Homeಅಂತರಾಷ್ಟ್ರೀಯಯುದ್ಧದ ವಿರುದ್ಧ ಪ್ರತಿಭಟಿಸಿದರೆ ಬಸ್‌ಗಳಲ್ಲಿ ತುಂಬಿ ಗಾಝಾಕ್ಕೆ ಕಳುಹಿಸುತ್ತೇವೆ: ಇಸ್ರೇಲ್ ಪ್ರಜೆಗಳಿಗೆ ವಾರ್ನಿಂಗ್‌

ಯುದ್ಧದ ವಿರುದ್ಧ ಪ್ರತಿಭಟಿಸಿದರೆ ಬಸ್‌ಗಳಲ್ಲಿ ತುಂಬಿ ಗಾಝಾಕ್ಕೆ ಕಳುಹಿಸುತ್ತೇವೆ: ಇಸ್ರೇಲ್ ಪ್ರಜೆಗಳಿಗೆ ವಾರ್ನಿಂಗ್‌

- Advertisement -
- Advertisement -

ಇಸ್ರೇಲ್‌ನಲ್ಲಿ ಗಾಜಾವನ್ನು ಬೆಂಬಲಿಸಿ ನಡೆಸುವ ಪ್ರತಿಭಟನೆಯನ್ನು ಸಹಿಸಲು ಸಾಧ್ಯವಿಲ್ಲ. ಯುದ್ಧವನ್ನು ವಿರೋಧಿಸಿ ಪ್ರತಿಭಟನೆ ಮಾಡುವವರನ್ನು ಇಸ್ರೇಲ್‌ ಪ್ರತಿದಿನ ಬಾಂಬ್‌ ದಾಳಿ ನಡೆಸುತ್ತಿರುವ ಗಾಝಾ ಪಟ್ಟಿಗೆ ಕಳುಹಿಸುವುದಾಗಿ ಇಸ್ರೇಲ್‌ ಪೊಲೀಸ್ ಮುಖ್ಯಸ್ಥ ಕೋಬಿ ಶಬ್ಟೈ ಹೇಳಿದ್ದಾರೆ.

ಮಂಗಳವಾರ ಇಸ್ರೇಲ್‌ ಪೊಲೀಸರು ಟಿಕ್‌ಟಾಕ್ ಚಾನೆಲ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಶಬ್ತಾಯ್ ಅವರು ಈ ಹೇಳಿಕೆ ನೀಡಿದ್ದಾರೆ.  ಗಾಝಾವನ್ನು ಬೆಂಬಲಿಸಿ ಹೈಫಾದಲ್ಲಿ ರ್ಯಾಲಿಯನ್ನು ನಡೆಸಲಾಗಿತ್ತು.  ಪೊಲೀಸರು ಪ್ರತಿಭಟನೆ ಬಳಿಕ 6 ಜನರನ್ನು ಬಂಧಿಸಿದ್ದಾರೆ. ಯಾರು ಇಸ್ರೇಲ್‌ ಪ್ರಜೆಯಾಗಲು ಬಯಸುತ್ತಾರೆ ಸ್ವಾಗತ. ಗಾಝಾದೊಂದಿಗೆ ಗುರುತಿಸಲು ಬಯಸುವವರನ್ನು ಕೂಡ ಸ್ವಾಗತಿಸುತ್ತೇವೆ. ನಾನು ಅವರನ್ನು ಈಗ ಅಲ್ಲಿಗೆ ಹೋಗುವ ಬಸ್‌ಗಳಲ್ಲಿ ಹಾಕಿ ಕಳುಹಿಸುತ್ತೇನೆ ಎಂದು ಹೇಳಿದ್ದಾರೆ.

ಕಿರು ವೀಡಿಯೊದಲ್ಲಿ ಶಬ್ತಾಯ್, ಯಾವುದೇ ಪ್ರಚೋದನೆಯನ್ನು ಸಹಿಸಲು ಸಾಧ್ಯವಿಲ್ಲ. ಪ್ರತಿಭಟನೆಗಳಿಗೆ ಯಾವುದೇ ಅಧಿಕಾರ ಇರುವುದಿಲ್ಲ. ಇಸ್ರೇಲ್ ಯುದ್ಧದ ಸ್ಥಿತಿಯಲ್ಲಿದೆ. ಎಲ್ಲಾ ರೀತಿಯ ಜನರು ಬಂದು ನಮ್ಮನ್ನು ಪರೀಕ್ಷಿಸಲು ನಾವು ಅನುಮತಿಸುವ ಪರಿಸ್ಥಿತಿಯಲ್ಲಿ ನಾವು ಇಲ್ಲ ಎಂದು ಅವರು ಹೇಳಿದರು.

ಅ.7 ರಂದು ಗಾಝಾ ಜೊತೆಗಿನ ಯುದ್ಧ ಪ್ರಾರಂಭವಾದಾಗಿನಿಂದ ಇಸ್ರೇಲ್‌ನಲ್ಲಿ 63 ಜನರನ್ನು ಭಯೋತ್ಪಾದನೆ ಬೆಂಬಲಿಸುವ ಅಥವಾ ಪ್ರಚೋದಿಸಿದ ಶಂಕೆಯ ಮೇಲೆ ಬಂಧಿಸಲಾಗಿದೆ ಎಂದು ಇಸ್ರೇಲ್ ಪೊಲೀಸ್ ವಕ್ತಾರ ಎಲಿ ಲೆವಿ ಬುಧವಾರ ಆರ್ಮಿ ರೇಡಿಯೊಗೆ ತಿಳಿಸಿದ್ದಾರೆ.

ಗಾಝಾ ಪಟ್ಟಿಯನ್ನು ಮುನ್ನಡೆಸುತ್ತಿರುವ ಹಮಾಸ್‌ಗೆ ಬೆಂಬಲ ವ್ಯಕ್ತಪಡಿಸುತ್ತಿರುವ ಇಸ್ರೇಲ್‌ನಲ್ಲಿನ ಪ್ಯಾಲೆಸ್ತೀನಿಯನ್ನರನ್ನು ಕೂಡ ಪತ್ತೆ ಹಚ್ಚಲಾಗುತ್ತದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಅ.7ರಂದು ಹಮಾಸ್ ಸಶಸ್ತ್ರ ಗುಂಪು, ದಕ್ಷಿಣ ಇಸ್ರೇಲ್‌ ಮೇಲೆ ದಾಳಿಯನ್ನು ನಡೆಸಿದ ನಂತರ ಗಾಝಾ ಪಟ್ಟಿಯ 2.3 ಮಿಲಿಯನ್ ನಿವಾಸಿಗಳಿಗೆ ಆಹಾರ, ನೀರು, ವಿದ್ಯುತ್ ಮತ್ತು ಇಂಧನವನ್ನು ಇಸ್ರೇಲ್‌  ಕಡಿತಗೊಳಿಸಿದೆ. ಇಸ್ರೇಲ್‌ ಅಧಿಕಾರಿಗಳ ಪ್ರಕಾರ ಕನಿಷ್ಠ 1,400 ಜನರು ಸಾವನ್ನಪ್ಪಿದ್ದಾರೆ. 4,400 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಮತ್ತು 199 ಜನರನ್ನು ಹಮಾಸ್ ಒತ್ತೆಯಾಳಾಗಿಸಿದೆ.

ಇಸ್ರೇಲ್ ಯುದ್ಧ ಘೊಷಣೆ ಬಳಿಕ ನಡೆಸಿದ ದಾಳಿಯಲ್ಲಿ 3,400ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 12,000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪ್ಯಾಲೆಸ್ತೀನ್‌ ಅಧಿಕಾರಿಗಳು ತಿಳಿಸಿದ್ದಾರೆ.

ಯುದ್ಧವು ಭುಗಿಲೆದ್ದ ನಂತರ ಇಸ್ರೇಲ್ ವಿರೋಧಿ ಹೇಳಿಕೆಯನ್ನು ನೀಡಿರುವ ಆರೋಪದಲ್ಲಿ ಇಸ್ರೇಲ್‌ ಸಂಸತ್ತಿನ ಸಮಿತಿಯು ಎಡಪಂಥೀಯ ಸದಸ್ಯ ಓಫರ್ ಕ್ಯಾಸಿಫ್ ಅವರನ್ನು ಅಮಾನತುಗೊಳಿಸಿದೆ. ಅವರು ಹಮಾಸ್ ದಾಳಿಯನ್ನು ಉಲ್ಲೇಖಿಸಿ ಇಸ್ರೇಲ್ ಈ ಹಿಂಸಾಚಾರವನ್ನು ಬಯಸಿದೆ ಎಂದು ಅವರು ವಿದೇಶಿ ಮಾಧ್ಯಮಗಳಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದರು. ಜೆರುಸಲೆಮ್ ಪೋಸ್ಟ್ ಪ್ರಕಾರ ಕ್ಯಾಸಿಫ್ ಅವರನ್ನು 45 ದಿನಗಳವರೆಗೆ ಅಮಾನತುಗೊಳಿಸಲಾಗಿದೆ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...