Homeಅಂತರಾಷ್ಟ್ರೀಯಯುದ್ಧದ ವಿರುದ್ಧ ಪ್ರತಿಭಟಿಸಿದರೆ ಬಸ್‌ಗಳಲ್ಲಿ ತುಂಬಿ ಗಾಝಾಕ್ಕೆ ಕಳುಹಿಸುತ್ತೇವೆ: ಇಸ್ರೇಲ್ ಪ್ರಜೆಗಳಿಗೆ ವಾರ್ನಿಂಗ್‌

ಯುದ್ಧದ ವಿರುದ್ಧ ಪ್ರತಿಭಟಿಸಿದರೆ ಬಸ್‌ಗಳಲ್ಲಿ ತುಂಬಿ ಗಾಝಾಕ್ಕೆ ಕಳುಹಿಸುತ್ತೇವೆ: ಇಸ್ರೇಲ್ ಪ್ರಜೆಗಳಿಗೆ ವಾರ್ನಿಂಗ್‌

- Advertisement -
- Advertisement -

ಇಸ್ರೇಲ್‌ನಲ್ಲಿ ಗಾಜಾವನ್ನು ಬೆಂಬಲಿಸಿ ನಡೆಸುವ ಪ್ರತಿಭಟನೆಯನ್ನು ಸಹಿಸಲು ಸಾಧ್ಯವಿಲ್ಲ. ಯುದ್ಧವನ್ನು ವಿರೋಧಿಸಿ ಪ್ರತಿಭಟನೆ ಮಾಡುವವರನ್ನು ಇಸ್ರೇಲ್‌ ಪ್ರತಿದಿನ ಬಾಂಬ್‌ ದಾಳಿ ನಡೆಸುತ್ತಿರುವ ಗಾಝಾ ಪಟ್ಟಿಗೆ ಕಳುಹಿಸುವುದಾಗಿ ಇಸ್ರೇಲ್‌ ಪೊಲೀಸ್ ಮುಖ್ಯಸ್ಥ ಕೋಬಿ ಶಬ್ಟೈ ಹೇಳಿದ್ದಾರೆ.

ಮಂಗಳವಾರ ಇಸ್ರೇಲ್‌ ಪೊಲೀಸರು ಟಿಕ್‌ಟಾಕ್ ಚಾನೆಲ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಶಬ್ತಾಯ್ ಅವರು ಈ ಹೇಳಿಕೆ ನೀಡಿದ್ದಾರೆ.  ಗಾಝಾವನ್ನು ಬೆಂಬಲಿಸಿ ಹೈಫಾದಲ್ಲಿ ರ್ಯಾಲಿಯನ್ನು ನಡೆಸಲಾಗಿತ್ತು.  ಪೊಲೀಸರು ಪ್ರತಿಭಟನೆ ಬಳಿಕ 6 ಜನರನ್ನು ಬಂಧಿಸಿದ್ದಾರೆ. ಯಾರು ಇಸ್ರೇಲ್‌ ಪ್ರಜೆಯಾಗಲು ಬಯಸುತ್ತಾರೆ ಸ್ವಾಗತ. ಗಾಝಾದೊಂದಿಗೆ ಗುರುತಿಸಲು ಬಯಸುವವರನ್ನು ಕೂಡ ಸ್ವಾಗತಿಸುತ್ತೇವೆ. ನಾನು ಅವರನ್ನು ಈಗ ಅಲ್ಲಿಗೆ ಹೋಗುವ ಬಸ್‌ಗಳಲ್ಲಿ ಹಾಕಿ ಕಳುಹಿಸುತ್ತೇನೆ ಎಂದು ಹೇಳಿದ್ದಾರೆ.

ಕಿರು ವೀಡಿಯೊದಲ್ಲಿ ಶಬ್ತಾಯ್, ಯಾವುದೇ ಪ್ರಚೋದನೆಯನ್ನು ಸಹಿಸಲು ಸಾಧ್ಯವಿಲ್ಲ. ಪ್ರತಿಭಟನೆಗಳಿಗೆ ಯಾವುದೇ ಅಧಿಕಾರ ಇರುವುದಿಲ್ಲ. ಇಸ್ರೇಲ್ ಯುದ್ಧದ ಸ್ಥಿತಿಯಲ್ಲಿದೆ. ಎಲ್ಲಾ ರೀತಿಯ ಜನರು ಬಂದು ನಮ್ಮನ್ನು ಪರೀಕ್ಷಿಸಲು ನಾವು ಅನುಮತಿಸುವ ಪರಿಸ್ಥಿತಿಯಲ್ಲಿ ನಾವು ಇಲ್ಲ ಎಂದು ಅವರು ಹೇಳಿದರು.

ಅ.7 ರಂದು ಗಾಝಾ ಜೊತೆಗಿನ ಯುದ್ಧ ಪ್ರಾರಂಭವಾದಾಗಿನಿಂದ ಇಸ್ರೇಲ್‌ನಲ್ಲಿ 63 ಜನರನ್ನು ಭಯೋತ್ಪಾದನೆ ಬೆಂಬಲಿಸುವ ಅಥವಾ ಪ್ರಚೋದಿಸಿದ ಶಂಕೆಯ ಮೇಲೆ ಬಂಧಿಸಲಾಗಿದೆ ಎಂದು ಇಸ್ರೇಲ್ ಪೊಲೀಸ್ ವಕ್ತಾರ ಎಲಿ ಲೆವಿ ಬುಧವಾರ ಆರ್ಮಿ ರೇಡಿಯೊಗೆ ತಿಳಿಸಿದ್ದಾರೆ.

ಗಾಝಾ ಪಟ್ಟಿಯನ್ನು ಮುನ್ನಡೆಸುತ್ತಿರುವ ಹಮಾಸ್‌ಗೆ ಬೆಂಬಲ ವ್ಯಕ್ತಪಡಿಸುತ್ತಿರುವ ಇಸ್ರೇಲ್‌ನಲ್ಲಿನ ಪ್ಯಾಲೆಸ್ತೀನಿಯನ್ನರನ್ನು ಕೂಡ ಪತ್ತೆ ಹಚ್ಚಲಾಗುತ್ತದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಅ.7ರಂದು ಹಮಾಸ್ ಸಶಸ್ತ್ರ ಗುಂಪು, ದಕ್ಷಿಣ ಇಸ್ರೇಲ್‌ ಮೇಲೆ ದಾಳಿಯನ್ನು ನಡೆಸಿದ ನಂತರ ಗಾಝಾ ಪಟ್ಟಿಯ 2.3 ಮಿಲಿಯನ್ ನಿವಾಸಿಗಳಿಗೆ ಆಹಾರ, ನೀರು, ವಿದ್ಯುತ್ ಮತ್ತು ಇಂಧನವನ್ನು ಇಸ್ರೇಲ್‌  ಕಡಿತಗೊಳಿಸಿದೆ. ಇಸ್ರೇಲ್‌ ಅಧಿಕಾರಿಗಳ ಪ್ರಕಾರ ಕನಿಷ್ಠ 1,400 ಜನರು ಸಾವನ್ನಪ್ಪಿದ್ದಾರೆ. 4,400 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಮತ್ತು 199 ಜನರನ್ನು ಹಮಾಸ್ ಒತ್ತೆಯಾಳಾಗಿಸಿದೆ.

ಇಸ್ರೇಲ್ ಯುದ್ಧ ಘೊಷಣೆ ಬಳಿಕ ನಡೆಸಿದ ದಾಳಿಯಲ್ಲಿ 3,400ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 12,000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪ್ಯಾಲೆಸ್ತೀನ್‌ ಅಧಿಕಾರಿಗಳು ತಿಳಿಸಿದ್ದಾರೆ.

ಯುದ್ಧವು ಭುಗಿಲೆದ್ದ ನಂತರ ಇಸ್ರೇಲ್ ವಿರೋಧಿ ಹೇಳಿಕೆಯನ್ನು ನೀಡಿರುವ ಆರೋಪದಲ್ಲಿ ಇಸ್ರೇಲ್‌ ಸಂಸತ್ತಿನ ಸಮಿತಿಯು ಎಡಪಂಥೀಯ ಸದಸ್ಯ ಓಫರ್ ಕ್ಯಾಸಿಫ್ ಅವರನ್ನು ಅಮಾನತುಗೊಳಿಸಿದೆ. ಅವರು ಹಮಾಸ್ ದಾಳಿಯನ್ನು ಉಲ್ಲೇಖಿಸಿ ಇಸ್ರೇಲ್ ಈ ಹಿಂಸಾಚಾರವನ್ನು ಬಯಸಿದೆ ಎಂದು ಅವರು ವಿದೇಶಿ ಮಾಧ್ಯಮಗಳಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದರು. ಜೆರುಸಲೆಮ್ ಪೋಸ್ಟ್ ಪ್ರಕಾರ ಕ್ಯಾಸಿಫ್ ಅವರನ್ನು 45 ದಿನಗಳವರೆಗೆ ಅಮಾನತುಗೊಳಿಸಲಾಗಿದೆ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...