Homeಅಂತರಾಷ್ಟ್ರೀಯಅಲ್‌ ಜಝೀರಾ ಕಚೇರಿ ಮೇಲೆ ದಾಳಿ ನಡೆಸಿದ ಇಸ್ರೇಲ್‌ ಅಧಿಕಾರಿಗಳು

ಅಲ್‌ ಜಝೀರಾ ಕಚೇರಿ ಮೇಲೆ ದಾಳಿ ನಡೆಸಿದ ಇಸ್ರೇಲ್‌ ಅಧಿಕಾರಿಗಳು

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್ ನಡೆಸಿದ ಕ್ರೌರ್ಯವನ್ನು ಜಗತ್ತಿನ ಮುಂದೆ ಬಿಚ್ಚಿಟ್ಟಿದ್ದ ಅಲ್‌ ಜಝೀರಾ ಸುದ್ದಿವಾಹಿನಿಯನ್ನು ಇಸ್ರೇಲ್‌ ಈ ಹಿಂದೆ ದೇಶದಲ್ಲಿ ನಿರ್ಬಂಧ ವಿಧಿಸಿತ್ತು. ಇದೀಗ ಇಸ್ರೇಲ್‌ನಲ್ಲಿನ ಅಲ್‌ಜಝೀರಾ ಕಚೇರಿಗೆ ಇಸ್ರೇಲ್‌ ಅಧಿಕಾರಿಗಳು ದಾಳಿ ನಡೆಸಿದ್ದು, ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಕತಾರ್ ಮೂಲದ ಟಿವಿ ಸುದ್ದಿ ನೆಟ್‌ವರ್ಕ್‌ ಅಲ್‌ ಜಝೀರಾವನ್ನು ದೇಶದಲ್ಲಿ ನಿರ್ಬಂಧಿಸದಲು ಇಸ್ರೇಲ್‌ ಸಚಿವ ಸಂಪುಟ ಅನುಮೋದನೆ ನೀಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಅಂತರಾಷ್ಟ್ರೀಯ ಮಾಧ್ಯಮ ಸಂಸ್ಥೆಯೊಂದರ ಮೇಳೆ ಇಂಥ ದಾಳಿ ನಡೆದಿರುವುದು ಇದೇ ಮೊದಲು ಎಂದು ಹೇಳಲಾಗಿದೆ.

ಸಂವಹನ ಸಚಿವಾಲಯದ ಇನ್ಸ್‌ಪೆಕ್ಟರ್‌ಗಳು, ಪೊಲೀಸರೊಂದಿಗೆ ಜೆರುಸಲೆಮ್‌ನಲ್ಲಿರುವ ಅಲ್ ಜಝೀರಾ ಕಚೇರಿಗೆ ದಾಳಿ ನಡೆಸಿದ್ದಾರೆ. ಈ ವೇಳೆ ಕ್ಯಾಮರ ಸೇರಿದಂತೆ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಮೊದಲು ಅಲ್‌ ಜಝೀರಾ ಪ್ರಸಾರಕ್ಕೆ ಇಸ್ರೇಲ್‌ ನಿರ್ಬಂಧ ವಿಧಿಸಿರುವುದರ ಜೊತೆಗೆ ಅಲ್‌ಜಝೀರಾ ವೆಬ್‌ಸೈಟ್‌ನ್ನು ಇಸ್ರೇಲ್‌ನಾದ್ಯಂತ ನಿರ್ಬಂಧಿಸಿತ್ತು.

ಇಸ್ರೇಲ್‌ನ ಸಂವಹನ ಸಚಿವರಾದ ಶ್ಲೋಮೋ ಕರ್ಹಿ ದಾಳಿ ಕುರಿತ ವಿಡಿಯೋವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ ಜಝೀರಾ ಇಸ್ರೇಲ್‌ನ ಕ್ರಮವನ್ನು ಖಂಡಿಸಿದ್ದು, ಇದು ಮಾಹಿತಿಯನ್ನು ಪಡೆಯುವ ಮಾನವನ ಹಕ್ಕುಗಳನ್ನು ಉಲ್ಲಂಘಿಸುವ ಅಪರಾಧ ಕೃತ್ಯ ಎಂದು ಹೇಳಿದೆ. ಅಸೋಸಿಯೇಷನ್ ಫಾರ್ ಸಿವಿಲ್ ರೈಟ್ಸ್ ಇನ್ ಇಸ್ರೇಲ್ (ACRI) ಈ ಬಗ್ಗೆ ಇಸ್ರೇಲ್‌ನ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದೆ. ಇದು ಮಾಧ್ಯಮಗಳಿಗೆ ಕರಾಳ ದಿನ ಮತ್ತು ಪ್ರಜಾಪ್ರಭುತ್ವಕ್ಕೆ ಕರಾಳ ದಿನ ಎಂದು ಇಸ್ರೇಲ್‌ನ ವಿದೇಶಿ ಪ್ರೆಸ್ ಅಸೋಸಿಯೇಷನ್ ಹೇಳಿಕೆಯಲ್ಲಿ ತಿಳಿಸಿದೆ.

ಇಸ್ರೇಲ್ ಮತ್ತು ಹಮಾಸ್ ಮಧ್ಯೆ ಕತಾರ್‌ ಪ್ರಮುಖ ಮಧ್ಯವರ್ತಿಯಾಗಿದೆ. ಗಾಝಾದಲ್ಲಿನ ಇಸ್ರೇಲ್‌ ಒತ್ತೆಯಾಳುಗಳ ಬಿಡುಗಡೆಯನ್ನು ಒಳಗೊಂಡಿರುವ ಒಪ್ಪಂದದ ಕಡೆಗೆ ಕೆಲಸ ಮಾಡುವುದನ್ನು ಕತಾರ್‌ ಮುಂದುವರೆಸಿದೆ. ಈ ಮಧ್ಯೆ ಇಸ್ರೇಲ್‌- ಕತಾರ್‌ ಮೂಲದ ಅಲ್‌ಜಝೀರಾ ಕಚೇರಿ ಮೇಲೆ ದಾಳಿ ನಡೆಸಿದೆ.

ಅಲ್ ಜಝೀರಾ ಇಸ್ರೇಲ್‌ನ ಭದ್ರತೆಗೆ ಹಾನಿ ಮಾಡಿದೆ, ಅಕ್ಟೋಬರ್ 7ರ ಹತ್ಯಾಕಾಂಡದಲ್ಲಿ ಸಕ್ರಿಯವಾಗಿ ಭಾಗವಹಿಸಿದೆ, ನಮ್ಮ ದೇಶದಿಂದ ಹಮಾಸ್ ಧ್ವನಿಯನ್ನು ತೆಗೆದುಹಾಕುವ ಸಮಯ ಇದು ಎಂದು ನೆತನ್ಯಾಹು ಈ ಕುರಿತ ಇಸ್ರೇಲ್‌ ಸದನದಲ್ಲಿ ಹೇಳಿದ್ದಾರೆ.

ಮಾರ್ಚ್‌ನಲ್ಲಿ ಇಸ್ರೇಲ್‌ ಸೈನಿಕರು ಗಾಝಾದ ಅಲ್ ಶಿಫಾ ಆಸ್ಪತ್ರೆಯಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾರೆ ಎಂದು ಹೇಳುವ ಸ್ಟೋರಿಯನ್ನು ಅಲ್‌ಜಝೀರಾ ಚಾನೆಲ್ ವರದಿ ಮಾಡಿತ್ತು. ಇದನ್ನು ಇಸ್ರೇಲ್ ರಕ್ಷಣಾ ಪಡೆಗಳು ನಿರಾಕರಿಸಿದ್ದವು.

ಶ್ವೇತಭವನದ ವಕ್ತಾರ ಕರೀನ್ ಜೀನ್-ಪಿಯರ್ ಇಸ್ರೇಲ್‌ ಸರಕಾರದ ಈ ಕ್ರಮವನ್ನು ಟೀಕಿಸಿದ್ದಾರೆ. ಗಾಝಾದಲ್ಲಿ ಕೆಲಸ ಮಾಡುವವರು ಸೇರಿದಂತೆ ಪ್ರಪಂಚದಾದ್ಯಂತದ ಪತ್ರಕರ್ತರ ಕೆಲಸವನ್ನು ಯುಎಸ್ ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯ ಪುತ್ರನಿಗೆ ಬಿಜೆಪಿ ಟಿಕೆಟ್‌ ನೀಡಿರುವುದನ್ನು ಸಮರ್ಥಿಸಿಕೊಂಡ ನಿರ್ಮಲಾ ಸೀತಾರಾಮನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...