Homeಅಂತರಾಷ್ಟ್ರೀಯಬ್ರಿಟನ್‌ನಲ್ಲಿ ರಾಜಕೀಯದ ಚಿತ್ರಣ ಬದಲಿಸಿದ ಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧ!

ಬ್ರಿಟನ್‌ನಲ್ಲಿ ರಾಜಕೀಯದ ಚಿತ್ರಣ ಬದಲಿಸಿದ ಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧ!

- Advertisement -
- Advertisement -

ಇಸ್ರೇಲ್‌-ಪ್ಯಾಲೆಸ್ತೀನ್‌ ಮೇಲೆ ನಿರಂತರ ಬಾಂಬ್‌ ದಾಳಿ ನಡೆಸುತ್ತಿದೆ. ಈ ಯುದ್ಧ ಆಪರಾಧವನ್ನು ಇಸ್ರೇಲ್‌ ಸೇರಿದಂತೆ ವಿವಿಧ ದೇಶಗಳಲ್ಲಿ ನಾಗರಿಕರು ವಿರೋಧಿಸಿದ್ದಾರೆ. ಪ್ರತಿಭಟನೆಗಳನ್ನು ನಡೆಸಿದ್ದಾರೆ. ಆದರೆ ಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧ ಕಳೆದ ಎರಡು ತಿಂಗಳ ಅವಧಿಯಲ್ಲಿ ಬ್ರಿಟೀಷ್‌ ರಾಜಕೀಯದ ಚಿತ್ರಣವನ್ನೇ ಬದಲಿಸಿದೆ. ಆಡಳಿತಾರೂಢ ಕನ್ಸರ್ವೇಟಿವ್ ಪಕ್ಷ ಮತ್ತು ವಿರೋಧ ಪಕ್ಷವಾದ ಲೇಬರ್ ಪಕ್ಷವು ಬದಲಾಗುತ್ತಿರುವ ರಾಜಕೀಯ ಆಯಾಮವನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದೆ.

ಕಳೆದ ಎರಡು ತಿಂಗಳುಗಳಲ್ಲಿ ಬ್ರಿಟೀಷ್‌ ರಾಜಕೀಯವು ಹೊಸ ಪ್ರಶ್ನೆಗಳನ್ನು ಎದುರು ನೊಡುತ್ತಿದೆ. ಕೆಲವು  ಪ್ಯಾಲೆಸ್ತೀನ್‌ ವಿಮೋಚನಾ ಚಳುವಳಿ, ಯೆಹೂದಿ ವಿರೋಧಿ ಚಳುವಳಿ, ತೀವ್ರ ಎಡ ಮತ್ತು ಬಲಪಂಥೀಯ ಚಳುವಳಿಗಳು ನಡೆಯುತ್ತಿದೆ. ಸಂಕ್ಷಿಪ್ತವಾಗಿ ಹೇಳುವುದಾದರೆ ಈ ಬೆಳವಣಿಗೆ ಕಳೆದ ಎರಡು ತಿಂಗಳುಗಳಿಂದ ನಡೆಯುತ್ತಿರುವ ಯುದ್ಧದ ಬಗ್ಗೆ ಬ್ರಿಟಿಷ್ ಸಮಾಜ ಪ್ರತಿಕ್ರಿಯೆಗಳ ಅಭಿವ್ಯಕ್ತಿಯನ್ನು ಬಿಂಬಿಸುತ್ತದೆ.

ಅಕ್ಟೋಬರ್ ಪೂರ್ವದ ದಿನಗಳಿಗೆ ಹೋಲಿಸಿದರೆ ಬ್ರಿಟನ್‌ನಲ್ಲಿ ಸಾರ್ವಜನಿಕ ಸಭೆಗಳು, ಪ್ರತಿಭಟನಾ ಮೆರವಣಿಗೆಗಳು ಮತ್ತು ರ್ಯಾಲಿಗಳ ಮೇಲೆ ಪೊಲೀಸ್‌ ಕಣ್ಗಾವಲು ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ. ಅಕ್ಟೋಬರ್ ಎರಡನೇ ವಾರದಿಂದ ಬ್ರಿಟನ್ ವಾಸ್ತವಿಕವಾಗಿ ಒಂದೆರಡು ದಶಕಗಳ ಹಿಂದೆ ಇರಾಕ್ ಮತ್ತು ಅಫ್ಘಾನಿಸ್ತಾನದಲ್ಲಿನ ಯುದ್ಧಗಳ ವಿರುದ್ಧದ ಚಳುವಳಿಯ ದಿನಗಳಿಗೆ ಮರಳಿದೆ. ಗಾಝಾದಲ್ಲಿ ಇಸ್ರೇಲ್‌ನ ಮಿಲಿಟರಿ ಆಕ್ರಮಣವನ್ನು ವಿರೋಧಿಸಲು ಪ್ರತಿ ಶನಿವಾರ ಲಕ್ಷಾಂತರ ಜನರು ಬೀದಿಗಿಳಿಯುತ್ತಿದ್ದಾರೆ. ಜನರು ಇಸ್ರೇಲ್‌ಗೆ ಬೆಂಬಲವಾಗಿ ಮೆರವಣಿಗೆಗಳನ್ನು ನಡೆಸುತ್ತಿದ್ದಾರೆ.

‘ಕಾರ್ಬಿನ್’ ಪ್ಯಾಲೆಸ್ತೀನ್‌ ಪರ ಪ್ರತಿಭಟನೆಗಳಲ್ಲಿ ಮೊದಲು ಭಾಗಿಯಾದ ಬ್ರಿಟನ್‌ನ ಸಂಸದರಾಗಿದ್ದಾರೆ. ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಇಸ್ರೇಲ್ ಪರ ಮೆರವಣಿಗೆಗಳಲ್ಲಿ ಕಂಡು ಬಂದಿದ್ದಾರೆ. ಸಂಸತ್ತಿನ ಮುಂಭಾಗದಲ್ಲಿ ಯುದ್ಧ ವಿರೋಧಿ ಪ್ರತಿಭಟನೆಗಳು, ಸಂಸತ್ತಿನ ಆವರಣದೊಳಗೆ ಸಾಮಾಜಿಕ ಕಾರ್ಯಕರ್ತರ ಪ್ರತಿಭಟನೆ, ಕಾರ್ಮಿಕ ನಾಯಕ ಕೀರ್ ಸ್ಟಾರ್ಮರ್ ಅವರ ಕಚೇರಿಗಳ ಹೊರಗೆ ಪ್ರತಿಭಟನೆಗಳು ನಡೆದಿದೆ. ಸಂಕ್ಷಿಪ್ತವಾಗಿ ಹೇಳುವುದಾದರೆ ಪ್ರಸ್ತುತ ಪ್ಯಾಲೆಸ್ತೀನ್‌ ಬಿಕ್ಕಟ್ಟು ಬ್ರಿಟಿಷ್ ರಾಜಕೀಯದಲ್ಲಿ ಚಿತ್ರಣವನ್ನು ಬದಲಿಸುತ್ತಿದೆ ಎಂದು ತಜ್ಞರು ಹೇಳುತ್ತಿದ್ದಾರೆ.

ಯುಎಸ್ಎ ಹೆಜ್ಜೆಗಳನ್ನು ಅನುಸರಿಸಿ ಇಡೀ ಬ್ರಿಟಿಷ್ ಆಡಳಿತ ಬಹಿರಂಗವಾಗಿ ಇಸ್ರೇಲ್ ಪರವಾಗಿ ನಿಂತಿದೆ. ಪ್ರಧಾನ ಮಂತ್ರಿ ರಿಷಿ ಸುನಕ್ ಅವರು ಬೆಂಜಮಿನ್ ನೆತನ್ಯಾಹು ಅವರಿಗೆ ಒಗ್ಗಟ್ಟಿನ ಸಂದೇಶವನ್ನು ತಿಳಿಸಲು ಇಸ್ರೇಲ್‌ಗೆ ಭೇಟಿ ನೀಡಿದ್ದರು. ಪ್ರಸ್ತುತ ಕಾರ್ಮಿಕ ನಾಯಕ (ಪ್ರಧಾನಿಯಾಗಲಿದ್ದಾರೆ ಎಂದು ವ್ಯಾಪಕವಾಗಿ ಗ್ರಹಿಸಲಾಗಿದೆ) ಸರ್ ಕೀರ್ ಸ್ಟಾರ್ಮರ್ ಕೂಡ ಇದೇ ನಿಲುವನ್ನು ತೆಗೆದುಕೊಂಡಿದ್ದಾರೆ. ಆದರೆ ಅ.14ರಿಂದ ವಿಷಯಗಳು ಬದಲಾಗಲಾರಂಭಿಸಿದವು. ಸ್ಟಾಪ್ ದಿ ವಾರ್ ಕೊಯಲಿಷನ್ ಮತ್ತು ಪ್ಯಾಲೆಸ್ತೀನ್‌ ಸೋಲಿಡ್ಯಾರಿಟಿ ಕ್ಯಾಂಪೇನ್‌ ಸೇರಿದಂತೆ ಹಲವಾರು ಸಂಘಟನೆಗಳು ಪ್ಯಾಲೆಸ್ತೀನ್‌ ಪರ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಿ 1,50,000ಕ್ಕೂ ಹೆಚ್ಚು ಜನರನ್ನು ಒಟ್ಟುಗೂಡಿಸಿದೆ. ಈ ಮೊದಲ ಪ್ರತಿಭಟನೆಯಲ್ಲಿ ಭಾಗವಹಿಸಿದ ಏಕೈಕ ಬ್ರಿಟಿಷ್ ಸಂಸದ ಕಾರ್ಬಿನ್ ಆಗಿದ್ದರು. ಆ ಬಳಿಕ ನಡೆದ ಪ್ರತಿಭಟನೆಗಳಲ್ಲಿ ಬ್ರಿಟನ್‌ ಸಂಸದರು  ಸಾಮಾಜಿಕ ಕಾರ್ಯಕರ್ತರು ಮತ್ತು ಟ್ರೇಡ್ ಯೂನಿಯನ್ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಬ್ರಿಟನ್‌ನಲ್ಲಿ ಮುಸ್ಲಿಂ ಸಮುದಾಯವು ಸಾಂಪ್ರದಾಯಿಕವಾಗಿ ಲೇಬರ್ ಪಕ್ಷದ ಪರವಾಗಿತ್ತು. ಇಸ್ರೇಲ್ ಪರವಾಗಿ ಸರ್ ಕೀರ್ ಅವರ ನಿಲುವು ಪಕ್ಷದ ಬದ್ಧ ಮುಸ್ಲಿಂ ಮತದಾರರಲ್ಲಿ ವ್ಯಾಪಕ ಅಸಮಾಧಾನವನ್ನು ಉಂಟುಮಾಡಿದೆ. ಇದರ ಪರಿಣಾಮ ಪಕ್ಷದೊಳಗೂ ಅಸಮಾಧಾನ ಭುಗಿಲೆದ್ದಿದೆ. ಇಸ್ರೇಲ್‌ನಲ್ಲಿ ಸರ್ ಕೀರ್ ಅವರ ನಿಲುವನ್ನು ವಿರೋಧಿಸಿ ನೂರಕ್ಕೂ ಹೆಚ್ಚು ಲೇಬರ್ ಕೌನ್ಸಿಲರ್‌ಗಳು ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಅಭೂತಪೂರ್ವ ಕ್ರಮದಲ್ಲಿ 56 ಲೇಬರ್ ಪಕ್ಷದ ಸಂಸದರು ಸಂಸತ್ತಿನಲ್ಲಿ ಕದನ ವಿರಾಮಕ್ಕೆ ಮತ ಹಾಕುವಾಗ ಸರ್ ಕೀರ್ ಸ್ಟಾರ್ಮರ್ ನಿಲುವಿಗೆ ವಿರುದ್ಧವಾಗಿ ಹೋದರು. ಸರ್ ಕೀರ್ ಸ್ಟಾರ್ಮರ್ ತನ್ನ ಪಕ್ಷದೊಳಗೆ ಅಂತಹ ಪ್ರಬಲ ವಿರೋಧವನ್ನು ಎಂದಿಗೂ ಎದುರಿಸಿರಲಿಲ್ಲ ಎನ್ನಲಾಗಿದೆ.

ಆಡಳಿತ ಪಕ್ಷವು ಯುದ್ಧ-ವಿರೋಧಿ ಪ್ರತಿಭಟನೆಯ ಬಿಸಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಬ್ರಿಟನ್‌ನ  ಮಾಜಿ ಗೃಹ ಕಾರ್ಯದರ್ಶಿವರೋರ್ವರು ಪ್ಯಾಲೆಸ್ತೀನ್‌ ಪರ ಪ್ರತಿಭಟನಾಕಾರರ ಪರವಾಗಿ ಪೊಲೀಸರು ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದರು. ಪ್ಯಾಲೆಸ್ತೀನ್‌ ಪರ ಮೆರವಣಿಗೆಗಳ ಮೇಲೆ ನಿಷೇಧ ಹೇರುವಂತೆ ಅವರು ಪ್ರಧಾನಿ ಮತ್ತು ಪೊಲೀಸರಿಗೆ ವಿನಂತಿಸಿದ್ದರು. ಆದರೆ ಸಾವಿರಾರು ಜನರನ್ನು ಒಳಗೊಂಡ ಪ್ರತಿಭಟನೆಗಳನ್ನು ನಿಷೇಧಿಸುವ ಮೂಲಕ ಗಂಭೀರ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಯ ಅಪಾಯವನ್ನು ಎದುರಿಸಲು ಬಯಸದ ಕಾರಣ ಮೆಟ್ರೋಪಾಲಿಟನ್ ಪೋಲೀಸ್ ಅದಕ್ಕೆ ಮುಂದಾಗಿರಲಿಲ್ಲ ಮತ್ತು ನಿರ್ಬಂಧಿಸಲಿಲ್ಲ.

ಲಿಬರಲ್ ಡೆಮಾಕ್ರಾಟ್‌, ಲೇಬರ್ ಪಾರ್ಟಿಯ ನಂತರ ಬ್ರಿಟಿಷ್ ಮುಸ್ಲಿಮರ ಎರಡನೇ ಆಯ್ಕೆ. ಇದು ಕೂಡ ಸಹ ಯುದ್ಧದಿಂದ ಪ್ರಭಾವಿತವಾಗಿದೆ. ತನ್ನ ಮುಸ್ಲಿಂ ಮತ್ತು ಎಡಪಂಥೀಯ ಸದಸ್ಯರ ಒತ್ತಡದಿಂದಾಗಿ ಪಕ್ಷವು ಕದನ ವಿರಾಮವನ್ನು ಬೆಂಬಲಿಸಿದೆ. ಇದಲ್ಲದೆ ಟ್ರೇಡ್ ಯೂನಿಯನ್‌ಗಳ ವ್ಯಾಪಕವಾಗಿ ಯುದ್ಧ ವಿರೋಧಿ ಅಭಿಯಾನ ನಡೆಸಿದೆ. RMT ಸೇರಿದಂತೆ ಹೆಚ್ಚಿನ ಟ್ರೇಡ್ ಯೂನಿಯನ್‌ಗಳು ದೊಡ್ಡ ಮಟ್ಟದಲ್ಲಿ ಪ್ರತಿಭಟನೆಗಳನ್ನು ನಡೆಸಿದೆ. ಈ ಎಲ್ಲಾ ಬೆಳವಣಿಗೆ ಬ್ರಿಟನ್‌ನಲ್ಲಿ ರಾಜಕೀಯ ಚಿತ್ರಣವನ್ನು ಬದಲಿಸಿದೆ ಎಂದು ರಾಜಕೀಯ ತಜ್ಞರು ಹೇಳುತ್ತಿದ್ದಾರೆ.

ಇದನ್ನು ಓದಿ: ಪೂಂಛ್‌ ನಾಗರಿಕರ ಹತ್ಯೆ ಪ್ರಕರಣ: ಸಂತ್ರಸ್ತ ಕುಟುಂಬದ ಭೇಟಿಗೆ ಮುಂದಾದ ಮೆಹಬೂಬಾ ಮುಫ್ತಿಗೆ ಗೃಹಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...