Homeಅಂತರಾಷ್ಟ್ರೀಯಯುದ್ಧದ ವಿರುದ್ಧ ಪ್ರತಿಭಟಿಸಿದರೆ ಬಸ್‌ಗಳಲ್ಲಿ ತುಂಬಿ ಗಾಝಾಕ್ಕೆ ಕಳುಹಿಸುತ್ತೇವೆ: ಇಸ್ರೇಲ್ ಪ್ರಜೆಗಳಿಗೆ ವಾರ್ನಿಂಗ್‌

ಯುದ್ಧದ ವಿರುದ್ಧ ಪ್ರತಿಭಟಿಸಿದರೆ ಬಸ್‌ಗಳಲ್ಲಿ ತುಂಬಿ ಗಾಝಾಕ್ಕೆ ಕಳುಹಿಸುತ್ತೇವೆ: ಇಸ್ರೇಲ್ ಪ್ರಜೆಗಳಿಗೆ ವಾರ್ನಿಂಗ್‌

- Advertisement -
- Advertisement -

ಇಸ್ರೇಲ್‌ನಲ್ಲಿ ಗಾಜಾವನ್ನು ಬೆಂಬಲಿಸಿ ನಡೆಸುವ ಪ್ರತಿಭಟನೆಯನ್ನು ಸಹಿಸಲು ಸಾಧ್ಯವಿಲ್ಲ. ಯುದ್ಧವನ್ನು ವಿರೋಧಿಸಿ ಪ್ರತಿಭಟನೆ ಮಾಡುವವರನ್ನು ಇಸ್ರೇಲ್‌ ಪ್ರತಿದಿನ ಬಾಂಬ್‌ ದಾಳಿ ನಡೆಸುತ್ತಿರುವ ಗಾಝಾ ಪಟ್ಟಿಗೆ ಕಳುಹಿಸುವುದಾಗಿ ಇಸ್ರೇಲ್‌ ಪೊಲೀಸ್ ಮುಖ್ಯಸ್ಥ ಕೋಬಿ ಶಬ್ಟೈ ಹೇಳಿದ್ದಾರೆ.

ಮಂಗಳವಾರ ಇಸ್ರೇಲ್‌ ಪೊಲೀಸರು ಟಿಕ್‌ಟಾಕ್ ಚಾನೆಲ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಶಬ್ತಾಯ್ ಅವರು ಈ ಹೇಳಿಕೆ ನೀಡಿದ್ದಾರೆ.  ಗಾಝಾವನ್ನು ಬೆಂಬಲಿಸಿ ಹೈಫಾದಲ್ಲಿ ರ್ಯಾಲಿಯನ್ನು ನಡೆಸಲಾಗಿತ್ತು.  ಪೊಲೀಸರು ಪ್ರತಿಭಟನೆ ಬಳಿಕ 6 ಜನರನ್ನು ಬಂಧಿಸಿದ್ದಾರೆ. ಯಾರು ಇಸ್ರೇಲ್‌ ಪ್ರಜೆಯಾಗಲು ಬಯಸುತ್ತಾರೆ ಸ್ವಾಗತ. ಗಾಝಾದೊಂದಿಗೆ ಗುರುತಿಸಲು ಬಯಸುವವರನ್ನು ಕೂಡ ಸ್ವಾಗತಿಸುತ್ತೇವೆ. ನಾನು ಅವರನ್ನು ಈಗ ಅಲ್ಲಿಗೆ ಹೋಗುವ ಬಸ್‌ಗಳಲ್ಲಿ ಹಾಕಿ ಕಳುಹಿಸುತ್ತೇನೆ ಎಂದು ಹೇಳಿದ್ದಾರೆ.

ಕಿರು ವೀಡಿಯೊದಲ್ಲಿ ಶಬ್ತಾಯ್, ಯಾವುದೇ ಪ್ರಚೋದನೆಯನ್ನು ಸಹಿಸಲು ಸಾಧ್ಯವಿಲ್ಲ. ಪ್ರತಿಭಟನೆಗಳಿಗೆ ಯಾವುದೇ ಅಧಿಕಾರ ಇರುವುದಿಲ್ಲ. ಇಸ್ರೇಲ್ ಯುದ್ಧದ ಸ್ಥಿತಿಯಲ್ಲಿದೆ. ಎಲ್ಲಾ ರೀತಿಯ ಜನರು ಬಂದು ನಮ್ಮನ್ನು ಪರೀಕ್ಷಿಸಲು ನಾವು ಅನುಮತಿಸುವ ಪರಿಸ್ಥಿತಿಯಲ್ಲಿ ನಾವು ಇಲ್ಲ ಎಂದು ಅವರು ಹೇಳಿದರು.

ಅ.7 ರಂದು ಗಾಝಾ ಜೊತೆಗಿನ ಯುದ್ಧ ಪ್ರಾರಂಭವಾದಾಗಿನಿಂದ ಇಸ್ರೇಲ್‌ನಲ್ಲಿ 63 ಜನರನ್ನು ಭಯೋತ್ಪಾದನೆ ಬೆಂಬಲಿಸುವ ಅಥವಾ ಪ್ರಚೋದಿಸಿದ ಶಂಕೆಯ ಮೇಲೆ ಬಂಧಿಸಲಾಗಿದೆ ಎಂದು ಇಸ್ರೇಲ್ ಪೊಲೀಸ್ ವಕ್ತಾರ ಎಲಿ ಲೆವಿ ಬುಧವಾರ ಆರ್ಮಿ ರೇಡಿಯೊಗೆ ತಿಳಿಸಿದ್ದಾರೆ.

ಗಾಝಾ ಪಟ್ಟಿಯನ್ನು ಮುನ್ನಡೆಸುತ್ತಿರುವ ಹಮಾಸ್‌ಗೆ ಬೆಂಬಲ ವ್ಯಕ್ತಪಡಿಸುತ್ತಿರುವ ಇಸ್ರೇಲ್‌ನಲ್ಲಿನ ಪ್ಯಾಲೆಸ್ತೀನಿಯನ್ನರನ್ನು ಕೂಡ ಪತ್ತೆ ಹಚ್ಚಲಾಗುತ್ತದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಅ.7ರಂದು ಹಮಾಸ್ ಸಶಸ್ತ್ರ ಗುಂಪು, ದಕ್ಷಿಣ ಇಸ್ರೇಲ್‌ ಮೇಲೆ ದಾಳಿಯನ್ನು ನಡೆಸಿದ ನಂತರ ಗಾಝಾ ಪಟ್ಟಿಯ 2.3 ಮಿಲಿಯನ್ ನಿವಾಸಿಗಳಿಗೆ ಆಹಾರ, ನೀರು, ವಿದ್ಯುತ್ ಮತ್ತು ಇಂಧನವನ್ನು ಇಸ್ರೇಲ್‌  ಕಡಿತಗೊಳಿಸಿದೆ. ಇಸ್ರೇಲ್‌ ಅಧಿಕಾರಿಗಳ ಪ್ರಕಾರ ಕನಿಷ್ಠ 1,400 ಜನರು ಸಾವನ್ನಪ್ಪಿದ್ದಾರೆ. 4,400 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಮತ್ತು 199 ಜನರನ್ನು ಹಮಾಸ್ ಒತ್ತೆಯಾಳಾಗಿಸಿದೆ.

ಇಸ್ರೇಲ್ ಯುದ್ಧ ಘೊಷಣೆ ಬಳಿಕ ನಡೆಸಿದ ದಾಳಿಯಲ್ಲಿ 3,400ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 12,000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪ್ಯಾಲೆಸ್ತೀನ್‌ ಅಧಿಕಾರಿಗಳು ತಿಳಿಸಿದ್ದಾರೆ.

ಯುದ್ಧವು ಭುಗಿಲೆದ್ದ ನಂತರ ಇಸ್ರೇಲ್ ವಿರೋಧಿ ಹೇಳಿಕೆಯನ್ನು ನೀಡಿರುವ ಆರೋಪದಲ್ಲಿ ಇಸ್ರೇಲ್‌ ಸಂಸತ್ತಿನ ಸಮಿತಿಯು ಎಡಪಂಥೀಯ ಸದಸ್ಯ ಓಫರ್ ಕ್ಯಾಸಿಫ್ ಅವರನ್ನು ಅಮಾನತುಗೊಳಿಸಿದೆ. ಅವರು ಹಮಾಸ್ ದಾಳಿಯನ್ನು ಉಲ್ಲೇಖಿಸಿ ಇಸ್ರೇಲ್ ಈ ಹಿಂಸಾಚಾರವನ್ನು ಬಯಸಿದೆ ಎಂದು ಅವರು ವಿದೇಶಿ ಮಾಧ್ಯಮಗಳಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದರು. ಜೆರುಸಲೆಮ್ ಪೋಸ್ಟ್ ಪ್ರಕಾರ ಕ್ಯಾಸಿಫ್ ಅವರನ್ನು 45 ದಿನಗಳವರೆಗೆ ಅಮಾನತುಗೊಳಿಸಲಾಗಿದೆ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...