Homeಮುಖಪುಟಇಸ್ರೇಲ್‌ಗೆ 230 ವಿಮಾನ, 20 ಹಡಗುಗಳಲ್ಲಿ ಯುದ್ಧ ಸಾಮಗ್ರಿ ಒದಗಿಸಿದ ಯುಎಸ್‌

ಇಸ್ರೇಲ್‌ಗೆ 230 ವಿಮಾನ, 20 ಹಡಗುಗಳಲ್ಲಿ ಯುದ್ಧ ಸಾಮಗ್ರಿ ಒದಗಿಸಿದ ಯುಎಸ್‌

- Advertisement -
- Advertisement -

ಅಕ್ಟೋಬರ್‌ 7ರಂದು ಇಸ್ರೇಲ್‌-ಹಮಾಸ್ ನಡುವೆ ಸಂಘರ್ಷ ಪ್ರಾರಂಭವಾದಾಗಿನಿಂದ ಇದುವರೆಗೆ (ಡಿ.26) ಯುಎಸ್ 230 ಸರಕು ವಿಮಾನಗಳು ಮತ್ತು 20 ಹಡಗುಗಳಲ್ಲಿ ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳು ಮತ್ತು ಮಿಲಿಟರಿ ಉಪಕರಣಗಳನ್ನು ಕಳುಹಿಸಿಕೊಟ್ಟಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮ ವರದಿಗಳು ತಿಳಿಸಿವೆ.

ಯುಎಸ್ ಮಿಲಿಟರಿ ನೆರವು ಫಿರಂಗಿ ಶೆಲ್‌ಗಳು, ಶಸ್ತ್ರಸಜ್ಜಿತ ವಾಹನಗಳು ಮತ್ತು ಸೈನಿಕರಿಗೆ ಬೇಕಾದ ಮೂಲಭೂತ ಯುದ್ಧ ಸಾಧನಗಳನ್ನು ಒಳಗೊಂಡಿತ್ತು ಎಂದು ಇಸ್ರೇಲ್ ಮೂಲದ ಯೆಡಿಯಟ್ ಅಹ್ರೊನೊತ್ ಪತ್ರಿಕೆ ವರದಿ ಮಾಡಿದೆ.

ಇಸ್ರೇಲ್‌ನ ರಕ್ಷಣಾ ಸಚಿವಾಲಯವು ಗಾಝಾ ಪಟ್ಟಿಯ ಮೇಲಿನ ಪ್ರಸ್ತುತ ಯುದ್ಧದ ವೆಚ್ಚವನ್ನು ಸುಮಾರು 65 ಶತಕೋಟಿ ಶೆಕೆಲ್‌ಗಳು ($17 ಶತಕೋಟಿ) ಎಂದು ಅಂದಾಜಿಸಿದೆ.

ಯುದ್ದದ ಆರಂಭದಲ್ಲಿ ಇಸ್ರೇಲ್ ತನ್ನ ಗೋದಾಮಿನಲ್ಲಿ ಶೇಖರಿಸಿಟ್ಟ ಯುದ್ದ ಸಾಮಾಗ್ರಿಗಳು, ಮದ್ದು ಗುಂಡುಗಳನ್ನು ಬಳಸಿತ್ತು. ಅದನ್ನು ತುಂಬಿಸುವ ಸಲುವಾಗಿ ಯುಎಸ್‌ನ ನೆರವು ಪಡೆದುಕೊಂಡಿದೆ. ಲೆಬಾನಾನಿನ ಹಿಝ್ಬುಲ್ಲಾ ಗುಂಪಿನ ಜೊತೆ ಯುದ್ಧ ನಡೆಯುವ ಸಾಧ್ಯತೆಗಳು ಇರುವ ಹಿನ್ನೆಲೆ, ಇಸ್ರೇಲ್ ತನ್ನ ಸೇನಾ ಗೋದಾಮನ್ನು ತುಂಬಿಸುತ್ತಿದೆ ಎಂದು ಯೆಡಿಯಟ್ ಅಹ್ರೊನೊತ್ ವರದಿ ಹೇಳಿದೆ.

ಅಂದರೆ, ಇಸ್ರೇಲ್‌ನ ರಕ್ತದಾಹ ಇನ್ನೂ ನೀಗಿಲ್ಲ. ಹಮಾಸ್‌ನಂತೆ ಹಿಝ್ಬುಲ್ಲಾದ ಹೆಸರೇಳಿಕೊಂಡು ಲೆಬಾನಾನಿನ ಮಣ್ಣಿನಲ್ಲಿ ರಕ್ತ ಹರಿಸುವ ಉತ್ಸಾಹದಲ್ಲಿದೆ ಎಂಬುವುದು ಇದರಿಂದ ಖಾತ್ರಿಯಾಗುತ್ತಿದೆ.

ಇಸ್ರೇಲ್-ಹಮಾಸ್ ಸಂಘರ್ಷ ಪ್ರಾರಂಭವಾದಾಗಿನಿಂದ ಯುಎಸ್ ಇಸ್ರೇಲ್ ಪರವಾಗಿ ನಿಂತಿದೆ. ಹಮಾಸ್‌ ಅನ್ನು ಭಯೋತ್ಪಾದಕ ಸಂಘಟನೆ ಎಂದು ಪರಿಗಣಿಸಿರುವ ಯುಎಸ್, ಅದನ್ನು ನಿರ್ಣಾಮ ಮಾಡಲು ಹೊರಟಿರುವ ಇಸ್ರೇಲ್‌ಗೆ ನಮ್ಮ ಬೆಂಬಲ ಎಂದು ಹೇಳಿಕೊಳ್ಳುತ್ತಿದೆ.

ವರದಿಗಳನ್ನು ಗಮನಿಸಿದರೆ, ಇದುವರೆಗೆ 8 ಸಾವಿರ ಹಮಾಸ್ ಸದಸ್ಯರನ್ನು ಹತ್ಯೆಗೈದಿದ್ದೇವೆ ಎಂದು ಇಸ್ರೇಲ್ ಹೇಳಿಕೊಂಡಿದೆ. ಈ ನಡುವೆ ಇಸ್ರೇಲ್ ದಾಳಿಗೆ ಬಲಿಯಾದ ಗಾಝಾದ ಅಮಾಯಕ ನಾಗರಿಕರ ಸಂಖ್ಯೆ 20 ಸಾವಿರ ದಾಟಿದೆ.

ನಾವು ಹಮಾಸ್ ಭಯೋತ್ಪಾದಕರನ್ನು ನಿರ್ಣಾಮ ಮಾಡಲು ಇಸ್ರೇಲ್‌ಗೆ ಸಹಾಯ ಮಾಡಿದ್ದೇವೆ ಎಂದು ಹೇಳಿಕೊಳ್ಳುವ ಯುಎಸ್‌, ಮೇಲೆ ತಿಳಿಸಿದ ಪುಟ್ಟ ಕಂದಮ್ಮಗಳೂ ಸೇರಿದಂತೆ 20 ಸಾವಿರಕ್ಕಿಂತಲೂ ಅಧಿಕ ಅಮಾಯಕ ನಾಗರಿಕರ ರಕ್ತವನ್ನು ತನ್ನ ಕೈಯಲ್ಲಿ ಮೆತ್ತಿಕೊಂಡಿದೆ.

ಶಾಂತಿಗೆ ದೊಡ್ಡಣ್ಣನ ಸ್ಥಾನದಲ್ಲಿ ನಿಂತು ಪಾಠ ಮಾಡುವ ಯುಎಸ್‌ನಲ್ಲಿ, ಜನಾಂಗೀಯ ದ್ವೇಷ ಹರಡುವ ಡೊನಾಲ್ಡ್ ಟ್ರಂಪ್‌ನ ಆಡಳಿತ ಹೋಗಿ ಜೋ ಬೈಡೆನ್‌ ಅಧ್ಯಕ್ಷಗಾದಿಗೆ ಏರಿದಾಗ ಇಡೀ ಮಾನವ ಜಗತ್ತು ಖುಷಿ ಪಟ್ಟಿತ್ತು. ಆರಂಭದಲ್ಲಿ ಮಾಧ್ಯಮಗಳ ಮುಂದೆ ಮುಸ್ಲಿಂ ಮಕ್ಕಳನ್ನು ಮುದ್ದಿಸಿ ಜೋ ಬೈಡೆನ್ ಭರವಸೆ ಮೂಡಿಸಿದ್ದರು. ಆದರೆ, ಗಾಝಾದಲ್ಲಿ ಸಾವಿರಾರು ಕಂದಮ್ಮಗಳು ಇದೇ ಬೈಡೆನ್ ಆಡಳಿತ ನೆರವಿನಿಂದ ಬಲಿಯಾಗಿವೆ, ಆಗುತ್ತಿವೆ ಎಂಬುವುದು ದುಖಃದ ಸಂಗತಿ.

ಇಸ್ರೇಲಿ ಮಿಲಿಟರಿ ಅಂಕಿ ಅಂಶಗಳ ಪ್ರಕಾರ, ಅಕ್ಟೋಬರ್ 7 ರಿಂದ ಗಾಝಾ ಪಟ್ಟಿಯ ನಡೆದ ಘರ್ಷಣೆಯಲ್ಲಿ ಕನಿಷ್ಠ 489 ಇಸ್ರೇಲಿ ಸೈನಿಕರು ಸಾವನ್ನಪ್ಪಿದ್ದಾರೆ. ಅಕ್ಟೋಬರ್ 7ರಂದು ಹಮಾಸ್ ನಡೆಸಿದ ದಾಳಿಯಲ್ಲಿ 1,200 ಇಸ್ರೇಲಿಗಳು ಸಾವನ್ನಪ್ಪಿದ್ದಾರೆ.

ಇಸ್ರೇಲ್ ಗಾಝಾ ಮೇಲೆ ನಡೆಸುತ್ತಿರುವ ನಿರಂತರ ದಾಳಿಯಿಂದ ಇದುವರೆಗೆ 20,674 ಪ್ಯಾಲೆಸ್ತೀನಿಯರು ಬಲಿಯಾಗಿದ್ದಾರೆ ಮತ್ತು 54,536 ಮಂದಿ ಗಾಯಗೊಂಡಿದ್ದಾರೆ ಎಂದು ಗಾಝಾದ ಆರೋಗ್ಯಾಧಿಕಾರಿಗಳು ಹೇಳಿದ್ದಾರೆ.

ಇಸ್ರೇಲ್‌ ದಾಳಿಯಿಂದ ಸುಂದರ ಗಾಝಾ ಪಾಳುಬಿದ್ದಿದೆ. ಇಲ್ಲಿನ ಕರಾವಳಿ ಪ್ರದೇಶದ ಅರ್ಧದಷ್ಟು ವಸತಿ ಕಟ್ಟಡಗಳು ಹಾನಿಗೊಳಗಾಗಿವೆ ಅಥವಾ ನಾಶವಾಗಿವೆ. ಆಹಾರ ಮತ್ತು ಶುದ್ಧ ನೀರಿನ ಕೊರತೆಯ ನಡುವೆ ಸುಮಾರು 2 ಮಿಲಿಯನ್ ಜನರು ಜನನಿಬಿಡ ಪ್ರದೇಶಗಳಿಗೆ ಸ್ಥಳಾಂತರಗೊಂಡಿದ್ದಾರೆ.

ಇದನ್ನೂ ಓದಿ : ಮೌಸಾವಿ ಹತ್ಯೆ: ಗಾಝಾದಂತೆ ಸಿರಿಯಾ ಮೇಲೂ ದಾಳಿಗೆ ಇಸ್ರೇಲ್‌ ಸಜ್ಜು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...