ವೇಳೆ ಇಸ್ರೇಲ್‌ ದಾಳಿಗೆ ಇವರು ಬಲಿಯಾಗಿದ್ದಾರೆ.

ಯೂಟ್ಯೂಬ್ ಚಾನೆಲ್‌ವೊಂದರಲ್ಲಿ ಪೋಸ್ಟ್ ಮಾಡಲಾದ ವೀಡಿಯೊವು ವೇಲ್ ಅಲ್-ದಹದೌಹ್ ತನ್ನ ಮಗನ ದೇಹದ ಪಕ್ಕದಲ್ಲಿ ಅಳುತ್ತಿರುವುದನ್ನು ಮತ್ತು ಅವನ ಕೈಯನ್ನು ಹಿಡಿದಿರುವುದನ್ನು ತೋರಿಸಿದೆ.

ಅಲ್ ಜಝೀರಾ ಮೀಡಿಯಾ ನೆಟ್‌ವರ್ಕ್, ಇಸ್ರೇಲ್‌ ಪಡೆಗಳು ಪ್ಯಾಲೆಸ್ತೀನ್‌ ಪತ್ರಕರ್ತರ ಕಾರನ್ನು ಗುರಿಯಾಗಿಸಿಕೊಂಡಿರುವುದನ್ನು ಬಲವಾಗಿ ಖಂಡಿಸುತ್ತದೆ ಎಂದು ಹೇಳಿದ್ದು, ಇಸ್ರೇಲ್ ಪತ್ರಿಕಾ ಸ್ವಾತಂತ್ರ್ಯದ ತತ್ವಗಳನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದೆ.

ಘಟನೆಯ ಬಗ್ಗೆ ಇಸ್ರೇಲ್‌ ಸೇನೆಯು ತಕ್ಷಣ ಪ್ರತಿಕ್ರಿಯಿಸಲಿಲ್ಲ. ಶನಿವಾರದವರೆಗೆ 77 ಪತ್ರಕರ್ತರು ಮತ್ತು ಮಾಧ್ಯಮ ಕಾರ್ಯಕರ್ತರು ಸಂಘರ್ಷವನ್ನು ವರದಿ ಮಾಡುವಾಗ ಕೊಲ್ಲಲ್ಪಟ್ಟಿದ್ದಾರೆ ಎಂದು ಅಂತರಾಷ್ಟ್ರೀಯ ಮಾಧ್ಯಮ ಹಕ್ಕುಗಳ ವಾಚ್‌ಡಾಗ್‌ನ ಪತ್ರಕರ್ತರ ರಕ್ಷಣಾ ಸಮಿತಿ ಹೇಳಿದೆ. ಇದರಲ್ಲಿ 70 ಪ್ಯಾಲೆಸ್ತೀನಿಯನ್ನರು, ನಾಲ್ವರು ಇಸ್ರೇಲ್‌ ಪತ್ರಕರ್ತರು ಮತ್ತು ಮೂವರು ಲೆಬನಾನಿ ಪತ್ರಕರ್ತರು ಮೃತಪಟ್ಟಿದ್ದಾರೆ. ಇವರು ರಾಯಿಟರ್ಸ್, ಏಜೆನ್ಸ್ ಫ್ರಾನ್ಸ್-ಪ್ರೆಸ್ ಮತ್ತು ಟರ್ಕಿಯ ಅನಾಡೋಲು ಸುದ್ದಿ ಸಂಸ್ಥೆ ಸೇರಿದಂತೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದರು.

ಇದನ್ನು ಓದಿ: ಬಿಲ್ಕಿಸ್ ಬಾನು ಪ್ರಕರಣ; 2 ವಾರಗಳಲ್ಲಿ ಜೈಲಿಗೆ ಮರಳುವಂತೆ 11 ಅಪರಾಧಿಗಳಿಗೆ ಸುಪ್ರೀಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...